Homeಕರ್ನಾಟಕಧರ್ಮಸ್ಥಳ ಪ್ರಕರಣ: Fast Track ಕೋರ್ಟ್ ರಚಿಸಬೇಕು- ಸಿ.ಎಸ್ ದ್ವಾರಕಾನಾಥ್

ಧರ್ಮಸ್ಥಳ ಪ್ರಕರಣ: Fast Track ಕೋರ್ಟ್ ರಚಿಸಬೇಕು- ಸಿ.ಎಸ್ ದ್ವಾರಕಾನಾಥ್

- Advertisement -
- Advertisement -

ಬೆಂಗಳೂರು: ಧರ್ಮಸ್ಥಳದ ಸಾಮೂಹಿಕ ಅತ್ಯಾಚಾರ, ಕೊಲೆಗಳು ಮತ್ತು ನೂರಾರು ಹೆಣಗಳನ್ನು ಹೂತ ಪ್ರಕರಣವನ್ನು ತನಿಖೆ ಮಾಡಲು ರಾಜ್ಯ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು SIT ನೇಮಕ ಮಾಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸುತ್ತೇವೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ವಿಚಾರಣೆಗಾಗಿ ರೆಗ್ಯುಲರ್ ನ್ಯಾಯಾಲಯದ ಬದಲು ‘ವಿಶೇಷ ಫಾಸ್ಟ್ ಟ್ರಾಕ್ ನ್ಯಾಯಾಲಯ’ವನ್ನು ರಚಿಸಲು ಸರಕಾರವನ್ನು ಒತ್ತಾಯಿಸಬೇಕಾಗಿದೆ ಎಂದು  ಹಿರಿಯ ವಕೀಲ ಸಿ.ಎಸ್.ದ್ವಾರಕಾನಾಥ್ ಅವರು ತಿಳಿಸಿದ್ದಾರೆ.

SIT ನೇಮಕ ಸಂಬಂಧ ಅನೇಕ ಜನಪರ ವ್ಯಕ್ತಿಗಳು, ಸಂಘಟನೆಗಳು ಮತ್ತು ಯೂಟ್ಯೂಬ್‌ ಚಾನೆಲ್‌ಗಳು  ಸರ್ಕಾರಕ್ಕೆ ನಿರಂತರವಾಗಿ ತಾಕೀತು ಮಾಡುತ್ತಲೇ ಬಂದಿದ್ದಾರೆ. ಸಮೀರ್ ಎಂ.ಡಿ., ಈದಿನ ಯೂಟ್ಯೂಬ್‌ ಚಾನೆಲ್ ನಿಂದ ಹಿಡಿದು ಗಿರೀಶ್ ಮಟ್ಟಣ್ಣನವರ್, ಡಿಟಾಕ್ ನ ದಿನೇಶ್ ಕುಮಾರ್, ಹರ್ಷಕುಮಾರ್ ಕುಗ್ವೆ , ಥರ್ಡ್ ಐ, ಲಾಯರ್ ಜಗದೀಶ್, ಬಾಲನ್, ನವೀನ್ ಸೂರಿಂಜೆ, ನ್ಯಾಯಮೂರ್ತಿ ಗೋಪಾಲಗೌಡರು, ರವಿಕೃಷ್ಣಾರೆಡ್ಡಿ, ನಟ ಚೇತನ್, ನಟ ಪ್ರಕಾಶ್ ರಾಜ್, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಮುಂತಾಗಿ ಇನ್ನೂ ಅನೇಕ, ನಾನು ಮರೆತಿರಬಹುದಾದ ನಾಮಧೇಯರು ಮತ್ತು ಅನಾಮಧೇಯರು ಸರ್ಕಾರದ ಮೇಲೆ ಒತ್ತಡ ಹಾಕಿದ್ದಾರೆ ಎಂದು ಅವರು ಹೇಳಿದರು.

ದಿನೇದಿನೇ ಈ ಪ್ರಕರಣವು ಪಕ್ಕದ ರಾಜ್ಯಗಳಾದ ಕೇರಳ, ತಮಿಳುನಾಡಿಗೆ ಹರಡಿದ್ದು, ಅಲ್ಲಿನ ಮಾಧ್ಯಮಗಳೂ ವರದಿ ಮಾಡಲಾರಂಭಿಸಿವೆ. ರಾಷ್ಟ್ರೀಯ ಸುದ್ದಿ ಚಾನಲ್ ಗಳು ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಸಾರ್ವಜನಿಕರೂ ಈ ಪ್ರಕರಣದ ಬಗ್ಗೆ ಹಾದಿಬೀದಿಯಲ್ಲಿ ಮಾತಾಡಲು ಆರಂಭಿಸಿದ್ದೇ ಮುಂತಾಗಿ ಅನೇಕ ನೇರ ಮತ್ತು ಪರೋಕ್ಷ ಒತ್ತಡಗಳೂ ಕೂಡ SIT ಮಾಡಲು ಕಾರಣಗಳಾಗಿವೆ ಎಂದು ಅವರು ತಿಳಿಸಿದರು.

ಈ ಮಧ್ಯೆ ನಮ್ಮ ವಕೀಲರ ನಿಯೋಗ ಮುಖ್ಯಮಂತ್ರಿ ಗಳನ್ನು ಭೇಟಿಯಾಗಿ SIT ಮಾಡಬೇಕೆಂಬ ವಿನಂತಿಯ ಜತೆಗೆ ಕೆಲವು ಮುಖ್ಯ ಸೂಚನೆಗಳನ್ನು ನಮ್ಮ ಪತ್ರದಲ್ಲಿ ನಮ್ರವಾಗಿ ನೀಡಿದ್ದೆವು. ಅದರಲ್ಲಿ SIT ತನಿಖೆಯನ್ನು ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನ್ಯಾಯಮೂರ್ತಿಗಳ ಮೇಲುಸ್ತುವಾರಿಯಲ್ಲಿ ನಡೆಸಬೇಕು, ಶವಗಳನ್ನು ಹೊರ ತೆಗೆಯುವಾಗ(exhume) ಇಡೀ ಪ್ರಕ್ರಿಯೆಯನ್ನು ವಿಡಿಯೋಗ್ರಾಫ್ ಮಾಡಬೇಕು, ಕಡ್ಡಾಯವಾಗಿ FSL(forensic science) ತಜ್ಞರು ಇರಬೇಕು, ಮತ್ತು ನುರಿತ ಪ್ರಾಸಿಕ್ಯೂಟರ್ ಒಬ್ಬರನ್ನು ಸಹಾಯಕರಾಗಿ ನೇಮಿಸಿಕೊಳ್ಳಬೇಕು ಎಂದು ವಿನಂತಿಸಿದ್ದೆವು. ಇದು ಅತ್ಯಂತ ಸೂಕ್ಷ್ಮ ಮತ್ತು ಪ್ರಭಾವಿಗಳಂತವರು ಒಳಗೊಂಡಿರಬಹುದಾದ ಪ್ರಕರಣ ಆಗಿರುವುದರಿಂದ ಇಷ್ಟೆಲ್ಲಾ ಕಾನೂನಾತ್ಮಕ ಮುನ್ನೆಚ್ಚರಿಕೆಗಳು ಅವಶ್ಯಕ ಎಂದಿದ್ದಾರೆ.

ಗೌರಿ ಲಂಕೇಶ್ ಹತ್ಯೆಯಾಗಿ ಹಲವು ವರ್ಷಗಳೇ ಕಳೆದರೂ ಅದರ ವಿಚಾರಣೆ ಇನ್ನೂ ಮುಗಿದಿಲ್ಲ, ಆರೋಪಿಗಳು ಜಾಮೀನು ಪಡೆದು ರಾಜಾರೋಷವಾಗಿ ಓಡಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಧರ್ಮಸ್ಥಳ ಪ್ರಕರಣವನ್ನು ಗಮನಿಸಿದಾಗ ಇದು ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲೂ ಗಮನ ಸೆಳೆದ ವಿಶೇಷ ಪ್ರಕರಣವಾಗಿದೆ. ಇಲ್ಲಿನ ಅತ್ಯಾಚಾರ ಮತ್ತು ಕೊಲೆಗಳ ಸಂಖ್ಯೆ ನೂರಾರು ಇರುವುದರಿಂದ ಈ ಪ್ರಕರಣವನ್ನು ರೆಗ್ಯುಲರ್ ಕೋರ್ಟುಗಳಲ್ಲಿ ನಡೆಸಲು ಸಾಧ್ಯವೇ ಇಲ್ಲ. ನೂರು ವರ್ಷಗಳಾದರೂ ನಮ್ಮ ರೆಗ್ಯುಲರ್ ಕೋರ್ಟುಗಳಲ್ಲಿ ಈ ಪ್ರಕರಣ ಅಂತ್ಯ ಕಾಣಲಾರದು! ಹೀಗಾಗಿ ಈ ಪ್ರಕರಣಕ್ಕೆಂದೇ “ವಿಶೇಷ ಫಾಸ್ಟ್ ಟ್ರಾಕ್ ಕೋರ್ಟ”ನ್ನು ನೇಮಿಸಬೇಕೆಂಬುದನ್ನೂ ಸರ್ಕಾರದ ಗಮನಕ್ಕೆ ನಾವೆಲ್ಲ ತರಬೇಕಿದೆ ಎಂದು ಆಗ್ರಹಿಸಿದ್ದಾರೆ.

SIT ನೇಮಕ ಮಾಡಿರುವುದು ಸ್ವಾಗತಾರ್ಹ. ಆದರೆ ಇದಷ್ಟೇ ಅಂತ್ಯವಲ್ಲ, ಇದು ಆರಂಭ ಮಾತ್ರ ಎಂದು ಕೂಡ ಅವರು ತಿಳಿಸಿದ್ದಾರೆ.

ಧರ್ಮಸ್ಥಳ ಪ್ರಕರಣ: ತನಿಖೆಗೆ ಎಸ್‌ಐಟಿ ರಚಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...