Homeಅಂತರಾಷ್ಟ್ರೀಯಗಾಝಾ: ಆಹಾರ ಪೂರೈಕೆಗೆ ಇಸ್ರೇಲ್ ಅಡ್ಡಿ: ಹಸಿವಿನಿಂದ ಸಾಯುತ್ತಿರುವ ಜನರು

ಗಾಝಾ: ಆಹಾರ ಪೂರೈಕೆಗೆ ಇಸ್ರೇಲ್ ಅಡ್ಡಿ: ಹಸಿವಿನಿಂದ ಸಾಯುತ್ತಿರುವ ಜನರು

- Advertisement -
- Advertisement -

ಯುದ್ಧ ಪೀಡಿತ ಗಾಝಾದಲ್ಲಿ ಆಹಾರ ವಸ್ತುಗಳು ಸೇರಿದಂತೆ ಅಗತ್ಯ ಸಾಮಗ್ರಿಗಳ ಸರಬರಾಜಿಗೆ ಇಸ್ರೇಲ್ ವಿಧಿಸಿರುವ ನಿರ್ಬಂಧ ಮುಂದುವರಿದಿದೆ. ಪರಿಣಾಮ ಹಸಿವಿನಿಂದ ಜನರು ಸಾಯುತ್ತಿದ್ದಾರೆ.

ಮತ್ತೊಂದೆಡೆ ಮಾನವ ಹಕ್ಕುಗಳ ಸಂಸ್ಥೆಗಳು ವಿತರಿಸುತ್ತಿರುವ ಆಹಾರ ಪಡೆಯಲು ನಿಂತವರನ್ನೇ ಗುರಿಯಾಗಿಸಿ ಇಸ್ರೇಲ್ ಪಡೆಗಳು ದಾಳಿ ಮಾಡುತ್ತಿವೆ.

ಗಾಜಾ ನಗರದ ಅಲ್-ಶಿಫಾ ಆಸ್ಪತ್ರೆಯಲ್ಲಿ 35 ದಿನಗಳ ಮಗು ಆಹಾರ ಸಿಗದೆ, ಅಪೌಷ್ಟಿಕತೆಯಿಂದ ಸಾವನ್ನಪ್ಪಿದೆ ಎಂದು ಆಸ್ಪತ್ರೆಯ ನಿರ್ದೇಶಕ ಮುಹಮ್ಮದ್ ಅಬು ಸಲ್ಮಿಯಾ ಅಲ್ ಜಝೀರಾ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಶನಿವಾರ ಆಸ್ಪತ್ರೆಯಲ್ಲಿ ಹಸಿವಿನಿಂದ ಸಾವನ್ನಪ್ಪಿದ ಇಬ್ಬರಲ್ಲಿ ಈ ಮಗು ಕೂಡ ಸೇರಿದೆ.

ಹಸಿವಿನಿಂದ ಜೀವನ್ಮರಣ ಹೋರಾಟ ನಡೆಸುತ್ತಿರುವ ಜನರಿಂದ ಆಸ್ಪತ್ರೆಯ ತುರ್ತು ವಾರ್ಡ್‌ಗಳು ತುಂಬಿ ತುಳುಕುತ್ತಿವೆ. ಪ್ರತಿನಿತ್ಯ ಹಲವು ಸಾವುಗಳು ಸಂಭವಿಸುತ್ತಿವೆ. 17,000 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದು ಗಾಝಾ ಆರೋಗ್ಯ ಸಚಿವಾಲಯ ಹೇಳಿದೆ.

ಈ ನಡುವೆ ಇಸ್ರೇಲಿ ಪಡೆಗಳು ದಾಳಿ ಮುಂದುವರಿಸಿವೆ. ಶನಿವಾರ ಬೆಳಗಿನ ಜಾವದಿಂದ ಸಂಜೆಯವರೆಗೆ ಕನಿಷ್ಠ 116 ಜನರು ಇಸ್ರೇಲ್ ದಾಳಿಗೆ ಸಾವನ್ನಪ್ಪಿದ್ದಾರೆ. ಈ ಪೈಕಿ 38 ಜನರನ್ನು ಅಮೆರಿಕ ಬೆಂಬಲಿತ ಗಾಝಾ ಹ್ಯುಮಾನಿಟೇರಿಯನ್ ಫೌಂಡೇಶನ್‌ನ (ಜಿಹೆಚ್‌ಎಫ್‌) ಸಹಾಯ ಕೇಂದ್ರಗಳಲ್ಲಿ ಆಹಾರ ಪಡೆಯಲು ನಿಂತಿದ್ದಾಗ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ವರದಿಗಳು ಹೇಳಿವೆ.

ದಕ್ಷಿಣ ಗಾಝಾದಲ್ಲಿರುವ ಖಾನ್ ಯೂನಿಸ್‌ನ ನೈಋತ್ಯಕ್ಕೆ ಮತ್ತು ರಫಾದ ವಾಯುವ್ಯಕ್ಕೆ ಇರುವ ಆಹಾರ ವಿತರಣಾ ಕೇಂದ್ರದ ಬಳಿ ಈ ಸಾವುಗಳು ಸಂಭವಿಸಿವೆ ಎಂದು ನಾಗರಿಕ ರಕ್ಷಣಾ ಸಂಸ್ಥೆಯ ವಕ್ತಾರ ಮಹ್ಮದ್ ಬಸ್ಸಲ್ ಹೇಳಿದ್ದಾರೆ.

ಮೇ ಅಂತ್ಯದಲ್ಲಿ ಜಿಹೆಚ್‌ಎಫ್‌ ತನ್ನ ಕೇಂದ್ರಗಳನ್ನುನ ತೆರೆದು ಆಹಾರ ವಿತರಿಸಲು ಪ್ರಾರಂಭಿಸಿದೆ. ಅಂದಿನಿಂದ ಇಂದಿನವರೆಗೆ ಆಹಾರಕ್ಕೆ ಕಾಯುತ್ತಿದ್ದ ಸುಮಾರು 900 ಜನರನ್ನು ಇಸ್ರೇಲಿ ಪಡೆಗಳು ಮತ್ತು ಖಾಸಗಿ ಮಿಲಿಟರಿ ಗುತ್ತಿಗೆದಾರರು ಹತ್ಯೆ ಮಾಡಿದ್ದಾರೆ ಎಂದು ಗಾಝಾ ಆರೋಗ್ಯ ಸಚಿವಾಲಯ ತಿಳಿಸಿದೆ.

ಶನಿವಾರ ಜಿಹೆಚ್‌ಎಫ್‌ ಕೇಂದ್ರಗಳ ಬಳಿ ದಾಳಿ ನಡೆದಿವೆ ಎಂಬುವುದನ್ನು ಜಿಹೆಚ್‌ಎಫ್‌ ನಿರಾಕರಿಸಿದೆ. ನಮ್ಮ ಕೇಂದ್ರದ ತುಂಬಾ ದೂರದಲ್ಲಿ, ಅದೂ ನಮ್ಮ ಕೇಂದ್ರ ತೆರೆಯುವ ಮೊದಲೇ ದಾಳಿ ನಡೆದಿದೆ ಎಂದು ಹೇಳಿದೆ. ಘಟನೆಯನ್ನು ಪರಿಶೀಲಿಸುತ್ತಿರುವುದಾಗಿ ಇಸ್ರೇಲಿ ಸೇನೆ ತಿಳಿಸಿದೆ.

ಗಾಝಾದಲ್ಲಿರುವ ಪ್ಯಾಲೆಸ್ತೀನಿಯರು ‘ತೀವ್ರ ಕ್ಷಾಮದ ಅಪಾಯವನ್ನು ಎದುರಿಸುತ್ತಿದ್ದಾರೆ’ ಎಂದು ಅಂತಾರಾಷ್ಟ್ರೀಯ ರೆಡ್‌ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಸೊಸೈಟಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಗನ್ ಚಾಪಗೈನ್ ಎಚ್ಚರಿಸಿದ್ದಾರೆ.

“ಮೂಲಭೂತ ಮಾನವೀಯ ನೆರವು ಪಡೆಯಲು ಯಾರೂ ತಮ್ಮ ಪ್ರಾಣವನ್ನೇ ಪಣಕ್ಕಿಡಬೇಕಾಗಿಲ್ಲ” ಎಂದು ಅವರು ಹೇಳಿದ್ದಾರೆ.

ಮಾರುಕಟ್ಟೆಗಳಲ್ಲಿ ಅಥವಾ ವಿತರಣಾ ಕೇಂದ್ರಗಳಲ್ಲಿ ಮೂಲಭೂತ ವಸ್ತುಗಳು ಲಭ್ಯವಿಲ್ಲ. ಹಿಟ್ಟಿನಂತಹ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದರಿಂದಾಗಿ 2.3 ಮಿಲಿಯನ್ ಜನರು ತಮ್ಮ ದೈನಂದಿನ ಪೌಷ್ಠಿಕಾಂಶದ ಅಗತ್ಯಗಳನ್ನು ಪೂರೈಸುವುದು ಅಸಾಧ್ಯವಾಗಿದೆ ಎಂದಿದ್ದಾರೆ.

ಸರಣಿ ದಾಳಿಗಳು, 116 ಜನರು ಸಾವು 

ಶನಿವಾರ ಗಾಝಾದಲ್ಲಿ ಇಸ್ರೇಲ್ ತನ್ನ ಕ್ರೂರ ದಾಳಿಯನ್ನು ಮುಂದುವರೆಸಿತ್ತು. ಸ್ಥಳಾಂತರಗೊಂಡವರ ಡೇರೆಗಳು ಮತ್ತು ಆ ಪ್ರದೇಶಾದ್ಯಂತ ಮನೆಗಳ ಮೇಲೆ ಬಾಂಬ್ ದಾಳಿ ಮಾಡಿದೆ. ಇದರಿಂದ ಕನಿಷ್ಠ 116 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ.

ದಕ್ಷಿಣ ಖಾನ್ ಯೂನಿಸ್ ಬಳಿಯ ಬನಿ ಸುಹೇಲಾ ಮೇಲೆ ಇಸ್ರೇಲಿ ದಾಳಿ ನಡೆಸಿದ ಸ್ಥಳದಿಂದ ನಾಲ್ಕು ಶವಗಳನ್ನು ಹೊರ ತೆಗೆಯಲಾಗಿದೆ ಎಂದು ನಾಸರ್ ಆಸ್ಪತ್ರೆಯ ಮೂಲಗಳು ತಿಳಿಸಿದ್ದಾಗಿ ಅಲ್ ಜಝೀರಾ ವರದಿ ಮಾಡಿದೆ.

ಖಾನ್ ಯೂನಿಸ್‌ನಲ್ಲಿ ಸ್ಥಳಾಂತರಗೊಂಡ ಪ್ಯಾಲೆಸ್ತೀನಿಯರು ಇದ್ದ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ಡ್ರೋನ್ ದಾಳಿಯಿಂದ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ.

ಮಧ್ಯ ಗಾಝಾದ ಅಜ್-ಜವಾಯ್ದಾ ಪಟ್ಟಣದಲ್ಲಿದ್ದ ಮನೆಯ ಮೇಲೆ ದಾಳಿ ಇಸ್ರೇಲ್ ದಾಳಿ ಮಾಡಿದ್ದು, ನುಸೇರತ್ ಪೊಲೀಸ್ ನಿರ್ದೇಶಕ ಕರ್ನಲ್ ಒಮರ್ ಸಯೀದ್ ಅಕ್ಲ್ ಮತ್ತು ಅವರ 11 ಕುಟುಂಬ ಸದಸ್ಯರನ್ನು ಹತ್ಯೆ ಮಾಡಿವೆ ಎಂದು ಗಾಝಾದ ಆಂತರಿಕ ಸಚಿವಾಲಯ ತಿಳಿಸಿದೆ.

ಗಾಝಾ ನಗರದ ಜೈಟೌನ್ ಸಮೀಪ ಇಸ್ರೇಲಿ ನಡೆಸಿದ ಎರಡು ವೈಮಾನಿಕ ದಾಳಿಗಳಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಅಲ್-ಅಹ್ಲಿ ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ.

ಪ್ಯಾಲೆಸ್ತೀನಿಯನ್ ರೆಡ್ ಕ್ರೆಸೆಂಟ್ ಪ್ರಕಾರ, ಗಾಝಾ ನಗರದ ತಾಲ್ ಅಲ್-ಹವಾ ಸಮೀಪ ಇಸ್ರೇಲಿ ನಡೆಸಿದ ವಾಯುದಾಳಿಯಲ್ಲಿ ಐವರು ಸಾವನ್ನಪ್ಪಿದ್ದಾರೆ.

ಉತ್ತರ ಗಾಝಾದ ಜಬಾಲಿಯಾ ಆನ್-ನಜ್ಲಾ ಸಮೀಪ ಇಸ್ರೇಲ್ ನಡೆಸಿದ ಶೆಲ್ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಪ್ಯಾಲೆಸ್ತೀನಿಯನ್ ಕೈದಿಗಳ ಮಾಧ್ಯಮ ಕಚೇರಿಯ ಪ್ರಕಾರ, ಇಸ್ರೇಲಿ ಪಡೆಗಳು ಗಾಝಾ ಕರಾವಳಿಯಲ್ಲಿ ಮೂವರು ಪ್ಯಾಲೆಸ್ತೀನಿಯನ್ ಮೀನುಗಾರರ ಮೇಲೆ ಗುಂಡು ಹಾರಿಸಿ ಬಂಧಿಸಿವೆ.

2007ರಲ್ಲಿ ಹಮಾಸ್ ಗಾಝಾವನ್ನು ವಶಪಡಿಸಿಕೊಂಡಾಗಿನಿಂದ ಇಸ್ರೇಲಿ ಸೇನೆಯು ಗಾಝಾದ ಮೇಲೆ ನೌಕಾ ದಿಗ್ಬಂಧನವನ್ನು ಕಾಯ್ದುಕೊಂಡಿದೆ. ಅಕ್ಟೋಬರ್ 2023ರಲ್ಲಿ ಯುದ್ಧ ಪ್ರಾರಂಭವಾದಾಗಿನಿಂದ ಇದು ಬಿಗಿಗೊಂಡಿವೆ.

ನೈಋತ್ಯ ನೈಜರ್‌ನಲ್ಲಿ ಭಯೋತ್ಪಾದಕ ದಾಳಿ; ಇಬ್ಬರು ಭಾರತೀಯರು ಬಲಿ, ಓರ್ವನ ಅಪಹರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...