Homeಮುಖಪುಟಅಸ್ಸಾಂ ಸೌರ ಯೋಜನೆ: ಭೂಕಬಳಿಕೆ ಆರೋಪ, ಬಲವಂತದಿಂದ 20,000 ಜನರ ಸ್ಥಳಾಂತರ - ಕೇಂದ್ರದ ಮಧ್ಯಪ್ರವೇಶಕ್ಕೆ...

ಅಸ್ಸಾಂ ಸೌರ ಯೋಜನೆ: ಭೂಕಬಳಿಕೆ ಆರೋಪ, ಬಲವಂತದಿಂದ 20,000 ಜನರ ಸ್ಥಳಾಂತರ – ಕೇಂದ್ರದ ಮಧ್ಯಪ್ರವೇಶಕ್ಕೆ ಜಮಿಯತ್ ಕರೆ

- Advertisement -
- Advertisement -

ಗುವಾಹಾಟಿ: ಅಸ್ಸಾಂನಲ್ಲಿ ಹೆಚ್ಚುತ್ತಿರುವ ಮಾನವೀಯ ದುರಂತಕ್ಕೆ ಕೇಂದ್ರ ಸರ್ಕಾರ ತಕ್ಷಣ ಧ್ವನಿ ನೀಡಬೇಕು. ಧುಬ್ರಿ ಮತ್ತು ಗೋಲ್ಪಾರಾ ಜಿಲ್ಲೆಗಳಲ್ಲಿ ನಡೆದ ತೆರವು ಕಾರ್ಯಾಚರಣೆಗಳಿಂದ ಸಾವಿರಾರು ಮುಸ್ಲಿಂ ಕುಟುಂಬಗಳು ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ ಎಂದು ಜಮಿಯತ್ ಉಲಮಾ-ಎ-ಹಿಂದ್ (JUH) ನ ಸತ್ಯಶೋಧನಾ ವರದಿಯು ಬಹಿರಂಗಪಡಿಸಿದೆ. ಇದು ‘ಮಾನವೀಯ ಮತ್ತು ಸಾಂವಿಧಾನಿಕ ಬಿಕ್ಕಟ್ಟು’ ಎಂದು JUH ಬಣ್ಣಿಸಿದ್ದು, ತಕ್ಷಣದ ಕೇಂದ್ರದ ಮಧ್ಯಪ್ರವೇಶಕ್ಕೆ ಆಗ್ರಹಿಸಿದೆ.

JUH ಅಧ್ಯಕ್ಷ ಮೌಲಾನಾ ಮಹ್ಮದ್ ಮದನಿ ಅವರಿಗೆ ಸಲ್ಲಿಸಲಾದ ವರದಿಯು ಅಸ್ಸಾಂ ಪರಿಸ್ಥಿತಿಯನ್ನು ‘ಅಮಾನವೀಯ’ ಮತ್ತು ಇದು ವಸಾಹತುಶಾಹಿ ಕಾಲದ ಮುತ್ತಿಗೆಯ ದಮನಕಾರಿ ಸ್ವರೂಪವನ್ನು ನೆನಪಿಸುತ್ತದೆ ಎಂದು ವಿವರಿಸಿದೆ.

ಅಸ್ಸಾಂನಲ್ಲಿ ಆಘಾತಕಾರಿ ಪೊಲೀಸ್ ದೌರ್ಜನ್ಯ: ಜುಲೈ 17ರಂದು ಗೋಲ್ಪಾರಾ ಜಿಲ್ಲೆಯ ಅಶುಡುಬಿ ಗ್ರಾಮದಲ್ಲಿ ಹಸಿವಿನಿಂದ ಬಳಲುತ್ತಿದ್ದ, ನಿರಾಯುಧ ಜನರ ಮೇಲೆ ಪೊಲೀಸರು ಗುಂಡು ಹಾರಿಸಿದ್ದು, 17 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಜುಲೈ 12ರ ತೆರವು ಕಾರ್ಯಾಚರಣೆಯಿಂದ ನಿರಾಶ್ರಿತನಾಗಿದ್ದ ಈ ಬಾಲಕ, ಆಹಾರಕ್ಕಾಗಿ ಪ್ರತಿಭಟಿಸುತ್ತಿದ್ದಾಗ ಗುಂಡೇಟಿಗೆ ಬಲಿಯಾಗಿದ್ದಾನೆ. ಈ ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ‘ಇದು ಮಾರಣಾಂತಿಕ ಮತ್ತು ಸಂಪೂರ್ಣ ಅಸಮರ್ಥನೀಯ ಪ್ರತಿಕ್ರಿಯೆ’ ಎಂದು JUH ವರದಿ ಹೇಳಿದೆ.

ಆಘಾತಕಾರಿ ವರದಿ: ಅಸ್ಸಾಂನಲ್ಲಿ ಭಾರೀ ಸ್ಥಳಾಂತರದ ಜೊತೆಗೆ ಪರಿಹಾರ ಕಾರ್ಯಾಚರಣೆಗಳ ಮೇಲೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ. ಧುಬ್ರಿ ಜಿಲ್ಲೆಯ ಚರಕಾತ್ರಾ, ಸಂತೋಷಪುರ ಮತ್ತು ಚರವಬಕ್ರಾ ಗ್ರಾಮಗಳಿಂದ 5,700 ನೋಂದಾಯಿತ ಮತದಾರರು ಸೇರಿದಂತೆ 20,000ಕ್ಕೂ ಅಧಿಕ ಜನರನ್ನು ಸ್ಥಳಾಂತರಿಸಲಾಗಿದೆ ಎಂದು JUH ವರದಿ ತಿಳಿಸಿದೆ. ಬ್ರಹ್ಮಪುತ್ರ ನದಿಯ ಮರಳದಿಬ್ಬಗಳಲ್ಲಿ ಶುದ್ಧ ನೀರು, ಆಶ್ರಯ, ಮತ್ತು ನೈರ್ಮಲ್ಯವಿಲ್ಲದೆ ಲಕ್ಷಾಂತರ ಜನರು ಪರದಾಡುತ್ತಿದ್ದಾರೆ. ಈ ಪ್ರದೇಶಗಳ ಮೇಲೆ ಅಸ್ಸಾಂ ಸರ್ಕಾರವು ನಿರ್ದಯವಾಗಿ ಮುತ್ತಿಗೆಯನ್ನು ಹೇರಿದೆ ಎಂದು ನಿಯೋಗ ಗಂಭೀರ ಆರೋಪ ಮಾಡಿದೆ. ಕೈಪಂಪ್‌ಗಳು, ಶೌಚಾಲಯಗಳನ್ನು ನಾಶಪಡಿಸಿದ್ದು ಮಾತ್ರವಲ್ಲದೆ, ಪರಿಹಾರ ತಲುಪಿಸುತ್ತಿದ್ದ ಎನ್‌ಜಿಒಗಳು ಮತ್ತು ಜಮಿಯತ್ ತಂಡಕ್ಕೂ ಪ್ರವೇಶ ನಿರಾಕರಿಸಲಾಗಿದೆ ಎಂದು ವರದಿ ಹೇಳಿದೆ.

ಸೌರಶಕ್ತಿ ಯೋಜನೆ ನೆಪದಲ್ಲಿ ಕಾರ್ಪೊರೇಟ್ ಬೆಂಬಲಿತ ಭೂಕಬಳಿಕೆ!: ಜಮಿಯತ್‌ನ ವರದಿಯ ಪ್ರಕಾರ, ಈ ಕಾರ್ಯಾಚರಣೆಗಳ ನಿಜವಾದ ಉದ್ದೇಶ ‘ಬಡ ಮುಸ್ಲಿಮರನ್ನು ಸ್ಥಳಾಂತರಿಸುವುದು ಮತ್ತು ಭೂಮಿಯನ್ನು ಕಬಳಿಸುವುದು’ ಮಾತ್ರವಾಗಿದೆ. ಈ ಸ್ಥಳಾಂತರವು ಪರಿಸರ ಅಥವಾ ಅಭಿವೃದ್ಧಿಯ ಉದ್ದೇಶದಿಂದ ನಡೆಯುತ್ತಿಲ್ಲವೆಂದು ಅದು ಹೇಳಿದೆ. ‘ಮತದಾರರ ಗುರುತಿನ ಚೀಟಿಗಳು ಮತ್ತು ಭೂ ದಾಖಲೆಗಳನ್ನು ಹೊಂದಿರುವ ಭಾರತೀಯ ನಾಗರಿಕರಿಗೆ ವಿದೇಶಿಯರು ಎಂದು ಹಣೆಪಟ್ಟಿ ಕಟ್ಟಿ ಅಸ್ಸಾಂನ ಮುಸ್ಲಿಮರನ್ನು ಅಮಾನವೀಯಗೊಳಿಸುವ ಮತ್ತು ಅವರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ದೊಡ್ಡ ಅಭಿಯಾನದ ಭಾಗವಾಗಿ ಈ ಸ್ಥಳಾಂತರ ನಡೆಯುತ್ತಿದೆ ಎಂದು JUH ವರದಿ ತೀವ್ರವಾಗಿ ಖಂಡಿಸಿದೆ.

JUH ವರದಿಯ ತುರ್ತು ಬೇಡಿಕೆಗಳು:

ಜಮಿಯತ್ ಉಲಮಾ-ಎ-ಹಿಂದ್ (JUH) ಕೇಂದ್ರ ಸರ್ಕಾರಕ್ಕೆ ಈ ಕೆಳಗಿನ ನಿರ್ಣಾಯಕ ಬೇಡಿಕೆಗಳನ್ನು ಮುಂದಿಟ್ಟಿದೆ:

*ಅಸ್ಸಾಂ ಬಿಕ್ಕಟ್ಟಿಗೆ ಕೇಂದ್ರದ ತಕ್ಷಣದ ಮಧ್ಯಪ್ರವೇಶಕ್ಕೆ ಆಗ್ರಹ

*ಸ್ಥಳಾಂತರಗೊಂಡ ಕುಟುಂಬಗಳಿಗೆ ತಕ್ಷಣದ ಮಾನವೀಯ ನೆರವು ಒದಗಿಸುವುದು

*ನೆರವು ಸಂಸ್ಥೆಗಳು ಮತ್ತು ಪತ್ರಕರ್ತರಿಗೆ ತಕ್ಷಣ ಪ್ರವೇಶ ರಸ್ತೆಗಳನ್ನು ಪುನಃ ತೆರೆಯುವುದು

*ಜುಲೈ 17ರ ಗುಂಡಿನ ದಾಳಿಯಲ್ಲಿ ಭಾಗಿಯಾದ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ನ್ಯಾಯಾಂಗ ಕ್ರಮ ಜರುಗಿಸುವುದು

*ಮೃತಪಟ್ಟವರ ಮತ್ತು ಗಾಯಗೊಂಡವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವುದು

*ಸ್ಥಳಾಂತರಗೊಂಡ ವ್ಯಕ್ತಿಗಳಿಗೆ ಪರ್ಯಾಯ ಭೂಮಿಯಲ್ಲಿ ಸಂಪೂರ್ಣ ಪುನರ್ವಸತಿ ಕಲ್ಪಿಸುವುದು

*ಎಲ್ಲಾ ಮುಂದಿನ ತೆರವು ಕಾರ್ಯಾಚರಣೆಗಳನ್ನು ತಕ್ಷಣ ನಿಲ್ಲಿಸಿ ಮತ್ತು ‘ಬಾಂಗ್ಲಾದೇಶಿ’ ಎಂಬ ತಪ್ಪು ಹಣೆಪಟ್ಟಿಯನ್ನು ಹಿಂತೆಗೆದುಕೊಳ್ಳುವುದು

*ತೆರವು ಕಾರ್ಯಾಚರಣೆಗಳು ಮತ್ತು ಪೊಲೀಸ್ ಅತಿರೇಕಗಳ ಬಗ್ಗೆ ಸಮಗ್ರ ನ್ಯಾಯಾಂಗ ವಿಚಾರಣೆಗೆ ಆದೇಶಿಸುವುದು

JUH ಪ್ರಧಾನ ಕಾರ್ಯದರ್ಶಿ ಮೌಲಾನಾ ಹಕೀಮುದ್ದೀನ್ ಖಾಸ್ಮಿ ನೇತೃತ್ವದ ನಿಯೋಗವು ಅಸ್ಸಾಂನ ಮುಸ್ಲಿಮರ ವಿರುದ್ಧದ ‘ಉದ್ದೇಶಿತ ಅಭಿಯಾನ’ವನ್ನು ಖಂಡಿಸಿದೆ. ಈ ವಿಷಯವನ್ನು ರಾಷ್ಟ್ರೀಯ ವೇದಿಕೆಗಳು, ನ್ಯಾಯಾಂಗ ಮತ್ತು ನಾಗರಿಕ ಸಮಾಜಕ್ಕೆ ಕೊಂಡೊಯ್ಯಲು ಜಮಿಯತ್ ತಂಡ ದೃಢ ಪ್ರತಿಜ್ಞೆ ಮಾಡಿದೆ. ‘ಇದು ಸ್ಥಳೀಯ ದುರಂತವಲ್ಲ, ರಾಷ್ಟ್ರೀಯ ತುರ್ತುಸ್ಥಿತಿ. ನ್ಯಾಯ ದೊರೆಯುವವರೆಗೂ ನಾವು ಹೋರಾಡುತ್ತೇವೆ’ ಎಂದು JUH ಪ್ರತಿನಿಧಿಯೊಬ್ಬರು ಘೋಷಿಸಿದ್ದಾರೆ.

UAPA ಸಾಂವಿಧಾನಿಕ ಸಿಂಧುತ್ವ ಎತ್ತಿಹಿಡಿದ ಬಾಂಬೆ ಹೈಕೋರ್ಟ್; ಕಾನೂನು ಹೋರಾಟಕ್ಕೆ ಭಾರಿ ಹಿನ್ನಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...