Homeಮುಖಪುಟ'ಕಣ್ಣ ಮುಂದೆ ಕಾಣುತ್ತಿರುವುದಕ್ಕಿಂತ ಹೆಚ್ಚಾಗಿ ಏನೋ ಇದೆ: ಉಪ ರಾಷ್ಟ್ರಪತಿ ರಾಜೀನಾಮೆ ಬಗ್ಗೆ ಪ್ರಶ್ನೆ ಎತ್ತಿದ...

‘ಕಣ್ಣ ಮುಂದೆ ಕಾಣುತ್ತಿರುವುದಕ್ಕಿಂತ ಹೆಚ್ಚಾಗಿ ಏನೋ ಇದೆ: ಉಪ ರಾಷ್ಟ್ರಪತಿ ರಾಜೀನಾಮೆ ಬಗ್ಗೆ ಪ್ರಶ್ನೆ ಎತ್ತಿದ ಜೈರಾಮ್ ರಮೇಶ್

- Advertisement -
- Advertisement -

ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರ ಹಠಾತ್ ರಾಜೀನಾಮೆ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಸೋಮವಾರ (ಜು.21) ಮಧ್ಯಾಹ್ನದವರೆಗೂ ರಾಜ್ಯಸಭೆಯ ಕಾರ್ಯಕಲಾಪಗಳಲ್ಲಿ ಪಾಲ್ಗೊಂಡಿದ್ದ ಅವರು ಸಂಜೆಯ ವೇಳೆ ರಾಜೀನಾಮೆ ನೀಡಿದ್ದು ಏಕೆ ಎಂಬ ಪ್ರಶ್ನೆ ಮೂಡಿದೆ.

ಧನಕರ್ ಅವರ ಹಠಾತ್ ರಾಜೀನಾಮೆ ಅಚ್ಚರಿ ತಂದಿದೆ ಎಂದಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಉಪ ರಾಷ್ಟ್ರಪತಿ ತನ್ನ ರಾಜೀನಾಮೆಗೆ ಆರೋಗ್ಯದ ಕಾರಣ ನೀಡಿದ್ದರೂ, ‘ಕಣ್ಣ ಮುಂದೆ ಕಾಣುತ್ತಿರುವುದಕ್ಕಿಂತ ಹೆಚ್ಚಾಗಿ ಏನೋ ಇದೆ’ ಎಂದಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್ ಹಾಕಿರುವ ಜೈರಾಮ್ ರಮೇಶ್ “ಇದು ಅಚ್ಚರಿದಾಯಕ ಮತ್ತು ವಿವರಿಸಲಾಗದ್ದು” ಎಂದಿದ್ದು, ಈ ಬೆಳವಣಿಗೆಯ ಹಠಾತ್ ಸ್ವರೂಪದ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.

“ನಾನು ಇಂದು ಸಂಜೆ 5 ಗಂಟೆಯ ಸುಮಾರಿಗೆ ಇತರ ಹಲವು ಸಂಸದರೊಂದಿಗೆ ಜಗದೀಪ್ ಧನಕರ್ ಅವರ ಜೊತೆಗಿದ್ದೆ. ಸಂಜೆ 7:30ಕ್ಕೆ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದೆ. ಆಗ ಅವರು ರಾಜೀನಾಮೆ ನೀಡುವ ಬಗ್ಗೆ ಯಾವುದೇ ಸೂಚನೆ ಇರಲಿಲ್ಲ” ಎಂದಿದ್ದಾರೆ.

“ಖಂಡಿತವಾಗಿಯೂ ಧನಕರ್ ಅವರು ತಮ್ಮ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಆದರೆ, ಸ್ಪಷ್ಟವಾಗಿ, ಅವರ ಅನಿರೀಕ್ಷಿತ ರಾಜೀನಾಮೆಯಲ್ಲಿ ಕಣ್ಣಿಗೆ ಕಾಣುತ್ತಿರುವುದಕ್ಕಿಂತ ಹೆಚ್ಚಾಗಿ ಏನೋ ಇದೆ. ಆದಾಗ್ಯೂ ಇದು ಊಹಾಪೋಹಗಳಿಗೆ ಸಮಯವಲ್ಲ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

ಉಪರಾಷ್ಟ್ರಪತಿ ಧನಕರ್ ಅವರು ಮಂಗಳವಾರ ಮಧ್ಯಾಹ್ನ 1 ಗಂಟೆಗೆ ರಾಜ್ಯಸಭೆಯ ವ್ಯವಹಾರ ಸಲಹಾ ಸಮಿತಿಯ ನಿರ್ಣಾಯಕ ಸಭೆಯನ್ನು ನಿಗದಿಪಡಿಸಿದ್ದರು ಮತ್ತು ನ್ಯಾಯಾಂಗಕ್ಕೆ ಸಂಬಂಧಿಸಿದ ಮಹತ್ವದ ಕ್ರಮಗಳನ್ನು ಘೋಷಿಸುವ ನಿರೀಕ್ಷೆಯಿತ್ತು. ಈ ನಡುವೆ ಅವರು ರಾಜೀನಾಮೆ ನೀಡಿರುವುದು ಗೊಂದಲಕ್ಕೆ ಕಾರಣವಾಗಿದೆ.

ಇಂದು ಮುಂಜಾನೆ, 63 ಸಂಸದರು ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಪದಚ್ಯುತಿಗೆ ನೋಟಿಸ್ ಸಲ್ಲಿಸಿದ್ದರು.

“ಧನಕರ್ ಅವರು ಸರ್ಕಾರ ಮತ್ತು ವಿರೋಧ ಪಕ್ಷಗಳೆರಡನ್ನೂ ಸಮಾನವಾಗಿ ತರಾಟೆಗೆ ತೆಗೆದುಕೊಳ್ಳುತ್ತಿದ್ದರು” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

“ನಾವು ಅವರಿಗೆ ಉತ್ತಮ ಆರೋಗ್ಯವನ್ನು ಬಯಸುತ್ತೇವೆ. ಆದರೆ, ಅವರ ನಿರ್ಧಾರವನ್ನು ಮರುಪರಿಶೀಲಿಸುವಂತೆಯೂ ವಿನಂತಿಸುತ್ತೇವೆ. ಪ್ರಧಾನ ಮಂತ್ರಿಗಳು ಧನಕರ್ ಅವರು ಮನಸ್ಸು ಬದಲಾಯಿಸುವಂತೆ ಮನವೊಲಿಸುತ್ತಾರೆಂದು ನಾವು ನಿರೀಕ್ಷಿಸುತ್ತೇವೆ. ಇದು ರಾಷ್ಟ್ರದ ಹಿತಾಸಕ್ತಿಗೆ, ವಿಶೇಷವಾಗಿ ರೈತ ಸಮುದಾಯಕ್ಕೆ ಇದರಿಂದ ಹೆಚ್ಚಿನ ಸಮಾಧಾನವಾಗುತ್ತದೆ” ಎಂದಿದ್ದಾರೆ.

74 ವರ್ಷದ ಧನಕರ್ ಅವರು ಆಗಸ್ಟ್ 2022ರಲ್ಲಿ ಉಪ ರಾಷ್ಟ್ರಪತಿಯಾಗಿ ಅಧಿಕಾರ ವಹಿಸಿಕೊಂಡವರು. ಅವರು 2027ರವರೆಗೆ ಈ ಹುದ್ದೆಯಲ್ಲಿ ಇರಬೇಕಿತ್ತು.

ಧನಕರ್ ಅವರು ಅಧಿಕಾರವಧಿ ಪೂರ್ಣಗೊಳಿಸುವ ಮುನ್ನ ಹುದ್ದೆಯಿಂದ ಕೆಳಗಿಳಿದ ಭಾರತದ ಆರನೇ ಉಪರಾಷ್ಟ್ರಪತಿಯಾಗಿದ್ದಾರೆ.

ವಿ.ವಿ. ಗಿರಿ, ಆರ್. ವೆಂಕಟರಾಮನ್, ಶಂಕರ್ ದಯಾಳ್ ಶರ್ಮಾ, ಕೆ.ಆರ್. ನಾರಾಯಣನ್ ಮತ್ತು ಭೈರೋನ್ ಸಿಂಗ್ ಶೇಖಾವತ್ ಅವರ ಹೆಜ್ಜೆಗಳನ್ನು ಧನಕರ್ ಅನುಸರಿಸಿದ್ದಾರೆ. ಮೊದಲ ನಾಲ್ವರು ಚುನಾವಣೆಯಲ್ಲಿ ಸ್ಪರ್ಧಿಸಲು ಮತ್ತು ನಂತರ ರಾಷ್ಟ್ರಪತಿ ಹುದ್ದೆಯನ್ನು ವಹಿಸಿಕೊಳ್ಳಲು ರಾಜೀನಾಮೆ ನೀಡಿದರೆ, 2007ರ ರಾಷ್ಟ್ರಪತಿ ಚುನಾವಣೆಯಲ್ಲಿ ಸೋತ ನಂತರ ಶೇಖಾವತ್ ರಾಜೀನಾಮೆ ನೀಡಿದ್ದರು.

ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ಮಧ್ಯಂತರ ರಾಜೀನಾಮೆ: ಮುಂದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...