Homeಅಂತರಾಷ್ಟ್ರೀಯಗಾಝಾ: ಆಹಾರ ಪೂರೈಕೆಗೆ ಇಸ್ರೇಲ್ ಅಡ್ಡಿ: ಹಸಿವಿನಿಂದ ಸಾಯುತ್ತಿರುವ ಜನರು

ಗಾಝಾ: ಆಹಾರ ಪೂರೈಕೆಗೆ ಇಸ್ರೇಲ್ ಅಡ್ಡಿ: ಹಸಿವಿನಿಂದ ಸಾಯುತ್ತಿರುವ ಜನರು

- Advertisement -
- Advertisement -

ಯುದ್ಧ ಪೀಡಿತ ಗಾಝಾದಲ್ಲಿ ಆಹಾರ ವಸ್ತುಗಳು ಸೇರಿದಂತೆ ಅಗತ್ಯ ಸಾಮಗ್ರಿಗಳ ಸರಬರಾಜಿಗೆ ಇಸ್ರೇಲ್ ವಿಧಿಸಿರುವ ನಿರ್ಬಂಧ ಮುಂದುವರಿದಿದೆ. ಪರಿಣಾಮ ಹಸಿವಿನಿಂದ ಜನರು ಸಾಯುತ್ತಿದ್ದಾರೆ.

ಮತ್ತೊಂದೆಡೆ ಮಾನವ ಹಕ್ಕುಗಳ ಸಂಸ್ಥೆಗಳು ವಿತರಿಸುತ್ತಿರುವ ಆಹಾರ ಪಡೆಯಲು ನಿಂತವರನ್ನೇ ಗುರಿಯಾಗಿಸಿ ಇಸ್ರೇಲ್ ಪಡೆಗಳು ದಾಳಿ ಮಾಡುತ್ತಿವೆ.

ಗಾಜಾ ನಗರದ ಅಲ್-ಶಿಫಾ ಆಸ್ಪತ್ರೆಯಲ್ಲಿ 35 ದಿನಗಳ ಮಗು ಆಹಾರ ಸಿಗದೆ, ಅಪೌಷ್ಟಿಕತೆಯಿಂದ ಸಾವನ್ನಪ್ಪಿದೆ ಎಂದು ಆಸ್ಪತ್ರೆಯ ನಿರ್ದೇಶಕ ಮುಹಮ್ಮದ್ ಅಬು ಸಲ್ಮಿಯಾ ಅಲ್ ಜಝೀರಾ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಶನಿವಾರ ಆಸ್ಪತ್ರೆಯಲ್ಲಿ ಹಸಿವಿನಿಂದ ಸಾವನ್ನಪ್ಪಿದ ಇಬ್ಬರಲ್ಲಿ ಈ ಮಗು ಕೂಡ ಸೇರಿದೆ.

ಹಸಿವಿನಿಂದ ಜೀವನ್ಮರಣ ಹೋರಾಟ ನಡೆಸುತ್ತಿರುವ ಜನರಿಂದ ಆಸ್ಪತ್ರೆಯ ತುರ್ತು ವಾರ್ಡ್‌ಗಳು ತುಂಬಿ ತುಳುಕುತ್ತಿವೆ. ಪ್ರತಿನಿತ್ಯ ಹಲವು ಸಾವುಗಳು ಸಂಭವಿಸುತ್ತಿವೆ. 17,000 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದು ಗಾಝಾ ಆರೋಗ್ಯ ಸಚಿವಾಲಯ ಹೇಳಿದೆ.

ಈ ನಡುವೆ ಇಸ್ರೇಲಿ ಪಡೆಗಳು ದಾಳಿ ಮುಂದುವರಿಸಿವೆ. ಶನಿವಾರ ಬೆಳಗಿನ ಜಾವದಿಂದ ಸಂಜೆಯವರೆಗೆ ಕನಿಷ್ಠ 116 ಜನರು ಇಸ್ರೇಲ್ ದಾಳಿಗೆ ಸಾವನ್ನಪ್ಪಿದ್ದಾರೆ. ಈ ಪೈಕಿ 38 ಜನರನ್ನು ಅಮೆರಿಕ ಬೆಂಬಲಿತ ಗಾಝಾ ಹ್ಯುಮಾನಿಟೇರಿಯನ್ ಫೌಂಡೇಶನ್‌ನ (ಜಿಹೆಚ್‌ಎಫ್‌) ಸಹಾಯ ಕೇಂದ್ರಗಳಲ್ಲಿ ಆಹಾರ ಪಡೆಯಲು ನಿಂತಿದ್ದಾಗ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ವರದಿಗಳು ಹೇಳಿವೆ.

ದಕ್ಷಿಣ ಗಾಝಾದಲ್ಲಿರುವ ಖಾನ್ ಯೂನಿಸ್‌ನ ನೈಋತ್ಯಕ್ಕೆ ಮತ್ತು ರಫಾದ ವಾಯುವ್ಯಕ್ಕೆ ಇರುವ ಆಹಾರ ವಿತರಣಾ ಕೇಂದ್ರದ ಬಳಿ ಈ ಸಾವುಗಳು ಸಂಭವಿಸಿವೆ ಎಂದು ನಾಗರಿಕ ರಕ್ಷಣಾ ಸಂಸ್ಥೆಯ ವಕ್ತಾರ ಮಹ್ಮದ್ ಬಸ್ಸಲ್ ಹೇಳಿದ್ದಾರೆ.

ಮೇ ಅಂತ್ಯದಲ್ಲಿ ಜಿಹೆಚ್‌ಎಫ್‌ ತನ್ನ ಕೇಂದ್ರಗಳನ್ನುನ ತೆರೆದು ಆಹಾರ ವಿತರಿಸಲು ಪ್ರಾರಂಭಿಸಿದೆ. ಅಂದಿನಿಂದ ಇಂದಿನವರೆಗೆ ಆಹಾರಕ್ಕೆ ಕಾಯುತ್ತಿದ್ದ ಸುಮಾರು 900 ಜನರನ್ನು ಇಸ್ರೇಲಿ ಪಡೆಗಳು ಮತ್ತು ಖಾಸಗಿ ಮಿಲಿಟರಿ ಗುತ್ತಿಗೆದಾರರು ಹತ್ಯೆ ಮಾಡಿದ್ದಾರೆ ಎಂದು ಗಾಝಾ ಆರೋಗ್ಯ ಸಚಿವಾಲಯ ತಿಳಿಸಿದೆ.

ಶನಿವಾರ ಜಿಹೆಚ್‌ಎಫ್‌ ಕೇಂದ್ರಗಳ ಬಳಿ ದಾಳಿ ನಡೆದಿವೆ ಎಂಬುವುದನ್ನು ಜಿಹೆಚ್‌ಎಫ್‌ ನಿರಾಕರಿಸಿದೆ. ನಮ್ಮ ಕೇಂದ್ರದ ತುಂಬಾ ದೂರದಲ್ಲಿ, ಅದೂ ನಮ್ಮ ಕೇಂದ್ರ ತೆರೆಯುವ ಮೊದಲೇ ದಾಳಿ ನಡೆದಿದೆ ಎಂದು ಹೇಳಿದೆ. ಘಟನೆಯನ್ನು ಪರಿಶೀಲಿಸುತ್ತಿರುವುದಾಗಿ ಇಸ್ರೇಲಿ ಸೇನೆ ತಿಳಿಸಿದೆ.

ಗಾಝಾದಲ್ಲಿರುವ ಪ್ಯಾಲೆಸ್ತೀನಿಯರು ‘ತೀವ್ರ ಕ್ಷಾಮದ ಅಪಾಯವನ್ನು ಎದುರಿಸುತ್ತಿದ್ದಾರೆ’ ಎಂದು ಅಂತಾರಾಷ್ಟ್ರೀಯ ರೆಡ್‌ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಸೊಸೈಟಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಗನ್ ಚಾಪಗೈನ್ ಎಚ್ಚರಿಸಿದ್ದಾರೆ.

“ಮೂಲಭೂತ ಮಾನವೀಯ ನೆರವು ಪಡೆಯಲು ಯಾರೂ ತಮ್ಮ ಪ್ರಾಣವನ್ನೇ ಪಣಕ್ಕಿಡಬೇಕಾಗಿಲ್ಲ” ಎಂದು ಅವರು ಹೇಳಿದ್ದಾರೆ.

ಮಾರುಕಟ್ಟೆಗಳಲ್ಲಿ ಅಥವಾ ವಿತರಣಾ ಕೇಂದ್ರಗಳಲ್ಲಿ ಮೂಲಭೂತ ವಸ್ತುಗಳು ಲಭ್ಯವಿಲ್ಲ. ಹಿಟ್ಟಿನಂತಹ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದರಿಂದಾಗಿ 2.3 ಮಿಲಿಯನ್ ಜನರು ತಮ್ಮ ದೈನಂದಿನ ಪೌಷ್ಠಿಕಾಂಶದ ಅಗತ್ಯಗಳನ್ನು ಪೂರೈಸುವುದು ಅಸಾಧ್ಯವಾಗಿದೆ ಎಂದಿದ್ದಾರೆ.

ಸರಣಿ ದಾಳಿಗಳು, 116 ಜನರು ಸಾವು 

ಶನಿವಾರ ಗಾಝಾದಲ್ಲಿ ಇಸ್ರೇಲ್ ತನ್ನ ಕ್ರೂರ ದಾಳಿಯನ್ನು ಮುಂದುವರೆಸಿತ್ತು. ಸ್ಥಳಾಂತರಗೊಂಡವರ ಡೇರೆಗಳು ಮತ್ತು ಆ ಪ್ರದೇಶಾದ್ಯಂತ ಮನೆಗಳ ಮೇಲೆ ಬಾಂಬ್ ದಾಳಿ ಮಾಡಿದೆ. ಇದರಿಂದ ಕನಿಷ್ಠ 116 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ.

ದಕ್ಷಿಣ ಖಾನ್ ಯೂನಿಸ್ ಬಳಿಯ ಬನಿ ಸುಹೇಲಾ ಮೇಲೆ ಇಸ್ರೇಲಿ ದಾಳಿ ನಡೆಸಿದ ಸ್ಥಳದಿಂದ ನಾಲ್ಕು ಶವಗಳನ್ನು ಹೊರ ತೆಗೆಯಲಾಗಿದೆ ಎಂದು ನಾಸರ್ ಆಸ್ಪತ್ರೆಯ ಮೂಲಗಳು ತಿಳಿಸಿದ್ದಾಗಿ ಅಲ್ ಜಝೀರಾ ವರದಿ ಮಾಡಿದೆ.

ಖಾನ್ ಯೂನಿಸ್‌ನಲ್ಲಿ ಸ್ಥಳಾಂತರಗೊಂಡ ಪ್ಯಾಲೆಸ್ತೀನಿಯರು ಇದ್ದ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ಡ್ರೋನ್ ದಾಳಿಯಿಂದ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ.

ಮಧ್ಯ ಗಾಝಾದ ಅಜ್-ಜವಾಯ್ದಾ ಪಟ್ಟಣದಲ್ಲಿದ್ದ ಮನೆಯ ಮೇಲೆ ದಾಳಿ ಇಸ್ರೇಲ್ ದಾಳಿ ಮಾಡಿದ್ದು, ನುಸೇರತ್ ಪೊಲೀಸ್ ನಿರ್ದೇಶಕ ಕರ್ನಲ್ ಒಮರ್ ಸಯೀದ್ ಅಕ್ಲ್ ಮತ್ತು ಅವರ 11 ಕುಟುಂಬ ಸದಸ್ಯರನ್ನು ಹತ್ಯೆ ಮಾಡಿವೆ ಎಂದು ಗಾಝಾದ ಆಂತರಿಕ ಸಚಿವಾಲಯ ತಿಳಿಸಿದೆ.

ಗಾಝಾ ನಗರದ ಜೈಟೌನ್ ಸಮೀಪ ಇಸ್ರೇಲಿ ನಡೆಸಿದ ಎರಡು ವೈಮಾನಿಕ ದಾಳಿಗಳಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಅಲ್-ಅಹ್ಲಿ ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ.

ಪ್ಯಾಲೆಸ್ತೀನಿಯನ್ ರೆಡ್ ಕ್ರೆಸೆಂಟ್ ಪ್ರಕಾರ, ಗಾಝಾ ನಗರದ ತಾಲ್ ಅಲ್-ಹವಾ ಸಮೀಪ ಇಸ್ರೇಲಿ ನಡೆಸಿದ ವಾಯುದಾಳಿಯಲ್ಲಿ ಐವರು ಸಾವನ್ನಪ್ಪಿದ್ದಾರೆ.

ಉತ್ತರ ಗಾಝಾದ ಜಬಾಲಿಯಾ ಆನ್-ನಜ್ಲಾ ಸಮೀಪ ಇಸ್ರೇಲ್ ನಡೆಸಿದ ಶೆಲ್ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಪ್ಯಾಲೆಸ್ತೀನಿಯನ್ ಕೈದಿಗಳ ಮಾಧ್ಯಮ ಕಚೇರಿಯ ಪ್ರಕಾರ, ಇಸ್ರೇಲಿ ಪಡೆಗಳು ಗಾಝಾ ಕರಾವಳಿಯಲ್ಲಿ ಮೂವರು ಪ್ಯಾಲೆಸ್ತೀನಿಯನ್ ಮೀನುಗಾರರ ಮೇಲೆ ಗುಂಡು ಹಾರಿಸಿ ಬಂಧಿಸಿವೆ.

2007ರಲ್ಲಿ ಹಮಾಸ್ ಗಾಝಾವನ್ನು ವಶಪಡಿಸಿಕೊಂಡಾಗಿನಿಂದ ಇಸ್ರೇಲಿ ಸೇನೆಯು ಗಾಝಾದ ಮೇಲೆ ನೌಕಾ ದಿಗ್ಬಂಧನವನ್ನು ಕಾಯ್ದುಕೊಂಡಿದೆ. ಅಕ್ಟೋಬರ್ 2023ರಲ್ಲಿ ಯುದ್ಧ ಪ್ರಾರಂಭವಾದಾಗಿನಿಂದ ಇದು ಬಿಗಿಗೊಂಡಿವೆ.

ನೈಋತ್ಯ ನೈಜರ್‌ನಲ್ಲಿ ಭಯೋತ್ಪಾದಕ ದಾಳಿ; ಇಬ್ಬರು ಭಾರತೀಯರು ಬಲಿ, ಓರ್ವನ ಅಪಹರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...