Homeಮುಖಪುಟರಿಲಯನ್ಸ್ ಕಮ್ಯುನಿಕೇಷನ್ಸ್‌ , ಅನಿಲ್ ಅಂಬಾನಿಯನ್ನು 'ವಂಚನೆ' ಎಂದು ವರ್ಗೀಕರಿಸಿದ ಎಸ್‌ಬಿಐ: ಸಿಬಿಐಗೆ ದೂರು ನೀಡಲು...

ರಿಲಯನ್ಸ್ ಕಮ್ಯುನಿಕೇಷನ್ಸ್‌ , ಅನಿಲ್ ಅಂಬಾನಿಯನ್ನು ‘ವಂಚನೆ’ ಎಂದು ವರ್ಗೀಕರಿಸಿದ ಎಸ್‌ಬಿಐ: ಸಿಬಿಐಗೆ ದೂರು ನೀಡಲು ಸಿದ್ದತೆ

- Advertisement -
- Advertisement -

ರಿಲಯನ್ಸ್ ಕಮ್ಯುನಿಕೇಷನ್ಸ್ ಮತ್ತು ಅದರ ನಿರ್ದೇಶಕ ಅನಿಲ್ ಅಂಬಾನಿ ಅವರನ್ನು ‘ವಂಚನೆ’ ಎಂದು ವರ್ಗೀಕರಿಸಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ), ಈ ಕುರಿತು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ದೂರು ಸಲ್ಲಿಸಲು ಸಿದ್ಧತೆ ನಡೆಸುತ್ತಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಸೋಮವಾರ ಸಂಸತ್ತಿಗೆ ಮಾಹಿತಿ ನೀಡಿದ್ದಾರೆ.

ರಿಸರ್ವ್ ಬ್ಯಾಂಕ್‌ನ ವಂಚನೆ ಅಪಾಯ ನಿರ್ವಹಣೆಯ ಕುರಿತಾದ ನಿರ್ದೇಶನಗಳು ಮತ್ತು ವಂಚನೆಗಳ ವರ್ಗೀಕರಣ, ವರದಿ ಹಾಗೂ ನಿರ್ವಹಣೆಯ ಕುರಿತಾದ ನೀತಿಗೆ ಅನುಗುಣವಾಗಿ ರಿಲಯನ್ಸ್ ಕಮ್ಯುನಿಕೇಷನ್ಸ್ ಮತ್ತು ಅದರ ನಿರ್ದೇಶಕರನ್ನು ಜೂನ್ 13 ರಂದು ‘ವಂಚನೆ’ ಎಂದು ಎಸ್‌ಬಿಐ ವರ್ಗೀಕರಿಸಿದೆ. ಇದೀಗ ಸಿಬಿಐಗೆ ದೂರು ಸಲ್ಲಿಸಲು ಮುಂದಾಗಿದೆ ಎಂದು ಲೋಕಸಭೆಗೆ ನಿಡಿದ ಲಿಖಿತ ಉತ್ತರದಲ್ಲಿ ಪಂಕಜ್ ಚೌಧರಿ ತಿಳಿಸಿದ್ದಾರೆ.

ವಂಚನೆ ಎಂದು ವರ್ಗೀಕರಿಸಿರುವ ಕುರಿತು ಎಸ್‌ಬಿಐ ಜೂನ್ 24 ರಂದು ಆರ್‌ಬಿಐಗೆ ವರದಿ ಮಾಡಿದೆ. ಜುಲೈ 1 ರಂದು, ರಿಲಯನ್ಸ್ ಕಮ್ಯುನಿಕೇಷನ್ಸ್ ತನ್ನ ಬಹಿರಂಗಪಡಿಸುವಿಕೆಯ ಅನುಸರಣೆಯ ಭಾಗವಾಗಿ ವಂಚನೆ ವರ್ಗೀಕರಣದ ಬಗ್ಗೆ ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್‌ಗೆ ಮಾಹಿತಿ ನೀಡಿದೆ ಎಂದು ಸಚಿವ ಚೌಧರಿ ವಿವರಿಸಿದ್ದಾರೆ.

ರಿಲಯನ್ಸ್ ಕಮ್ಯುನಿಕೇಷನ್ಸ್‌ಗೆ ಎಸ್‌ಬಿಐ ನೀಡಿರುವ ಸಾಲದಲ್ಲಿ ಫಂಡ್-ಬೇಸ್ಡ್ ಪ್ರಿನ್ಸಿಪಲ್ ಬಾಕಿ 2,227.64 ಕೋಟಿ ರೂಪಾಯಿಗಳು. ಇದರ ಜೊತೆಗೆ, ಆಗಸ್ಟ್ 26, 2016 ರಿಂದ ಸಂಗ್ರಹವಾದ ಬಡ್ಡಿ ಮತ್ತು ಇತರ ವೆಚ್ಚಗಳು ಹಾಗೂ ನಾನ್-ಫಂಡ್ ಬೇಸ್ಡ್ ಬ್ಯಾಂಕ್ ಗ್ಯಾರಂಟಿ 786.52 ಕೋಟಿ ರೂಪಾಯಿ ಸೇರಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

2016ರ ದಿವಾಳಿತನ ಸಂಹಿತೆಯ ಅಡಿಯಲ್ಲಿ ಟೆಲಿಕಾಂ ಸಂಸ್ಥೆಯು ಕಾರ್ಪೊರೇಟ್ ದಿವಾಳಿತನ ಪರಿಹಾರ ಪ್ರಕ್ರಿಯೆಗೆ ಒಳಗಾಗುತ್ತಿದೆ ಎಂದು ತಿಳಿಸಿದ್ದಾರೆ.

ದಿವಾಳಿತನ ಪ್ರಕರಣಗಳನ್ನು ಪರಿಹರಿಸಲು ಮತ್ತು ನಿಷ್ಕ್ರಿಯ ಸ್ವತ್ತುಗಳನ್ನು ತ್ವರಿತವಾಗಿ ಬಿಡುಗಡೆ ಮಾಡಲು ಈ ಸಂಹಿತೆಯು ಕಾನೂನು ಚೌಕಟ್ಟನ್ನು ಒದಗಿಸುತ್ತದೆ.

ರಿಲಯನ್ಸ್ ಕಮ್ಯುನಿಕೇಷನ್ಸ್‌ಗೆ ಸಂಬಂಧಿಸಿದ ಸಾಲ ಪರಿಹಾರ ಯೋಜನೆಯನ್ನು (ರೆಸಲ್ಯೂಶನ್ ಪ್ಲಾನ್) ಕ್ರೆಡಿಟರ್‌ಗಳ ಸಮಿತಿಯು (ಕಮಿಟಿ ಆಫ್ ಕ್ರೆಡಿಟರ್ಸ್) ಅನುಮೋದಿಸಿದೆ ಎಂದು ಸಚಿವರು ತಿಳಿಸಿದ್ದು, ಈ ಯೋಜನೆಯನ್ನು ಮಾರ್ಚ್ 6, 2020 ರಂದು ಮುಂಬೈನ ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್‌ಗೆ (ಎನ್‌ಸಿಎಲ್‌ಟಿ) ಸಲ್ಲಿಕೆ ಮಾಡಲಾಗಿದೆ. ಆದರೆ, ಈ ಯೋಜನೆಗೆ ಟ್ರಿಬ್ಯೂನಲ್‌ನಿಂದ ಇನ್ನೂ ಅನುಮೋದನೆ ಬಾಕಿಯಿದೆ ಎಂದಿದ್ದಾರೆ.

ಎಸ್‌ಬಿಐ ಈ ಹಿಂದೆ, ಅಂದರೆ ನವೆಂಬರ್ 2020 ರಲ್ಲಿ ಖಾತೆ ಮತ್ತು ಅಂಬಾನಿಯನ್ನು ‘ವಂಚನೆ’ ಎಂದು ವರ್ಗೀಕರಿಸಿತ್ತು ಮತ್ತು ಜನವರಿ 2021ರಲ್ಲಿ ಸಿಬಿಐಗೆ ದೂರು ಸಲ್ಲಿಸಿತ್ತು. ಆದಾಗ್ಯೂ, ಜನವರಿ 6, 2021ರಂದು ದೆಹಲಿ ಹೈಕೋರ್ಟ್ ನೀಡಿದ ‘ಯಥಾಸ್ಥಿತಿ’ ಆದೇಶದ ಹಿನ್ನೆಲೆಯಲ್ಲಿ ದೂರನ್ನು ಹಿಂತಿರುಗಿಸಲಾಗಿದೆ ಎಂದು ಸಚಿವ ಚೌಧರಿ ಹೇಳಿದ್ದಾರೆ.

ಸಾಲದಾತರು ಖಾತೆಗಳನ್ನು ವಂಚನೆ ಎಂದು ವರ್ಗೀಕರಿಸುವ ಮೊದಲು ಸಾಲಗಾರರಿಗೆ ತಮ್ಮನ್ನು ತಾವು ಪ್ರತಿನಿಧಿಸಲು ಅವಕಾಶವನ್ನು ಒದಗಿಸಬೇಕೆಂದು ಮಾರ್ಚ್ 2023ರಲ್ಲಿ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಆದೇಶದ ಮೇರೆಗೆ, ಖಾತೆಯಲ್ಲಿನ ವಂಚನೆ ವರ್ಗೀಕರಣವನ್ನು ಸೆಪ್ಟೆಂಬರ್ 2023ರಲ್ಲಿ ಎಸ್‌ಬಿಐ ರದ್ದುಗೊಳಿಸಿತು ಎಂದು ಸಚಿವರು ಹೇಳಿದ್ದಾರೆ.

ಜುಲೈ 15, 2024 ರಂದು ಆರ್‌ಬಿಐ ಹೊರಡಿಸಿದ ಸುತ್ತೋಲೆಯ ಪ್ರಕಾರ, ವರ್ಗೀಕರಣ ಪ್ರಕ್ರಿಯೆಯನ್ನು ಪುನಃ ನಡೆಸಲಾಯಿತು ಮತ್ತು ಖಾತೆಯನ್ನು ಮತ್ತೊಮ್ಮೆ ‘ವಂಚನೆ’ ಎಂದು ವರ್ಗೀಕರಿಸಲಾಗಿದೆ ಎಂದು ತಿಳಿಸಿದ್ದಾರೆ.

2019ರಲ್ಲಿ, ರಿಲಯನ್ಸ್ ಕಮ್ಯುನಿಕೇಷನ್ಸ್‌ ಸುಮಾರು 45,000 ಕೋಟಿ ರೂ.ಗಳ ಸಾಲವನ್ನು ಪಾವತಿಸಲು ಆಸ್ತಿಗಳನ್ನು ಮಾರಾಟ ಮಾಡಲು ವಿಫಲವಾದ ನಂತರ ನ್ಯಾಷನಲ್ ಕಂಪನಿ ಲಾ ಟ್ರಿಬ್ಯೂನಲ್ ಮೂಲಕ ದಿವಾಳಿತನಕ್ಕೆ ಅರ್ಜಿ ಸಲ್ಲಿಸಲು ನಿರ್ಧರಿಸಿದೆ ಎಂದು ಹೇಳಿತ್ತು.

ಧರ್ಮಸ್ಥಳ ಸುದ್ದಿ ಪ್ರಕಟಿಸದಂತೆ ತಡೆ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಯೂಟ್ಯೂಬ್ ಚಾನೆಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...