Homeಮುಖಪುಟಆಂಬ್ಯುಲೆನ್ಸ್‌ಗೆ ಹಣ ಹೊಂದಿಸಲು ಸಾಧ್ಯವಾಗದೆ ಮಗಳ ಶವವನ್ನು ಟ್ರಾಲಿ ರಿಕ್ಷಾದಲ್ಲಿ ಕೊಂಡೊಯ್ದ ಅಪ್ಪ

ಆಂಬ್ಯುಲೆನ್ಸ್‌ಗೆ ಹಣ ಹೊಂದಿಸಲು ಸಾಧ್ಯವಾಗದೆ ಮಗಳ ಶವವನ್ನು ಟ್ರಾಲಿ ರಿಕ್ಷಾದಲ್ಲಿ ಕೊಂಡೊಯ್ದ ಅಪ್ಪ

- Advertisement -
- Advertisement -

ಆಂಬ್ಯುಲೆನ್ಸ್ ಪಡೆಯಲು ಸಾಧ್ಯವಾಗದ ಕಾರಣ ವ್ಯಕ್ತಿಯೊಬ್ಬರು ತನ್ನ 17 ವರ್ಷದ ಮಗಳ ಶವವನ್ನು ಟ್ರಾಲಿ ರಿಕ್ಷಾದಲ್ಲಿ ಸುಮಾರು 7 ಕಿ.ಮೀ. ದೂರದಿಂದ ಮರಣೋತ್ತರ ಪರೀಕ್ಷೆಗಾಗಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಒಡಿಶಾದ ಬಾಲಸೋರ್‌ನ ಬಲಿಯಾಪಾಲ್‌ನಲ್ಲಿ ನಡೆದಿದೆ.

ಬಲಿಯಾಪಾಲ್ ಪೊಲೀಸ್ ಠಾಣಾ ವ್ಯಾಪ್ತಿಯ ಡ್ಯೂಲಾ ಗ್ರಾಮದಲ್ಲಿ ಗುರುವಾರ (ಜು.18) ಮಧ್ಯಾಹ್ನ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅಪ್ರಾಪ್ತ ಬಾಲಕಿ ಆಶಾ ಬಿಂಧಾನಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ವರದಿಯಾಗಿದೆ. ಈ ಬಗ್ಗೆ ಸ್ಥಳೀಯರು ಕೆಲಸಕ್ಕೆ ಹೋಗಿದ್ದ ಆಕೆಯ ತಂದೆ ಮಧು ಬಿಂಧಾನಿ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದರು.

ದಿನಗೂಲಿ ಕಾರ್ಮಿಕ ಮಧು ಸ್ಥಳಕ್ಕೆ ಧಾವಿಸಿ ನೋಡಿದಾಗ ಅವರ ಮಗಳು ಮೃತಪಟ್ಟಿರುವುದು ಕಂಡುಬಂದಿದೆ. ಸ್ವಲ್ಪ ಸಮಯದ ನಂತರ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಬಲಿಯಾಪಾಲ್ ಸಮುದಾಯ ಆರೋಗ್ಯಕ್ಕೆ ಕೊಂಡೊಯ್ಯಲು ಮಧು ಅವರಿಗೆ ಸೂಚಿಸಿದ್ದರು.

ಹಾಗಾಗಿ, ಮಧು ಆಂಬ್ಯುಲೆನ್ಸ್‌ಗೆ ಕರೆ ಮಾಡಿದ್ದರು. ಆದರೆ, ಚಾಲಕ ‘ಮೃತದೇಹ’ವನ್ನು ಸಾಗಿಸಲು 1,200 ರೂಪಾಯಿ ಕೇಳಿದ್ದಾರೆ ಎನ್ನಲಾಗಿದೆ. ಅಷ್ಟು ಹಣ ಹೊಂದಿಸಲು ಸಾಧ್ಯವಾಗದೆ ಹತಾಶೆಗೊಂಡ ಮಧು, ಸರ್ಕಾರದ ಉಚಿತ ಆಂಬ್ಯುಲೆನ್ಸ್ ಸೇವೆಯಾದ 108ಕ್ಕೆ ಕರೆ ಮಾಡಿ ಸಹಾಯ ಕೋರಿದ್ದರು. ಆದರೆ, 108 ಅಂಬ್ಯುಲೆನ್ಸ್‌ನವರು ನಾವು ಶವ ಸಾಗಿಸುವುದಿಲ್ಲ. ತುರ್ತಾಗಿ ಆಸ್ಪತ್ರೆಗೆ ಸೇರಿಸುವ ಸೇವೆಯನ್ನು ಮಾತ್ರ ಒದಗಿಸುತ್ತೇವೆ ಎಂದಿದ್ದಾರೆ.

ಇತ್ತ ಹಣ ಹೊಂದಿಸಲಾಗದೆ, ಅತ್ತ ಬೇರೆ ಆಯ್ಕೆ ಇಲ್ಲದ ಕಾರಣ ಮಧು ಅವರು ಸ್ಥಳೀಯರಲ್ಲಿ ಆರ್ಥಿಕ ಸಹಾಯಕ್ಕಾಗಿ ಮನವಿ ಮಾಡಿದ್ದರು. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಕೊನೆಗೆ, ಸ್ಥಳೀಯ ರಿಕ್ಷಾ ಚಾಲಕರೊಬ್ಬರು ಮಧ್ಯಪ್ರವೇಶಿಸಿ ಶವವನ್ನು ಸಾಗಿಸಲು ತನ್ನ ಮೂರು ಚಕ್ರದ ವಾಹನವನ್ನು ನೀಡಿದ್ದಾರೆ.

ಮಧು ತನ್ನ ಮಗಳ ಶವವನ್ನು ಟ್ರಾಲಿ ರಿಕ್ಷಾದಲ್ಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ದರು, ಅಲ್ಲಿ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದರು. ನಂತರ ಅದೇ ರಿಕ್ಷಾದಲ್ಲಿಅಂತಿಮ ವಿಧಿವಿಧಾನಗಳಿಗಾಗಿ ಶವವನ್ನು ಡ್ಯೂಲಾ ಗ್ರಾಮಕ್ಕೆ ತರಲಾಗಿದೆ.

“ನಾನು ಬಡ ದಿನಗೂಲಿ ಕಾರ್ಮಿಕ. ನನ್ನ ಮಗಳ ಶವವನ್ನು ಆಸ್ಪತ್ರೆಗೆ ಕೊಂಡೊಯ್ಯಲು ಆಂಬ್ಯುಲೆನ್ಸ್‌ಗೆ 1,200 ರೂಪಾಯಿ ವ್ಯವಸ್ಥೆ ಮಾಡಲು ನನ್ನಿಂದ ಸಾಧ್ಯವಾಗಲಿಲ್ಲ. ಒಬ್ಬ ದಯಾಳು ವ್ಯಕ್ತಿ ತನ್ನ ಟ್ರಾಲಿ ರಿಕ್ಷಾವನ್ನು ನನಗೆ ಕೊಟ್ಟರು. ನನ್ನ ಮಗಳ ಶವವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ದು, ನಂತರ ಅಂತಿಮ ವಿಧಿವಿಧಾನಗಳಿಗಾಗಿ ಮನೆಗೆ ತೆಗೆದುಕೊಂಡು ಬರಲು ಅದೊಂದೇ ಮಾರ್ಗವಾಗಿತ್ತು” ಎಂದು ಮಧು ಹೇಳಿದ್ದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಶುಕ್ರವಾರ, ಮಧು ತನ್ನ ಮಗಳ ಶವವನ್ನು ಟ್ರಾಲಿ ರಿಕ್ಷಾದ ಮೇಲೆ ಇಟ್ಟು ಕೊಂಡೊಯ್ದ ವಿಡಿಯೋ ಮತ್ತು ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ. ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ನಾವು ಸ್ಥಳೀಯ ಪೊಲೀಸರು ಮತ್ತು ಆರೋಗ್ಯ ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಯತ್ನಿಸಿದೆವು. ಆದರೆ, ಅದು ಸಾಧ್ಯವಾಗಿಲ್ಲ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಹೇಳಿದೆ.

ಅಸ್ಸಾಂ ಸೌರ ಯೋಜನೆ: ಭೂಕಬಳಿಕೆ ಆರೋಪ, ಬಲವಂತದಿಂದ 20,000 ಜನರ ಸ್ಥಳಾಂತರ – ಕೇಂದ್ರದ ಮಧ್ಯಪ್ರವೇಶಕ್ಕೆ ಜಮಿಯತ್ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...