Homeಮುಖಪುಟಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ: ವರದಕ್ಷಿಣೆ ಕಿರುಕುಳ ಆರೋಪ

ಮಗುವನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಮಹಿಳೆ: ವರದಕ್ಷಿಣೆ ಕಿರುಕುಳ ಆರೋಪ

- Advertisement -
- Advertisement -

ಶಾರ್ಜಾದಲ್ಲಿ ಮಹಿಳೆಯೊಬ್ಬರು ತನ್ನ ಒಂದೂವರೆ ವರ್ಷದ ಮಗಳನ್ನು ಕೊಂದು, ತಾನೂ ಆತ್ಮಹತ್ಯೆಗೆ ಶರಣಾಗಿರುವ ಸಂಬಂಧ ಕೇರಳದ ಕೊಲ್ಲಂ ಜಿಲ್ಲೆಯ ಕುಂದರಾ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತ ವಿಪಂಚಿಕಾ ಅವರ ಗಂಡ ನಿತೀಶ್ ಅವರನ್ನು ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿ ಗುರುತಿಸಲಾಗಿದ್ದು, ಎರಡನೇ ಆರೋಪಿಯಾಗಿ ಅತ್ತಿಗೆ ನೀತು ಮತ್ತು ಮೂರನೇ ಆರೋಪಿಯಾಗಿ ಮಾವ ಮೋಹನನ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇವರ ವಿರುದ್ದ ಆತ್ಮಹತ್ಯೆಗೆ ಪ್ರಚೋದನೆ ಮತ್ತು ವರದಕ್ಷಿಣೆ ಕಿರುಕುಳದ ಆರೋಪ ಹೊರಿಸಲಾಗಿದೆ.

ಕಳೆದ ಮಂಗಳವಾರ ಶಾರ್ಜಾದ ಅಲ್ ನಹ್ದಾದಲ್ಲಿ 33 ವರ್ಷದ ವಿಪಂಚಿಕಾ ಮತ್ತು ಅವರ ಮಗಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಕಳೆದ ಏಳು ವರ್ಷಗಳಿಂದ ಶಾರ್ಜಾದ ಖಾಸಗಿ ಸಂಸ್ಥೆಯಲ್ಲಿ ಗುಮಾಸ್ತೆ ಕೆಲಸ ಮಾಡುತ್ತಿದ್ದ ವಿಪಂಚಿಕಾ, ನವೆಂಬರ್ 2020 ರಲ್ಲಿ ನಿತೀಶ್ ಅವರನ್ನು ವಿವಾಹವಾಗಿದ್ದರು.

ಸಾವಿಗೂ ಮುನ್ನ ವಿಪಂಚಿಕಾ ಬರೆದಿದ್ದಾರೆ ಎನ್ನಲಾದ ಆತ್ಮಹತ್ಯೆ ಪತ್ರ ಅವರ ಫೇಸ್‌ಬುಕ್ ಪುಟದಲ್ಲಿ ಕಾಣಿಸಿಕೊಂಡಿತ್ತು. ಆದರೆ, ನಂತರ ಅದನ್ನು ಅಳಿಸಲಾಗಿದೆ ಎಂಬ ವರದಿಗಳಿವೆ.

ಫೇಸ್‌ಬುಕ್ ಪೋಸ್ಟ್‌ನಲ್ಲಿ ವಿಪಂಚಿಕಾ, “ತನ್ನ ಪತಿ, ಮಾವ ಮತ್ತು ಅತ್ತಿಗೆಯಿಂದ ತಾನು ಎದುರಿಸಿದ ತೀವ್ರ ಚಿತ್ರಹಿಂಸೆಯನ್ನು ಹೇಳಿಕೊಂಡಿದ್ದರು. ವರದಕ್ಷಿಣೆ ಕಿರುಕುಳ, ದಾಖಲೆಗಳನ್ನು ಬಚ್ಚಿಟ್ಟುಕೊಂಡು ಗಂಡ ತನ್ನಿಂದ ಪ್ರತ್ಯೇಕವಾಗಲು ಪ್ರಯತ್ನಿಸಿದ್ದು ಸೇರಿದಂತೆ ಎಲ್ಲವನ್ನೂ ಆಕೆ ವಿವರಿಸಿದ್ದರು ಎಂದು ವರದಿಗಳು ಹೇಳಿವೆ.

“ಅವರೆಲ್ಲರಿಗೂ ನನ್ನ ಹಣ ಬೇಕು” ಎಂದು ತನ್ನ ಪೋಸ್ಟ್‌ನಲ್ಲಿ ವಿಪಂಚಿಕಾ ಹೇಳಿದ್ದರು. ಅತ್ತೆ-ಮಾವ ತನ್ನ ಗಂಡನೊಂದಿಗೆ ಸಾಮಾನ್ಯ ಸಂಬಂಧ ಹೊಂದುವುದನ್ನು ತಡೆಯುತ್ತಿದ್ದರು. “ಅವನಿಗೆ ನಿನಗಿಂತ ಒಳ್ಳೇ ಹುಡುಗಿ ಸಿಗುತ್ತಿದ್ದಳು” ಎಂದು ಅವಮಾನಿಸುತ್ತಿದ್ದರು” ಎಂದು ವಿಪಂಚಿಕಾ ಆರೋಪಿಸಿದ್ದರು.

ವಿಪಂಚಿಕಾಗೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಕಿರುಕುಳ ನೀಡಲಾಗಿದೆ. ಆಕೆಯ ಕೂದಲನ್ನು ಕತ್ತರಿಸಿ ಗಂಡ ಚಿತ್ರಹಿಂಸೆ ನೀಡಿದ್ದಾನೆ. ಇದರಿಂದ ಮನನೊಂದು ಆಕೆ ಸಾವಿಗೆ ಶರಣಾಗಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ.

ಪೊಲೀಸರು ಪ್ರಕರಣ ದಾಖಲಿಸಿರುವುದು ನಮಗೆ ಭರವಸೆ ಮೂಡಿಸಿದೆ. ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ವಿಪಂಚಿಕಾ ಅವರ ಕುಟುಂಬ ತಿಳಿಸಿದೆ. ತಮ್ಮ ಮಗಳು ಮತ್ತು ಮೊಮ್ಮಗಳ ಶವಗಳನ್ನು ತಕ್ಷಣ ಭಾರತಕ್ಕೆ ತರಬೇಕು ಮತ್ತು ಇಲ್ಲಿಯೇ ಮರಣೋತ್ತರ ಪರೀಕ್ಷೆ ನಡೆಸಬೇಕು ಎಂದು ವಿಪಂಚಿಕಾ ಅವರ ತಾಯಿ ಶೈಲಜಾ ಒತ್ತಾಯಿಸಿದ್ದಾರೆ. ಈ ಸಂಬಂಧ ಅವರು ಮುಖ್ಯಮಂತ್ರಿ ಕಚೇರಿ, ರಾಜ್ಯ ಪೊಲೀಸ್ ಮುಖ್ಯಸ್ಥರು, ಭಾರತೀಯ ರಾಯಭಾರ ಕಚೇರಿ ಮತ್ತು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ.

“ನನ್ನ ಮಗಳ ಆತ್ಮಹತ್ಯೆ ಹಿಂದಿನ ಕಾರಣ ನನಗೆ ಗೊತ್ತಾಗಬೇಕು. ಇದಕ್ಕೆ ಕಾರಣರಾದ ಎಲ್ಲರನ್ನೂ ಕಾನೂನಿನ ಮುಂದೆ ತರಬೇಕು. ಪಾರದರ್ಶಕ ತನಿಖೆ ನಡೆಯಬೇಕು. ನನಗೆ ನ್ಯಾಯ ಬೇಕು” ಎಂದು ಶೈಲಜಾ ಹೇಳಿದ್ದಾರೆ.

ವಿಪಂಚಿಕಾ ತನ್ನ ಪತಿ ಮತ್ತು ಅವರ ಕುಟುಂಬದಿಂದ ತೀವ್ರ ಕಿರುಕುಳ ಅನುಭವಿಸಿದ್ದಾಳೆ. ನನ್ನ ಮಗಳು ಆಕೆಯ ಗಂಡನನ್ನು ಪ್ರೀತಿಸಿದ್ದೇ ತಪ್ಪು ಮತ್ತು ಮಗಳ ಮೌನವೇ ಈ ದುರಂತಕ್ಕೆ ಕಾರಣ ಎಂದು ಶೈಲಜಾ ಹೇಳಿದ್ದು, ನನ್ನ ಮಗಳಿಗೆ ನ್ಯಾಯ ದೊರಕಿಸಿಕೊಡಲು ಯಾವುದೇ ಹಂತಕ್ಕೂ ಹೋಗುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದಾರೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

‘ಧರ್ಮಸ್ಥಳಕ್ಕೆ ಹೋಗಿದ್ದ ನನ್ನ ಮಗಳು ಕಾಣೆಯಾದ್ಲು, ದಯವಿಟ್ಟು ನ್ಯಾಯ ಕೊಡಿಸಿ’: ಅನನ್ಯ ಭಟ್ ತಾಯಿ ಕಣ್ಣೀರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...