Homeಮುಖಪುಟನ್ಯಾ. ಯಶವಂತ್‌ ವರ್ಮಾ ಪದಚ್ಯುತಿಗೆ 100ಕ್ಕೂ ಹೆಚ್ಚು ಸಂಸದರಿಂದ ಸಹಿ: ಸಚಿವ ಕಿರಣ್ ರಿಜಿಜು

ನ್ಯಾ. ಯಶವಂತ್‌ ವರ್ಮಾ ಪದಚ್ಯುತಿಗೆ 100ಕ್ಕೂ ಹೆಚ್ಚು ಸಂಸದರಿಂದ ಸಹಿ: ಸಚಿವ ಕಿರಣ್ ರಿಜಿಜು

- Advertisement -
- Advertisement -

ಮನೆಯಲ್ಲಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಪದಚ್ಯುತಗೊಳಿಸುವ ಕ್ರಮದ ಬಗ್ಗೆ ಯಾವುದೇ ಸಂದೇಹವಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಭಾನುವಾರ ಹೇಳಿದ್ದಾರೆ.

ವರ್ಮಾ ಅವರನ್ನು ಪದಚ್ಯುತಗೊಳಿಸಲು ಸಂಸತ್ತಿನಲ್ಲಿ ನಿರ್ಣಯ ಮಂಡಿಸುವ ನೋಟಿಸ್‌ಗೆ 100ಕ್ಕೂ ಹೆಚ್ಚು ಸಂಸದರು ಈಗಾಗಲೇ ಸಹಿ ಹಾಕಿದ್ದಾರೆ. ಈ ಮೂಲಕ ಲೋಕಸಭೆಯಲ್ಲಿ ನಿರ್ಣಯ ಮಂಡಿಸಲು ಅಗತ್ಯವಿರುವ ಬೆಂಬಲದ ಮಿತಿಯನ್ನು ನಾವು ಮೀರಿದ್ದೇವೆ ಎಂದಿದ್ದಾರೆ.

ಸರ್ವಪಕ್ಷ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಿರಣ್ ರಿಜಿಜು, ” ಪದಚ್ಯುತಿಗೊಳಿಸುವ ನಿರ್ಣಯ ಮಂಡಿಸಲು ಬೇಕಾದ ಸಹಿ ಈಗಾಗಲೇ 100 ದಾಟಿದೆ. ಯಾವಾಗ ನಿರ್ಣಯ ಮಂಡಿಸಬೇಕು ಎಂಬುವುದನ್ನು ಸದನಗಳ ವ್ಯವಹಾರ ಸಲಹಾ ಸಮಿತಿಯು ನಿರ್ಧರಿಸಲಿದೆ” ಎಂದು ಹೇಳಿದ್ದಾರೆ.

ನ್ಯಾಯಾಧೀಶರ ಪದಚ್ಯುತಿಗೆ ಲೋಕಸಭೆಯ ಕನಿಷ್ಠ 100 ಸಂಸದರು ಮತ್ತು ರಾಜ್ಯಸಭೆಯ ಕನಿಷ್ಠ 50 ಸಂಸದರು ಸಹಿ ಹಾಕಬೇಕು. ಲೋಕಸಭೆಯ 100 ಸದಸ್ಯರು ಈಗಾಗಲೇ ಸಹಿ ಹಾಕಿರುವ ಹಿನ್ನೆಲೆ, ಮಳೆಗಾಲದ ಅಧಿವೇಶನದಲ್ಲಿ ನಿರ್ಣಯ ಮಂಡಿಸುವುದು ಬಹುತೇಕ ಖಚಿತವಾಗಿದೆ.

ಸೋಮವಾರದಿಂದ ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭವಾಗಲಿದ್ದು, ಪದಚ್ಯುತಿ ನಿರ್ಣಯ ಮಂಡಿಸುವುದಾಗಿ ಸರ್ಕಾರ ಕೂಡ ಈಗಾಗಲೇ ಸ್ಪಷ್ಟಪಡಿಸಿದೆ. ಅಲ್ಲದೆ, ಎಲ್ಲಾ ಪಕ್ಷಗಳಿಂದಲೂ ನ್ಯಾಯಾಧೀಶರ ಪದಚ್ಯುತಿಗೆ ಬೆಂಬಲ ವ್ಯಕ್ತವಾಗುತ್ತಿದೆ.

ನ್ಯಾಯಮೂರ್ತಿ ವರ್ಮಾ ಅವರ ಮನೆಯಲ್ಲಿ ಹಣ ಸಿಕ್ಕಿರುವುದನ್ನು ಸುಪ್ರೀಂ ಕೋರ್ಟ್‌ನ ಆಂತರಿಕ ಸಮಿತಿ ಕೂಡ ಈಗಾಗಲೇ ದೃಢಪಡಿಸಿದೆ. ಇದರ ವಿರುದ್ದ ವರ್ಮಾ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣದ ಹಿನ್ನೆಲೆ:

ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ದೆಹಲಿ ಹೈಕೋರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಅವರು ಉಳಿದುಕೊಂಡಿದ್ದ ದೆಹಲಿಯ ಮನೆಯಲ್ಲಿ 2025 ಮಾರ್ಚ್ 14ರ ಸಂಜೆ ಬೆಂಕಿ ಅವಘಡ ಸಂಭವಿಸಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಾಗ ಮನೆಯಲ್ಲಿ ಸುಟ್ಟ ನೋಟಿನ ಕಂತೆಗಳು ಪತ್ತೆಯಾಗಿತ್ತು ಎನ್ನಲಾಗಿದೆ. ಈ ವಿಚಾರ ದೇಶದಾದ್ಯಂತ ಸಂಚಲನ ಸೃಷ್ಟಿಸಿತ್ತು. ಆದರೆ, ಮನೆಯಲ್ಲಿ ಹಣ ಪತ್ತೆಯಾಗಿರುವ ಆರೋಪವನ್ನು ನಿರಾಕರಿಸಿದ್ದ ನ್ಯಾ. ವರ್ಮಾ, “ಇದು ನನ್ನನ್ನು ಸಿಲುಕಿಸಲು ನಡೆದಿರುವ ಪಿತೂರಿ” ಎಂದಿದ್ದರು.

ಘಟನೆಯ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ ಕೊಲಿಜಿಯಂ ನ್ಯಾ. ವರ್ಮಾ ಅವರನ್ನು ಅಲಾಹಾಬಾದ್‌ ಹೈಕೋರ್ಟ್‌ಗೆ ವರ್ಗಾವಣೆ ಮಾಡಿತ್ತು. ವರ್ಗಾವಣೆಯಾದರೂ ಅವರಿಗೆ ಯಾವುದೇ ಕೆಲಸ ವಹಿಸದಂತೆ ಸುಪ್ರೀಂ ಕೋರ್ಟ್‌ ನಿರ್ದೇಶಿಸಿತ್ತು. ಆದರೆ, ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲು ನಿರಾಕರಿಸಿತ್ತು. ಮತ್ತೊಂದೆಡೆ ತನಿಖೆಗೆ ಸಿಜೆಐ ಆಂತರಿಕ ಸಮಿತಿ ರಚಿಸಿದ್ದರು.

ನ್ಯಾ. ವರ್ಮಾ ಮನೆಯಲ್ಲಿ ಹಣ ಪತ್ತೆಯಾದ ಬಳಿಕ ನ್ಯಾಯಾಂಗದ ಪಾರದರ್ಶಕತೆಯ ಬಗ್ಗೆ ದೇಶದಲ್ಲಿ ಚರ್ಚೆಯಾಗಿತ್ತು. ಇದನ್ನು ಸುಪ್ರೀಂ ಕೋರ್ಟ್‌ ಗಂಭೀರವಾಗಿ ಪರಿಗಣಿಸಿತ್ತು. ಏಪ್ರಿಲ್ 1ರಂದು ನಡೆದ ಪೂರ್ಣ ನ್ಯಾಯಾಲಯದ ಸಭೆಯಲ್ಲಿ, ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಮುಖ್ಯ ನ್ಯಾಯಮೂರ್ತಿ ಮುಂದೆ ಬಹಿರಂಗಪಡಿಸಲು ನಿರ್ಧರಿಸಿದ್ದರು. ಅದರಂತೆ, ಸಿಜೆಐ ಸೇರಿದಂತೆ ಸುಪ್ರೀಂ ಕೋರ್ಟ್‌ನ 21 ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಿದ್ದಾರೆ.

ಸುಪ್ರೀಂ ಕೋರ್ಟ್ ನಿಯೋಜಿಸಿದ್ದ ಆಂತರಿಕ ಸಮಿತಿಯು ಮಾರ್ಚ್ 25ರಂದು ತನಿಖೆ ಆರಂಭಿಸಿ, ಮೇ 3ರಂದು ತನ್ನ ವರದಿಯನ್ನು ಅಂತಿಮಗೊಳಿಸಿತ್ತು. ಅದನ್ನು ಮೇ4 ರಂದು ಸಿಜೆಐಗೆ ಸಲ್ಲಿಸಿದೆ. ವರದಿಯಲ್ಲಿ ನ್ಯಾ. ವರ್ಮಾ ಮನೆಯಲ್ಲಿ ಹಣ ಪತ್ತೆಯಾಗಿರುವ ಆರೋಪ ನಿಜ ಎಂದು ಸಮಿತಿ ದೃಢಪಡಿಸಿದೆ.

ಆಂಧ್ರ ಪ್ರದೇಶ ಮದ್ಯ ಹಗರಣ: ಆರೋಪಪಟ್ಟಿಯಲ್ಲಿ ಮಾಜಿ ಸಿಎಂ ಜಗನ್‌ ಹೆಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...