Homeಮುಖಪುಟ2006ರ ಮುಂಬೈ ರೈಲು ಸ್ಫೋಟ ಪ್ರಕರಣ: ಎಲ್ಲಾ 12 ಆರೋಪಿಗಳನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್

2006ರ ಮುಂಬೈ ರೈಲು ಸ್ಫೋಟ ಪ್ರಕರಣ: ಎಲ್ಲಾ 12 ಆರೋಪಿಗಳನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್

- Advertisement -
- Advertisement -

ಮುಂಬೈನಲ್ಲಿ 2006ರಲ್ಲಿ ನಡೆದ ರೈಲು ಸ್ಫೋಟ ಪ್ರಕರಣದ 12 ಜನರ ಅಪರಾಧಿಗಳ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಸೋಮವಾರ ರದ್ದು ಮಾಡಿದ್ದು, ಅವರನ್ನು ಖುಲಾಸೆಗೊಳಿಸಿದೆ. ಪ್ರಕರಣವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ‘ಸಂಪೂರ್ಣವಾಗಿ ವಿಫಲವಾಗಿದೆ’ ಎಂದು ಕೋರ್ಟ್ ಹೇಳಿದೆ.

ಮುಂಬೈ ನಗರದ ಪಶ್ಚಿಮ ರೈಲ್ವೆ ವಿಭಾಗವನ್ನು ನಡುಗಿಸಿದ್ದ ಈ ಘಟನೆಯಲ್ಲಿ 189 ಮಂದಿ ಪ್ರಾಣ ಕಳೆದುಕೊಂಡಿದ್ದರು. 820 ಜನರು ಗಾಯಗೊಂಡಿದ್ದರು. ಇದೀಗ ಘಟನೆ ನಡೆದು 19 ವರ್ಷಗಳ ನಂತರ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ.

ನ್ಯಾಯಮೂರ್ತಿಗಳಾದ ಅನಿಲ್ ಕಿಲೋರ್ ಮತ್ತು ಶ್ಯಾಮ್ ಚಂದಕ್ ಅವರ ವಿಶೇಷ ಪೀಠವು, ಪ್ರಾಸಿಕ್ಯೂಷನ್ ಪ್ರಸ್ತುತಪಡಿಸಿರುವ ಸಾಕ್ಷ್ಯಗಳು ಆರೋಪಿಗಳನ್ನು ಶಿಕ್ಷೆಗೆ ಗುರಿಪಡಿಸಲು ನಿರ್ಣಾಯಕವಾಗಿಲ್ಲ ಎಂದು ಹೇಳಿದೆ.

“ಆರೋಪಿಗಳ ವಿರುದ್ಧದ ಪ್ರಕರಣವನ್ನು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ಸಂಪೂರ್ಣವಾಗಿ ವಿಫಲವಾಗಿದೆ. ಅವರು ಅಪರಾಧ ಮಾಡಿದ್ದಾರೆ ಎಂದು ನಂಬುವುದು ಕಷ್ಟ. ಆದ್ದರಿಂದ ಅವರ ಮೇಲಿನ ಅಪರಾಧವನ್ನು ರದ್ದುಗೊಳಿಸಲಾಗಿದೆ” ಎಂದು ಹೈಕೋರ್ಟ್ ಹೇಳಿದೆ.

ಐವರು ಅಪರಾಧಿಗಳಿಗೆ ವಿಧಿಸಲಾಗಿದ್ದ ಮರಣದಂಡನೆ ಮತ್ತು ಉಳಿದ ಏಳು ಜನರಿಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ರದ್ದುಪಡಿಸಿರುವ ನ್ಯಾಯಾಲಯ ಎಲ್ಲರನ್ನೂ ಖುಲಾಸೆಗೊಳಿಸಿದೆ.

ಬೇರೆ ಯಾವುದೇ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸದಿದ್ದರೆ, ತಕ್ಷಣ ಜೈಲಿನಿಂದ ಬಿಡುಗಡೆ ಮಾಡಬೇಕೆಂದು ನ್ಯಾಯಾಲಯ ಸೂಚಿಸಿದೆ.

2015ರಲ್ಲಿ ವಿಶೇಷ ನ್ಯಾಯಾಲಯವು ಈ ಪ್ರಕರಣದ 12 ಆರೋಪಿಗಳನ್ನು ದೋಷಿಗಳೆಂದು ಘೋಷಿಸಿತ್ತು. ಅವರಲ್ಲಿ ಐವರಿಗೆ ಮರಣದಂಡನೆ ಮತ್ತು ಉಳಿದ ಏಳು ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಸೋಮವಾರ ಹೈಕೋರ್ಟ್ ತೀರ್ಪು ಪ್ರಕಟವಾದ ನಂತರ, ರಾಜ್ಯದಾದ್ಯಂತದ ವಿವಿಧ ಜೈಲುಗಳಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಅವರು ತಮ್ಮ ವಕೀಲರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಜುಲೈ 11, 2006ರಂದು ಮುಂಬೈನ ಪಶ್ಚಿಮ ಮಾರ್ಗದ ವಿವಿಧ ಸ್ಥಳಗಳಲ್ಲಿ ಏಳು ಲೋಕಲ್ ರೈಲುಗಳಲ್ಲಿ ಬಾಂಬ್ ಸ್ಫೋಟಗಳು ಸಂಭವಿಸಿತ್ತು. ಘಟನೆಯಲ್ಲಿ 189 ಮಂದಿ ಸಾವನ್ನಪ್ಪಿದ್ದರು ಮತ್ತು 820 ಜನರು ಗಾಯಗೊಂಡಿದ್ದರು.

ಗಮನಾರ್ಹವಾಗಿ, ಮಹಾರಾಷ್ಟ್ರ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (MCOCA) ಅಡಿಯಲ್ಲಿ ಪ್ರಕರಣದ ವಿಚಾರಣೆಗೆ ಗೊತ್ತುಪಡಿಸಿದ್ದ ವಿಶೇಷ ನ್ಯಾಯಾಲಯವು ಸೆಪ್ಟೆಂಬರ್ 2015ರಲ್ಲಿ ಪ್ರಕರಣದ ತೀರ್ಪು ಪ್ರಕಟಿಸಿತ್ತು.

ಆರೋಪಿಗಳಾದ ಕಮಲ್ ಅನ್ಸಾರಿ, ಮೊಹಮ್ಮದ್ ಫೈಸಲ್ ಅತೌರ್ ರೆಹಮಾನ್ ಶೇಖ್, ಎಹ್ತೆಶಾಮ್ ಕುತುಬುದ್ದೀನ್ ಸಿದ್ದಿಕಿ, ನವೀದ್ ಹುಸೇನ್ ಖಾನ್ ಮತ್ತು ಆಸಿಫ್ ಖಾನ್ ಅವರಿಗೆ ಮರಣದಂಡನೆ ವಿಧಿಸಲಾಗಿದ್ದರೆ, ಇತರ ಆರೋಪಿಗಳಾದ ತನ್ವೀರ್ ಅಹಮ್ಮದ್ ಇಬ್ರಾಹಿಂ ಅನ್ಸಾರಿ, ಮೊಹಮ್ಮದ್ ಮಜೀದ್ ಮೊಹಮ್ಮದ್ ಶಫಿ, ಶೇಖ್ ಮೊಹಮ್ಮದ್ ಅಲಿ ಆಲಂ ಶೇಖ್, ಮೊಹಮ್ಮದ್ ಸಾಜಿದ್ ಮಾರ್ಗುಬ್ ಅನ್ಸಾರಿ, ಮುಜಮ್ಮಿಲ್ ಅತೌರ್ ರೆಹಮಾನ್ ಶೇಖ್, ಸುಹೈಲ್ ಮೆಹಮೂದ್ ಶೇಖ್ ಮತ್ತು ಜಮೀರ್ ಅಹ್ಮದ್ ಲತಿಯುರ್ ರೆಹಮಾನ್ ಶೇಖ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಮತ್ತೊಬ್ಬ ಆರೋಪಿ ವಾಹಿದ್ ಶೇಖ್ ಒಂಬತ್ತು ವರ್ಷಗಳ ಜೈಲುವಾಸದ ನಂತರ ವಿಚಾರಣಾ ನ್ಯಾಯಾಲಯವು ಅವರನ್ನು ಖುಲಾಸೆಗೊಳಿಸಿತ್ತು.

ವಿಶೇಷ ನ್ಯಾಯಾಲಯದ ಆದೇಶದ ಬಳಿಕ ರಾಜ್ಯ ಸರ್ಕಾರ ಮತ್ತು ಅಪರಾಧಿಗಳು ಸಲ್ಲಿಸಿದ ಮೇಲ್ಮನವಿಗಳು 2015 ರಿಂದ ಹೈಕೋರ್ಟ್‌ನಲ್ಲಿ ಇತ್ಯರ್ಥಕ್ಕೆ ಬಾಕಿ ಇತ್ತು. ಕೆಲ ಅಪರಾಧಿಗಳು ಪ್ರಕರಣವನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಒತ್ತಾಯಿಸಿದ ನಂತರ, ಅಂತಿಮವಾಗಿ ಜುಲೈ 2024ರಲ್ಲಿ ನ್ಯಾಯಮೂರ್ತಿಗಳಾದ ಕಿಲೋರ್ ಮತ್ತು ಚಂದಕ್ ಅವರನ್ನೊಳಗೊಂಡ ವಿಶೇಷ ಪೀಠವನ್ನು ರಚಿಸಲಾಗಿತ್ತು.

ನ್ಯಾ. ಯಶವಂತ್‌ ವರ್ಮಾ ಪದಚ್ಯುತಿಗೆ 100ಕ್ಕೂ ಹೆಚ್ಚು ಸಂಸದರಿಂದ ಸಹಿ: ಸಚಿವ ಕಿರಣ್ ರಿಜಿಜು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಕೇಂದ್ರದಿಂದ ಬೆಂಬಲ, ಭರವಸೆ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ನವದೆಹಲಿ: ರಾಜ್ಯದಿಂದ ಕಾರ್ಯಸಾಧ್ಯತಾ ವರದಿ ಬಂದ ನಂತರ, ಬೆಂಗಳೂರಿನ ಎರಡನೇ ವಿಮಾನ ನಿಲ್ದಾಣಕ್ಕೆ ಅಗತ್ಯವಿರುವ ಎಲ್ಲಾ ಅನುಮತಿಗಳನ್ನು ಕೇಂದ್ರವು ನೀಡಲಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು...

ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ

ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ದಲಿತ ಕುಟುಂಬವೊಂದರ ಮೇಲೆ ಗ್ರಾಮದ ಪ್ರಬಲಜಾತಿ ಗುಂಪೊಂದು ಜಾತಿ ಆಧಾರಿತ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. ದೂರ ನೀಡಿದರೂ ಕ್ರಮ ತಗೆದುಕೊಂಡಿದ್ದ ಎಂದು ಆರೋಪಿಸಿರುವ ಕುಟುಂಬ, ಪೊಲೀಸರು ನಿಷ್ಕ್ರಿಯತೆ...

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...