Homeಮುಖಪುಟನಿಮ್ಮನ್ನು ರಕ್ಷಿಸಿಕೊಳ್ಳಬೇಕಾದರೆ "ಪುರುಷರಿಂದ ಅಧಿಕಾರವನ್ನು ಕಸಿದುಕೊಳ್ಳಬೇಕು": ಪ್ರಿಯಾಂಕ ಗಾಂಧಿ

ನಿಮ್ಮನ್ನು ರಕ್ಷಿಸಿಕೊಳ್ಳಬೇಕಾದರೆ “ಪುರುಷರಿಂದ ಅಧಿಕಾರವನ್ನು ಕಸಿದುಕೊಳ್ಳಬೇಕು”: ಪ್ರಿಯಾಂಕ ಗಾಂಧಿ

- Advertisement -
- Advertisement -

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಹಿಳೆಯರ ಮೇಲಿನ ಅಪರಾಧದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಅಂತಹ ಅಪರಾಧಗಳಿಂದ ತಮ್ಮನ್ನು ರಕ್ಷಿಸಿಕೊಳ್ಳಲು “ಪುರುಷರಿಂದ ಅಧಿಕಾರವನ್ನು ಕಸಿದುಕೊಳ್ಳಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

“ಮಹಿಳೆಯರಿಗೆ ಸಮಾಜದಲ್ಲಿ ಅಧಿಕಾರ ಸಿಗಬೇಕು ಎಂದು ನಾನು ಹೇಳುತ್ತೇನೆ. ಪುರುಷರಿಂದ ಅಧಿಕಾರವನ್ನು ಕಸಿದುಕೊಳ್ಳಲು, ಪಂಚಾಯತ್ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸಲು ಮತ್ತು ರಾಜಕೀಯದಲ್ಲಿ ಮುಂದೆ ಬರಲು ನಾನು ನನ್ನ ಸಹೋದರಿಯರಿಗೆ ಹೇಳುತ್ತೇನೆ. ಇದರಿಂದಾಗಿ ನೀವು ಅಧಿಕಾರ ಪಡೆಯುತ್ತೀರಿ ಮತ್ತು ಇಂತಹ ಘಟನೆಗಳು ನಡೆಯದಂತೆ ನಿಮ್ಮನ್ನು ರಕ್ಷಿಸಿಕೊಳ್ಳಬಹುದು” ಎಂದು ಪ್ರಿಯಾಂಕಾ ಗಾಂಧಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಉನ್ನಾವೋ ತೆರಳಿ ಸಂತ್ರಸ್ತೆಯ ಕುಟುಂಬದವರಿಗೆ ಸಾಂತ್ವನ ಹೇಳಿ ನಂತರ ಮಾತನಾಡಿದ ಅವರು ಅಪರಾಧದ ವಿರುದ್ಧ ನಿಮ್ಮನ್ನು ರಕ್ಷಿಸಿಕೊಳ್ಳಲು ಪುರುಷರಿಂದ ಶಕ್ತಿಯನ್ನು ಕಸಿದುಕೊಳ್ಳಿ ಎಂದು ನೆರೆದಿದ್ದ ಮಹಿಳೆಯರಿಗೆ ಪ್ರಿಯಾಂಕಾ ಗಾಂಧಿ ಕರೆ ನೀಡಿದ್ದಾರೆ.

ಎರಡು ದಿನಗಳ ಉತ್ತರ ಪ್ರದೇಶ ಭೇಟಿಯಲ್ಲಿರುವ ಕಾಂಗ್ರೆಸ್ ಮುಖಂಡೆ ತಮ್ಮ ಪಕ್ಷವು ಎಲ್ಲ ಹಂತದ ಮಹಿಳೆಯರ ಹಕ್ಕುಗಳಿಗಾಗಿ ಹೋರಾಡಲಿದೆ ಎಂದು ಪುನರುಚ್ಚರಿಸಿದ್ದಾರೆ.

ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ, ವಿಶೇಷವಾಗಿ ಮಹಿಳೆಯರ ಮೇಲಿನ ಅಪರಾಧದ ಕುರಿತು ಉತ್ತರ ಪ್ರದೇಶ ರಾಜ್ಯ ಸರ್ಕಾರದ ಮೇಲೆ ದಾಳಿ ಮಾಡಿದ ಅವರು, “ಉನ್ನಾವೊದಲ್ಲಿ, ಕಳೆದ 11 ತಿಂಗಳಲ್ಲಿ ಸುಮಾರು 90 ಅತ್ಯಾಚಾರ ಪ್ರಕರಣಗಳು ಕಂಡುಬಂದಿವೆ. “ಕೊನೆಯ ಘಟನೆ ವರದಿಯಾದಾಗ, ಸರ್ಕಾರವು ಅಪರಾಧಿಗಳನ್ನು ಕೊನೆಯವರೆಗೂ ರಕ್ಷಿಸಿತು ಎಂದು ಬಿಜೆಪಿ ಶಾಸಕ ಕುಲದೀಪ್‌ ಸಿಂಗ್‌ ಸೆಂಗಾರ್‌ ಉಲ್ಲೇಖಿಸಿ ಮಾತನಾಡಿದ್ದಾರೆ.

“ಮೈನ್‌ಪುರಿಯಲ್ಲಿ, ಸಂಭಾಲ್‌ನಲ್ಲಿ ಏನಾಯಿತು ಎಂದು ನೀವು ನೋಡಿರಬೇಕು? ಮಹಿಳೆಯರಿಗೆ ಈ ಸರ್ಕಾರದ ಮೇಲೆ ಹೇಗೆ ನಂಬಿಕೆ ಇಡಬಹುದು? ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಉತ್ತರ ಪ್ರದೇಶ ಪ್ರಥಮ ಸ್ಥಾನದಲ್ಲಿದೆ. ಮುಖ್ಯಮಂತ್ರಿ ಈ ಕುರಿತು ಏನು ಹೇಳಿದ್ದಾರೆ, ಯಾವ ಕ್ರಮ ತೆಗೆದುಕೊಂಡಿದ್ದಾರೆ? ಈಗಲಾದರೂ ಅವರು ಪೂರ್ಣ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಾಗಿದೆ “ಎಂದು ಅವರು ಒತ್ತಿ ಹೇಳಿದ್ದಾರೆ.

ಸರ್ಕಾರ ಇದನ್ನು ತುರ್ತು ಪರಿಸ್ಥಿತಿಯಂತೆ ತೆಗೆದುಕೊಳ್ಳಬೇಕು ಮತ್ತು ಸಂತ್ರಸ್ತರಿಗೆ ತ್ವರಿತ ಸಹಾಯವನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.

“ನನ್ನ ಸಲಹೆಯೆಂದರೆ ಮುಖ್ಯಮಂತ್ರಿಯವರ ಕಚೇರಿಯಲ್ಲಿ ಕೋಶವೊಂದನ್ನು ಸ್ಥಾಪಿಸಬೇಕು. ಅಲ್ಲಿ ಪ್ರತಿ ಜಿಲ್ಲೆಯ ಎಸ್‌ಪಿ ನೇರವಾಗಿ ಮಹಿಳೆಯರ ದೂರುಗಳ ಬಗ್ಗೆ ಸಿಎಂಗೆ ವರದಿ ಮಾಡಬೇಕು. ಅವುಗಳಿಗೆ ಸಂಬಂಧಿಸಿದಂತೆ 24 ಗಂಟೆಗಳಲ್ಲಿ ಎಫ್‌ಐಆರ್ ದಾಖಲಿಸಬೇಕು ಮತ್ತು ದೂರುದಾರರಿಗೆ ಭದ್ರತೆಯನ್ನು ಒದಗಿಸಬೇಕು” ಎಂದು ಅವರು ಹೇಳಿದ್ದಾರೆ.

ಪರಿಸ್ಥಿತಿ ಹೇಗಿದೆಯೆಂದರೆ, ಮಹಿಳೆಯರು ಇಂದು ತಮ್ಮ ಮನೆಗಳಿಂದ ಹೊರಬರಲು ಭಯಪಡುತ್ತಿದ್ದಾರೆ.  ಉನ್ನಾವೊ ಪ್ರಕರಣದಲ್ಲಿ, ಎಫ್‌ಐಆರ್ ದಾಖಲಿಸಲು ನಾಲ್ಕು ತಿಂಗಳು ಬೇಕಾಯಿತು ಮತ್ತು ಅದೂ ನ್ಯಾಯಾಲಯದ ನಿರ್ದೇಶನದ ಮೇರೆಗೆ ಮಾತ್ರ.” ಎಂದು ಅವರು ಹೇಳಿದ್ದಲ್ಲದೇ ಈ ಸರ್ಕಾರ ಮಹಿಳೆಯರ ಪರವೋ ಅಥವಾ ಅಪರಾಧಿಗಳ ಪರವಾಗಿದ್ದಾರೆಯೇ ಎಂದು ಸರ್ಕಾರ ನಿರ್ಧರಿಸಬೇಕು ಎಂದು ಪ್ರಶ್ನಿಸಿದ್ದಾರೆ.

ಮಹಿಳೆಯರ ಮೇಲಿನ ಅಪರಾಧವನ್ನು ಎದುರಿಸಲು ಹೆಚ್ಚು ಕಠಿಣ ಕಾನೂನುಗಳ ಅಗತ್ಯವಿದೆಯೇ ಎಂದು ಕೇಳಿದಾಗ, “ನಿರ್ಭಯಾ ಪ್ರಕರಣದ ನಂತರ ಕಾನೂನು ಸ್ಪಷ್ಟವಾಗಿದೆ ಮತ್ತು ಅವುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಿಯಾಂಕ ಗಾಂಧಿಯವರ ಅಭಿಪ್ರಾಯ ಅಕ್ಷರಶಃ ಸತ್ಯ. ಜನಸಂಖ್ಯೆಯ ಅರ್ಧದಷ್ಟು ಇರುವ ಮಹಿಳೆಯರಿಗೆ ಎಲ್ಲಾ ಕ್ಷೇತ್ರಗಳಲ್ಲಿ ಸಮಾನವಾದ ಅವಕಾಶ ದೊರಕಬೇಕು.

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...