Homeಕರ್ನಾಟಕ'ಧರ್ಮಸ್ಥಳಕ್ಕೆ ಹೋಗಿದ್ದ ನನ್ನ ಮಗಳು ಕಾಣೆಯಾದ್ಲು, ದಯವಿಟ್ಟು ನ್ಯಾಯ ಕೊಡಿಸಿ': ಅನನ್ಯ ಭಟ್ ತಾಯಿ ಕಣ್ಣೀರು

‘ಧರ್ಮಸ್ಥಳಕ್ಕೆ ಹೋಗಿದ್ದ ನನ್ನ ಮಗಳು ಕಾಣೆಯಾದ್ಲು, ದಯವಿಟ್ಟು ನ್ಯಾಯ ಕೊಡಿಸಿ’: ಅನನ್ಯ ಭಟ್ ತಾಯಿ ಕಣ್ಣೀರು

"ಬೆಳ್ತಂಗಡಿ ಠಾಣೆಗೆ ಹೋದಾಗ ದೂರು ಸ್ವೀಕರಿಸಿಲ್ಲ. ಧರ್ಮಸ್ಥಳದಲ್ಲಿ ಯಾರೋ ನನ್ನನ್ನು ಕೂಡಿ ಹಾಕಿ ಥಳಿಸಿದ್ರು. ಮಗಳ ಅಸ್ತಿ ಸಿಕ್ರೆ ಶ್ರಾದ್ಧ ಮಾಡಿ ಪ್ರಾಣ ಬಿಡ್ತೀನಿ"

- Advertisement -
- Advertisement -

ಧರ್ಮಸ್ಥಳದಲ್ಲಿ  2003ರಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಅವರ ನಾಪತ್ತೆ ಸಂಬಂಧ ದೂರು ನೀಡಲು ತಾಯಿ ಸುಜಾತಾ ಭಟ್ ಮಂಗಳವಾರ (ಜು.15) ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಡಾ.ಅರುಣ್ ಕೆ ಅವರನ್ನು ಭೇಟಿಯಾಗಿದ್ದರು.

ಪ್ರಕರಣ ಈಗಿನ ಧರ್ಮಸ್ಥಳ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದರಿಂದ, ಅಲ್ಲಿಯೇ ದೂರು ನೀಡುವಂತೆ ಎಸ್ಪಿ ಸಲಹೆ ನೀಡಿದ್ದರು. ಅದರಂತೆ, ರಾತ್ರಿ 8 ಗಂಟೆಯ ಸುಮಾರಿಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ತೆರಳಿ ಸಬ್‌ ಇನ್‌ಸ್ಪೆಕ್ಟರ್ ಸಮರ್ಥ್ ಆರ್.ಗಾಣಿಗೇರ ಅವರಿಗೆ ಸುಜಾತಾ ಭಟ್ ದೂರು ನೀಡಿದ್ದಾರೆ. ಪೊಲೀಸರು ದೂರು ಸ್ವೀಕರಿಸಿದ್ದು, ಮುಂದಿನ ತನಿಖೆ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಮಂಗಳವಾರ ಸಂಜೆ ವಕೀಲ ಮಂಜುನಾಥ್  ಜೊತೆ ಎಸ್ಪಿಯನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳ ಮುಂದೆ ಮಾತನಾಡಿದ ಸುಜಾತಾ ಭಟ್, ” ನನ್ನ ಮಗಳು 2003ರಲ್ಲಿ ಧರ್ಮಸ್ಥಳ ದೇವಸ್ಥಾನಕ್ಕೆಂದು ಹೋದಾಕೆ ಕಾಣೆಯಾಗಿದ್ದಳು. ಆಗ ನಾನು ಕೋಲ್ಕತ್ತಾದಲ್ಲಿ ಉದ್ಯೋಗದಲ್ಲಿದ್ದೆ. ಅಲ್ಲಿಂದ ಬರುವಾಗ ಎರಡು ದಿನ ಕಳೆದಿತ್ತು. ಬಂದು ಮಗಳನ್ನು ಹುಡುಕಿದೆ. ಆದರೆ, ಆಕೆ ಸಿಗಲಿಲ್ಲ. ಹಾಗಾಗಿ, ಬೆಳ್ತಂಗಡಿ ಪೊಲೀಸ್ ಠಾಣೆಗೆ ಹೋಗಿ ವಿಚಾರಿಸಿದೆ. ಆಗ ಬೆಳ್ತಂಗಡಿ ಪೊಲೀಸರು “ನೀನೆ ಹುಡ್ಕೋ ಹೋಗಮ್ಮ, ನಿನ್ನ ಮಗಳು ಯಾವನ್ ಜೊತೆಗೋ ಹೋಗಿರಬಹುದು. ನೀನೇ ಹುಡ್ಕೋ, ನಾವು ಹುಡುಕಿ ಕೊಡಲು ನಮಗೇನ್ ಬೇರೆ ಕೆಲ್ಸಾ ಇಲ್ವಾ, ಅದೇ ಕೆಲ್ಸಾನಾ?” ಎಂದು ಗದರಿಸಿ ನನ್ನ ಕಳಿಸಿದರು” ಎಂದು ಹೇಳಿದರು.

ಮುಂದುವರಿದು, “ನಾನು ಬೇರೆ ದಾರಿ ತೋಚದೆ ಧರ್ಮಸ್ಥಳಕ್ಕೆ ಹೋದೆ. ಅಲ್ಲಿ ಮಗಳಿಗಾಗಿ ಹುಡುಕಾಡಿ ಒಂದು ಕಡೆ ಕುಳಿತಿದ್ದೆ. ಆಗ ಯಾರೋ ನಾಲ್ಕು ಜನರು ಬಂದು “ನಿಮ್ಮ ಮಗಳನ್ನು ನೋಡಿದ್ದೀವಿ, ಹುಡುಕಿ ಕೊಡ್ತೀವಿ” ಎಂದು ಕರೆದುಕೊಂಡು ಹೋಗಿ ಕೂಡಿ ಹಾಕಿದ್ರು. ನಂತರ ಮರುದಿನ ಬೆಳಿಗ್ಗೆ ಸುಮಾರು 5 ಗಂಟೆಯ ಹೊತ್ತಿಗೆ ನನ್ನನ್ನು ಹೊರಗಡೆ ಕರೆದುಕೊಂಡು ಬಂದು ಬಿಟ್ರು. ನನ್ನನ್ನು ಕೂಡಿ ಹಾಕಿದವರು ನನ್ನ ತಲೆಗೆ ಹೊಡೆದಿದ್ರು. ಅದರ ಮಾರ್ಕ್ ಈಗಲೂ ಇದೆ. ನನ್ನನ್ನು ಕಟ್ಟಿ ಹಾಕಿದ್ದ ಮಾರ್ಕ್‌ಗಳು ಕೈಯ್ಯಲ್ಲಿ ಇವೆ. ಎರಡೂ ಕೈಗಳಲ್ಲಿ ಮಾರ್ಕ್‌ಗಳು ಇವೆ, ಕೈ ಬೆಂಡಾಗಿವೆ” ಎಂದು ತಲೆ ಮತ್ತು ಕೈಗಳನ್ನು ಸುಜಾತಾ ಭಟ್ ಮಾಧ್ಯಮಗಳ ಮುಂದೆ ತೋರಿಸಿದರು.

“ಹೊಡೆದವರು ಯಾರು? ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಭಟ್, “ಯಾರು ಅಂತ ನನಗೆ ಗೊತ್ತಿಲ್ಲ. ಅವರು ಹೊಡೆದಾಗ ನಾನು ಪ್ರಜ್ಞೆ ತಪ್ಪಿ ಬಿದ್ದಿದ್ದೆ. ಆ ಬಳಿಕ ಯಾರೋ ವ್ಯಕ್ತಿ ಬಂದು ನನ್ನನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿದ್ದಾರೆ ಅನಿಸುತ್ತೆ. ನಾನು ಕೋಮಾಗೆ ಹೋಗಿದ್ದೆ. ಎಚ್ಚರ ಬಂದಾಗ ಆಸ್ಪತ್ರೆಯಲ್ಲಿ ಇದ್ದೆ. ನನ್ನನ್ನು ಆವತ್ತು ಆಸ್ಪತ್ರೆಗೆ ಸೇರಿಸಿದ ಆ ಪುಣ್ಯಾತ್ಮನಿಗೆ ನಾನು ಚಿರಋಣಿ” ಎಂದರು.

ಮಗಳು ಯಾರ ಜೊತೆ ದೇವಸ್ಥಾನಕ್ಕೆ ಹೋಗಿದ್ದರು? ಎಂಬ ಪ್ರಶ್ನೆಗೆ ಉತ್ತರಿಸಿದ ಸುಜಾತಾ ಭಟ್, “ಆಕೆ ಗೆಳೆಯರೊಂದಿಗೆ ಹೋಗಿರಬಹುದು. ಆ ಬಳಿಕ ಕಾಣೆಯಾಗಿದ್ದಾಳೆ ” ಎಂದು ತಿಳಿಸಿದರು.

“ಮೊನ್ನೆ ಸಾಕ್ಷಿ ದೂರುದಾರ ಹೇಳಿದಂತೆ ಪೊಲೀಸರು ಹುಡುಕಿದಾಗ ತಲೆ ಬುರುಡೆ ಸಿಕ್ಕಿದೆ. ಅದನ್ನು ಪೊಲೀಸರು ಬೆಳ್ತಂಗಡಿ ನ್ಯಾಯಾಲಯದ ಮುಂದೆ ಇಟ್ಟಿದ್ದಾರೆ. ಅದು ನನ್ನ ಮಗಳದ್ದಾಗಿರಬಹುದು ಅಥವಾ ನನ್ನ ಮಗಳದ್ದು ಅದೇ ರೀತಿ ಸಿಗಬಹುದು ಎಂಬ ಆಶಾ ಭಾವನೆಯೊಂದಿಗೆ ಎಸ್ಪಿಗೆ ದೂರು ಕೊಟ್ಟಿದ್ದೇನೆ. ನನ್ನ ಮಗಳ ಅಸ್ತಿ ಏನಾದರು ಸಿಕ್ಕಿದರೆ, ಸನಾತನ ಬ್ರಾಹ್ಮಣ ಹಿಂದೂ ಸಂಪ್ರದಾಯದಂತೆ ನಾನು ಅದರ ಅಂತ್ಯಕ್ರಿಯೆ ಮಾಡಬೇಕು. ಈ ಮೂಲಕ ಆಕೆಯ ಆತ್ಮಕ್ಕೆ ಶಾಂತಿ ಸಿಗಬೇಕು” ಎಂದು ಹೇಳಿದರು.

2003ರಿಂದ ಏಕೆ ಸುಮ್ಮನ್ನಿದ್ದಿರಿ? ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸುಜಾತಾ ಭಟ್, “ನಾನು ಭಯದಿಂದ ಸುಮ್ಮನಿದ್ದೆ. ನನಗೆ ಯಾರ ಬೆಂಬಲವೂ ಇಲ್ಲ. ಬಂದು ಇಲ್ಲ, ಬಳಗವೂ ಇಲ್ಲ. ಇದ್ದ ಒಬ್ಬಳು ಮಗಳನ್ನು ಕಳೆದುಕೊಂಡಿದ್ದೇನೆ. ದಯವಿಟ್ಟು ನನಗೆ ನ್ಯಾಯ ಕೊಡಿಸಿ” ಎಂದು ಕಣ್ಣೀರು ಹಾಕಿದರು.

“ನನ್ನ ಮಗಳು ಮಣಿಪಾಲ್‌ ಕೆಎಂಸಿಯಲ್ಲಿ ಎಂಬಿಬಿಎಸ್‌ ಓದುತ್ತಿದ್ದಳು. ಆಕೆ ಕೋರ್ಸ್‌ಗೆ ಸೇರಿ ಕೇವಲ ಆರು ತಿಂಗಳು ಆಗಿತ್ತು. ಆಕೆ ತುಂಬಾ ಕಷ್ಟಪಟ್ಟು ಓದುತ್ತಿದ್ದಳು. ಇವತ್ತು ಅವಳು ನನ್ನ ಜೊತೆಗಿಲ್ಲ. ಅವಳ ಆತ್ಮ ನನ್ನನ್ನು ಕಾಡ್ತಿದೆ. ಹಾಗಾಗಿ, ಅವಳ ಅಸ್ತಿ ಸಿಕ್ಕಿದರೆ ಪುಣ್ಯ ಬರುತ್ತದೆ ಎಂದು ಎಸ್ಪಿಯವರಿಗೆ ಹೇಳಿದ್ದೇನೆ. ಆಯ್ತಮ್ಮ ಎಂದು ಎಸ್ಪಿ ಹೇಳಿದ್ದಾರೆ. ಅವರಿಗೂ ನಾನು ಚಿರಋಣಿಯಾಗಿರುತ್ತೇನೆ” ಎಂದು ಮಾಧ್ಯಮಗಳ ಮುಂದೆ ಕಣ್ಣೀರು ಹಾಕುತ್ತಾ ಸುಜಾತಾ ಭಟ್ ಕೈ ಮುಗಿದರು.

2003ರಿಂದ ಏನು ಭಯ ಇತ್ತು ಮೇಡಂ? ಎಂಬ ಪ್ರಶ್ನೆಗೆ ಉತ್ತರಿಸಿ ಸುಜಾತಾ ಭಟ್, “ನನಗೆ ಯಾರ ಬೆಂಬಲವೂ ಇಲ್ಲ ಸರ್, ನಾನು ಒಂಟಿಯಾಗಿ ಹೋರಾಟ ಮಾಡಬೇಕಿದೆ ಸರ್ ಎಂದರು. ಮಣಿಪಾಲದ ಪರ್ಕಳದ ಹತ್ತಿರ ಪರಿಕ್ಕಾ ಅಂತ ಒಂದು ಊರಿದೆ. ಅಲ್ಲಿದ್ದ ನನ್ನ ಮನೆ ದೇವರು, ಆಸ್ತಿ ಎಲ್ಲವನ್ನೂ ಕಿತ್ತುಕೊಂಡಿದ್ದಾರೆ. ತಂದೆಯಿಂದ ಬಂದ ನನ್ನ ಪಿತ್ರಾರ್ಜಿತ ಆಸ್ತಿಯನ್ನು ನನ್ನ ಸಹಿಯೂ ಇಲ್ಲದೆ ಖರೀದಿ ಮಾಡಿದ್ದಾರೆ. ಆ ಆಸ್ತಿನೂ ನನ್ನ ಒಂದು ಭಾಗ ಆಗಿತ್ತು. ಈಗ ಅದೂ ಇಲ್ಲ. ನನಗೆ ಯಾರು ಇಲ್ಲ ಸರ್” ಎಂದು ಹೇಳಿದರು.

“ನನ್ನ ಮಗಳು ಧರ್ಮಸ್ಥಳದಲ್ಲೇ ಕಾಣೆಯಾಗಿದ್ದು, ಈ ಬಗ್ಗೆ ನಾನು 2003ರಲ್ಲೇ ಬೆಳ್ತಂಗಡಿ ಠಾಣೆಯಲ್ಲಿ ದೂರು ಕೊಟ್ಟಿದ್ದೆ. ಆದರೆ, ಅವರು ತೆಗೆದುಕೊಂಡಿಲ್ಲ. ಈಗ ನಾನು ಎಸ್ಪಿ ಬಳಿ ದೂರು ಕೊಟ್ಟಿದ್ದೇನೆ. ಅವರು ಧರ್ಮಸ್ಥಳ ಠಾಣೆಗೆ ಹೋಗಲು ಹೇಳಿದ್ದಾರೆ” ಎಂದು ತಿಳಿಸಿದರು.

ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಮಾತನಾಡಿ, “ಸಾಕ್ಷಿ ದೂರುದಾರ ಮೊನ್ನೆ ನ್ಯಾಯಾಲಯಕ್ಕೆ ಹಾಜರಾಗಿ ಹೇಳಿಕೆ ಕೊಟ್ಟ ಬಳಿಕ ಸುಜಾತಾ ಭಟ್ ನನ್ನನ್ನು ಸಂಪರ್ಕಿಸಿದರು. “ಧರ್ಮಸ್ಥಳದ ಪ್ರಕರಣ ನಡೆಯುತ್ತಿದೆಯಲ್ಲ, ನನ್ನ ಮಗಳದ್ದು ಆ ರೀತಿಯ ಪ್ರಕರಣ ನಡೆದಿದೆ” ಎಂದರು. ಆಗ ನಾನು ಕಾನೂನಿನ ಪ್ರಕಾರ ದೂರು ಕೊಡೋಣ ಎಂದೆ. ಈಗ ದೂರು ಕೊಟ್ಟಿದ್ದೇವೆ. ಇವರ (ಸುಜಾತಾ ಭಟ್) ಬೇಡಿಕೆ ಏನೆಂದರೆ, ಇವರು ಯಾರನ್ನೂ ಜೈಲಿಗೆ ಹಾಕಿ ಎಂದು ಹೇಳುತ್ತಿಲ್ಲ. ಇವರಿಗೆ ಯಾರೂ ಇಲ್ಲ. ಇಲ್ಲಿ ಹೂಳಲಾಗಿದೆ ಎನ್ನಲಾದ ಹೆಣಗಳ ಬಗ್ಗೆ ಹುಡುಕಾಟ ನಡೆಸುವಾಗ ನನ್ನ ಮಗಳ ಅಸ್ತಿ ಏನಾದರು ಸಿಕ್ಕಿ, ಅದು ಡಿಎನ್‌ಎ ಮೂಲಕ ಖಚಿತವಾದರೆ ನನಗೆ ಕೊಡಿ. ಅದಕ್ಕೆ ಶ್ರಾದ್ಧ ಮಾಡಿ, ತಾನೂ ಜೀವ ಬಿಡುತ್ತೇನೆ ಎಂಬ ಸ್ಥಿತಿಯಲ್ಲಿ ಇದ್ದಾರೆ” ಎಂದರು.

“ಎಸ್ಪಿಯವರು ಪಾಸಿಟಿವ್ ಆಗಿ ಪ್ರತಿಕ್ರಿಯಿಸಿದ್ದಾರೆ. ಕಾನೂನಿನ ಪ್ರಕಾರ ಏನು ಮಾಡಬೇಕೋ ಅದು ಮಾಡುತ್ತೇವೆ ಎಂದಿದ್ದಾರೆ. ಎಸ್ಪಿ ಹೇಳಿದಂತೆ ನಾವು ಧರ್ಮಸ್ಥಳ ಠಾಣೆಗೆ ದೂರು ಕೊಡುತ್ತೇವೆ” ಎಂದರು.

ಸುಜಾತಾ ಭಟ್ ಅವರ ಆಸ್ತಿ ವಿಚಾರ ಪ್ರಸ್ತಾಪಿಸಿದಾಗ, “ಅದು ಸಿವಿಲ್ ವ್ಯಾಜ್ಯವಾಗಿದೆ. ಅದನ್ನು ಇಲ್ಲಿ ಪ್ರಸ್ತಾಪಿಸಲು ಆಗುವುದಿಲ್ಲ ಎಂದು ಹೇಳಿದರು.

ದೂರಿನ ಬಗ್ಗೆ ವಿಚಾರಣೆ ನಡೆಸಿ ಕ್ರಮ: ಎಸ್ಪಿ ಡಾ.ಅರುಣ್ 

2003ನೇ ಇಸವಿಯಲ್ಲಿ ಧರ್ಮಸ್ಥಳ ದೇವಸ್ಥಾನದ ವಠಾರದಿಂದ ಅನನ್ಯ ಭಟ್ ಕಣ್ಮರೆಯಾಗಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ಯುವತಿಯ ತಾಯಿ ಜುಲೈ 15ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಭೇಟಿ ಮಾಡಿ ದೂರು ನೀಡಿದ್ದಾರೆ. ಈ ದೂರಿನ ಬಗ್ಗೆ ವಿಚಾರಣೆ ನಡೆಸಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಕಚೇರಿಯ ಪ್ರಕಟಣೆ ತಿಳಿಸಿದೆ.

ಬೆಂಗಳೂರು| ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ: ಇಬ್ಬರು ಉಪನ್ಯಾಸಕರು ಸೇರಿ ಮೂವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...