Homeಕರ್ನಾಟಕ'ಧರ್ಮಸ್ಥಳಕ್ಕೆ ಹೋಗಿದ್ದ ನನ್ನ ಮಗಳು ಕಾಣೆಯಾದ್ಲು, ದಯವಿಟ್ಟು ನ್ಯಾಯ ಕೊಡಿಸಿ': ಅನನ್ಯ ಭಟ್ ತಾಯಿ ಕಣ್ಣೀರು

‘ಧರ್ಮಸ್ಥಳಕ್ಕೆ ಹೋಗಿದ್ದ ನನ್ನ ಮಗಳು ಕಾಣೆಯಾದ್ಲು, ದಯವಿಟ್ಟು ನ್ಯಾಯ ಕೊಡಿಸಿ’: ಅನನ್ಯ ಭಟ್ ತಾಯಿ ಕಣ್ಣೀರು

"ಬೆಳ್ತಂಗಡಿ ಠಾಣೆಗೆ ಹೋದಾಗ ದೂರು ಸ್ವೀಕರಿಸಿಲ್ಲ. ಧರ್ಮಸ್ಥಳದಲ್ಲಿ ಯಾರೋ ನನ್ನನ್ನು ಕೂಡಿ ಹಾಕಿ ಥಳಿಸಿದ್ರು. ಮಗಳ ಅಸ್ತಿ ಸಿಕ್ರೆ ಶ್ರಾದ್ಧ ಮಾಡಿ ಪ್ರಾಣ ಬಿಡ್ತೀನಿ"

- Advertisement -
- Advertisement -

ಧರ್ಮಸ್ಥಳದಲ್ಲಿ  2003ರಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಅವರ ನಾಪತ್ತೆ ಸಂಬಂಧ ದೂರು ನೀಡಲು ತಾಯಿ ಸುಜಾತಾ ಭಟ್ ಮಂಗಳವಾರ (ಜು.15) ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಡಾ.ಅರುಣ್ ಕೆ ಅವರನ್ನು ಭೇಟಿಯಾಗಿದ್ದರು.

ಪ್ರಕರಣ ಈಗಿನ ಧರ್ಮಸ್ಥಳ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದರಿಂದ, ಅಲ್ಲಿಯೇ ದೂರು ನೀಡುವಂತೆ ಎಸ್ಪಿ ಸಲಹೆ ನೀಡಿದ್ದರು. ಅದರಂತೆ, ರಾತ್ರಿ 8 ಗಂಟೆಯ ಸುಮಾರಿಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ತೆರಳಿ ಸಬ್‌ ಇನ್‌ಸ್ಪೆಕ್ಟರ್ ಸಮರ್ಥ್ ಆರ್.ಗಾಣಿಗೇರ ಅವರಿಗೆ ಸುಜಾತಾ ಭಟ್ ದೂರು ನೀಡಿದ್ದಾರೆ. ಪೊಲೀಸರು ದೂರು ಸ್ವೀಕರಿಸಿದ್ದು, ಮುಂದಿನ ತನಿಖೆ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳವಾರ ಸಂಜೆ ವಕೀಲ ಮಂಜುನಾಥ್  ಜೊತೆ ಎಸ್ಪಿಯನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ ಸುಜಾತಾ ಭಟ್, ” ನನ್ನ ಮಗಳು 2003ರಲ್ಲಿ ಧರ್ಮಸ್ಥಳ ದೇವಸ್ಥಾನಕ್ಕೆಂದು ಹೋದಾಕೆ ಕಾಣೆಯಾಗಿದ್ದಳು. ಆಗ ನಾನು ಕೋಲ್ಕತ್ತಾದಲ್ಲಿ ಉದ್ಯೋಗದಲ್ಲಿದ್ದೆ. ಅಲ್ಲಿಂದ ಬರುವಾಗ ಎರಡು ದಿನ ಕಳೆದಿತ್ತು. ಬಂದು ಮಗಳನ್ನು ಹುಡುಕಿದೆ. ಆದರೆ, ಆಕೆ ಸಿಗಲಿಲ್ಲ. ಹಾಗಾಗಿ, ಬೆಳ್ತಂಗಡಿ ಪೊಲೀಸ್ ಠಾಣೆಗೆ ಹೋಗಿ ವಿಚಾರಿಸಿದೆ. ಆಗ ಬೆಳ್ತಂಗಡಿ ಪೊಲೀಸರು “ನೀನೆ ಹುಡ್ಕೋ ಹೋಗಮ್ಮ, ನಿನ್ನ ಮಗಳು ಯಾವನ್ ಜೊತೆಗೋ ಹೋಗಿರಬಹುದು. ನೀನೇ ಹುಡ್ಕೋ, ನಾವು ಹುಡುಕಿ ಕೊಡಲು ನಮಗೇನ್ ಬೇರೆ ಕೆಲ್ಸಾ ಇಲ್ವಾ, ಅದೇ ಕೆಲ್ಸಾನಾ?” ಎಂದು ಗದರಿಸಿ ನನ್ನ ಕಳಿಸಿದರು” ಎಂದು ಹೇಳಿದರು.

ಮುಂದುವರಿದು, “ನಾನು ಬೇರೆ ದಾರಿ ತೋಚದೆ ಧರ್ಮಸ್ಥಳಕ್ಕೆ ಹೋದೆ. ಅಲ್ಲಿ ಮಗಳಿಗಾಗಿ ಹುಡುಕಾಡಿ ಒಂದು ಕಡೆ ಕುಳಿತಿದ್ದೆ. ಆಗ ಯಾರೋ ನಾಲ್ಕು ಜನರು ಬಂದು “ನಿಮ್ಮ ಮಗಳನ್ನು ನೋಡಿದ್ದೀವಿ, ಹುಡುಕಿ ಕೊಡ್ತೀವಿ” ಎಂದು ಕರೆದುಕೊಂಡು ಹೋಗಿ ಕೂಡಿ ಹಾಕಿದ್ರು. ನಂತರ ಮರುದಿನ ಬೆಳಿಗ್ಗೆ ಸುಮಾರು 5 ಗಂಟೆಯ ಹೊತ್ತಿಗೆ ನನ್ನನ್ನು ಹೊರಗಡೆ ಕರೆದುಕೊಂಡು ಬಂದು ಬಿಟ್ರು. ನನ್ನನ್ನು ಕೂಡಿ ಹಾಕಿದವರು ನನ್ನ ತಲೆಗೆ ಹೊಡೆದಿದ್ರು. ಅದರ ಮಾರ್ಕ್ ಈಗಲೂ ಇದೆ. ನನ್ನನ್ನು ಕಟ್ಟಿ ಹಾಕಿದ್ದ ಮಾರ್ಕ್‌ಗಳು ಕೈಯ್ಯಲ್ಲಿ ಇವೆ. ಎರಡೂ ಕೈಗಳಲ್ಲಿ ಮಾರ್ಕ್‌ಗಳು ಇವೆ, ಕೈ ಬೆಂಡಾಗಿವೆ” ಎಂದು ತಲೆ ಮತ್ತು ಕೈಗಳನ್ನು ಸುಜಾತಾ ಭಟ್ ಮಾಧ್ಯಮಗಳ ಮುಂದೆ ತೋರಿಸಿದರು.

“ಹೊಡೆದವರು ಯಾರು? ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಭಟ್, “ಯಾರು ಅಂತ ನನಗೆ ಗೊತ್ತಿಲ್ಲ. ಅವರು ಹೊಡೆದಾಗ ನಾನು ಪ್ರಜ್ಞೆ ತಪ್ಪಿ ಬಿದ್ದಿದ್ದೆ. ಆ ಬಳಿಕ ಯಾರೋ ವ್ಯಕ್ತಿ ಬಂದು ನನ್ನನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿದ್ದಾರೆ ಅನಿಸುತ್ತೆ. ನಾನು ಕೋಮಾಗೆ ಹೋಗಿದ್ದೆ. ಎಚ್ಚರ ಬಂದಾಗ ಆಸ್ಪತ್ರೆಯಲ್ಲಿ ಇದ್ದೆ. ನನ್ನನ್ನು ಆವತ್ತು ಆಸ್ಪತ್ರೆಗೆ ಸೇರಿಸಿದ ಆ ಪುಣ್ಯಾತ್ಮನಿಗೆ ನಾನು ಚಿರಋಣಿ” ಎಂದರು.

ಮಗಳು ಯಾರ ಜೊತೆ ದೇವಸ್ಥಾನಕ್ಕೆ ಹೋಗಿದ್ದರು? ಎಂಬ ಪ್ರಶ್ನೆಗೆ ಉತ್ತರಿಸಿದ ಸುಜಾತಾ ಭಟ್, “ಆಕೆ ಗೆಳೆಯರೊಂದಿಗೆ ಹೋಗಿರಬಹುದು. ಆ ಬಳಿಕ ಕಾಣೆಯಾಗಿದ್ದಾಳೆ ” ಎಂದು ತಿಳಿಸಿದರು.

“ಮೊನ್ನೆ ಸಾಕ್ಷಿ ದೂರುದಾರ ಹೇಳಿದಂತೆ ಪೊಲೀಸರು ಹುಡುಕಿದಾಗ ತಲೆ ಬುರುಡೆ ಸಿಕ್ಕಿದೆ. ಅದನ್ನು ಪೊಲೀಸರು ಬೆಳ್ತಂಗಡಿ ನ್ಯಾಯಾಲಯದ ಮುಂದೆ ಇಟ್ಟಿದ್ದಾರೆ. ಅದು ನನ್ನ ಮಗಳದ್ದಾಗಿರಬಹುದು ಅಥವಾ ನನ್ನ ಮಗಳದ್ದು ಅದೇ ರೀತಿ ಸಿಗಬಹುದು ಎಂಬ ಆಶಾ ಭಾವನೆಯೊಂದಿಗೆ ಎಸ್ಪಿಗೆ ದೂರು ಕೊಟ್ಟಿದ್ದೇನೆ. ನನ್ನ ಮಗಳ ಅಸ್ತಿ ಏನಾದರು ಸಿಕ್ಕಿದರೆ, ಸನಾತನ ಬ್ರಾಹ್ಮಣ ಹಿಂದೂ ಸಂಪ್ರದಾಯದಂತೆ ನಾನು ಅದರ ಅಂತ್ಯಕ್ರಿಯೆ ಮಾಡಬೇಕು. ಈ ಮೂಲಕ ಆಕೆಯ ಆತ್ಮಕ್ಕೆ ಶಾಂತಿ ಸಿಗಬೇಕು” ಎಂದು ಹೇಳಿದರು.

2003ರಿಂದ ಏಕೆ ಸುಮ್ಮನ್ನಿದ್ದಿರಿ? ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸುಜಾತಾ ಭಟ್, “ನಾನು ಭಯದಿಂದ ಸುಮ್ಮನಿದ್ದೆ. ನನಗೆ ಯಾರ ಬೆಂಬಲವೂ ಇಲ್ಲ. ಬಂದು ಇಲ್ಲ, ಬಳಗವೂ ಇಲ್ಲ. ಇದ್ದ ಒಬ್ಬಳು ಮಗಳನ್ನು ಕಳೆದುಕೊಂಡಿದ್ದೇನೆ. ದಯವಿಟ್ಟು ನನಗೆ ನ್ಯಾಯ ಕೊಡಿಸಿ” ಎಂದು ಕಣ್ಣೀರು ಹಾಕಿದರು.

“ನನ್ನ ಮಗಳು ಮಣಿಪಾಲ್‌ ಕೆಎಂಸಿಯಲ್ಲಿ ಎಂಬಿಬಿಎಸ್‌ ಓದುತ್ತಿದ್ದಳು. ಆಕೆ ಕೋರ್ಸ್‌ಗೆ ಸೇರಿ ಕೇವಲ ಆರು ತಿಂಗಳು ಆಗಿತ್ತು. ಆಕೆ ತುಂಬಾ ಕಷ್ಟಪಟ್ಟು ಓದುತ್ತಿದ್ದಳು. ಇವತ್ತು ಅವಳು ನನ್ನ ಜೊತೆಗಿಲ್ಲ. ಅವಳ ಆತ್ಮ ನನ್ನನ್ನು ಕಾಡ್ತಿದೆ. ಹಾಗಾಗಿ, ಅವಳ ಅಸ್ತಿ ಸಿಕ್ಕಿದರೆ ಪುಣ್ಯ ಬರುತ್ತದೆ ಎಂದು ಎಸ್ಪಿಯವರಿಗೆ ಹೇಳಿದ್ದೇನೆ. ಆಯ್ತಮ್ಮ ಎಂದು ಎಸ್ಪಿ ಹೇಳಿದ್ದಾರೆ. ಅವರಿಗೂ ನಾನು ಚಿರಋಣಿಯಾಗಿರುತ್ತೇನೆ” ಎಂದು ಮಾಧ್ಯಮಗಳ ಮುಂದೆ ಕಣ್ಣೀರು ಹಾಕುತ್ತಾ ಸುಜಾತಾ ಭಟ್ ಕೈ ಮುಗಿದರು.

2003ರಿಂದ ಏನು ಭಯ ಇತ್ತು ಮೇಡಂ? ಎಂಬ ಪ್ರಶ್ನೆಗೆ ಉತ್ತರಿಸಿ ಸುಜಾತಾ ಭಟ್, “ನನಗೆ ಯಾರ ಬೆಂಬಲವೂ ಇಲ್ಲ ಸರ್, ನಾನು ಒಂಟಿಯಾಗಿ ಹೋರಾಟ ಮಾಡಬೇಕಿದೆ ಸರ್ ಎಂದರು. ಮಣಿಪಾಲದ ಪರ್ಕಳದ ಹತ್ತಿರ ಪರಿಕ್ಕಾ ಅಂತ ಒಂದು ಊರಿದೆ. ಅಲ್ಲಿದ್ದ ನನ್ನ ಮನೆ ದೇವರು, ಆಸ್ತಿ ಎಲ್ಲವನ್ನೂ ಕಿತ್ತುಕೊಂಡಿದ್ದಾರೆ. ತಂದೆಯಿಂದ ಬಂದ ನನ್ನ ಪಿತ್ರಾರ್ಜಿತ ಆಸ್ತಿಯನ್ನು ನನ್ನ ಸಹಿಯೂ ಇಲ್ಲದೆ ಖರೀದಿ ಮಾಡಿದ್ದಾರೆ. ಆ ಆಸ್ತಿನೂ ನನ್ನ ಒಂದು ಭಾಗ ಆಗಿತ್ತು. ಈಗ ಅದೂ ಇಲ್ಲ. ನನಗೆ ಯಾರು ಇಲ್ಲ ಸರ್” ಎಂದು ಹೇಳಿದರು.

“ನನ್ನ ಮಗಳು ಧರ್ಮಸ್ಥಳದಲ್ಲೇ ಕಾಣೆಯಾಗಿದ್ದು, ಈ ಬಗ್ಗೆ ನಾನು 2003ರಲ್ಲೇ ಬೆಳ್ತಂಗಡಿ ಠಾಣೆಯಲ್ಲಿ ದೂರು ಕೊಟ್ಟಿದ್ದೆ. ಆದರೆ, ಅವರು ತೆಗೆದುಕೊಂಡಿಲ್ಲ. ಈಗ ನಾನು ಎಸ್ಪಿ ಬಳಿ ದೂರು ಕೊಟ್ಟಿದ್ದೇನೆ. ಅವರು ಧರ್ಮಸ್ಥಳ ಠಾಣೆಗೆ ಹೋಗಲು ಹೇಳಿದ್ದಾರೆ” ಎಂದು ತಿಳಿಸಿದರು.

ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಮಾತನಾಡಿ, “ಸಾಕ್ಷಿ ದೂರುದಾರ ಮೊನ್ನೆ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ಕೊಟ್ಟ ಬಳಿಕ ಸುಜಾತಾ ಭಟ್ ನನ್ನನ್ನು ಸಂಪರ್ಕಿಸಿದರು. “ಧರ್ಮಸ್ಥಳದ ಪ್ರಕರಣ ನಡೆಯುತ್ತಿದೆಯಲ್ಲ, ನನ್ನ ಮಗಳದ್ದು ಆ ರೀತಿಯ ಪ್ರಕರಣ ನಡೆದಿದೆ” ಎಂದರು. ಆಗ ನಾನು ಕಾನೂನಿನ ಪ್ರಕಾರ ದೂರು ಕೊಡೋಣ ಎಂದೆ. ಈಗ ದೂರು ಕೊಟ್ಟಿದ್ದೇವೆ. ಇವರ (ಸುಜಾತಾ ಭಟ್) ಬೇಡಿಕೆ ಏನೆಂದರೆ, ಇವರು ಯಾರನ್ನೂ ಜೈಲಿಗೆ ಹಾಕಿ ಎಂದು ಹೇಳುತ್ತಿಲ್ಲ. ಇವರಿಗೆ ಯಾರೂ ಇಲ್ಲ. ಇಲ್ಲಿ ಹೂಳಲಾಗಿದೆ ಎನ್ನಲಾದ ಹೆಣಗಳ ಬಗ್ಗೆ ಹುಡುಕಾಟ ನಡೆಸುವಾಗ ನನ್ನ ಮಗಳ ಅಸ್ತಿ ಏನಾದರು ಸಿಕ್ಕಿ, ಅದು ಡಿಎನ್‌ಎ ಮೂಲಕ ಖಚಿತವಾದರೆ ನನಗೆ ಕೊಡಿ. ಅದಕ್ಕೆ ಶ್ರಾದ್ಧ ಮಾಡಿ, ತಾನೂ ಜೀವ ಬಿಡುತ್ತೇನೆ ಎಂಬ ಸ್ಥಿತಿಯಲ್ಲಿ ಇದ್ದಾರೆ” ಎಂದರು.

“ಎಸ್ಪಿಯವರು ಪಾಸಿಟಿವ್ ಆಗಿ ಪ್ರತಿಕ್ರಿಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಮಾಡಬೇಕೋ ಅದು ಮಾಡುತ್ತೇವೆ ಎಂದಿದ್ದಾರೆ. ಎಸ್ಪಿ ಹೇಳಿದಂತೆ ನಾವು ಧರ್ಮಸ್ಥಳ ಠಾಣೆಗೆ ದೂರು ಕೊಡುತ್ತೇವೆ” ಎಂದರು.

ಸುಜಾತಾ ಭಟ್ ಅವರ ಆಸ್ತಿ ವಿಚಾರ ಪ್ರಸ್ತಾಪಿಸಿದಾಗ, “ಅದು ಸಿವಿಲ್ ವ್ಯಾಜ್ಯವಾಗಿದೆ. ಅದನ್ನು ಇಲ್ಲಿ ಪ್ರಸ್ತಾಪಿಸಲು ಆಗುವುದಿಲ್ಲ ಎಂದು ಹೇಳಿದರು.

ದೂರಿನ ಬಗ್ಗೆ ವಿಚಾರಣೆ ನಡೆಸಿ ಕ್ರಮ: ಎಸ್ಪಿ ಡಾ.ಅರುಣ್ 

2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಅನನ್ಯ ಭಟ್ ಕಣ್ಮರೆಯಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ಯುವತಿಯ ತಾಯಿ ಜುಲೈ 15ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿ ಮಾಡಿ ದೂರು ನೀಡಿದ್ದಾರೆ. ಈ ದೂರಿನ ಬಗ್ಗೆ ವಿಚಾರಣೆ ನಡೆಸಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಕಚೇರಿಯ ಪ್ರಕಟಣೆ ತಿಳಿಸಿದೆ.

ಬೆಂಗಳೂರು| ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಇಬ್ಬರು ಉಪನ್ಯಾಸಕರು ಸೇರಿ ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...