Homeಅಂತರಾಷ್ಟ್ರೀಯಗಾಝಾ: ಆಹಾರ ಪೂರೈಕೆಗೆ ಇಸ್ರೇಲ್ ಅಡ್ಡಿ: ಹಸಿವಿನಿಂದ ಸಾಯುತ್ತಿರುವ ಜನರು

ಗಾಝಾ: ಆಹಾರ ಪೂರೈಕೆಗೆ ಇಸ್ರೇಲ್ ಅಡ್ಡಿ: ಹಸಿವಿನಿಂದ ಸಾಯುತ್ತಿರುವ ಜನರು

- Advertisement -
- Advertisement -

ಯುದ್ಧ ಪೀಡಿತ ಗಾಝಾದಲ್ಲಿ ಆಹಾರ ವಸ್ತುಗಳು ಸೇರಿದಂತೆ ಅಗತ್ಯ ಸಾಮಗ್ರಿಗಳ ಸರಬರಾಜಿಗೆ ಇಸ್ರೇಲ್ ವಿಧಿಸಿರುವ ನಿರ್ಬಂಧ ಮುಂದುವರಿದಿದೆ. ಪರಿಣಾಮ ಹಸಿವಿನಿಂದ ಜನರು ಸಾಯುತ್ತಿದ್ದಾರೆ.

ಮತ್ತೊಂದೆಡೆ ಮಾನವ ಹಕ್ಕುಗಳ ಸಂಸ್ಥೆಗಳು ವಿತರಿಸುತ್ತಿರುವ ಆಹಾರ ಪಡೆಯಲು ನಿಂತವರನ್ನೇ ಗುರಿಯಾಗಿಸಿ ಇಸ್ರೇಲ್ ಪಡೆಗಳು ದಾಳಿ ಮಾಡುತ್ತಿವೆ.

ಗಾಜಾ ನಗರದ ಅಲ್-ಶಿಫಾ ಆಸ್ಪತ್ರೆಯಲ್ಲಿ 35 ದಿನಗಳ ಮಗು ಆಹಾರ ಸಿಗದೆ, ಅಪೌಷ್ಟಿಕತೆಯಿಂದ ಸಾವನ್ನಪ್ಪಿದೆ ಎಂದು ಆಸ್ಪತ್ರೆಯ ನಿರ್ದೇಶಕ ಮುಹಮ್ಮದ್ ಅಬು ಸಲ್ಮಿಯಾ ಅಲ್ ಜಝೀರಾ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಶನಿವಾರ ಆಸ್ಪತ್ರೆಯಲ್ಲಿ ಹಸಿವಿನಿಂದ ಸಾವನ್ನಪ್ಪಿದ ಇಬ್ಬರಲ್ಲಿ ಈ ಮಗು ಕೂಡ ಸೇರಿದೆ.

ಹಸಿವಿನಿಂದ ಜೀವನ್ಮರಣ ಹೋರಾಟ ನಡೆಸುತ್ತಿರುವ ಜನರಿಂದ ಆಸ್ಪತ್ರೆಯ ತುರ್ತು ವಾರ್ಡ್‌ಗಳು ತುಂಬಿ ತುಳುಕುತ್ತಿವೆ. ಪ್ರತಿನಿತ್ಯ ಹಲವು ಸಾವುಗಳು ಸಂಭವಿಸುತ್ತಿವೆ. 17,000 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಎಂದು ಗಾಝಾ ಆರೋಗ್ಯ ಸಚಿವಾಲಯ ಹೇಳಿದೆ.

ಈ ನಡುವೆ ಇಸ್ರೇಲಿ ಪಡೆಗಳು ದಾಳಿ ಮುಂದುವರಿಸಿವೆ. ಶನಿವಾರ ಬೆಳಗಿನ ಜಾವದಿಂದ ಸಂಜೆಯವರೆಗೆ ಕನಿಷ್ಠ 116 ಜನರು ಇಸ್ರೇಲ್ ದಾಳಿಗೆ ಸಾವನ್ನಪ್ಪಿದ್ದಾರೆ. ಈ ಪೈಕಿ 38 ಜನರನ್ನು ಅಮೆರಿಕ ಬೆಂಬಲಿತ ಗಾಝಾ ಹ್ಯುಮಾನಿಟೇರಿಯನ್ ಫೌಂಡೇಶನ್‌ನ (ಜಿಹೆಚ್‌ಎಫ್‌) ಸಹಾಯ ಕೇಂದ್ರಗಳಲ್ಲಿ ಆಹಾರ ಪಡೆಯಲು ನಿಂತಿದ್ದಾಗ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ವರದಿಗಳು ಹೇಳಿವೆ.

ದಕ್ಷಿಣ ಗಾಝಾದಲ್ಲಿರುವ ಖಾನ್ ಯೂನಿಸ್‌ನ ನೈಋತ್ಯಕ್ಕೆ ಮತ್ತು ರಫಾದ ವಾಯುವ್ಯಕ್ಕೆ ಇರುವ ಆಹಾರ ವಿತರಣಾ ಕೇಂದ್ರದ ಬಳಿ ಈ ಸಾವುಗಳು ಸಂಭವಿಸಿವೆ ಎಂದು ನಾಗರಿಕ ರಕ್ಷಣಾ ಸಂಸ್ಥೆಯ ವಕ್ತಾರ ಮಹ್ಮದ್ ಬಸ್ಸಲ್ ಹೇಳಿದ್ದಾರೆ.

ಮೇ ಅಂತ್ಯದಲ್ಲಿ ಜಿಹೆಚ್‌ಎಫ್‌ ತನ್ನ ಕೇಂದ್ರಗಳನ್ನುನ ತೆರೆದು ಆಹಾರ ವಿತರಿಸಲು ಪ್ರಾರಂಭಿಸಿದೆ. ಅಂದಿನಿಂದ ಇಂದಿನವರೆಗೆ ಆಹಾರಕ್ಕೆ ಕಾಯುತ್ತಿದ್ದ ಸುಮಾರು 900 ಜನರನ್ನು ಇಸ್ರೇಲಿ ಪಡೆಗಳು ಮತ್ತು ಖಾಸಗಿ ಮಿಲಿಟರಿ ಗುತ್ತಿಗೆದಾರರು ಹತ್ಯೆ ಮಾಡಿದ್ದಾರೆ ಎಂದು ಗಾಝಾ ಆರೋಗ್ಯ ಸಚಿವಾಲಯ ತಿಳಿಸಿದೆ.

ಶನಿವಾರ ಜಿಹೆಚ್‌ಎಫ್‌ ಕೇಂದ್ರಗಳ ಬಳಿ ದಾಳಿ ನಡೆದಿವೆ ಎಂಬುವುದನ್ನು ಜಿಹೆಚ್‌ಎಫ್‌ ನಿರಾಕರಿಸಿದೆ. ನಮ್ಮ ಕೇಂದ್ರದ ತುಂಬಾ ದೂರದಲ್ಲಿ, ಅದೂ ನಮ್ಮ ಕೇಂದ್ರ ತೆರೆಯುವ ಮೊದಲೇ ದಾಳಿ ನಡೆದಿದೆ ಎಂದು ಹೇಳಿದೆ. ಘಟನೆಯನ್ನು ಪರಿಶೀಲಿಸುತ್ತಿರುವುದಾಗಿ ಇಸ್ರೇಲಿ ಸೇನೆ ತಿಳಿಸಿದೆ.

ಗಾಝಾದಲ್ಲಿರುವ ಪ್ಯಾಲೆಸ್ತೀನಿಯರು ‘ತೀವ್ರ ಕ್ಷಾಮದ ಅಪಾಯವನ್ನು ಎದುರಿಸುತ್ತಿದ್ದಾರೆ’ ಎಂದು ಅಂತಾರಾಷ್ಟ್ರೀಯ ರೆಡ್‌ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಸೊಸೈಟಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಗನ್ ಚಾಪಗೈನ್ ಎಚ್ಚರಿಸಿದ್ದಾರೆ.

“ಮೂಲಭೂತ ಮಾನವೀಯ ನೆರವು ಪಡೆಯಲು ಯಾರೂ ತಮ್ಮ ಪ್ರಾಣವನ್ನೇ ಪಣಕ್ಕಿಡಬೇಕಾಗಿಲ್ಲ” ಎಂದು ಅವರು ಹೇಳಿದ್ದಾರೆ.

ಮಾರುಕಟ್ಟೆಗಳಲ್ಲಿ ಅಥವಾ ವಿತರಣಾ ಕೇಂದ್ರಗಳಲ್ಲಿ ಮೂಲಭೂತ ವಸ್ತುಗಳು ಲಭ್ಯವಿಲ್ಲ. ಹಿಟ್ಟಿನಂತಹ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದರಿಂದಾಗಿ 2.3 ಮಿಲಿಯನ್ ಜನರು ತಮ್ಮ ದೈನಂದಿನ ಪೌಷ್ಠಿಕಾಂಶದ ಅಗತ್ಯಗಳನ್ನು ಪೂರೈಸುವುದು ಅಸಾಧ್ಯವಾಗಿದೆ ಎಂದಿದ್ದಾರೆ.

ಸರಣಿ ದಾಳಿಗಳು, 116 ಜನರು ಸಾವು 

ಶನಿವಾರ ಗಾಝಾದಲ್ಲಿ ಇಸ್ರೇಲ್ ತನ್ನ ಕ್ರೂರ ದಾಳಿಯನ್ನು ಮುಂದುವರೆಸಿತ್ತು. ಸ್ಥಳಾಂತರಗೊಂಡವರ ಡೇರೆಗಳು ಮತ್ತು ಆ ಪ್ರದೇಶಾದ್ಯಂತ ಮನೆಗಳ ಮೇಲೆ ಬಾಂಬ್ ದಾಳಿ ಮಾಡಿದೆ. ಇದರಿಂದ ಕನಿಷ್ಠ 116 ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದಾರೆ.

ದಕ್ಷಿಣ ಖಾನ್ ಯೂನಿಸ್ ಬಳಿಯ ಬನಿ ಸುಹೇಲಾ ಮೇಲೆ ಇಸ್ರೇಲಿ ದಾಳಿ ನಡೆಸಿದ ಸ್ಥಳದಿಂದ ನಾಲ್ಕು ಶವಗಳನ್ನು ಹೊರ ತೆಗೆಯಲಾಗಿದೆ ಎಂದು ನಾಸರ್ ಆಸ್ಪತ್ರೆಯ ಮೂಲಗಳು ತಿಳಿಸಿದ್ದಾಗಿ ಅಲ್ ಜಝೀರಾ ವರದಿ ಮಾಡಿದೆ.

ಖಾನ್ ಯೂನಿಸ್‌ನಲ್ಲಿ ಸ್ಥಳಾಂತರಗೊಂಡ ಪ್ಯಾಲೆಸ್ತೀನಿಯರು ಇದ್ದ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ಡ್ರೋನ್ ದಾಳಿಯಿಂದ ಕನಿಷ್ಠ ಒಬ್ಬರು ಸಾವನ್ನಪ್ಪಿದ್ದಾರೆ.

ಮಧ್ಯ ಗಾಝಾದ ಅಜ್-ಜವಾಯ್ದಾ ಪಟ್ಟಣದಲ್ಲಿದ್ದ ಮನೆಯ ಮೇಲೆ ದಾಳಿ ಇಸ್ರೇಲ್ ದಾಳಿ ಮಾಡಿದ್ದು, ನುಸೇರತ್ ಪೊಲೀಸ್ ನಿರ್ದೇಶಕ ಕರ್ನಲ್ ಒಮರ್ ಸಯೀದ್ ಅಕ್ಲ್ ಮತ್ತು ಅವರ 11 ಕುಟುಂಬ ಸದಸ್ಯರನ್ನು ಹತ್ಯೆ ಮಾಡಿವೆ ಎಂದು ಗಾಝಾದ ಆಂತರಿಕ ಸಚಿವಾಲಯ ತಿಳಿಸಿದೆ.

ಗಾಝಾ ನಗರದ ಜೈಟೌನ್ ಸಮೀಪ ಇಸ್ರೇಲಿ ನಡೆಸಿದ ಎರಡು ವೈಮಾನಿಕ ದಾಳಿಗಳಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಅಲ್-ಅಹ್ಲಿ ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ.

ಪ್ಯಾಲೆಸ್ತೀನಿಯನ್ ರೆಡ್ ಕ್ರೆಸೆಂಟ್ ಪ್ರಕಾರ, ಗಾಝಾ ನಗರದ ತಾಲ್ ಅಲ್-ಹವಾ ಸಮೀಪ ಇಸ್ರೇಲಿ ನಡೆಸಿದ ವಾಯುದಾಳಿಯಲ್ಲಿ ಐವರು ಸಾವನ್ನಪ್ಪಿದ್ದಾರೆ.

ಉತ್ತರ ಗಾಝಾದ ಜಬಾಲಿಯಾ ಆನ್-ನಜ್ಲಾ ಸಮೀಪ ಇಸ್ರೇಲ್ ನಡೆಸಿದ ಶೆಲ್ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.

ಪ್ಯಾಲೆಸ್ತೀನಿಯನ್ ಕೈದಿಗಳ ಮಾಧ್ಯಮ ಕಚೇರಿಯ ಪ್ರಕಾರ, ಇಸ್ರೇಲಿ ಪಡೆಗಳು ಗಾಝಾ ಕರಾವಳಿಯಲ್ಲಿ ಮೂವರು ಪ್ಯಾಲೆಸ್ತೀನಿಯನ್ ಮೀನುಗಾರರ ಮೇಲೆ ಗುಂಡು ಹಾರಿಸಿ ಬಂಧಿಸಿವೆ.

2007ರಲ್ಲಿ ಹಮಾಸ್ ಗಾಝಾವನ್ನು ವಶಪಡಿಸಿಕೊಂಡಾಗಿನಿಂದ ಇಸ್ರೇಲಿ ಸೇನೆಯು ಗಾಝಾದ ಮೇಲೆ ನೌಕಾ ದಿಗ್ಬಂಧನವನ್ನು ಕಾಯ್ದುಕೊಂಡಿದೆ. ಅಕ್ಟೋಬರ್ 2023ರಲ್ಲಿ ಯುದ್ಧ ಪ್ರಾರಂಭವಾದಾಗಿನಿಂದ ಇದು ಬಿಗಿಗೊಂಡಿವೆ.

ನೈಋತ್ಯ ನೈಜರ್‌ನಲ್ಲಿ ಭಯೋತ್ಪಾದಕ ದಾಳಿ; ಇಬ್ಬರು ಭಾರತೀಯರು ಬಲಿ, ಓರ್ವನ ಅಪಹರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...