ಮಹಾರಾಷ್ಟ್ರದ ರಾಜಕೀಯದಲ್ಲಿ ಮಹತ್ವದ ಬದಲಾವಣೆಗಳು ಸಂಭವಿಸುವ ಸಾಧ್ಯತೆಯಿದೆ. ಉದ್ದವ್ ಠಾಕ್ರೆ ಬಣದ ಶಿವಸೇನೆ ಬಿಜೆಪಿಯತ್ತ ಮೈತ್ರಿಕೂಟದತ್ತ ಒಳವು ತೋರಿಸುತ್ತಿದೆ ಎಂದು ವರದಿಯಾಗುತ್ತಿರುವ ನಡುವೆ, ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸುವ ಅಭಿಪ್ರಾಯವನ್ನು ಉದ್ಧವ್ ಠಾಕ್ರೆ ವ್ಯಕ್ತಪಡಿಸಿದ್ದಾರೆ.
ಶಿವಸೇನೆಯ (ಯುಬಿಟಿ) ಮುಖವಾಣಿ ಸಾಮ್ನಾಗೆ ನೀಡಿದ ಸಂದರ್ಶನದಲ್ಲಿ, “2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸೀಟು ಹಂಚಿಕೆ ಒಪ್ಪಂದಗಳನ್ನು ಅಂತಿಮಗೊಳಿಸುವಲ್ಲಿ ಮತ್ತು ಅಭ್ಯರ್ಥಿಗಳನ್ನು ಆಯ್ಕೆ ಮಾಡುವಲ್ಲಿ ವಿಳಂಬದಂತಹ ತಪ್ಪುಗಳು ಪುನರಾವರ್ತನೆಯಾಗಿತ್ತು ಎಂದಿರುವ ಉದ್ದವ್ ಠಾಕ್ರೆ, ಎಂವಿಎ ಮೈತ್ರಿಕೂಟದ ಒಗ್ಗಟ್ಟಿನ ಬಗ್ಗೆ ಪ್ರಶ್ನಿಸಿದ್ದಾರೆ.
2024ರ ಲೋಕಸಭಾ ಚುನಾವಣೆಯಲ್ಲಿ ಎಂವಿಎ ಮೈತ್ರಿಕೂಟ ಅದ್ಭುತ ಪ್ರದರ್ಶನ ತೋರಿಸಿದಾಗ ಉಂಟಾದ ಸಂತೋಷ, ವಿಧಾನಸಭಾ ಚುನಾವಣೆಯ ಸಮಯದಲ್ಲಿ ಪಕ್ಷವಾರು ಗೆಲುವುಗಳನ್ನು ಸಾಧಿಸುವತ್ತ ಗಮನಹರಿಸಿದ ವೈಯಕ್ತಿಕ ಅಹಂಕಾರಗಳಾಗಿ ರೂಪಾಂತರಗೊಂಡು ಅಂತಿಮವಾಗಿ ಸೋಲಿಗೆ ಕಾರಣವಾಯಿತು ಎಂದು ಠಾಕ್ರೆ ಒತ್ತಿ ಹೇಳಿದ್ದಾರೆ.
ತಮ್ಮ ಪಕ್ಷವು ಲೋಕಸಭಾ ಚುನಾವಣೆಯ ಸಮಯದಲ್ಲಿ ತನ್ನ ಎಂವಿಎ ಪಾಲುದಾರರಿಗೆ ಹಲವು ಬಾರಿ ಗೆದ್ದ ಕ್ಷೇತ್ರಗಳನ್ನು ಬಿಟ್ಟುಕೊಡಬೇಕಾಯಿತು ಎಂದು ಅವರು ವಿಷಾದಿಸಿದ್ದಾರೆ.
ಚುನಾವಣೆಯ ಸಮಯದಲ್ಲಿ, ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ನಿರ್ಧರಿಸಲಾಗುತ್ತಿರಲಿಲ್ಲ ಎಂದು ಮಾಜಿ ಸಿಎಂ ನೆನಪಿಸಿಕೊಂಡಿದ್ದಾರೆ.
“ಇದು ಸರಿಪಡಿಸಿಕೊಳ್ಳಲೇಬೇಕಾದ ತಪ್ಪಾಗಿತ್ತು. ಭವಿಷ್ಯದಲ್ಲಿ ಇಂತಹ ತಪ್ಪುಗಳು ಸಂಭವಿಸಿದರೆ ಒಟ್ಟಿಗೆ ಇರುವುದರಲ್ಲಿ ಅರ್ಥವಿಲ್ಲ” ಎಂದಿದ್ದಾರೆ.
ವಿಧಾನಸಭಾ ಚುನಾವಣೆಯ ಸಮಯದಲ್ಲಿ ವಿಶೇಷ ಕೊಡುಗೆಗಳನ್ನು ಘೋಷಿಸುವ ಸ್ಪರ್ಧೆಯು ಶಿವಸೇನೆ (ಯುಬಿಟಿ), ಎನ್ಸಿಪಿ (ಶರದ್ಚಂದ್ರ ಪವಾರ್) ಮತ್ತು ಕಾಂಗ್ರೆಸ್ ಒಳಗೊಂಡ ಎಂವಿಎಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು ಹೇಳಿದ್ದಾರೆ.
ಇವಿಎಂ ಹಗರಣ, ನಕಲಿ ಮತದಾರರ ಪಟ್ಟಿ ಮತ್ತು ವಿಧಾನಸಭಾ ಚುನಾವಣೆಯ ಸಮಯದಲ್ಲಿ ಮತದಾರರ ಸಂಖ್ಯೆಯಲ್ಲಿನ ಹೆಚ್ಚಳದ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
ಲಡ್ಕಿ ಬಹಿನ್ನಂತಹ ಮೋಸಗೊಳಿಸುವ ಯೋಜನೆಗಳು ಚುನಾವಣಾ ನಿರೀಕ್ಷೆಗಳ ಮೇಲೆ ಪರಿಣಾಮ ಬೀರಿದ್ದವು ಎಂದು ಠಾಕ್ರೆ ಸಾಮ್ನಾದ ಕಾರ್ಯನಿರ್ವಾಹಕ ಸಂಪಾದಕ ಮತ್ತು ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಅವರೊಂದಿಗಿನ ಸಂದರ್ಶನದಲ್ಲಿ ಹೇಳಿದ್ದಾರೆ.
ತಪ್ಪುಗಳನ್ನು ಒಪ್ಪಿಕೊಳ್ಳಲು ಹಿಂಜರಿಯುವುದು ಸರಿಯಲ್ಲ. 2024ರ ಲೋಕಸಭಾ ಚುನಾವಣೆಯಲ್ಲಿ, ಎಂವಿಎ ಮಹಾರಾಷ್ಟ್ರದ 48 ಸ್ಥಾನಗಳಲ್ಲಿ 30 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಐದು ತಿಂಗಳ ನಂತರ, ಮಹಾಯುತಿ ಮೈತ್ರಿಕೂಟವು ವಿರೋಧ ಪಕ್ಷಗಳಿಗೆ ಹೀನಾಯ ಸೋಲನ್ನುಂಟುಮಾಡಿತು. 288 ಸದಸ್ಯ ಬಲದ ಸದನದಲ್ಲಿ ಶಿವಸೇನೆ (ಯುಬಿಟಿ), ಎನ್ಸಿಪಿ (ಎಸ್ಪಿ) ಮತ್ತು ಕಾಂಗ್ರೆಸ್ನ ಒಟ್ಟಾರೆ 46 ಸ್ಥಾನಗಳಿಗೆ ಸೀಮಿತವಾಯಿತು” ಎಂದಿದ್ದಾರೆ.
ಕಳೆದ ಬಾರಿಯ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು 132 ಸ್ಥಾನಗಳನ್ನು ಗೆದ್ದರೆ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ 57 ಮತ್ತು ಅಜಿತ್ ಪವಾರ್ ನೇತೃತ್ವದ ಎನ್ಸಿಪಿ 41 ಸ್ಥಾನಗಳನ್ನು ಗೆದ್ದಿತ್ತು. ಪ್ರತಿಸ್ಪರ್ಧಿಗಳಾದ ಶಿವಸೇನೆ (ಯುಬಿಟಿ) ಮತ್ತು ಎನ್ಸಿಪಿ (ಎಸ್ಪಿ) ನೇರ ಸ್ಪರ್ಧೆಯಲ್ಲಿ ಕ್ರಮವಾಗಿ 20 ಮತ್ತು 16 ಕ್ಷೇತ್ರಗಳನ್ನು ಗೆದ್ದುಕೊಂಡಿದ್ದವು.
ಐದು ಜೆಟ್ಗಳನ್ನು ಹೊಡೆದುರುಳಿಸಲಾಗಿದೆ ಎಂದ ಟ್ರಂಪ್: ಮೋದಿ ಸ್ಪಷ್ಟನೆ ನೀಡುವಂತೆ ಕಾಂಗ್ರೆಸ್ ಆಗ್ರಹ


