Homeಅಂತರಾಷ್ಟ್ರೀಯಅಮೆರಿಕದ ಅಲಾಸ್ಕಾದಲ್ಲಿ 7.3 ತೀವ್ರತೆಯ ಪ್ರಬಲ ಭೂಕಂಪ

ಅಮೆರಿಕದ ಅಲಾಸ್ಕಾದಲ್ಲಿ 7.3 ತೀವ್ರತೆಯ ಪ್ರಬಲ ಭೂಕಂಪ

- Advertisement -
- Advertisement -

ಅಮೆರಿಕದ ಅಲಾಸ್ಕಾ ರಾಜ್ಯದ ಕರಾವಳಿಯಲ್ಲಿ ಬುಧವಾರ 7.3 ತೀವ್ರತೆಯ ಭೂಕಂಪ ಸಂಭವಿಸಿದ್ದು, ಸುನಾಮಿ ಎಚ್ಚರಿಕೆ ನೀಡಲಾಗಿತ್ತು. ನಂತರ ಅದನ್ನು ಹಿಂಪಡೆಯಲಾಗಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ತಿಳಿಸಿದೆ.

ಸ್ಥಳೀಯ ಸಮಯ ಮಧ್ಯಾಹ್ನ ಸುಮಾರು 12:37 ಕ್ಕೆ ಭೂಮಿ ಕಂಪಿಸಿದ್ದು, ಇದರ ಕೇಂದ್ರ ಬಿಂದುವು ದ್ವೀಪ ಪಟ್ಟಣವಾದ ಸ್ಯಾಂಡ್ ಪಾಯಿಂಟ್‌ನಿಂದ ಸುಮಾರು 54 ಮೈಲುಗಳು (87 ಕಿಲೋಮೀಟರ್) ದಕ್ಷಿಣದಲ್ಲಿ, 12.5 ಮೈಲುಗಳಷ್ಟು ಭೂಮಿಯ ಆಳದಲ್ಲಿ ಪತ್ತೆಯಾಗಿದೆ ಯುಎಸ್‌ಜಿಎಸ್ ಹೇಳಿದೆ.

ಭೂಕಂಪದ ನಂತರ ಅಧಿಕಾರಿಗಳು ಆರಂಭದಲ್ಲಿ ದಕ್ಷಿಣ ಅಲಾಸ್ಕಾ ಮತ್ತು ಅಲಾಸ್ಕಾ ಪರ್ಯಾಯ ದ್ವೀಪಕ್ಕೆ ಸುನಾಮಿ ಎಚ್ಚರಿಕೆಯನ್ನು ನೀಡಿದ್ದರು. ಆದರೆ ನಂತರ ಅದನ್ನು ಸಂಪೂರ್ಣವಾಗಿ ಹಿಂತೆಗೆದುಕೊಂಡರು ಎಂದು ವರದಿಯಾಗಿದೆ.

“ದಕ್ಷಿಣ ಅಲಾಸ್ಕಾ ಮತ್ತು ಅಲಾಸ್ಕಾ ಪರ್ಯಾಯ ದ್ವೀಪದ ಕರಾವಳಿ ಪ್ರದೇಶಗಳಿಗೆ ನೀಡಲಾಗಿದ್ದ ಸುನಾಮಿ ಎಚ್ಚರಿಕೆಯನ್ನು ಹಿಂಪಡೆಯಲಾಗಿದೆ” ಎಂದು ಭೂಕಂಪದ ಸುಮಾರು ಎರಡು ಗಂಟೆಗಳ ನಂತರ ಬಿಡುಗಡೆ ಮಾಡಿದ ಸಂದೇಶದಲ್ಲಿ ರಾಷ್ಟ್ರೀಯ ಸುನಾಮಿ ಎಚ್ಚರಿಕೆ ಕೇಂದ್ರ (ಎನ್‌ಟಿಡಬ್ಲ್ಯುಸಿ) ತಿಳಿಸಿದೆ.

ಆರಂಭದ 7.3 ತೀವ್ರತೆಯ ಭೂಕಂಪದ ನಂತರ, 10ಕ್ಕೂ ಅಧಿಕ ಬಾರಿ ಭೂಮಿ ಕಂಪಿಸಿದೆ. ಅವುಗಳಲ್ಲಿ 5.2 ತೀವ್ರತೆ ಅತೀ ಹೆಚ್ಚು ಎಂದು ಯುಎಸ್‌ಜಿಎಸ್‌ ಮಾಹಿತಿ ನೀಡಿದೆ.

ಸುನಾಮಿ ಎಚ್ಚರಿಕೆ ಅಥವಾ ಸಲಹೆಯನ್ನು ಅಲಾಸ್ಕನ್ ಕರಾವಳಿಯ ಪ್ರದೇಶಗಳಿಗೆ ಮಾತ್ರ ನೀಡಲಾಗಿತ್ತು. ಭೂಕಂಪನ ದೂರದ ಪ್ರದೇಶಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಎನ್‌ಟಿಡಬ್ಲ್ಯುಸಿ ತಿಳಿಸಿದೆ.

ಸ್ಯಾಂಡ್ ಪಾಯಿಂಟ್‌ನಲ್ಲಿ ಗರಿಷ್ಠ 0.2 ಅಡಿ (6.1 ಸೆಂಟಿಮೀಟರ್) ಎತ್ತರದ ಸುನಾಮಿ ಅಲೆಗಳು ಕಂಡುಬಂದಿವೆ. ಸುನಾಮಿಯ ಅಪಾಯಕ್ಕೆ ಸದ್ಯಕ್ಕೆ ಇಲ್ಲದಿದ್ದರೂ, ಭೂಕಂಪ ಸಂಭವಿಸಿದ ಪ್ರದೇಶದ ನಿವಾಸಿಗಳು ಅಪಾಯದ ಬಗ್ಗೆ ಎಚ್ಚರದಿಂದಿರಬೇಕು ಎಂದು ಎನ್‌ಟಿಡಬ್ಲ್ಯುಸಿ ಸಲಹೆ ನೀಡಿದೆ.

“ಸ್ಥಳೀಯ ತುರ್ತು ಅಧಿಕಾರಿಗಳು ಸುರಕ್ಷಿತ ಎಂದು ಸೂಚಿಸುವವರೆಗೆ ಅಪಾಯದ ವಲಯಗಳಿಗೆ ಹಿಂದಿರುಗಬೇಡಿ” ಎಂದು ಸೂಚಿಸಿದೆ.

ಅಲಾಸ್ಕಾ ಭೂಕಂಪ ವಲಯ ಎಂದು ಗುರುತಿಸಿರುವ ಪೆಸಿಫಿಕ್ ರಿಂಗ್ ಆಫ್ ಫೈರ್‌ನಲ್ಲಿ ಬರುತ್ತದೆ. ಅಮೆರಿಕದ ಈ ದೂರದ ರಾಜ್ಯವು ಮಾರ್ಚ್ 1964ರಲ್ಲಿ 9.2 ತೀವ್ರತೆಯ ಭೂಕಂಪಕ್ಕೆ ತುತ್ತಾಗಿತ್ತು. ಇದು ಉತ್ತರ ಅಮೆರಿಕಾದಲ್ಲಿ ದಾಖಲಾದ ಅತ್ಯಂತ ಪ್ರಬಲ ಭೂಕಂಪವಾಗಿತ್ತು.

ಈ ಭೂಕಂಪದಿಂದ ಸುನಾಮಿ ಉಂಟಾಗಿತ್ತು. ಪರಿಣಾಮ ಆಂಕಾರೇಜ್ ನಗರದ ಮೇಲೆ ಸಂಪೂರ್ಣ ನಾಮವಶೇಷ ಆಗಿತ್ತು. ಸುನಾಮಿ ಅಲೆಗಳು ಅಲಾಸ್ಕಾ ಕೊಲ್ಲಿ, ಅಮೆರಿಕದ ಪಶ್ಚಿಮ ಕರಾವಳಿ ಮತ್ತು ಹವಾಯಿ ತೀರಕ್ಕೆ ಅಪ್ಪಳಿಸಿತ್ತು. ಹಲವಾರು ಜನರು ಪ್ರಾಣ ಕಳೆದುಕೊಂಡಿದ್ದರು ಮತ್ತು 400 ಮಿಲಿಯನ್‌ ಡಾಲರ್‌ಗಿಂತಲೂ ಹೆಚ್ಚು ಆಸ್ತಿ ನಷ್ಟ ಆಗಿತ್ತು.

ಜುಲೈ 2023ರಲ್ಲಿ ಅಲಾಸ್ಕಾ ಪರ್ಯಾಯ ದ್ವೀಪದಲ್ಲಿ 7.2 ತೀವ್ರತೆಯ ಭೂಕಂಪ ಸಂಭವಿಸಿತ್ತು. ಈ ಕಂಪನದಿಂದ ಯಾವುದೇ ದೊಡ್ಡ ಹಾನಿ ಸಂಭವಿಸಿರಲಿಲ್ಲ.

ಗಾಜಾ ನರಮೇಧಕ್ಕೆ ಸಹಭಾಗಿತ್ವ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ IPSP ಸಂಘಟನೆಯಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...