Homeಮುಖಪುಟಆಂಧ್ರ ಪ್ರದೇಶ ಮದ್ಯ ಹಗರಣ: ಆರೋಪಪಟ್ಟಿಯಲ್ಲಿ ಮಾಜಿ ಸಿಎಂ ಜಗನ್‌ ಹೆಸರು

ಆಂಧ್ರ ಪ್ರದೇಶ ಮದ್ಯ ಹಗರಣ: ಆರೋಪಪಟ್ಟಿಯಲ್ಲಿ ಮಾಜಿ ಸಿಎಂ ಜಗನ್‌ ಹೆಸರು

ಪ್ರತಿ ತಿಂಗಳು ಜಗನ್ ಮೋಹನ್ ರೆಡ್ಡಿಗೆ 50 ರಿಂದ 60 ಕೋಟಿ ರೂ. ಸಂದಾಯವಾಗುತ್ತಿತ್ತು ಎಂದು ಹೇಳಲಾಗಿದೆ.

- Advertisement -
- Advertisement -

ದೇಶದಾದ್ಯಂತ ಸುದ್ದಿಯಾಗಿದ್ದ ಆಂಧ್ರ ಪ್ರದೇಶದ 3,500 ಕೋಟಿ ರೂಪಾಯಿ ಮೊತ್ತದ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಪೊಲೀಸರು 305 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ದೋಷಾರೋಪ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ವೈ.ಎಸ್‌ ಜಗನ್ ಮೋಹನ್ ರೆಡ್ಡಿಯವರ ಹೆಸರಿದೆ. ಹಗರಣದ ಲಾಭ ಪಡೆದವರಲ್ಲಿ ಜಗನ್ ಕೂಡ ಒಬ್ಬರು ಎಂದು ಉಲ್ಲೇಖಿಸಲಾಗಿದೆ. 2019-24ರ ವೈಎಸ್‌ಆರ್ ಕಾಂಗ್ರೆಸ್ ಆಡಳಿತದಲ್ಲಿ ಸಿಎಂ ಆಗಿದ್ದ ಜಗನ್ ಅವರಿಗೆ ಪ್ರತಿ ತಿಂಗಳು 50 ರಿಂದ 60 ಕೋಟಿ ರೂ. ಸಂದಾಯವಾಗುತ್ತಿತ್ತು ಎಂದು ಹೇಳಲಾಗಿದೆ.

ಆರೋಪಪಟ್ಟಿಯಲ್ಲಿ ಜಗನ್ ಮೋಹನ್ ರೆಡ್ಡಿ ಅವರ ಹೆಸರಿದ್ದರೂ, ಅವರನ್ನು ಆರೋಪಿಯನ್ನಾಗಿ ಹೆಸರಿಸಲಾಗಿಲ್ಲ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಅಕ್ರಮವಾಗಿ ಸಂಗ್ರಹಿಸುತ್ತಿದ್ದ ಹಣವನ್ನು ಅಂತಿಮವಾಗಿ ಪ್ರಕರಣದ ಒಂದನೇ ಆರೋಪಿ ಕೇಸಿರೆಡ್ಡಿ ರಾಜಶೇಖರ್ ರೆಡ್ಡಿ ಅವರು, ಐದನೇ ಆರೋಪಿ ವಿಜಯ್ ಸಾಯಿ ರೆಡ್ಡಿ, ನಾಲ್ಕನೇ ಆರೋಪಿ ಮಿಥುನ್ ರೆಡ್ಡಿ ಮತ್ತು 33ನೇ ಆರೋಪಿ ಬಾಲಾಜಿಗೆ ಹಸ್ತಾಂತರಿಸುತ್ತಿದ್ದರು. ಅವರು ಅದನ್ನು ಜಗನ್‌ ಮೋಹನ್ ರೆಡ್ಡಿ ಅವರಿಗೆ ವರ್ಗಾಯಿಸುತ್ತಿದ್ದರು. ಇದನ್ನು ಸಾಕ್ಷಿಗಳು ದೃಢೀಕರಿಸಿದ್ದಾರೆ ಎಂದು ಆರೋಪ ಪಟ್ಟಿಯಲ್ಲಿ ಹೇಳಲಾಗಿದೆ.

ರಾಜಶೇಖರ್ ರೆಡ್ಡಿ ಮಾಸ್ಟರ್ ಮೈಂಡ್

ಆರೋಪಪಟ್ಟಿಯ ಪ್ರಕಾರ, ರಾಜಶೇಖರ್ ರೆಡ್ಡಿ ಅವರನ್ನು ಹಗರಣದ ‘ಮಾಸ್ಟರ್ ಮೈಂಡ್ ಮತ್ತು ಸಹ-ಸಂಚುಕೋರ’ ಎಂದು ಗುರುತಿಸಲಾಗಿದೆ. ಇವರು ಮದ್ಯ ನೀತಿಯನ್ನು ದುರುಪಯೋಗಪಡಿಸಿಕೊಂಡಿದ್ದರು. ಆಟೋಮ್ಯಾಟೆಡ್ ಆರ್ಡರ್ ಫಾರ್ ಸಪ್ಲೈ (ಒಎಫ್‌ಸಿ) ವ್ಯವಸ್ಥೆಯನ್ನು ಮ್ಯಾನುಅಲ್ ವ್ಯವಸ್ಥೆಗೆ ಬದಲಾಯಿಸಿದ್ದರು. ಆಂಧ್ರ ಪ್ರದೇಶ ರಾಜ್ಯ ಪಾನೀಯ ನಿಗಮ ಲಿಮಿಟೆಡ್ (ಎಪಿಎಸ್‌ಬಿಸಿಎಲ್) ನಲ್ಲಿ ತಮಗೆ ನಿಷ್ಠರಾಗಿದ್ದ ಅಧಿಕಾರಿಗಳನ್ನು ನಿಯೋಜಿಸಿದ್ದರು. ಅಲ್ಲದೆ, ಪ್ರಕರಣದ ಮತ್ತೊಬ್ಬ ಆರೋಪಿ ಬಾಲಾಜಿ ಗೋವಿಂದಪ್ಪ ಮೂಲಕ ಜಗನ್‌ ಮೋಹನ್ ರೆಡ್ಡಿಗೆ ಹಣ ತಲುಪಿಸಲು ಶೆಲ್ ಡಿಸ್ಟಿಲರಿಗಳನ್ನು ಬಳಸಿದ್ದರು ಎಂದು ಆರೋಪಪಟ್ಟಿಯಲ್ಲಿ ವಿವರಿಸಲಾಗಿದೆ.

ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಅವರ ಸಹಯೋಗದೊಂದಿಗೆ ವೈಎಸ್‌ಆರ್‌ಸಿಪಿಯ ಚುನಾವಣಾ ಪ್ರಚಾರಕ್ಕೆ ರಾಜಶೇಖರ್ ರೆಡ್ಡಿ 250 ರಿಂಧ 300 ಕೋಟಿ ರೂ. ಹಣವನ್ನು ನೀಡಿದ್ದರು. ಈ ಹಣವನ್ನು 30ಕ್ಕೂ ಹೆಚ್ಚು ಶೆಲ್ ಕಂಪನಿಗಳ ಮೂಲಕ ಅಕ್ರಮವಾಗಿ ವರ್ಗಾಯಿಸಿ, ದುಬೈ ಮತ್ತು ಆಫ್ರಿಕಾದಲ್ಲಿ ಭೂಮಿ, ಚಿನ್ನ ಮತ್ತು ಐಷಾರಾಮಿ ಆಸ್ತಿಗಳನ್ನು ಖರೀದಿಸಲು ಬಳಸಲಾಗಿದೆ ಆರೋಪಪಟ್ಟಿಯಲ್ಲಿ ಹೇಳಲಾಗಿದೆ.

ವೈಎಸ್‌ಆರ್‌ಸಿಪಿ ಸರ್ಕಾರ ಪರಿಚಯಿಸಿದ ಅಬಕಾರಿ ನೀತಿಯು ಮದ್ಯ ವಿತರಣೆಯ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸಲು ರೂಪಿಸಲಾಗಿದೆ. ಇದು ಆರೋಪಿ ಅಧಿಕಾರಿಗಳಿಗೆ ಭಾರೀ ಕಮಿಷನ್ ಪಡೆಯಲು ಅವಕಾಶ ನೀಡುತ್ತದೆ ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.

“ಆರೋಪಿಗಳು ಅಬಕಾರಿ ನೀತಿ ಮತ್ತು ಅದರ ವಿಧಾನಗಳಲ್ಲಿ ಬದಲಾವಣೆ ಮಾಡಲು ಯೋಜಿಸಿದ್ದರು. ಇದರಿಂದಾಗಿ ಅವರಿಗೆ ದೊಡ್ಡ ಪ್ರಮಾಣದ ಕಿಕ್‌ಬ್ಯಾಕ್‌ಗಳು ಸಿಕ್ಕಿವೆ. ಅಂತಹ ಕಿಕ್‌ಬ್ಯಾಕ್‌ಗಳಲ್ಲಿ ಹೆಚ್ಚಿನ ಭಾಗವನ್ನು ನಗದು, ಚಿನ್ನದ ಗಟ್ಟಿಗಳು ಇತ್ಯಾದಿಗಳ ರೂಪದಲ್ಲಿ ಪಡೆಯಲಾಗಿದೆ” ಎಂದು ಆರೋಪಪಟ್ಟಿ ಹೇಳಿದೆ.

ಲಂಚದ ಬೇಡಿಕೆಯನ್ನು ವಿರೋಧಿಸಿದ ಡಿಸ್ಟಿಲರಿಗಳಿಗೆ ಒಎಫ್‌ಸಿ ಅನುಮೋದನೆಯನ್ನು ಆರೋಪಿಗಳು ತಡೆಹಿಡಿದಿದ್ದರು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ, ವಿಶೇಷ ತನಿಖಾ ತಂಡ (ಎಸ್‌ಐಟಿ) ಹಲವು ಗಂಟೆಗಳ ವಿಚಾರಣೆಯ ನಂತರ ವೈಎಸ್ಆರ್‌ಸಿಪಿ ಸಂಸದ ಪಿವಿ ಮಿಧುನ್ ರೆಡ್ಡಿ ಅವರನ್ನು ಬಂಧಿಸಿದೆ. ಮೇ ತಿಂಗಳಲ್ಲಿ, ಜಾರಿ ನಿರ್ದೇಶನಾಲಯ (ಇಡಿ) ಕೂಡ ಈ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ.

2019ರಲ್ಲಿ ಹೈದರಾಬಾದ್‌ನ ಹೋಟೆಲ್ ಪಾರ್ಕ್ ಹಯಾತ್‌ನಲ್ಲಿ ಸಜ್ಜಲ ಶ್ರೀಧರ್ ರೆಡ್ಡಿ (ಆರನೇ ಆರೋಪಿ) ಅವರು ನಡೆಸಿದ ಸಭೆಯನ್ನು ಆರೋಪಪಟ್ಟಿ ಉಲ್ಲೇಖಿಸಿದೆ. ಈ ಸಭೆಯಲ್ಲಿ ಡಿಸ್ಟಿಲರಿ ಮಾಲೀಕರಿಗೆ ಮ್ಯಾನುಅಲ್ ಒಎಫ್‌ಎಸ್ ವ್ಯವಸ್ಥೆಯೊಂದಿಗೆ ಸಹಕರಿಸಲು ಸೂಚಿಸಲಾಗಿತ್ತು ಎಂದಿದೆ.

ಮೂಲ ಬೆಲೆಯ ಮೇಲೆ ಶೇ. 12 ರಷ್ಟು ಕಿಕ್‌ಬ್ಯಾಕ್‌ ಪಡೆಯಲು ಪ್ರಾರಂಭಿಸಲಾಗಿತ್ತು. ನಂತರ ಅದನ್ನು ಶೇ. 20 ಕ್ಕೆ ಹೆಚ್ಚಿಸಲಾಗಿತ್ತು ಎಂದು ಪೊಲೀಸರು ಆರೋಪಿಸಿದ್ದಾರೆ.

ಈ ನಡುವೆ ಹಲವಾರು ವೈಎಸ್‌ಆರ್‌ಸಿಪಿ ನಾಯಕರು ಮಿಧುನ್ ರೆಡ್ಡಿ ಬಂಧನವನ್ನು ಖಂಡಿಸಿದ್ದು, ಇದು ರಾಜಕೀಯ ಪ್ರೇರಿತ ಎಂದಿದ್ದಾರೆ.

ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಪ್ರತಿಪಕ್ಷ ನಾಯಕರನ್ನು ಗುರಿಯಾಗಿಸಲು ಆಡಳಿತ ಯಂತ್ರವನ್ನು ಬಳಸುತ್ತಿದ್ದಾರೆ ಎಂದು ಮಾಜಿ ಸಚಿವರಾದ ಬೊಚ್ಚಾ ಸತ್ಯನಾರಾಯಣ, ಪೆರ್ಣಿ ವೆಂಕಟರಾಮಯ್ಯ (ನಾನಿ), ಅಂಬಟಿ ರಾಂಬಾಬು, ಮೇರುಗು ನಾಗಾರ್ಜುನ ಮತ್ತು ವೈಎಸ್‌ಆರ್‌ಸಿಪಿ ಪಕ್ಷದ ಪ್ರಧಾನ ಕಾರ್ಯದರ್ಶಿ ಜಿ ಶ್ರೀಕಾಂತ್ ರೆಡ್ಡಿ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

ಕಲ್ಪಿತ ನರೇಟಿವ್ -ಜಗನ್ ಮೋಹನ್ ರೆಡ್ಡಿ

ಮದ್ಯ ಹಗರಣದ ಆರೋಪಟ್ಟಿಯಲ್ಲಿ ತಮ್ಮ ಹೆಸರು ಉಲ್ಲೇಖಿಸಿರುವ ಬಗ್ಗೆ ಮತ್ತು ಸಂಸದ ಮಿಧುನ್ ಬಂಧನ ಕುರಿತು ಭಾನುವಾರ ಪ್ರತಿಕ್ರಿಯೆ ನೀಡಿರುವ ಜಗನ್ ಮೋಹನ್ ರೆಡ್ಡಿ, “ಇದನ್ನು ಮಾಧ್ಯಮಗಳ ಮುಂದೆ ನಾಟಕವಾಡಲು ಮಾತ್ರ ಸೃಷ್ಟಿಸಲಾಗಿದೆ. ಇದೊಂದು ಕಲ್ಪಿತ ನರೇಟಿವ್ ಎಂದಿದ್ದಾರೆ.

ವಿಜಯವಾಡದ ಸ್ಥಳೀಯ ನ್ಯಾಯಾಲಯವು ಸಂಸದ ಪಿವಿ ಮಿಧುನ್ ರೆಡ್ಡಿ ಅವರನ್ನು ಆಗಸ್ಟ್ 1 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಈ ಬೆನ್ನಲ್ಲೇ ಜಗನ್ ಮೋಹನ್ ರೆಡ್ಡಿ ಹೇಳಿಕೆ ನೀಡಿದ್ದಾರೆ.

ಸೌಜನ್ಯ : hindustantimes.com

ಕೇರಳದಲ್ಲಿ ಮುಸ್ಲಿಂ ಪ್ರಾಬಲ್ಯ, ಸಿಎಂ ಹುದ್ದೆಗೆ IUML ಬೇಡಿಕೆ: ವೆಳ್ಳಾಪಳ್ಳಿ ನಟೇಶನ್‌ರಿಂದ ದ್ವೇಷ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...