Homeಕರ್ನಾಟಕದಮ್ಮು, ತಾಕತ್ ಇದ್ದರೆ ದಲಿತ ಗೋವಿಂದ ಕಾರಜೋಳ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮಾಡಿ: ವಿಜಯೇಂದ್ರಗೆ ಸಿದ್ದರಾಮಯ್ಯ...

ದಮ್ಮು, ತಾಕತ್ ಇದ್ದರೆ ದಲಿತ ಗೋವಿಂದ ಕಾರಜೋಳ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಮಾಡಿ: ವಿಜಯೇಂದ್ರಗೆ ಸಿದ್ದರಾಮಯ್ಯ ಸವಾಲು

ಛಲವಾದಿ ನಾರಾಯಣ ಸ್ವಾಮಿ ಅವರ ತಲೆ ಮೇಲೆ ಚಡ್ಡಿತುಂಬಿದ ಬುಟ್ಟಿಹೊರಿಸಿ ಕಳಿಸುವ ಬದಲಿಗೆ ನೀವು ಮತ್ತು ನಿಮ್ಮ ತಂದೆಯವರು ಯಾಕೆ ಅದನ್ನು ಹೊತ್ತುಕೊಂಡು ಹೋಗಿಲ್ಲ?

- Advertisement -
- Advertisement -

ನೆಹರೂ ಕುಟುಂಬ ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ, ಪಂಗಡಗಳನ್ನು ಮತ್ತು ಅಲ್ಪಸಂಖ್ಯಾತರನ್ನು ತಮ್ಮ ಮನೆಯಾಳುಗಳ ರೀತಿ ನೋಡಿಕೊಂಡು ಬಂದಿದೆ ಎಂದಿರುವ ಬಿಜೆಪಿ ರಾಜಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.

ಮಾಧ್ಯಮ ಪ್ರಕಟನೆ ಹೊರಡಿಸಿರುವ ಸಿದ್ದರಾಮಯ್ಯ, “ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು, ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಯಾರಾಗಬೇಕೆಂದು ಸಲಹೆ ನೀಡುತ್ತಿರುವುದು ಅವರ ಅಜ್ಞಾನ ಮತ್ತು ಅತ್ಮವಂಚನೆಯನ್ನು ಮಾತ್ರವಲ್ಲ, ದುರಹಂಕಾರವನ್ನೂ ಸೂಚಿಸುತ್ತದೆ ಎಂದಿದ್ದಾರೆ.

ವಿಜಯೇಂದ್ರ ಅವರಿಗೆ ಓದುವ ಅಭ್ಯಾಸ ಇದ್ದರೆ, ಈ ದೇಶದ ಹಿಂದುಳಿದ ಜಾತಿಗಳು, ದಲಿತರು ಮತ್ತು ಅಲ್ಪಸಂಖ್ಯಾತರನ್ನು ಭಾರತೀಯ ಜನತಾ ಪಕ್ಷ ಯಾವ ಯಾವ ಕಾಲದಲ್ಲಿ ಹೇಗೆಲ್ಲಾ ನಡೆಸಿಕೊಂಡಿದೆ ಎಂಬ ಇತಿಹಾಸವನ್ನು ಓದಿ ತಿಳಿದುಕೊಳ್ಳಲಿ ಎಂದು ಹೇಳಿದ್ದಾರೆ.

ಬಂಡಾರುಲಕ್ಷ್ಮಣ ಎಂಬ ಅಮಾಯಕ ದಲಿತ ನಾಯಕನನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಲ್ಲಿ ಕೂರಿಸಿ ಅವರ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ಜೈಲಿಗೆ ತಳ್ಳಿದ್ದು ಮಾತ್ರವಲ್ಲ, ಅದೇ ಕೊರಗಿನಲ್ಲಿ ಅವರು ಸಾಯುವಂತೆ ಮಾಡಿದವರು ಯಾರು? ಮಾತೆತ್ತಿದರೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹೆಸರನ್ನು ಮೆರೆಸುವ ಬಿಜೆಪಿ, ಅವರನ್ನೇ ಪ್ರಧಾನಮಂತ್ರಿ ಯಾಕೆ ಮಾಡಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಎ.ಪಿ.ಜೆ ಅಬ್ದುಲ್ ಕಲಾಂ ಅವರನ್ನು ರಾಷ್ಟ್ರಪತಿ ಮಾಡಿದ್ದೇ ಸಾಧನೆ ಎಂದು ಹೇಳಿಕೊಳ್ಳುವವರು, ಪ್ರಸಕ್ತ ಲೋಕಸಭೆಯಲ್ಲಿ ಬಿಜೆಪಿಗೆ ಸೇರಿರುವ ಒಬ್ಬನೇ ಒಬ್ಬ ಮುಸ್ಲಿಂ ಸಂಸದ ಯಾಕೆ ಇಲ್ಲ? ಕಳೆದ ಲೋಕಸಭಾ ಚುನಾವಣೆಯಲ್ಲಿ ಒಬ್ಬನೇ ಒಬ್ಬ ಮುಸ್ಲಿಂ ನಾಯಕನಿಗೆ ಯಾಕೆ ಟಿಕೆಟ್ ಕೊಟ್ಟಿಲ್ಲ ಎನ್ನುವ ಪ್ರಶ್ನೆಗಳಿಗೆ ಉತ್ತರ ಕೊಡಲು ಸಾಧ್ಯವೇ? ಎಂದು ಸಿದ್ದರಾಮಯ್ಯ ಕೇಳಿದ್ದಾರೆ.

ಹಿಂದುಳಿದ ನಾಯಕರನ್ನು ಬಿಜೆಪಿ ಹೇಗೆ ನಡೆಸಿಕೊಳ್ಳುತ್ತಾ ಬಂದಿದೆ ಎನ್ನುವುದಕ್ಕೆ ರಾಜ್ಯದ ಹಿಂದುಳಿದ ಜಾತಿಗಳ ನಾಯಕ ಎಸ್.ಬಂಗಾರಪ್ಪನವರೇ ಸಾಕ್ಷಿ. ಬಂಗಾರಪ್ಪನವರನ್ನು ನಿಮ್ಮ ತಂದೆ ಬಿ.ಎಸ್ ಯಡಿಯೂರಪ್ಪನವರು ಮುಗಿಸಿದರೆ, ಅವರ ಮಗ ಕುಮಾರ್ ಬಂಗಾರಪ್ಪನವರ ರಾಜಕೀಯವನ್ನು ನೀವು ಮುಗಿಸಲು ಹೊರಟಿದ್ದೀರಿ. ಇದರ ವಿವರವನ್ನು ಅವರು ನೀಡುತ್ತಲೇ ಇದ್ದಾರೆ. ಬಂಗಾರಪ್ಪನವರಿರಲಿ, ನರೇಂದ್ರ ಮೋದಿ ಅವರೇ ಇರಲಿ, ಎಲ್ಲಿಯ ವರೆಗೆ ಇವರು ವರ್ಣವ್ಯವಸ್ಥೆ ಆಧಾರಿತ ಹಿಂದುತ್ವದ ಅಜೆಂಡಾಕ್ಕೆ ತಲೆ ಬಗ್ಗಿಸುತ್ತಾ ಇರುತ್ತಾರೋ ಅಲ್ಲಿಯ ವರೆಗೆ ಮಾತ್ರ ಅವರ ತಲೆಗಳು ಸುರಕ್ಷಿತ. ಇದು ಮೋದಿಯವರಿಗೂ ತಿಳಿದಿರಲಿ ಎಂದಿದ್ದಾರೆ.

ವಿಜಯೇಂದ್ರ ಅವರೇ, ದಲಿತ ಮತ್ತು ಹಿಂದುಳಿದ ಜಾತಿಗಳ ಬಗ್ಗೆ ನಿಮಗೆ ಅಷ್ಟೊಂದು ಅಕ್ಕರೆ, ಕಾಳಜಿಗಳಿದ್ದರೆ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನವನ್ನು ಒಬ್ಬ ದಲಿತ ನಾಯಕನಿಗೆ ಬಿಟ್ಟುಬಿಡಿ. ನಿಮಗೆ ಅನುಕೂಲವಾಗಲೆಂದು ಆ ಹೆಸರನ್ನು ನಾನೇ ಸೂಚಿಸುತ್ತೇನೆ. ದಲಿತ ನಾಯಕ ಗೋವಿಂದ ಕಾರಜೋಳ ಅವರು ಇತ್ತೀಚೆಗೆ ನಿಮ್ಮ ಸಂಗಕ್ಕೆಬಿದ್ದು ಇತ್ತೀಚೆಗೆ ಏನೇನೋ ಮಾತನಾಡುತ್ತಿದ್ದಾರೆ. ಆದರೆ ನನ್ನ ಸಹದ್ಯೋಗಿಯಾಗಿದ್ದ ಅವರು ಮೂಲತ: ಸಜ್ಜನ ವ್ಯಕ್ತಿ. ನಿಮಗೆ ಮತ್ತು ನಿಮ್ಮ ಪಕ್ಷಕ್ಕೆ ದಮ್ಮು ತಾಕತ್ ಇದ್ದರೆ ಕಾರಜೋಳ ಅವರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿ ಅವರನ್ನೇ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿಬಿಡಿ ಎಂದು ಸವಾಲ್ ಹಾಕಿದ್ದಾರೆ.

ಇಂತಹ ಒಳ್ಳೆಯ ಕೆಲಸವನ್ನು ನೀವು ಮಾಡುವುದೇ ಇಲ್ಲ ಎನ್ನುವುದು ನನಗೆ ಗೊತ್ತು. ಬೇರೆ ಪಕ್ಷಗಳಲ್ಲಿನ ದಲಿತ ನಾಯಕರ ಚಾರಿತ್ರ್ಯಹನನ ಮಾಡಲಷ್ಟೇ ಬಿಜೆಪಿ ತನ್ನ ದಲಿತ ನಾಯಕರನ್ನು ಬಳಸಿಕೊಳ್ಳುತ್ತದೆಯೇ ಹೊರತು, ಅವರಿಗೆ ಯಾವುದೇ ಗೌರವದ ಮತ್ತು ಪ್ರಮುಖ ಸ್ಥಾನಮಾನ ನೀಡುವುದಿಲ್ಲ ಎಂದಿರುವ ಸಿದ್ದರಾಮಯ್ಯ,  ವಿಜಯೇಂದ್ರ ಅವರೇ, ಛಲವಾದಿ ನಾರಾಯಣ ಸ್ವಾಮಿ ಅವರ ತಲೆ ಮೇಲೆ ಚಡ್ಡಿತುಂಬಿದ ಬುಟ್ಟಿಹೊರಿಸಿ ಕಳಿಸುವ ಬದಲಿಗೆ ನೀವು ಮತ್ತು ನಿಮ್ಮ ತಂದೆಯವರು ಯಾಕೆ ಅದನ್ನು ಹೊತ್ತುಕೊಂಡು ಹೋಗಿಲ್ಲ? ಇದಕ್ಕೆ ಉತ್ತರ ಇದೆಯಾ ನಿಮ್ಮಲ್ಲಿ? ಎಂದು ಕೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರು ಮಾತ್ರವಲ್ಲ ದೇಶ ಮೆಚ್ಚುವ ಒಬ್ಬ ಮುತ್ಸದ್ದಿ ನಾಯಕ. ಶ್ರದ್ಧೆ, ಶ್ರಮ ಮತ್ತು ಜನಪಪರಕಾಳಜಿ ಮೂಲಕ ಅವರು ನಾಯಕರಾಗಿ ಬೆಳೆದಿದ್ದಾರೆಯೇ ಹೊರತು, ಎಂದೂ ದಲಿತ ಕಾರ್ಡ್ ಪ್ರದರ್ಶಿಸಿ ರಾಜಕೀಯ ಮಾಡಿಲ್ಲ. ಅವರ ಬೆಳವಣಿಗೆಗೆ ಯಾರ ಶಿಫಾರಸುಗಳ ಅಗತ್ಯವೂ ಇಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಪ್ರಧಾನಮಂತ್ರಿ ಯಾರು ಆಗಬೇಕೆನ್ನುವುದನ್ನು ನಮ್ಮ ಪಕ್ಷ ನಿರ್ಧರಿಸುತ್ತದೆ. ಅದರ ಬಗ್ಗೆ ಬಿಜೆಪಿ ತಲೆಕೆಡಿಸಿಕೊಳ‍್ಳುವ ಅಗತ್ಯ ಇಲ್ಲ ಎಂದಿದ್ದಾರೆ.

ವಿಜಯೇಂದ್ರ ಅವರೇ ನೀವು ಯೋಚಿಸಬೇಕಾಗಿರುವುದು ನಿಮ್ಮ ಪಕ್ಷದ ಬಗ್ಗೆ. ಎಪ್ಪತ್ತೈದು ವರ್ಷ ತುಂಬಿರುವ ನರೇಂದ್ರ ಮೋದಿ ಅವರ ಪದಚ್ಯುತಿಯ ಸೂಚನೆಯನ್ನು ಆರ್‌ಎಸ್‌ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ನೀಡಿದ್ದಾರೆ. ದಲಿತ ಪ್ರಧಾನಮಂತ್ರಿಯನ್ನು ಮಾಡಲು ಬಿಜೆಪಿಗೆ ಇದೊಂದು ಸದಾವಕಾಶ. ಆ ಪ್ರಯತ್ನ ನಿಮ್ಮಿಂದಲೇ ಶುರುವಾಗಲಿ. ಬೇರೆಯವರಿಗೆ ಬೋಧನೆ ಮಾಡುವ ಬದಲಿಗೆ ಬಿಜೆಪಿಯ ಪ್ರಧಾನಮಂತ್ರಿ ಸ್ಥಾನಕ್ಕೆ ಒಬ್ಬ ದಲಿತ ನಾಯಕನನ್ನು ನೀವೇ ಮೊದಲೇ ಸೂಚಿಸಿ ನಿಮ್ಮ ದಲಿತ ಪ್ರೇಮವನ್ನು ಸಾಬೀತುಪಡಿಸಿ. ಆ ಹೆಸರುಗಳು ಗೋವಿಂದಪ್ಪ ಕಾರಜೋಳ ಅವರೋ, ಛಲವಾದಿ ನಾರಾಯಾಣ ಸ್ವಾಮಿ ಅವರದ್ದಾಗಿದ್ದರೆ ಅವರನ್ನು ಅಭಿನಂದಿಸುವರಲ್ಲಿ ನಾನು ಮೊದಲಿಗನಾಗುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಎಐಸಿಸಿ ಒಬಿಸಿ ಸಲಹಾ ಮಂಡಳಿ ಸಭೆ: ಮೂರು ಪ್ರಮುಖ ನಿರ್ಣಯಗಳ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....