Homeಅಂತರಾಷ್ಟ್ರೀಯಅಮೆರಿಕದ ಅಲಾಸ್ಕಾದಲ್ಲಿ 7.3 ತೀವ್ರತೆಯ ಪ್ರಬಲ ಭೂಕಂಪ

ಅಮೆರಿಕದ ಅಲಾಸ್ಕಾದಲ್ಲಿ 7.3 ತೀವ್ರತೆಯ ಪ್ರಬಲ ಭೂಕಂಪ

- Advertisement -
- Advertisement -

ಅಮೆರಿಕದ ಅಲಾಸ್ಕಾ ರಾಜ್ಯದ ಕರಾವಳಿಯಲ್ಲಿ ಬುಧವಾರ 7.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿತ್ತು. ನಂತರ ಅದನ್ನು ಹಿಂಪಡೆಯಲಾಗಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ತಿಳಿಸಿದೆ.

ಸ್ಥಳೀಯ ಸಮಯ ಮಧ್ಯಾಹ್ನ ಸುಮಾರು 12:37 ಕ್ಕೆ ಭೂಮಿ ಕಂಪಿಸಿದ್ದು, ಇದರ ಕೇಂದ್ರ ಬಿಂದುವು ದ್ವೀಪ ಪಟ್ಟಣವಾದ ಸ್ಯಾಂಡ್ ಪಾಯಿಂಟ್‌ನಿಂದ ಸುಮಾರು 54 ಮೈಲುಗಳು (87 ಕಿಲೋಮೀಟರ್) ದಕ್ಷಿಣದಲ್ಲಿ, 12.5 ಮೈಲುಗಳಷ್ಟು ಭೂಮಿಯ ಆಳದಲ್ಲಿ ಪತ್ತೆಯಾಗಿದೆ ಯುಎಸ್‌ಜಿಎಸ್ ಹೇಳಿದೆ.

ಭೂಕಂಪದ ನಂತರ ಅಧಿಕಾರಿಗಳು ಆರಂಭದಲ್ಲಿ ದಕ್ಷಿಣ ಅಲಾಸ್ಕಾ ಮತ್ತು ಅಲಾಸ್ಕಾ ಪರ್ಯಾಯ ದ್ವೀಪಕ್ಕೆ ಸುನಾಮಿ ಎಚ್ಚರಿಕೆಯನ್ನು ನೀಡಿದ್ದರು. ಆದರೆ ನಂತರ ಅದನ್ನು ಸಂಪೂರ್ಣವಾಗಿ ಹಿಂತೆಗೆದುಕೊಂಡರು ಎಂದು ವರದಿಯಾಗಿದೆ.

“ದಕ್ಷಿಣ ಅಲಾಸ್ಕಾ ಮತ್ತು ಅಲಾಸ್ಕಾ ಪರ್ಯಾಯ ದ್ವೀಪದ ಕರಾವಳಿ ಪ್ರದೇಶಗಳಿಗೆ ನೀಡಲಾಗಿದ್ದ ಸುನಾಮಿ ಎಚ್ಚರಿಕೆಯನ್ನು ಹಿಂಪಡೆಯಲಾಗಿದೆ” ಎಂದು ಭೂಕಂಪದ ಸುಮಾರು ಎರಡು ಗಂಟೆಗಳ ನಂತರ ಬಿಡುಗಡೆ ಮಾಡಿದ ಸಂದೇಶದಲ್ಲಿ ರಾಷ್ಟ್ರೀಯ ಸುನಾಮಿ ಎಚ್ಚರಿಕೆ ಕೇಂದ್ರ (ಎನ್‌ಟಿಡಬ್ಲ್ಯುಸಿ) ತಿಳಿಸಿದೆ.

ಆರಂಭದ 7.3 ತೀವ್ರತೆಯ ಭೂಕಂಪದ ನಂತರ, 10ಕ್ಕೂ ಅಧಿಕ ಬಾರಿ ಭೂಮಿ ಕಂಪಿಸಿದೆ. ಅವುಗಳಲ್ಲಿ 5.2 ತೀವ್ರತೆ ಅತೀ ಹೆಚ್ಚು ಎಂದು ಯುಎಸ್‌ಜಿಎಸ್‌ ಮಾಹಿತಿ ನೀಡಿದೆ.

ಸುನಾಮಿ ಎಚ್ಚರಿಕೆ ಅಥವಾ ಸಲಹೆಯನ್ನು ಅಲಾಸ್ಕನ್ ಕರಾವಳಿಯ ಪ್ರದೇಶಗಳಿಗೆ ಮಾತ್ರ ನೀಡಲಾಗಿತ್ತು. ಭೂಕಂಪನ ದೂರದ ಪ್ರದೇಶಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಎನ್‌ಟಿಡಬ್ಲ್ಯುಸಿ ತಿಳಿಸಿದೆ.

ಸ್ಯಾಂಡ್ ಪಾಯಿಂಟ್‌ನಲ್ಲಿ ಗರಿಷ್ಠ 0.2 ಅಡಿ (6.1 ಸೆಂಟಿಮೀಟರ್) ಎತ್ತರದ ಸುನಾಮಿ ಅಲೆಗಳು ಕಂಡುಬಂದಿವೆ. ಸುನಾಮಿಯ ಅಪಾಯಕ್ಕೆ ಸದ್ಯಕ್ಕೆ ಇಲ್ಲದಿದ್ದರೂ, ಭೂಕಂಪ ಸಂಭವಿಸಿದ ಪ್ರದೇಶದ ನಿವಾಸಿಗಳು ಅಪಾಯದ ಬಗ್ಗೆ ಎಚ್ಚರದಿಂದಿರಬೇಕು ಎಂದು ಎನ್‌ಟಿಡಬ್ಲ್ಯುಸಿ ಸಲಹೆ ನೀಡಿದೆ.

“ಸ್ಥಳೀಯ ತುರ್ತು ಅಧಿಕಾರಿಗಳು ಸುರಕ್ಷಿತ ಎಂದು ಸೂಚಿಸುವವರೆಗೆ ಅಪಾಯದ ವಲಯಗಳಿಗೆ ಹಿಂದಿರುಗಬೇಡಿ” ಎಂದು ಸೂಚಿಸಿದೆ.

ಅಲಾಸ್ಕಾ ಭೂಕಂಪ ವಲಯ ಎಂದು ಗುರುತಿಸಿರುವ ಪೆಸಿಫಿಕ್ ರಿಂಗ್ ಆಫ್ ಫೈರ್‌ನಲ್ಲಿ ಬರುತ್ತದೆ. ಅಮೆರಿಕದ ಈ ದೂರದ ರಾಜ್ಯವು ಮಾರ್ಚ್ 1964ರಲ್ಲಿ 9.2 ತೀವ್ರತೆಯ ಭೂಕಂಪಕ್ಕೆ ತುತ್ತಾಗಿತ್ತು. ಇದು ಉತ್ತರ ಅಮೆರಿಕಾದಲ್ಲಿ ದಾಖಲಾದ ಅತ್ಯಂತ ಪ್ರಬಲ ಭೂಕಂಪವಾಗಿತ್ತು.

ಈ ಭೂಕಂಪದಿಂದ ಸುನಾಮಿ ಉಂಟಾಗಿತ್ತು. ಪರಿಣಾಮ ಆಂಕಾರೇಜ್ ನಗರದ ಮೇಲೆ ಸಂಪೂರ್ಣ ನಾಮವಶೇಷ ಆಗಿತ್ತು. ಸುನಾಮಿ ಅಲೆಗಳು ಅಲಾಸ್ಕಾ ಕೊಲ್ಲಿ, ಅಮೆರಿಕದ ಪಶ್ಚಿಮ ಕರಾವಳಿ ಮತ್ತು ಹವಾಯಿ ತೀರಕ್ಕೆ ಅಪ್ಪಳಿಸಿತ್ತು. ಹಲವಾರು ಜನರು ಪ್ರಾಣ ಕಳೆದುಕೊಂಡಿದ್ದರು ಮತ್ತು 400 ಮಿಲಿಯನ್‌ ಡಾಲರ್‌ಗಿಂತಲೂ ಹೆಚ್ಚು ಆಸ್ತಿ ನಷ್ಟ ಆಗಿತ್ತು.

ಜುಲೈ 2023ರಲ್ಲಿ ಅಲಾಸ್ಕಾ ಪರ್ಯಾಯ ದ್ವೀಪದಲ್ಲಿ 7.2 ತೀವ್ರತೆಯ ಭೂಕಂಪ ಸಂಭವಿಸಿತ್ತು. ಈ ಕಂಪನದಿಂದ ಯಾವುದೇ ದೊಡ್ಡ ಹಾನಿ ಸಂಭವಿಸಿರಲಿಲ್ಲ.

ಗಾಜಾ ನರಮೇಧಕ್ಕೆ ಸಹಭಾಗಿತ್ವ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ IPSP ಸಂಘಟನೆಯಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...