Homeಮುಖಪುಟಆಂಧ್ರ ಪ್ರದೇಶ ಮದ್ಯ ಹಗರಣ: ಆರೋಪಪಟ್ಟಿಯಲ್ಲಿ ಮಾಜಿ ಸಿಎಂ ಜಗನ್‌ ಹೆಸರು

ಆಂಧ್ರ ಪ್ರದೇಶ ಮದ್ಯ ಹಗರಣ: ಆರೋಪಪಟ್ಟಿಯಲ್ಲಿ ಮಾಜಿ ಸಿಎಂ ಜಗನ್‌ ಹೆಸರು

ಪ್ರತಿ ತಿಂಗಳು ಜಗನ್ ಮೋಹನ್ ರೆಡ್ಡಿಗೆ 50 ರಿಂದ 60 ಕೋಟಿ ರೂ. ಸಂದಾಯವಾಗುತ್ತಿತ್ತು ಎಂದು ಹೇಳಲಾಗಿದೆ.

- Advertisement -
- Advertisement -

ದೇಶದಾದ್ಯಂತ ಸುದ್ದಿಯಾಗಿದ್ದ ಆಂಧ್ರ ಪ್ರದೇಶದ 3,500 ಕೋಟಿ ರೂಪಾಯಿ ಮೊತ್ತದ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಪೊಲೀಸರು 305 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ದೋಷಾರೋಪ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ವೈ.ಎಸ್‌ ಜಗನ್ ಮೋಹನ್ ರೆಡ್ಡಿಯವರ ಹೆಸರಿದೆ. ಹಗರಣದ ಲಾಭ ಪಡೆದವರಲ್ಲಿ ಜಗನ್ ಕೂಡ ಒಬ್ಬರು ಎಂದು ಉಲ್ಲೇಖಿಸಲಾಗಿದೆ. 2019-24ರ ವೈಎಸ್‌ಆರ್ ಕಾಂಗ್ರೆಸ್ ಆಡಳಿತದಲ್ಲಿ ಸಿಎಂ ಆಗಿದ್ದ ಜಗನ್ ಅವರಿಗೆ ಪ್ರತಿ ತಿಂಗಳು 50 ರಿಂದ 60 ಕೋಟಿ ರೂ. ಸಂದಾಯವಾಗುತ್ತಿತ್ತು ಎಂದು ಹೇಳಲಾಗಿದೆ.

ಆರೋಪಪಟ್ಟಿಯಲ್ಲಿ ಜಗನ್ ಮೋಹನ್ ರೆಡ್ಡಿ ಅವರ ಹೆಸರಿದ್ದರೂ, ಅವರನ್ನು ಆರೋಪಿಯನ್ನಾಗಿ ಹೆಸರಿಸಲಾಗಿಲ್ಲ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಅಕ್ರಮವಾಗಿ ಸಂಗ್ರಹಿಸುತ್ತಿದ್ದ ಹಣವನ್ನು ಅಂತಿಮವಾಗಿ ಪ್ರಕರಣದ ಒಂದನೇ ಆರೋಪಿ ಕೇಸಿರೆಡ್ಡಿ ರಾಜಶೇಖರ್ ರೆಡ್ಡಿ ಅವರು, ಐದನೇ ಆರೋಪಿ ವಿಜಯ್ ಸಾಯಿ ರೆಡ್ಡಿ, ನಾಲ್ಕನೇ ಆರೋಪಿ ಮಿಥುನ್ ರೆಡ್ಡಿ ಮತ್ತು 33ನೇ ಆರೋಪಿ ಬಾಲಾಜಿಗೆ ಹಸ್ತಾಂತರಿಸುತ್ತಿದ್ದರು. ಅವರು ಅದನ್ನು ಜಗನ್‌ ಮೋಹನ್ ರೆಡ್ಡಿ ಅವರಿಗೆ ವರ್ಗಾಯಿಸುತ್ತಿದ್ದರು. ಇದನ್ನು ಸಾಕ್ಷಿಗಳು ದೃಢೀಕರಿಸಿದ್ದಾರೆ ಎಂದು ಆರೋಪ ಪಟ್ಟಿಯಲ್ಲಿ ಹೇಳಲಾಗಿದೆ.

ರಾಜಶೇಖರ್ ರೆಡ್ಡಿ ಮಾಸ್ಟರ್ ಮೈಂಡ್

ಆರೋಪಪಟ್ಟಿಯ ಪ್ರಕಾರ, ರಾಜಶೇಖರ್ ರೆಡ್ಡಿ ಅವರನ್ನು ಹಗರಣದ ‘ಮಾಸ್ಟರ್ ಮೈಂಡ್ ಮತ್ತು ಸಹ-ಸಂಚುಕೋರ’ ಎಂದು ಗುರುತಿಸಲಾಗಿದೆ. ಇವರು ಮದ್ಯ ನೀತಿಯನ್ನು ದುರುಪಯೋಗಪಡಿಸಿಕೊಂಡಿದ್ದರು. ಆಟೋಮ್ಯಾಟೆಡ್ ಆರ್ಡರ್ ಫಾರ್ ಸಪ್ಲೈ (ಒಎಫ್‌ಸಿ) ವ್ಯವಸ್ಥೆಯನ್ನು ಮ್ಯಾನುಅಲ್ ವ್ಯವಸ್ಥೆಗೆ ಬದಲಾಯಿಸಿದ್ದರು. ಆಂಧ್ರ ಪ್ರದೇಶ ರಾಜ್ಯ ಪಾನೀಯ ನಿಗಮ ಲಿಮಿಟೆಡ್ (ಎಪಿಎಸ್‌ಬಿಸಿಎಲ್) ನಲ್ಲಿ ತಮಗೆ ನಿಷ್ಠರಾಗಿದ್ದ ಅಧಿಕಾರಿಗಳನ್ನು ನಿಯೋಜಿಸಿದ್ದರು. ಅಲ್ಲದೆ, ಪ್ರಕರಣದ ಮತ್ತೊಬ್ಬ ಆರೋಪಿ ಬಾಲಾಜಿ ಗೋವಿಂದಪ್ಪ ಮೂಲಕ ಜಗನ್‌ ಮೋಹನ್ ರೆಡ್ಡಿಗೆ ಹಣ ತಲುಪಿಸಲು ಶೆಲ್ ಡಿಸ್ಟಿಲರಿಗಳನ್ನು ಬಳಸಿದ್ದರು ಎಂದು ಆರೋಪಪಟ್ಟಿಯಲ್ಲಿ ವಿವರಿಸಲಾಗಿದೆ.

ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಅವರ ಸಹಯೋಗದೊಂದಿಗೆ ವೈಎಸ್‌ಆರ್‌ಸಿಪಿಯ ಚುನಾವಣಾ ಪ್ರಚಾರಕ್ಕೆ ರಾಜಶೇಖರ್ ರೆಡ್ಡಿ 250 ರಿಂಧ 300 ಕೋಟಿ ರೂ. ಹಣವನ್ನು ನೀಡಿದ್ದರು. ಈ ಹಣವನ್ನು 30ಕ್ಕೂ ಹೆಚ್ಚು ಶೆಲ್ ಕಂಪನಿಗಳ ಮೂಲಕ ಅಕ್ರಮವಾಗಿ ವರ್ಗಾಯಿಸಿ, ದುಬೈ ಮತ್ತು ಆಫ್ರಿಕಾದಲ್ಲಿ ಭೂಮಿ, ಚಿನ್ನ ಮತ್ತು ಐಷಾರಾಮಿ ಆಸ್ತಿಗಳನ್ನು ಖರೀದಿಸಲು ಬಳಸಲಾಗಿದೆ ಆರೋಪಪಟ್ಟಿಯಲ್ಲಿ ಹೇಳಲಾಗಿದೆ.

ವೈಎಸ್‌ಆರ್‌ಸಿಪಿ ಸರ್ಕಾರ ಪರಿಚಯಿಸಿದ ಅಬಕಾರಿ ನೀತಿಯು ಮದ್ಯ ವಿತರಣೆಯ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸಲು ರೂಪಿಸಲಾಗಿದೆ. ಇದು ಆರೋಪಿ ಅಧಿಕಾರಿಗಳಿಗೆ ಭಾರೀ ಕಮಿಷನ್ ಪಡೆಯಲು ಅವಕಾಶ ನೀಡುತ್ತದೆ ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.

“ಆರೋಪಿಗಳು ಅಬಕಾರಿ ನೀತಿ ಮತ್ತು ಅದರ ವಿಧಾನಗಳಲ್ಲಿ ಬದಲಾವಣೆ ಮಾಡಲು ಯೋಜಿಸಿದ್ದರು. ಇದರಿಂದಾಗಿ ಅವರಿಗೆ ದೊಡ್ಡ ಪ್ರಮಾಣದ ಕಿಕ್‌ಬ್ಯಾಕ್‌ಗಳು ಸಿಕ್ಕಿವೆ. ಅಂತಹ ಕಿಕ್‌ಬ್ಯಾಕ್‌ಗಳಲ್ಲಿ ಹೆಚ್ಚಿನ ಭಾಗವನ್ನು ನಗದು, ಚಿನ್ನದ ಗಟ್ಟಿಗಳು ಇತ್ಯಾದಿಗಳ ರೂಪದಲ್ಲಿ ಪಡೆಯಲಾಗಿದೆ” ಎಂದು ಆರೋಪಪಟ್ಟಿ ಹೇಳಿದೆ.

ಲಂಚದ ಬೇಡಿಕೆಯನ್ನು ವಿರೋಧಿಸಿದ ಡಿಸ್ಟಿಲರಿಗಳಿಗೆ ಒಎಫ್‌ಸಿ ಅನುಮೋದನೆಯನ್ನು ಆರೋಪಿಗಳು ತಡೆಹಿಡಿದಿದ್ದರು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ, ವಿಶೇಷ ತನಿಖಾ ತಂಡ (ಎಸ್‌ಐಟಿ) ಹಲವು ಗಂಟೆಗಳ ವಿಚಾರಣೆಯ ನಂತರ ವೈಎಸ್ಆರ್‌ಸಿಪಿ ಸಂಸದ ಪಿವಿ ಮಿಧುನ್ ರೆಡ್ಡಿ ಅವರನ್ನು ಬಂಧಿಸಿದೆ. ಮೇ ತಿಂಗಳಲ್ಲಿ, ಜಾರಿ ನಿರ್ದೇಶನಾಲಯ (ಇಡಿ) ಕೂಡ ಈ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ.

2019ರಲ್ಲಿ ಹೈದರಾಬಾದ್‌ನ ಹೋಟೆಲ್ ಪಾರ್ಕ್ ಹಯಾತ್‌ನಲ್ಲಿ ಸಜ್ಜಲ ಶ್ರೀಧರ್ ರೆಡ್ಡಿ (ಆರನೇ ಆರೋಪಿ) ಅವರು ನಡೆಸಿದ ಸಭೆಯನ್ನು ಆರೋಪಪಟ್ಟಿ ಉಲ್ಲೇಖಿಸಿದೆ. ಈ ಸಭೆಯಲ್ಲಿ ಡಿಸ್ಟಿಲರಿ ಮಾಲೀಕರಿಗೆ ಮ್ಯಾನುಅಲ್ ಒಎಫ್‌ಎಸ್ ವ್ಯವಸ್ಥೆಯೊಂದಿಗೆ ಸಹಕರಿಸಲು ಸೂಚಿಸಲಾಗಿತ್ತು ಎಂದಿದೆ.

ಮೂಲ ಬೆಲೆಯ ಮೇಲೆ ಶೇ. 12 ರಷ್ಟು ಕಿಕ್‌ಬ್ಯಾಕ್‌ ಪಡೆಯಲು ಪ್ರಾರಂಭಿಸಲಾಗಿತ್ತು. ನಂತರ ಅದನ್ನು ಶೇ. 20 ಕ್ಕೆ ಹೆಚ್ಚಿಸಲಾಗಿತ್ತು ಎಂದು ಪೊಲೀಸರು ಆರೋಪಿಸಿದ್ದಾರೆ.

ಈ ನಡುವೆ ಹಲವಾರು ವೈಎಸ್‌ಆರ್‌ಸಿಪಿ ನಾಯಕರು ಮಿಧುನ್ ರೆಡ್ಡಿ ಬಂಧನವನ್ನು ಖಂಡಿಸಿದ್ದು, ಇದು ರಾಜಕೀಯ ಪ್ರೇರಿತ ಎಂದಿದ್ದಾರೆ.

ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಪ್ರತಿಪಕ್ಷ ನಾಯಕರನ್ನು ಗುರಿಯಾಗಿಸಲು ಆಡಳಿತ ಯಂತ್ರವನ್ನು ಬಳಸುತ್ತಿದ್ದಾರೆ ಎಂದು ಮಾಜಿ ಸಚಿವರಾದ ಬೊಚ್ಚಾ ಸತ್ಯನಾರಾಯಣ, ಪೆರ್ಣಿ ವೆಂಕಟರಾಮಯ್ಯ (ನಾನಿ), ಅಂಬಟಿ ರಾಂಬಾಬು, ಮೇರುಗು ನಾಗಾರ್ಜುನ ಮತ್ತು ವೈಎಸ್‌ಆರ್‌ಸಿಪಿ ಪಕ್ಷದ ಪ್ರಧಾನ ಕಾರ್ಯದರ್ಶಿ ಜಿ ಶ್ರೀಕಾಂತ್ ರೆಡ್ಡಿ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

ಕಲ್ಪಿತ ನರೇಟಿವ್ -ಜಗನ್ ಮೋಹನ್ ರೆಡ್ಡಿ

ಮದ್ಯ ಹಗರಣದ ಆರೋಪಟ್ಟಿಯಲ್ಲಿ ತಮ್ಮ ಹೆಸರು ಉಲ್ಲೇಖಿಸಿರುವ ಬಗ್ಗೆ ಮತ್ತು ಸಂಸದ ಮಿಧುನ್ ಬಂಧನ ಕುರಿತು ಭಾನುವಾರ ಪ್ರತಿಕ್ರಿಯೆ ನೀಡಿರುವ ಜಗನ್ ಮೋಹನ್ ರೆಡ್ಡಿ, “ಇದನ್ನು ಮಾಧ್ಯಮಗಳ ಮುಂದೆ ನಾಟಕವಾಡಲು ಮಾತ್ರ ಸೃಷ್ಟಿಸಲಾಗಿದೆ. ಇದೊಂದು ಕಲ್ಪಿತ ನರೇಟಿವ್ ಎಂದಿದ್ದಾರೆ.

ವಿಜಯವಾಡದ ಸ್ಥಳೀಯ ನ್ಯಾಯಾಲಯವು ಸಂಸದ ಪಿವಿ ಮಿಧುನ್ ರೆಡ್ಡಿ ಅವರನ್ನು ಆಗಸ್ಟ್ 1 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಈ ಬೆನ್ನಲ್ಲೇ ಜಗನ್ ಮೋಹನ್ ರೆಡ್ಡಿ ಹೇಳಿಕೆ ನೀಡಿದ್ದಾರೆ.

ಸೌಜನ್ಯ : hindustantimes.com

ಕೇರಳದಲ್ಲಿ ಮುಸ್ಲಿಂ ಪ್ರಾಬಲ್ಯ, ಸಿಎಂ ಹುದ್ದೆಗೆ IUML ಬೇಡಿಕೆ: ವೆಳ್ಳಾಪಳ್ಳಿ ನಟೇಶನ್‌ರಿಂದ ದ್ವೇಷ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...