Homeಕರ್ನಾಟಕರೌಡಿಶೀಟರ್ ಶಿವಪ್ರಕಾಶ್ ಹತ್ಯೆ ಆರೋಪ: ಬಿಜೆಪಿ ಶಾಸಕ ಬೈರತಿ ಬಸವರಾಜ್ ವಿರುದ್ಧ FIR ದಾಖಲು

ರೌಡಿಶೀಟರ್ ಶಿವಪ್ರಕಾಶ್ ಹತ್ಯೆ ಆರೋಪ: ಬಿಜೆಪಿ ಶಾಸಕ ಬೈರತಿ ಬಸವರಾಜ್ ವಿರುದ್ಧ FIR ದಾಖಲು

- Advertisement -
- Advertisement -

ಬೆಂಗಳೂರು: ನಗರದ ಭಾರತಿನಗರ ಠಾಣೆಯ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ (44) ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೆ.ಆರ್.ಪುರಂನ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಬೈರತಿ ಬಸವರಾಜ್ ಸೇರಿದಂತೆ ಐವರ ವಿರುದ್ಧ ಭಾರತಿನಗರ ಪೊಲೀಸ್ ಠಾಣೆಯಲ್ಲಿ ಪ್ರಥಮ ಮಾಹಿತಿ ವರದಿ (FIR) ದಾಖಲಾಗಿದೆ. ಕೊಲೆಯಾದ ಶಿವಪ್ರಕಾಶ್ ಅವರ ತಾಯಿ ವಿಜಯಲಕ್ಷ್ಮಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕೊಲೆಯ ಹಿನ್ನೆಲೆ ಮತ್ತು ಆರೋಪಗಳು:

ಮಂಗಳವಾರ ರಾತ್ರಿ ಹಲಸೂರು ಕೆರೆಯ ಸಮೀಪದ ಹರ್ಮಿಟ್ ಕಾಲೋನಿಯ ಮೀನಿ ಅವೆನ್ಯೂ ರಸ್ತೆಯಲ್ಲಿರುವ ಶಿವಪ್ರಕಾಶ್ ಮನೆಯ ಮುಂದೆ ಈ ಕೊಲೆ ನಡೆದಿದೆ. ಬಿಕ್ಲು ಶಿವ ತನ್ನ ಚಾಲಕ ಇಮ್ರಾನ್ ಖಾನ್ ಮತ್ತು ಸ್ನೇಹಿತ ಲೋಕೇಶ್ ಜೊತೆ ಮಾತನಾಡುತ್ತಿದ್ದಾಗ, ಬಿಳಿ ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ಬಂದ 8-9 ಮಂದಿ ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದೆ. ತಲೆಬುರುಡೆ ತುಂಡು ತುಂಡಾಗಿ ಒಡೆದಿದ್ದು, ಮುಖ ಸಂಪೂರ್ಣವಾಗಿ ವಿರೂಪಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಯ ಭೀಕರತೆಯನ್ನು ಕಂಡು ಹೋಟೆಲ್‌ನಲ್ಲಿ ಊಟ ಮಾಡುತ್ತಿದ್ದ ಸಾಕ್ಷಿಗಳು ಭಯಭೀತರಾಗಿ ಓಡಿಹೋಗಿದ್ದಾರೆ.

ಕೊಲೆಯಾದ ಶಿವಪ್ರಕಾಶ್ ತಾಯಿ ವಿಜಯಲಕ್ಷ್ಮಿ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ, ಈ ಕೊಲೆಗೆ ಪೂರ್ವ ಬೆಂಗಳೂರಿನ ಕಿತ್ತಕನೂರು ಗ್ರಾಮದ ಜಮೀನು ವಿವಾದವೇ ಕಾರಣ ಎಂದು ಆರೋಪಿಸಿದ್ದಾರೆ. ಶಿವಪ್ರಕಾಶ್ 2023ರಲ್ಲಿ ಒಂದು ಆಸ್ತಿಯನ್ನು ಖರೀದಿಸಿ ಜನರಲ್ ಪವರ್ ಆಫ್ ಅಟಾರ್ನಿ (GPA) ಹೊಂದಿದ್ದ. ಆ ಜಾಗದಲ್ಲಿ ಶೆಡ್ ನಿರ್ಮಿಸಿ, ಇಬ್ಬರು ಮಹಿಳೆಯರನ್ನು ಭದ್ರತಾ ಸಿಬ್ಬಂದಿಯಾಗಿ ನೇಮಿಸಿದ್ದ.

ಫೆಬ್ರವರಿ 11ರಂದು, ಜಗದೀಶ್ (A1), ಕಿರಣ್ (A2), ವಿಮಲ್ (A3), ಅನಿಲ್ (A4) ಸೇರಿದಂತೆ ಆರೋಪಿಗಳ ಗುಂಪು ಆ ಸ್ಥಳಕ್ಕೆ ಆಗಮಿಸಿ, ಭದ್ರತಾ ಸಿಬ್ಬಂದಿ ಮಹಿಳೆಯರನ್ನು ಬಲವಂತವಾಗಿ ಹೊರಹಾಕಿ, ಶಿವನ GPA ಹಕ್ಕುಗಳನ್ನು ಜಗದೀಶ್‌ಗೆ ವರ್ಗಾಯಿಸುವಂತೆ ಬೆದರಿಕೆ ಹಾಕಿತ್ತು. ಈ ಬಗ್ಗೆ ಶಿವಪ್ರಕಾಶ್ ಫೆಬ್ರವರಿ 21ರಂದೇ ಭಾರತಿನಗರ ಠಾಣೆಯಲ್ಲಿ ಜಗದೀಶ್ ಮತ್ತು ಇತರರ ವಿರುದ್ಧ ಜೀವ ಬೆದರಿಕೆ ಮತ್ತು ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ದೂರು ನೀಡಿದ್ದರು. ಪ್ರಕರಣ ದಾಖಲಾಗಿದ್ದರೂ ಬೆದರಿಕೆಗಳು ಮುಂದುವರಿದಿದ್ದವು ಎಂದು ತಾಯಿ ವಿವರಿಸಿದ್ದಾರೆ.

ವಿಜಯಲಕ್ಷ್ಮಿ ಅವರ ದೂರಿನಲ್ಲಿ, “ಮಾಜಿ ಸಚಿವ ಬೈರತಿ ಬಸವರಾಜ್, ಜಗದೀಶ್ ಮತ್ತು ಇತರರಿಂದ ನನಗೆ ಪ್ರಾಣ ಬೆದರಿಕೆಯಿದೆ ಎಂದು ಹಲವು ಬಾರಿ ಮಗ ಹೇಳಿದ್ದ. ಬಸವರಾಜ್ ಕುಮ್ಮಕ್ಕಿನಿಂದಲೇ ಈ ಕೊಲೆ ನಡೆದಿದೆ” ಎಂದು ನೇರವಾಗಿ ಆರೋಪಿಸಿದ್ದಾರೆ. ದೂರಿನ ಸಂಬಂಧ, ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 103 (ಪಿತೂರಿ) ಮತ್ತು 190 (ಇತರ ಅಪರಾಧಕ್ಕೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. FIR ನಲ್ಲಿ ಬೈರತಿ ಬಸವರಾಜ್ ಅವರನ್ನು 5ನೇ ಆರೋಪಿಯನ್ನಾಗಿ ಹೆಸರಿಸಲಾಗಿದೆ.

ಮಾಜಿ ಸಚಿವ ಬೈರತಿ ಬಸವರಾಜ್ ಪ್ರತಿಕ್ರಿಯೆ:

ತಮ್ಮ ವಿರುದ್ಧ FIR ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್, ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವನ ಕೊಲೆ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ಕೊಲೆಯಾದವನ ಬಗ್ಗೆ ತನಗೆ ಯಾವುದೇ ಮಾಹಿತಿ ಇಲ್ಲ. ಯಾರೇ ಸುಮ್ಮನೆ ದೂರು ನೀಡಿದರೂ FIR ದಾಖಲಿಸಬಹುದೇ? FIR ದಾಖಲಿಸುವ ಮುನ್ನ ಪೊಲೀಸರು ನನ್ನಿಂದ ಮಾಹಿತಿ ಪಡೆದಿದ್ದಾರಾ?” ಎಂದು ಅವರು ಖಾರವಾಗಿ ಪ್ರಶ್ನಿಸಿದ್ದಾರೆ.

“ಈ ವಿಚಾರದಲ್ಲಿ ನನ್ನ ಹೆಸರು ತಂದಿದ್ದಕ್ಕೆ ತುಂಬಾ ಬೇಸರವಾಗಿದೆ. ಇದರ ಹಿಂದೆ ರಾಜಕೀಯ ದುರುದ್ದೇಶ ಇರಬಹುದು. ನಾನು ಕಾನೂನು ಹೋರಾಟ ಮಾಡುತ್ತೇನೆ” ಎಂದು ಬಸವರಾಜ್ ಹೇಳಿದ್ದಾರೆ.

ಪೊಲೀಸ್ ತನಿಖೆ:

ಜಂಟಿ ಪೊಲೀಸ್ ಆಯುಕ್ತ (ಪೂರ್ವ) ಬಿ. ರಮೇಶ್ ಅವರು, ದಾಳಿ ಮಾಡಿದವರು ಯಾರು ಎಂದು ತಿಳಿದರೆ ಕೊಲೆಯ ಹಿಂದಿನ ಉದ್ದೇಶ ಬಹಿರಂಗವಾಗಲಿದೆ ಎಂದು ಹೇಳಿದ್ದಾರೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ತನಿಖೆಯ ಭಾಗವಾಗಿ ಐವರು ಶಂಕಿತರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕೊಲೆಯಾದ ಶಿವಪ್ರಕಾಶ್ ವಿರುದ್ಧ ಭಾರತಿನಗರ ಪೊಲೀಸ್ ಠಾಣೆಯಲ್ಲಿ 11 ಕ್ರಿಮಿನಲ್ ಪ್ರಕರಣಗಳಿದ್ದು, 2006ರಲ್ಲಿ ರೌಡಿಶೀಟ್ ತೆರೆಯಲಾಗಿತ್ತು. ಇತ್ತೀಚೆಗೆ ಅವರು ರೌಡಿ ಪೆರೇಡ್‌ನಲ್ಲಿ ಭಾಗವಹಿಸಿದ್ದರು.

ವರದಿ ಮಾಡುತ್ತಿದ್ದಾಗಲೇ ಪತ್ರಕರ್ತೆ ಮೇಲೆ ಭೀಕರ ಹಲ್ಲೆ: ಅಷ್ಟಕ್ಕೂ ಆಗಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...