Homeಮುಖಪುಟಅಂಬೇಡ್ಕರ್ ನಗರ: ನಿವೃತ್ತ ಮುಸ್ಲಿಂ ಶಿಕ್ಷಕರ 3 ಅಂತಸ್ತಿನ ಮನೆ ನೆಲಸಮ - ಒಂದು...

ಅಂಬೇಡ್ಕರ್ ನಗರ: ನಿವೃತ್ತ ಮುಸ್ಲಿಂ ಶಿಕ್ಷಕರ 3 ಅಂತಸ್ತಿನ ಮನೆ ನೆಲಸಮ – ಒಂದು ಕುಟುಂಬದ ನೋವಿನ ಕಥೆ

- Advertisement -
- Advertisement -

ನವದೆಹಲಿ: ಉತ್ತರಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ ಜಲಾಲ್‌ಪುರದಲ್ಲಿ ಗುರುವಾರ, 55 ವರ್ಷದ ನಿವೃತ್ತ ಶಿಕ್ಷಕ ನಬಿ ಅಹ್ಮದ್ ಅವರ ಮೂರು ಅಂತಸ್ತಿನ ಕನಸಿನ ಮನೆ ಒಂದು ಗಂಟೆಗೂ ಕಡಿಮೆ ಅವಧಿಯಲ್ಲಿ ನೆಲಸಮಗೊಳಿಸಲಾಯಿತು. ಬಸ್ಖಾರಿ ರಸ್ತೆಯಲ್ಲಿ ನಡೆದ ಈ ಘಟನೆ, ಜೀವನದುದ್ದಕ್ಕೂ ಕಟ್ಟಿಕೊಂಡ ಕನಸುಗಳು ಮತ್ತು ದುಡಿದ ಹಣದಿಂದ ನಿರ್ಮಿಸಿದ ಮನೆಯು ಕಣ್ಮುಂದೆಯೇ ಕೆಡವಲ್ಪಟ್ಟಿತ್ತು. “ಅಕ್ರಮ ಒತ್ತುವರಿ” ನೆಪದಲ್ಲಿ ಮುಸ್ಲಿಮರ ಮನೆಗಳನ್ನು ಗುರಿಯಾಗಿಸಿಕೊಂಡು ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ನಿರಂತರ ಅಭಿಯಾನಕ್ಕೆ ಮತ್ತೊಂದು ಉದಾಹರಣೆಯಾಗಿದೆ.

ಲೋಕೋಪಯೋಗಿ ಇಲಾಖೆಯು (PWD) ಈ ನೆಲಸಮ ಕಾರ್ಯವನ್ನು ಹೈಕೋರ್ಟ್ ಆದೇಶದಂತೆ ನಡೆಸಲಾಗಿದೆ ಎಂದು ಹೇಳಿದೆ. ಸರ್ಕಾರಿ ಭೂಮಿ ಎಂದು ಘೋಷಿಸಿದ ನಂತರವೇ ಈ ಮನೆಗೆ ಬುಲ್ಡೋಜರ್ ಹತ್ತಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ತಿಳಿಸಿದೆ. ಜಲಾಲ್‌ಪುರ್ ಕೊತ್ವಾಲ್ ಸಂತೋಷ್ ಕುಮಾರ್ ಸಿಂಗ್ ಸಹ, “ಈ ಕಟ್ಟಡವು ಸರ್ಕಾರಿ ಭೂಮಿಯಲ್ಲಿದ್ದು, ಕಾನೂನುಬದ್ಧ ಅನುಮೋದನೆ ಇರಲಿಲ್ಲ. ನಾವು ಅಹ್ಮದ್‌ಗೆ ಪೂರ್ವ ಸೂಚನೆ ಸೇರಿದಂತೆ ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸಿದ್ದೇವೆ,” ಎಂದು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

“ನನ್ನ ಇಡೀ ಜೀವನವನ್ನು ಈ ಮನೆಯನ್ನು ಕಟ್ಟಲು ಕಳೆದಿದ್ದೇನೆ. ಈಗ ನನ್ನ ಬ್ಯಾಗ್‌ನಲ್ಲಿರುವ ಬಟ್ಟೆಗಳನ್ನು ಹೊರತುಪಡಿಸಿ ನನಗೇನೂ ಇಲ್ಲ. ಇಲ್ಲಿ ಯಾವುದೇ ಹಿಂದೂ ಮನೆಗಳನ್ನು ಮುಟ್ಟಿಲ್ಲ; ನಮ್ಮನ್ನು ಮಾತ್ರ ಗುರಿಪಡಿಸಲಾಗುತ್ತಿದೆ,” ಎಂದು ನಬಿ ಅಹ್ಮದ್ ಅವರ ದನಿ ನೋವಿನಿಂದ ನಡುಗಿತು. ಇದು ಕೇವಲ ನಬಿ ಅಹ್ಮದ್ ಅವರೊಬ್ಬರ ಆರ್ತನಾದವಾಗಿರಲಿಲ್ಲ. ಸ್ಥಳೀಯ ಅಂಗಡಿ ಮಾಲೀಕ ಫೈಜಾನ್ ಅಲಿ ಇದೇ ಆತಂಕವನ್ನು ಪ್ರತಿಧ್ವನಿಸುತ್ತಾ, “ಈ ಪ್ರದೇಶದಲ್ಲಿ 50ಕ್ಕೂ ಹೆಚ್ಚು ಮನೆಗಳು ಸರ್ಕಾರಿ ಜಾಗದಲ್ಲಿಯೇ ಇವೆ, ಆದರೆ ಮುಸ್ಲಿಮರ ಮನೆಗಳನ್ನು ಮಾತ್ರ ಏಕೆ ಕೆಡವಲಾಗುತ್ತಿದೆ?” ಎಂದು ಪ್ರಶ್ನಿಸಿದರು. ಲೋಕೋಪಯೋಗಿ ಇಲಾಖೆ (PWD) 53 ಇತರ ಕುಟುಂಬಗಳಿಗೆ ನೋಟಿಸ್ ನೀಡಿದ್ದು, ಈ ಪಟ್ಟಿಯಲ್ಲಿ ಹೆಚ್ಚಿನ ಸಂಖ್ಯೆಯ ಮುಸ್ಲಿಂ ಕುಟುಂಬಗಳಿವೆ ಎಂದು ಅವರು ದೂರುತ್ತಾರೆ.

ಈ ಕ್ರಮಗಳ ಕುರಿತು ಲಕ್ನೋ ಮೂಲದ ಮಾನವ ಹಕ್ಕುಗಳ ವಕೀಲ ಅಡ್ವೊಕೇಟ್ ಫಿರೋಜ್ ಖಾನ್, “ನ್ಯಾಯಾಲಯಗಳು ಆದೇಶಗಳನ್ನು ನೀಡಬಹುದು, ಆದರೆ ಆಡಳಿತದ ಕೆಲಸ ನ್ಯಾಯಯುತವಾಗಿ ವರ್ತಿಸುವುದು. ಮುಸ್ಲಿಂ ಮನೆಗಳನ್ನು ಮಾತ್ರ ಗುರಿಪಡಿಸುವುದು ಏನನ್ನು ಸೂಚಿಸುತ್ತದೆ,” ಎಂದು ನೇರವಾಗಿ ಪ್ರಶ್ನಿಸುತ್ತಾರೆ.

ಬುಲ್ಡೋಜರ್ ಕ್ರಮಗಳನ್ನು ಹಲವರು ಮುಸ್ಲಿಂ ಸಮುದಾಯದ ಮೇಲಿನ ನೇರ ಆಕ್ರಮಣ ಎಂದು ಪರಿಗಣಿಸಿದ್ದಾರೆ. ನಬಿ ಅಹ್ಮದ್ ಅವರ ಪುತ್ರ ಇಮ್ರಾನ್ ಅವರ ನೋವಿನ ನುಡಿಗಳು ಇದಕ್ಕೆ ಸಾಕ್ಷಿಯಾಗಿವೆ: “ನನ್ನ ಮಗಳ ಮದುವೆ ಮುಂದಿನ ತಿಂಗಳು ಇದೆ. ಅವಳ ವರದಕ್ಷಿಣೆ ವಸ್ತುಗಳು ಮನೆಯಲ್ಲಿದ್ದವು – ಈಗ ಎಲ್ಲವೂ ನಾಶವಾಗಿವೆ. ನಮ್ಮ ವಸ್ತುಗಳನ್ನು ತೆಗೆದುಹಾಕಲು ಸಹ ಅವರು ನಮಗೆ ಅವಕಾಶ ನೀಡಲಿಲ್ಲ.ಸರ್ಕಾರ ನಮಗೆ ಏನು ಸಂದೇಶ ಕಳುಹಿಸುತ್ತಿದೆ? ನಾವು ನಮ್ಮ ಸ್ವಂತ ದೇಶಕ್ಕೆ ಸೇರಿಲ್ಲವೇ? ಎಂದು ಕೇಳುತ್ತಾರೆ.

ನಾಗರಿಕ ಸಮಾಜ ಗುಂಪುಗಳು ಮತ್ತು ಅಖಿಲ ಭಾರತ ಮುಸ್ಲಿಂ ಮಜ್ಲಿಸ್-ಎ-ಮುಶಾವರತ್‌ನಂತಹ ಸಂಘಟನೆಗಳು ಈ ಬುಲ್ಡೋಜರ್ ಕ್ರಮಗಳನ್ನು “ನ್ಯಾಯಯುತ ವಿಚಾರಣೆಗಳಿಲ್ಲದ ಸಾಮೂಹಿಕ ಶಿಕ್ಷೆ” ಎಂದು ಬಲವಾಗಿ ಖಂಡಿಸಿವೆ.

ಅಂಬೇಡ್ಕರ್ ನಗರದ ಮುಸ್ಲಿಂ ನಿವಾಸಿಗಳು ನಿರಂತರ ಭಯದಲ್ಲಿ ದಿನ ದೂಡುತ್ತಿದ್ದಾರೆ. ನಿವಾಸಿ ಶಂಶಾದ್ ಆಲಮ್ ಅವರ ಮಾತುಗಳಲ್ಲಿ ಈ ಆತಂಕ ಸ್ಪಷ್ಟವಾಗಿದೆ: “ನಮ್ಮ ಮಕ್ಕಳು ಕೂಡ ಈಗ ಬುಲ್ಡೋಜರ್‌ಗಳಿಗೆ ಹೆದರುತ್ತಾರೆ. ಅವರು ಇದನ್ನು ಮುಸ್ಲಿಮರನ್ನು ನಾಶಮಾಡಲು ತಯಾರಿಸಿದ ಯಂತ್ರ ಎಂದು ಭಾವಿಸುತ್ತಾರೆ’’ ಎಂದಿದ್ದಾರೆ.

ನಬಿ ಅಹ್ಮದ್ ಮತ್ತು ಅವರಂತೆಯೇ ಅನ್ಯಾಯಕ್ಕೊಳಗಾದವರು ಈಗ ನ್ಯಾಯಾಲಯದ ಮೊರೆ ಹೋಗಲು ಸಿದ್ಧರಾಗಿದ್ದಾರೆ. ಪರಿಹಾರ ಮತ್ತು ಮುಂದಿನ ನೆಲಸಮಗಳಿಗೆ ತಡೆಯಾಜ್ಞೆ ಕೋರಿ ಅವರು ಕಾನೂನು ಹೋರಾಟ ನಡೆಸಲಿದ್ದಾರೆ. ನಮ್ಮ ಸಂವಿಧಾನವು ನಮಗೆ ಆಶ್ರಯ, ಕೇಳುವ ಮತ್ತು ಘನತೆಯ ಹಕ್ಕನ್ನು ನೀಡುತ್ತದೆ. ನಮಗೆ ಇವೆಲ್ಲವನ್ನೂ ಏಕೆ ನಿರಾಕರಿಸಲಾಗುತ್ತಿದೆ?” ಎಂದು ಅಡ್ವೊಕೇಟ್ ಶಕೀಲ್ ಅಹ್ಮದ್ ಅವರ ನೋವಿನ ಪ್ರಶ್ನೆಯಾಗಿದೆ.

ಏರ್ ಇಂಡಿಯಾ ಅಪಘಾತದ ಕುರಿತು ವರದಿ: ವಾಲ್‌ ಸ್ಟ್ರೀಟ್ ಜರ್ನಲ್‌, ರಾಯಿಟರ್ಸ್‌ಗೆ ಲೀಗಲ್ ನೋಟಿಸ್ ನೀಡಿದ ಪೈಲಟ್‌ಗಳ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...