Homeಮುಖಪುಟಮಲ ಹೊರುವ ಪದ್ದತಿ ಚಾಲ್ತಿಯಲ್ಲಿರುವ ಬಗ್ಗೆ ಯಾವುದೇ ವರದಿಗಳಿಲ್ಲ: ಕೇಂದ್ರ ಸರ್ಕಾರ

ಮಲ ಹೊರುವ ಪದ್ದತಿ ಚಾಲ್ತಿಯಲ್ಲಿರುವ ಬಗ್ಗೆ ಯಾವುದೇ ವರದಿಗಳಿಲ್ಲ: ಕೇಂದ್ರ ಸರ್ಕಾರ

- Advertisement -
- Advertisement -

ಮಲ ಹೊರುವ ಪದ್ದತಿ ಚಾಲ್ತಿಯಲ್ಲಿರುವ ಬಗ್ಗೆ ಯಾವುದೇ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶದಿಂದ ವರದಿಗಳು ಬಂದಿಲ್ಲ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ರಾಜ್ಯ ಸಚಿವ ರಾಮದಾಸ್ ಅಠಾವಳೆ ಮಂಗಳವಾರ (ಜುಲೈ 22) ಹೇಳಿದ್ದಾರೆ.

ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅಠಾವಳೆ, ಕೈಯಿಂದ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವ ಪದ್ದತಿ ನಿಷೇಧ ಮತ್ತು ಪುನರ್ವಸತಿ ಕಾಯ್ದೆ, 2013, ಡಿಸೆಂಬರ್ 6, 2013 ರಿಂದ ಜಾರಿಗೆ ಬಂದಿದ್ದು, ಕೈಯಿಂದ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಶೌಚಗುಂಡಿಗಳು ಅಥವಾ ಮ್ಯಾನ್‌ ಹೋಲ್‌ಗಳಿಗೆ ಇಳಿದ ಕಾರ್ಮಿಕರು ಉಸಿರುಗಟ್ಟಿ ಸಾಯುತ್ತಿರುವ ಬಗ್ಗೆ ಪದೇ ಪದೇ ವರದಿಯಾಗುತ್ತಿರುತ್ತವೆ. ವಿವಿಧ ಕಾರ್ಮಿಕ ಮತ್ತು ಸಾಮಾಜಿಕ ಸಂಘ, ಸಂಸ್ಥೆಗಳು, ಹೋರಾಟಗಾರರು ಈ ಪದ್ದತಿ ವಿರುದ್ದ ಧ್ವನಿ ಎತ್ತುತ್ತಿದ್ದಾರೆ. ಆದರೂ, ಈ ಪದ್ದತಿ ಚಾಲ್ತಿಯಲ್ಲಿರುವ ಬಗ್ಗೆ ಯಾವುದೇ ವರದಿಗಳಿಲ್ಲ ಎಂದು ಸಚಿವರು ಕೈ ತೊಳೆದುಕೊಂಡಿದ್ದಾರೆ.

ಈ ನಡುವೆ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅವರು, ನೈರ್ಮಲ್ಯ ಕಾರ್ಮಿಕರ ಸಾವುಗಳನ್ನು ಅಧ್ಯಯನ ಮಾಡಲು ಸಚಿವಾಲಯವು ಸೆಪ್ಟೆಂಬರ್ 2023ರಲ್ಲಿ ಸೋಶಿಯಲ್ ಆಡಿಟ್ ಪ್ರಾರಂಭಿಸಿದೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ನಾಲ್ಕು ಜಿಲ್ಲೆಗಳಾದ ಮುಂಬೈ, ಪುಣೆ, ಪರ್ಭಾನಿ ಮತ್ತು ಸತಾರ ಸೇರಿದಂತೆ ಒಟ್ಟು ಎಂಟು ರಾಜ್ಯಗಳ 17 ಜಿಲ್ಲೆಗಳಲ್ಲಿ 2022 ಮತ್ತು 2023 ರಲ್ಲಿ ಸಂಭವಿಸಿದ 54 ಸಾವುಗಳ ಕುರಿತು ಆಡಿಟ್ ಪರಿಶೀಲಿಸಿದೆ.

ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್‌ಗಳನ್ನು ಅಪಾಯಕಾರಿಯಾಗಿ ಸ್ವಚ್ಛಗೊಳಿಸುವುದರಿಂದ ಮತ್ತು 2013ರ ಕಾಯ್ದೆ ಮತ್ತು ಅದಕ್ಕೆ ಸಂಬಂಧಿಸಿದ ನಿಯಮಗಳ ಅಡಿಯಲ್ಲಿ ರೂಪಿಸಲಾದ ಸುರಕ್ಷತಾ ಕಾರ್ಯವಿಧಾನಗಳನ್ನು ಪಾಲಿಸದ ಕಾರಣ ಈ ಸಾವುಗಳು ಸಂಭವಿಸಿವೆ ಎಂದು ಆಡಿಟ್ ಬಹಿರಂಗಪಡಿಸಿದೆ.

ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ ಸರ್ಕಾರಗಳು ಅಂತಹ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಮತ್ತು ನಿಷೇಧಿತ ಚಟುವಟಿಕೆಗಳಲ್ಲಿ ಕಾರ್ಮಿಕರನ್ನು ತೊಡಗಿಸಿಕೊಳ್ಳಲು ಕಾರಣರಾದವರ ವಿರುದ್ಧ ಕಾಯ್ದೆಯ ಸೆಕ್ಷನ್ 7 ರ ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಹೇಳಿದೆ.

ಇನ್ನು ಮಲ ಹೊರುವ ಪದ್ದತಿಗೆ ಇತಿಶ್ರಿ ಹಾಡಲು ಸರ್ಕಾರವು 2023–24ರಲ್ಲಿ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಅಧೀನದಲ್ಲಿ ರಾಷ್ಟ್ರೀಯ ಯಾಂತ್ರೀಕೃತ ನೈರ್ಮಲ್ಯ ಪರಿಸರ ವ್ಯವಸ್ಥೆಗಾಗಿ ಕಾರ್ಯ ಯೋಜನೆ ರೂಪಿಸಿದೆ.

ಈ ಉಪಕ್ರಮವು ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ (ಯುಎಲ್‌ಬಿ) ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಕಾರ್ಮಿಕರ ಸುರಕ್ಷತೆ ಮತ್ತು ಘನತೆಯನ್ನು ಖಚಿತಪಡಿಸುವುದು ಮತ್ತು ಅವರನ್ನು ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ.

ಈ ಯೋಜನೆಯು ಪಿಪಿಇ ಕಿಟ್‌ಗಳು, ಆಯುಷ್ಮಾನ್ ಭಾರತ್-ಪಿಎಂಜೆಎವೈ ಆರೋಗ್ಯ ಕಾರ್ಡ್‌ಗಳು, ಔದ್ಯೋಗಿಕ ಸುರಕ್ಷತಾ ತರಬೇತಿ, ತುರ್ತು ಪ್ರತಿಕ್ರಿಯೆ ನೈರ್ಮಲ್ಯ ಘಟಕಗಳಿಗೆ (ಇಆರ್‌ಎಸ್‌ಯು) ಸುರಕ್ಷತಾ ಸಾಧನಗಳು, ನೈರ್ಮಲ್ಯ ಯಂತ್ರೋಪಕರಣಗಳಿಗೆ ಬಂಡವಾಳ ಸಬ್ಸಿಡಿಗಳು ಮತ್ತು ಅಪಾಯಕಾರಿ ಶುಚಿಗೊಳಿಸುವ ಪದ್ಧತಿಗಳನ್ನು ತಡೆಗಟ್ಟಲು ಕಾರ್ಯಾಗಾರಗಳನ್ನು ಒದಗಿಸುತ್ತದೆ.

ರಿಲಯನ್ಸ್ ಕಮ್ಯುನಿಕೇಷನ್ಸ್‌ , ಅನಿಲ್ ಅಂಬಾನಿಯನ್ನು ‘ವಂಚನೆ’ ಎಂದು ವರ್ಗೀಕರಿಸಿದ ಎಸ್‌ಬಿಐ: ಸಿಬಿಐಗೆ ದೂರು ನೀಡಲು ಸಿದ್ದತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...