Homeಮುಖಪುಟಅಂಬೇಡ್ಕರ್ ನಗರ: ನಿವೃತ್ತ ಮುಸ್ಲಿಂ ಶಿಕ್ಷಕರ 3 ಅಂತಸ್ತಿನ ಮನೆ ನೆಲಸಮ - ಒಂದು...

ಅಂಬೇಡ್ಕರ್ ನಗರ: ನಿವೃತ್ತ ಮುಸ್ಲಿಂ ಶಿಕ್ಷಕರ 3 ಅಂತಸ್ತಿನ ಮನೆ ನೆಲಸಮ – ಒಂದು ಕುಟುಂಬದ ನೋವಿನ ಕಥೆ

- Advertisement -
- Advertisement -

ನವದೆಹಲಿ: ಉತ್ತರಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯ ಜಲಾಲ್‌ಪುರದಲ್ಲಿ ಗುರುವಾರ, 55 ವರ್ಷದ ನಿವೃತ್ತ ಶಿಕ್ಷಕ ನಬಿ ಅಹ್ಮದ್ ಅವರ ಮೂರು ಅಂತಸ್ತಿನ ಕನಸಿನ ಮನೆ ಒಂದು ಗಂಟೆಗೂ ಕಡಿಮೆ ಅವಧಿಯಲ್ಲಿ ನೆಲಸಮಗೊಳಿಸಲಾಯಿತು. ಬಸ್ಖಾರಿ ರಸ್ತೆಯಲ್ಲಿ ನಡೆದ ಈ ಘಟನೆ, ಜೀವನದುದ್ದಕ್ಕೂ ಕಟ್ಟಿಕೊಂಡ ಕನಸುಗಳು ಮತ್ತು ದುಡಿದ ಹಣದಿಂದ ನಿರ್ಮಿಸಿದ ಮನೆಯು ಕಣ್ಮುಂದೆಯೇ ಕೆಡವಲ್ಪಟ್ಟಿತ್ತು. “ಅಕ್ರಮ ಒತ್ತುವರಿ” ನೆಪದಲ್ಲಿ ಮುಸ್ಲಿಮರ ಮನೆಗಳನ್ನು ಗುರಿಯಾಗಿಸಿಕೊಂಡು ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ನಿರಂತರ ಅಭಿಯಾನಕ್ಕೆ ಮತ್ತೊಂದು ಉದಾಹರಣೆಯಾಗಿದೆ.

ಲೋಕೋಪಯೋಗಿ ಇಲಾಖೆಯು (PWD) ಈ ನೆಲಸಮ ಕಾರ್ಯವನ್ನು ಹೈಕೋರ್ಟ್ ಆದೇಶದಂತೆ ನಡೆಸಲಾಗಿದೆ ಎಂದು ಹೇಳಿದೆ. ಸರ್ಕಾರಿ ಭೂಮಿ ಎಂದು ಘೋಷಿಸಿದ ನಂತರವೇ ಈ ಮನೆಗೆ ಬುಲ್ಡೋಜರ್ ಹತ್ತಿಸಲಾಗಿದೆ ಎಂದು ಲೋಕೋಪಯೋಗಿ ಇಲಾಖೆ ತಿಳಿಸಿದೆ. ಜಲಾಲ್‌ಪುರ್ ಕೊತ್ವಾಲ್ ಸಂತೋಷ್ ಕುಮಾರ್ ಸಿಂಗ್ ಸಹ, “ಈ ಕಟ್ಟಡವು ಸರ್ಕಾರಿ ಭೂಮಿಯಲ್ಲಿದ್ದು, ಕಾನೂನುಬದ್ಧ ಅನುಮೋದನೆ ಇರಲಿಲ್ಲ. ನಾವು ಅಹ್ಮದ್‌ಗೆ ಪೂರ್ವ ಸೂಚನೆ ಸೇರಿದಂತೆ ಎಲ್ಲಾ ಕಾರ್ಯವಿಧಾನಗಳನ್ನು ಅನುಸರಿಸಿದ್ದೇವೆ,” ಎಂದು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.

“ನನ್ನ ಇಡೀ ಜೀವನವನ್ನು ಈ ಮನೆಯನ್ನು ಕಟ್ಟಲು ಕಳೆದಿದ್ದೇನೆ. ಈಗ ನನ್ನ ಬ್ಯಾಗ್‌ನಲ್ಲಿರುವ ಬಟ್ಟೆಗಳನ್ನು ಹೊರತುಪಡಿಸಿ ನನಗೇನೂ ಇಲ್ಲ. ಇಲ್ಲಿ ಯಾವುದೇ ಹಿಂದೂ ಮನೆಗಳನ್ನು ಮುಟ್ಟಿಲ್ಲ; ನಮ್ಮನ್ನು ಮಾತ್ರ ಗುರಿಪಡಿಸಲಾಗುತ್ತಿದೆ,” ಎಂದು ನಬಿ ಅಹ್ಮದ್ ಅವರ ದನಿ ನೋವಿನಿಂದ ನಡುಗಿತು. ಇದು ಕೇವಲ ನಬಿ ಅಹ್ಮದ್ ಅವರೊಬ್ಬರ ಆರ್ತನಾದವಾಗಿರಲಿಲ್ಲ. ಸ್ಥಳೀಯ ಅಂಗಡಿ ಮಾಲೀಕ ಫೈಜಾನ್ ಅಲಿ ಇದೇ ಆತಂಕವನ್ನು ಪ್ರತಿಧ್ವನಿಸುತ್ತಾ, “ಈ ಪ್ರದೇಶದಲ್ಲಿ 50ಕ್ಕೂ ಹೆಚ್ಚು ಮನೆಗಳು ಸರ್ಕಾರಿ ಜಾಗದಲ್ಲಿಯೇ ಇವೆ, ಆದರೆ ಮುಸ್ಲಿಮರ ಮನೆಗಳನ್ನು ಮಾತ್ರ ಏಕೆ ಕೆಡವಲಾಗುತ್ತಿದೆ?” ಎಂದು ಪ್ರಶ್ನಿಸಿದರು. ಲೋಕೋಪಯೋಗಿ ಇಲಾಖೆ (PWD) 53 ಇತರ ಕುಟುಂಬಗಳಿಗೆ ನೋಟಿಸ್ ನೀಡಿದ್ದು, ಈ ಪಟ್ಟಿಯಲ್ಲಿ ಹೆಚ್ಚಿನ ಸಂಖ್ಯೆಯ ಮುಸ್ಲಿಂ ಕುಟುಂಬಗಳಿವೆ ಎಂದು ಅವರು ದೂರುತ್ತಾರೆ.

ಈ ಕ್ರಮಗಳ ಕುರಿತು ಲಕ್ನೋ ಮೂಲದ ಮಾನವ ಹಕ್ಕುಗಳ ವಕೀಲ ಅಡ್ವೊಕೇಟ್ ಫಿರೋಜ್ ಖಾನ್, “ನ್ಯಾಯಾಲಯಗಳು ಆದೇಶಗಳನ್ನು ನೀಡಬಹುದು, ಆದರೆ ಆಡಳಿತದ ಕೆಲಸ ನ್ಯಾಯಯುತವಾಗಿ ವರ್ತಿಸುವುದು. ಮುಸ್ಲಿಂ ಮನೆಗಳನ್ನು ಮಾತ್ರ ಗುರಿಪಡಿಸುವುದು ಏನನ್ನು ಸೂಚಿಸುತ್ತದೆ,” ಎಂದು ನೇರವಾಗಿ ಪ್ರಶ್ನಿಸುತ್ತಾರೆ.

ಬುಲ್ಡೋಜರ್ ಕ್ರಮಗಳನ್ನು ಹಲವರು ಮುಸ್ಲಿಂ ಸಮುದಾಯದ ಮೇಲಿನ ನೇರ ಆಕ್ರಮಣ ಎಂದು ಪರಿಗಣಿಸಿದ್ದಾರೆ. ನಬಿ ಅಹ್ಮದ್ ಅವರ ಪುತ್ರ ಇಮ್ರಾನ್ ಅವರ ನೋವಿನ ನುಡಿಗಳು ಇದಕ್ಕೆ ಸಾಕ್ಷಿಯಾಗಿವೆ: “ನನ್ನ ಮಗಳ ಮದುವೆ ಮುಂದಿನ ತಿಂಗಳು ಇದೆ. ಅವಳ ವರದಕ್ಷಿಣೆ ವಸ್ತುಗಳು ಮನೆಯಲ್ಲಿದ್ದವು – ಈಗ ಎಲ್ಲವೂ ನಾಶವಾಗಿವೆ. ನಮ್ಮ ವಸ್ತುಗಳನ್ನು ತೆಗೆದುಹಾಕಲು ಸಹ ಅವರು ನಮಗೆ ಅವಕಾಶ ನೀಡಲಿಲ್ಲ.ಸರ್ಕಾರ ನಮಗೆ ಏನು ಸಂದೇಶ ಕಳುಹಿಸುತ್ತಿದೆ? ನಾವು ನಮ್ಮ ಸ್ವಂತ ದೇಶಕ್ಕೆ ಸೇರಿಲ್ಲವೇ? ಎಂದು ಕೇಳುತ್ತಾರೆ.

ನಾಗರಿಕ ಸಮಾಜ ಗುಂಪುಗಳು ಮತ್ತು ಅಖಿಲ ಭಾರತ ಮುಸ್ಲಿಂ ಮಜ್ಲಿಸ್-ಎ-ಮುಶಾವರತ್‌ನಂತಹ ಸಂಘಟನೆಗಳು ಈ ಬುಲ್ಡೋಜರ್ ಕ್ರಮಗಳನ್ನು “ನ್ಯಾಯಯುತ ವಿಚಾರಣೆಗಳಿಲ್ಲದ ಸಾಮೂಹಿಕ ಶಿಕ್ಷೆ” ಎಂದು ಬಲವಾಗಿ ಖಂಡಿಸಿವೆ.

ಅಂಬೇಡ್ಕರ್ ನಗರದ ಮುಸ್ಲಿಂ ನಿವಾಸಿಗಳು ನಿರಂತರ ಭಯದಲ್ಲಿ ದಿನ ದೂಡುತ್ತಿದ್ದಾರೆ. ನಿವಾಸಿ ಶಂಶಾದ್ ಆಲಮ್ ಅವರ ಮಾತುಗಳಲ್ಲಿ ಈ ಆತಂಕ ಸ್ಪಷ್ಟವಾಗಿದೆ: “ನಮ್ಮ ಮಕ್ಕಳು ಕೂಡ ಈಗ ಬುಲ್ಡೋಜರ್‌ಗಳಿಗೆ ಹೆದರುತ್ತಾರೆ. ಅವರು ಇದನ್ನು ಮುಸ್ಲಿಮರನ್ನು ನಾಶಮಾಡಲು ತಯಾರಿಸಿದ ಯಂತ್ರ ಎಂದು ಭಾವಿಸುತ್ತಾರೆ’’ ಎಂದಿದ್ದಾರೆ.

ನಬಿ ಅಹ್ಮದ್ ಮತ್ತು ಅವರಂತೆಯೇ ಅನ್ಯಾಯಕ್ಕೊಳಗಾದವರು ಈಗ ನ್ಯಾಯಾಲಯದ ಮೊರೆ ಹೋಗಲು ಸಿದ್ಧರಾಗಿದ್ದಾರೆ. ಪರಿಹಾರ ಮತ್ತು ಮುಂದಿನ ನೆಲಸಮಗಳಿಗೆ ತಡೆಯಾಜ್ಞೆ ಕೋರಿ ಅವರು ಕಾನೂನು ಹೋರಾಟ ನಡೆಸಲಿದ್ದಾರೆ. ನಮ್ಮ ಸಂವಿಧಾನವು ನಮಗೆ ಆಶ್ರಯ, ಕೇಳುವ ಮತ್ತು ಘನತೆಯ ಹಕ್ಕನ್ನು ನೀಡುತ್ತದೆ. ನಮಗೆ ಇವೆಲ್ಲವನ್ನೂ ಏಕೆ ನಿರಾಕರಿಸಲಾಗುತ್ತಿದೆ?” ಎಂದು ಅಡ್ವೊಕೇಟ್ ಶಕೀಲ್ ಅಹ್ಮದ್ ಅವರ ನೋವಿನ ಪ್ರಶ್ನೆಯಾಗಿದೆ.

ಏರ್ ಇಂಡಿಯಾ ಅಪಘಾತದ ಕುರಿತು ವರದಿ: ವಾಲ್‌ ಸ್ಟ್ರೀಟ್ ಜರ್ನಲ್‌, ರಾಯಿಟರ್ಸ್‌ಗೆ ಲೀಗಲ್ ನೋಟಿಸ್ ನೀಡಿದ ಪೈಲಟ್‌ಗಳ ಒಕ್ಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...