Homeಮುಖಪುಟಆಂಧ್ರ ಪ್ರದೇಶ ಮದ್ಯ ಹಗರಣ: ಆರೋಪಪಟ್ಟಿಯಲ್ಲಿ ಮಾಜಿ ಸಿಎಂ ಜಗನ್‌ ಹೆಸರು

ಆಂಧ್ರ ಪ್ರದೇಶ ಮದ್ಯ ಹಗರಣ: ಆರೋಪಪಟ್ಟಿಯಲ್ಲಿ ಮಾಜಿ ಸಿಎಂ ಜಗನ್‌ ಹೆಸರು

ಪ್ರತಿ ತಿಂಗಳು ಜಗನ್ ಮೋಹನ್ ರೆಡ್ಡಿಗೆ 50 ರಿಂದ 60 ಕೋಟಿ ರೂ. ಸಂದಾಯವಾಗುತ್ತಿತ್ತು ಎಂದು ಹೇಳಲಾಗಿದೆ.

- Advertisement -
- Advertisement -

ದೇಶದಾದ್ಯಂತ ಸುದ್ದಿಯಾಗಿದ್ದ ಆಂಧ್ರ ಪ್ರದೇಶದ 3,500 ಕೋಟಿ ರೂಪಾಯಿ ಮೊತ್ತದ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಪೊಲೀಸರು 305 ಪುಟಗಳ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ದೋಷಾರೋಪ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ವೈ.ಎಸ್‌ ಜಗನ್ ಮೋಹನ್ ರೆಡ್ಡಿಯವರ ಹೆಸರಿದೆ. ಹಗರಣದ ಲಾಭ ಪಡೆದವರಲ್ಲಿ ಜಗನ್ ಕೂಡ ಒಬ್ಬರು ಎಂದು ಉಲ್ಲೇಖಿಸಲಾಗಿದೆ. 2019-24ರ ವೈಎಸ್‌ಆರ್ ಕಾಂಗ್ರೆಸ್ ಆಡಳಿತದಲ್ಲಿ ಸಿಎಂ ಆಗಿದ್ದ ಜಗನ್ ಅವರಿಗೆ ಪ್ರತಿ ತಿಂಗಳು 50 ರಿಂದ 60 ಕೋಟಿ ರೂ. ಸಂದಾಯವಾಗುತ್ತಿತ್ತು ಎಂದು ಹೇಳಲಾಗಿದೆ.

ಆರೋಪಪಟ್ಟಿಯಲ್ಲಿ ಜಗನ್ ಮೋಹನ್ ರೆಡ್ಡಿ ಅವರ ಹೆಸರಿದ್ದರೂ, ಅವರನ್ನು ಆರೋಪಿಯನ್ನಾಗಿ ಹೆಸರಿಸಲಾಗಿಲ್ಲ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಅಕ್ರಮವಾಗಿ ಸಂಗ್ರಹಿಸುತ್ತಿದ್ದ ಹಣವನ್ನು ಅಂತಿಮವಾಗಿ ಪ್ರಕರಣದ ಒಂದನೇ ಆರೋಪಿ ಕೇಸಿರೆಡ್ಡಿ ರಾಜಶೇಖರ್ ರೆಡ್ಡಿ ಅವರು, ಐದನೇ ಆರೋಪಿ ವಿಜಯ್ ಸಾಯಿ ರೆಡ್ಡಿ, ನಾಲ್ಕನೇ ಆರೋಪಿ ಮಿಥುನ್ ರೆಡ್ಡಿ ಮತ್ತು 33ನೇ ಆರೋಪಿ ಬಾಲಾಜಿಗೆ ಹಸ್ತಾಂತರಿಸುತ್ತಿದ್ದರು. ಅವರು ಅದನ್ನು ಜಗನ್‌ ಮೋಹನ್ ರೆಡ್ಡಿ ಅವರಿಗೆ ವರ್ಗಾಯಿಸುತ್ತಿದ್ದರು. ಇದನ್ನು ಸಾಕ್ಷಿಗಳು ದೃಢೀಕರಿಸಿದ್ದಾರೆ ಎಂದು ಆರೋಪ ಪಟ್ಟಿಯಲ್ಲಿ ಹೇಳಲಾಗಿದೆ.

ರಾಜಶೇಖರ್ ರೆಡ್ಡಿ ಮಾಸ್ಟರ್ ಮೈಂಡ್

ಆರೋಪಪಟ್ಟಿಯ ಪ್ರಕಾರ, ರಾಜಶೇಖರ್ ರೆಡ್ಡಿ ಅವರನ್ನು ಹಗರಣದ ‘ಮಾಸ್ಟರ್ ಮೈಂಡ್ ಮತ್ತು ಸಹ-ಸಂಚುಕೋರ’ ಎಂದು ಗುರುತಿಸಲಾಗಿದೆ. ಇವರು ಮದ್ಯ ನೀತಿಯನ್ನು ದುರುಪಯೋಗಪಡಿಸಿಕೊಂಡಿದ್ದರು. ಆಟೋಮ್ಯಾಟೆಡ್ ಆರ್ಡರ್ ಫಾರ್ ಸಪ್ಲೈ (ಒಎಫ್‌ಸಿ) ವ್ಯವಸ್ಥೆಯನ್ನು ಮ್ಯಾನುಅಲ್ ವ್ಯವಸ್ಥೆಗೆ ಬದಲಾಯಿಸಿದ್ದರು. ಆಂಧ್ರ ಪ್ರದೇಶ ರಾಜ್ಯ ಪಾನೀಯ ನಿಗಮ ಲಿಮಿಟೆಡ್ (ಎಪಿಎಸ್‌ಬಿಸಿಎಲ್) ನಲ್ಲಿ ತಮಗೆ ನಿಷ್ಠರಾಗಿದ್ದ ಅಧಿಕಾರಿಗಳನ್ನು ನಿಯೋಜಿಸಿದ್ದರು. ಅಲ್ಲದೆ, ಪ್ರಕರಣದ ಮತ್ತೊಬ್ಬ ಆರೋಪಿ ಬಾಲಾಜಿ ಗೋವಿಂದಪ್ಪ ಮೂಲಕ ಜಗನ್‌ ಮೋಹನ್ ರೆಡ್ಡಿಗೆ ಹಣ ತಲುಪಿಸಲು ಶೆಲ್ ಡಿಸ್ಟಿಲರಿಗಳನ್ನು ಬಳಸಿದ್ದರು ಎಂದು ಆರೋಪಪಟ್ಟಿಯಲ್ಲಿ ವಿವರಿಸಲಾಗಿದೆ.

ಮಾಜಿ ಶಾಸಕ ಚೆವಿರೆಡ್ಡಿ ಭಾಸ್ಕರ್ ರೆಡ್ಡಿ ಅವರ ಸಹಯೋಗದೊಂದಿಗೆ ವೈಎಸ್‌ಆರ್‌ಸಿಪಿಯ ಚುನಾವಣಾ ಪ್ರಚಾರಕ್ಕೆ ರಾಜಶೇಖರ್ ರೆಡ್ಡಿ 250 ರಿಂಧ 300 ಕೋಟಿ ರೂ. ಹಣವನ್ನು ನೀಡಿದ್ದರು. ಈ ಹಣವನ್ನು 30ಕ್ಕೂ ಹೆಚ್ಚು ಶೆಲ್ ಕಂಪನಿಗಳ ಮೂಲಕ ಅಕ್ರಮವಾಗಿ ವರ್ಗಾಯಿಸಿ, ದುಬೈ ಮತ್ತು ಆಫ್ರಿಕಾದಲ್ಲಿ ಭೂಮಿ, ಚಿನ್ನ ಮತ್ತು ಐಷಾರಾಮಿ ಆಸ್ತಿಗಳನ್ನು ಖರೀದಿಸಲು ಬಳಸಲಾಗಿದೆ ಆರೋಪಪಟ್ಟಿಯಲ್ಲಿ ಹೇಳಲಾಗಿದೆ.

ವೈಎಸ್‌ಆರ್‌ಸಿಪಿ ಸರ್ಕಾರ ಪರಿಚಯಿಸಿದ ಅಬಕಾರಿ ನೀತಿಯು ಮದ್ಯ ವಿತರಣೆಯ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸಲು ರೂಪಿಸಲಾಗಿದೆ. ಇದು ಆರೋಪಿ ಅಧಿಕಾರಿಗಳಿಗೆ ಭಾರೀ ಕಮಿಷನ್ ಪಡೆಯಲು ಅವಕಾಶ ನೀಡುತ್ತದೆ ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.

“ಆರೋಪಿಗಳು ಅಬಕಾರಿ ನೀತಿ ಮತ್ತು ಅದರ ವಿಧಾನಗಳಲ್ಲಿ ಬದಲಾವಣೆ ಮಾಡಲು ಯೋಜಿಸಿದ್ದರು. ಇದರಿಂದಾಗಿ ಅವರಿಗೆ ದೊಡ್ಡ ಪ್ರಮಾಣದ ಕಿಕ್‌ಬ್ಯಾಕ್‌ಗಳು ಸಿಕ್ಕಿವೆ. ಅಂತಹ ಕಿಕ್‌ಬ್ಯಾಕ್‌ಗಳಲ್ಲಿ ಹೆಚ್ಚಿನ ಭಾಗವನ್ನು ನಗದು, ಚಿನ್ನದ ಗಟ್ಟಿಗಳು ಇತ್ಯಾದಿಗಳ ರೂಪದಲ್ಲಿ ಪಡೆಯಲಾಗಿದೆ” ಎಂದು ಆರೋಪಪಟ್ಟಿ ಹೇಳಿದೆ.

ಲಂಚದ ಬೇಡಿಕೆಯನ್ನು ವಿರೋಧಿಸಿದ ಡಿಸ್ಟಿಲರಿಗಳಿಗೆ ಒಎಫ್‌ಸಿ ಅನುಮೋದನೆಯನ್ನು ಆರೋಪಿಗಳು ತಡೆಹಿಡಿದಿದ್ದರು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ, ವಿಶೇಷ ತನಿಖಾ ತಂಡ (ಎಸ್‌ಐಟಿ) ಹಲವು ಗಂಟೆಗಳ ವಿಚಾರಣೆಯ ನಂತರ ವೈಎಸ್ಆರ್‌ಸಿಪಿ ಸಂಸದ ಪಿವಿ ಮಿಧುನ್ ರೆಡ್ಡಿ ಅವರನ್ನು ಬಂಧಿಸಿದೆ. ಮೇ ತಿಂಗಳಲ್ಲಿ, ಜಾರಿ ನಿರ್ದೇಶನಾಲಯ (ಇಡಿ) ಕೂಡ ಈ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ.

2019ರಲ್ಲಿ ಹೈದರಾಬಾದ್‌ನ ಹೋಟೆಲ್ ಪಾರ್ಕ್ ಹಯಾತ್‌ನಲ್ಲಿ ಸಜ್ಜಲ ಶ್ರೀಧರ್ ರೆಡ್ಡಿ (ಆರನೇ ಆರೋಪಿ) ಅವರು ನಡೆಸಿದ ಸಭೆಯನ್ನು ಆರೋಪಪಟ್ಟಿ ಉಲ್ಲೇಖಿಸಿದೆ. ಈ ಸಭೆಯಲ್ಲಿ ಡಿಸ್ಟಿಲರಿ ಮಾಲೀಕರಿಗೆ ಮ್ಯಾನುಅಲ್ ಒಎಫ್‌ಎಸ್ ವ್ಯವಸ್ಥೆಯೊಂದಿಗೆ ಸಹಕರಿಸಲು ಸೂಚಿಸಲಾಗಿತ್ತು ಎಂದಿದೆ.

ಮೂಲ ಬೆಲೆಯ ಮೇಲೆ ಶೇ. 12 ರಷ್ಟು ಕಿಕ್‌ಬ್ಯಾಕ್‌ ಪಡೆಯಲು ಪ್ರಾರಂಭಿಸಲಾಗಿತ್ತು. ನಂತರ ಅದನ್ನು ಶೇ. 20 ಕ್ಕೆ ಹೆಚ್ಚಿಸಲಾಗಿತ್ತು ಎಂದು ಪೊಲೀಸರು ಆರೋಪಿಸಿದ್ದಾರೆ.

ಈ ನಡುವೆ ಹಲವಾರು ವೈಎಸ್‌ಆರ್‌ಸಿಪಿ ನಾಯಕರು ಮಿಧುನ್ ರೆಡ್ಡಿ ಬಂಧನವನ್ನು ಖಂಡಿಸಿದ್ದು, ಇದು ರಾಜಕೀಯ ಪ್ರೇರಿತ ಎಂದಿದ್ದಾರೆ.

ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಪ್ರತಿಪಕ್ಷ ನಾಯಕರನ್ನು ಗುರಿಯಾಗಿಸಲು ಆಡಳಿತ ಯಂತ್ರವನ್ನು ಬಳಸುತ್ತಿದ್ದಾರೆ ಎಂದು ಮಾಜಿ ಸಚಿವರಾದ ಬೊಚ್ಚಾ ಸತ್ಯನಾರಾಯಣ, ಪೆರ್ಣಿ ವೆಂಕಟರಾಮಯ್ಯ (ನಾನಿ), ಅಂಬಟಿ ರಾಂಬಾಬು, ಮೇರುಗು ನಾಗಾರ್ಜುನ ಮತ್ತು ವೈಎಸ್‌ಆರ್‌ಸಿಪಿ ಪಕ್ಷದ ಪ್ರಧಾನ ಕಾರ್ಯದರ್ಶಿ ಜಿ ಶ್ರೀಕಾಂತ್ ರೆಡ್ಡಿ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

ಕಲ್ಪಿತ ನರೇಟಿವ್ -ಜಗನ್ ಮೋಹನ್ ರೆಡ್ಡಿ

ಮದ್ಯ ಹಗರಣದ ಆರೋಪಟ್ಟಿಯಲ್ಲಿ ತಮ್ಮ ಹೆಸರು ಉಲ್ಲೇಖಿಸಿರುವ ಬಗ್ಗೆ ಮತ್ತು ಸಂಸದ ಮಿಧುನ್ ಬಂಧನ ಕುರಿತು ಭಾನುವಾರ ಪ್ರತಿಕ್ರಿಯೆ ನೀಡಿರುವ ಜಗನ್ ಮೋಹನ್ ರೆಡ್ಡಿ, “ಇದನ್ನು ಮಾಧ್ಯಮಗಳ ಮುಂದೆ ನಾಟಕವಾಡಲು ಮಾತ್ರ ಸೃಷ್ಟಿಸಲಾಗಿದೆ. ಇದೊಂದು ಕಲ್ಪಿತ ನರೇಟಿವ್ ಎಂದಿದ್ದಾರೆ.

ವಿಜಯವಾಡದ ಸ್ಥಳೀಯ ನ್ಯಾಯಾಲಯವು ಸಂಸದ ಪಿವಿ ಮಿಧುನ್ ರೆಡ್ಡಿ ಅವರನ್ನು ಆಗಸ್ಟ್ 1 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಈ ಬೆನ್ನಲ್ಲೇ ಜಗನ್ ಮೋಹನ್ ರೆಡ್ಡಿ ಹೇಳಿಕೆ ನೀಡಿದ್ದಾರೆ.

ಸೌಜನ್ಯ : hindustantimes.com

ಕೇರಳದಲ್ಲಿ ಮುಸ್ಲಿಂ ಪ್ರಾಬಲ್ಯ, ಸಿಎಂ ಹುದ್ದೆಗೆ IUML ಬೇಡಿಕೆ: ವೆಳ್ಳಾಪಳ್ಳಿ ನಟೇಶನ್‌ರಿಂದ ದ್ವೇಷ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...