Homeಮುಖಪುಟಎಂವಿಎ ಒಗ್ಗಟ್ಟಿನ ಬಗ್ಗೆ ಪ್ರಶ್ನಿಸಿದ ಉದ್ಧವ್ ಠಾಕ್ರೆ: ಮೈತ್ರಿಕೂಟದಿಂದ ನಿರ್ಗಮಿಸುವ ಮುನ್ಸೂಚನೆ?

ಎಂವಿಎ ಒಗ್ಗಟ್ಟಿನ ಬಗ್ಗೆ ಪ್ರಶ್ನಿಸಿದ ಉದ್ಧವ್ ಠಾಕ್ರೆ: ಮೈತ್ರಿಕೂಟದಿಂದ ನಿರ್ಗಮಿಸುವ ಮುನ್ಸೂಚನೆ?

- Advertisement -
- Advertisement -

ಮಹಾರಾಷ್ಟ್ರದ ರಾಜಕೀಯದಲ್ಲಿ ಮಹತ್ವದ ಬದಲಾವಣೆಗಳು ಸಂಭವಿಸುವ ಸಾಧ್ಯತೆಯಿದೆ. ಉದ್ದವ್ ಠಾಕ್ರೆ ಬಣದ ಶಿವಸೇನೆ ಬಿಜೆಪಿಯತ್ತ ಮೈತ್ರಿಕೂಟದತ್ತ ಒಳವು ತೋರಿಸುತ್ತಿದೆ ಎಂದು ವರದಿಯಾಗುತ್ತಿರುವ ನಡುವೆ, ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟದ ಬಗ್ಗೆ ಅಸಮಾಧಾನ ವ್ಯಕ್ತಪಡಿಸುವ ಅಭಿಪ್ರಾಯವನ್ನು ಉದ್ಧವ್ ಠಾಕ್ರೆ ವ್ಯಕ್ತಪಡಿಸಿದ್ದಾರೆ.

ಶಿವಸೇನೆಯ (ಯುಬಿಟಿ) ಮುಖವಾಣಿ ಸಾಮ್ನಾಗೆ ನೀಡಿದ ಸಂದರ್ಶನದಲ್ಲಿ, “2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸೀಟು ಹಂಚಿಕೆ ಒಪ್ಪಂದಗಳನ್ನು ಅಂತಿಮಗೊಳಿಸುವಲ್ಲಿ ಮತ್ತು ಅಭ್ಯರ್ಥಿಗಳನ್ನು ಆಯ್ಕೆ ಮಾಡುವಲ್ಲಿ ವಿಳಂಬದಂತಹ ತಪ್ಪುಗಳು ಪುನರಾವರ್ತನೆಯಾಗಿತ್ತು ಎಂದಿರುವ ಉದ್ದವ್ ಠಾಕ್ರೆ, ಎಂವಿಎ ಮೈತ್ರಿಕೂಟದ ಒಗ್ಗಟ್ಟಿನ ಬಗ್ಗೆ ಪ್ರಶ್ನಿಸಿದ್ದಾರೆ.

2024ರ ಲೋಕಸಭಾ ಚುನಾವಣೆಯಲ್ಲಿ ಎಂವಿಎ ಮೈತ್ರಿಕೂಟ ಅದ್ಭುತ ಪ್ರದರ್ಶನ ತೋರಿಸಿದಾಗ ಉಂಟಾದ ಸಂತೋಷ, ವಿಧಾನಸಭಾ ಚುನಾವಣೆಯ ಸಮಯದಲ್ಲಿ ಪಕ್ಷವಾರು ಗೆಲುವುಗಳನ್ನು ಸಾಧಿಸುವತ್ತ ಗಮನಹರಿಸಿದ ವೈಯಕ್ತಿಕ ಅಹಂಕಾರಗಳಾಗಿ ರೂಪಾಂತರಗೊಂಡು ಅಂತಿಮವಾಗಿ ಸೋಲಿಗೆ ಕಾರಣವಾಯಿತು ಎಂದು ಠಾಕ್ರೆ ಒತ್ತಿ ಹೇಳಿದ್ದಾರೆ.

ತಮ್ಮ ಪಕ್ಷವು ಲೋಕಸಭಾ ಚುನಾವಣೆಯ ಸಮಯದಲ್ಲಿ ತನ್ನ ಎಂವಿಎ ಪಾಲುದಾರರಿಗೆ ಹಲವು ಬಾರಿ ಗೆದ್ದ ಕ್ಷೇತ್ರಗಳನ್ನು ಬಿಟ್ಟುಕೊಡಬೇಕಾಯಿತು ಎಂದು ಅವರು ವಿಷಾದಿಸಿದ್ದಾರೆ.

ಚುನಾವಣೆಯ ಸಮಯದಲ್ಲಿ, ಕೆಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ನಿರ್ಧರಿಸಲಾಗುತ್ತಿರಲಿಲ್ಲ ಎಂದು ಮಾಜಿ ಸಿಎಂ ನೆನಪಿಸಿಕೊಂಡಿದ್ದಾರೆ.

“ಇದು ಸರಿಪಡಿಸಿಕೊಳ್ಳಲೇಬೇಕಾದ ತಪ್ಪಾಗಿತ್ತು. ಭವಿಷ್ಯದಲ್ಲಿ ಇಂತಹ ತಪ್ಪುಗಳು ಸಂಭವಿಸಿದರೆ ಒಟ್ಟಿಗೆ ಇರುವುದರಲ್ಲಿ ಅರ್ಥವಿಲ್ಲ” ಎಂದಿದ್ದಾರೆ.

ವಿಧಾನಸಭಾ ಚುನಾವಣೆಯ ಸಮಯದಲ್ಲಿ ವಿಶೇಷ ಕೊಡುಗೆಗಳನ್ನು ಘೋಷಿಸುವ ಸ್ಪರ್ಧೆಯು ಶಿವಸೇನೆ (ಯುಬಿಟಿ), ಎನ್‌ಸಿಪಿ (ಶರದ್ಚಂದ್ರ ಪವಾರ್) ಮತ್ತು ಕಾಂಗ್ರೆಸ್ ಒಳಗೊಂಡ ಎಂವಿಎಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು ಹೇಳಿದ್ದಾರೆ.

ಇವಿಎಂ ಹಗರಣ, ನಕಲಿ ಮತದಾರರ ಪಟ್ಟಿ ಮತ್ತು ವಿಧಾನಸಭಾ ಚುನಾವಣೆಯ ಸಮಯದಲ್ಲಿ ಮತದಾರರ ಸಂಖ್ಯೆಯಲ್ಲಿನ ಹೆಚ್ಚಳದ ಬಗ್ಗೆ ಚರ್ಚೆಗಳು ನಡೆಯುತ್ತಿವೆ.

ಲಡ್ಕಿ ಬಹಿನ್‌ನಂತಹ ಮೋಸಗೊಳಿಸುವ ಯೋಜನೆಗಳು ಚುನಾವಣಾ ನಿರೀಕ್ಷೆಗಳ ಮೇಲೆ ಪರಿಣಾಮ ಬೀರಿದ್ದವು ಎಂದು ಠಾಕ್ರೆ ಸಾಮ್ನಾದ ಕಾರ್ಯನಿರ್ವಾಹಕ ಸಂಪಾದಕ ಮತ್ತು ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಅವರೊಂದಿಗಿನ ಸಂದರ್ಶನದಲ್ಲಿ ಹೇಳಿದ್ದಾರೆ.

ತಪ್ಪುಗಳನ್ನು ಒಪ್ಪಿಕೊಳ್ಳಲು ಹಿಂಜರಿಯುವುದು ಸರಿಯಲ್ಲ. 2024ರ ಲೋಕಸಭಾ ಚುನಾವಣೆಯಲ್ಲಿ, ಎಂವಿಎ ಮಹಾರಾಷ್ಟ್ರದ 48 ಸ್ಥಾನಗಳಲ್ಲಿ 30 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಐದು ತಿಂಗಳ ನಂತರ, ಮಹಾಯುತಿ ಮೈತ್ರಿಕೂಟವು ವಿರೋಧ ಪಕ್ಷಗಳಿಗೆ ಹೀನಾಯ ಸೋಲನ್ನುಂಟುಮಾಡಿತು. 288 ಸದಸ್ಯ ಬಲದ ಸದನದಲ್ಲಿ ಶಿವಸೇನೆ (ಯುಬಿಟಿ), ಎನ್‌ಸಿಪಿ (ಎಸ್‌ಪಿ) ಮತ್ತು ಕಾಂಗ್ರೆಸ್‌ನ ಒಟ್ಟಾರೆ 46 ಸ್ಥಾನಗಳಿಗೆ ಸೀಮಿತವಾಯಿತು” ಎಂದಿದ್ದಾರೆ.

ಕಳೆದ ಬಾರಿಯ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು 132 ಸ್ಥಾನಗಳನ್ನು ಗೆದ್ದರೆ, ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ 57 ಮತ್ತು ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ 41 ಸ್ಥಾನಗಳನ್ನು ಗೆದ್ದಿತ್ತು. ಪ್ರತಿಸ್ಪರ್ಧಿಗಳಾದ ಶಿವಸೇನೆ (ಯುಬಿಟಿ) ಮತ್ತು ಎನ್‌ಸಿಪಿ (ಎಸ್‌ಪಿ) ನೇರ ಸ್ಪರ್ಧೆಯಲ್ಲಿ ಕ್ರಮವಾಗಿ 20 ಮತ್ತು 16 ಕ್ಷೇತ್ರಗಳನ್ನು ಗೆದ್ದುಕೊಂಡಿದ್ದವು.

ಐದು ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದ ಟ್ರಂಪ್: ಮೋದಿ ಸ್ಪಷ್ಟನೆ ನೀಡುವಂತೆ ಕಾಂಗ್ರೆಸ್ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...