Homeಮುಖಪುಟಬಿಜೆಪಿ ಹನಿಟ್ರ್ಯಾಪ್ ಮಾಡಿ 2022ರಲ್ಲಿ ಎಂವಿಎ ಸರ್ಕಾರವನ್ನು ಉರುಳಿಸಿತು: ಸಾಮ್ನಾ

ಬಿಜೆಪಿ ಹನಿಟ್ರ್ಯಾಪ್ ಮಾಡಿ 2022ರಲ್ಲಿ ಎಂವಿಎ ಸರ್ಕಾರವನ್ನು ಉರುಳಿಸಿತು: ಸಾಮ್ನಾ

"ಗುಪ್ತ ಕ್ಯಾಮರಾಗಳು, ಪೆಗಾಸಸ್ ತರಹದ ಕಣ್ಗಾವಲು ವ್ಯವಸ್ಥೆಗಳನ್ನು ಬಳಸಲಾಗಿತ್ತು"

- Advertisement -
- Advertisement -

ಗುಪ್ತ ಕ್ಯಾಮರಾಗಳು, ಪೆಗಾಸಸ್ ತರಹದ ಕಣ್ಗಾವಲು ವ್ಯವಸ್ಥೆಗಳನ್ನು ಬಳಸಿಕೊಂಡು ಶಾಸಕರು, ಸಂಸದರನ್ನು ಹನಿಟ್ರ್ಯಾಪ್ ಮಾಡಲಾಗಿತ್ತು. ಇದು 2022ರಲ್ಲಿ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ ಅಘಾಡಿ (ಎಂವಿಎ) ಸರ್ಕಾರದ ಪತನಕ್ಕೆ ಕಾರಣವಾಯಿತು ಎಂದು ಶಿವಸೇನೆ (ಯುಬಿಟಿ) ಮಂಗಳವಾರ ಆರೋಪಿಸಿದೆ.

ಕೇಂದ್ರ ಸಂಸ್ಥೆಗಳ ಒತ್ತಡದಿಂದಾಗಿ ಅವಿಭಜಿತ ಶಿವಸೇನೆ ಮತ್ತು ಎನ್‌ಸಿಪಿಯ ಕೆಲವು ಶಾಸಕರು ನಿಷ್ಠೆಯನ್ನು ಬದಲಾಯಿಸಿದರು ಎಂದು ಶಿವಸೇನೆಯ (ಯುಬಿಟಿ) ಮುಖವಾಣಿ ಸಾಮ್ನಾದ ಸಂಪಾದಕೀಯ ಹೇಳಿದೆ.

ಕನಿಷ್ಠ 18 ಶಾಸಕರು ಮತ್ತು ನಾಲ್ವರು ಸಂಸದರನ್ನು ‘ಹನಿಟ್ರ್ಯಾಪ್’ ಮಾಡಲಾಗಿತ್ತು. ಅವರು ತಮ್ಮ ಇಮೇಜ್ ಉಳಿಸಿಕೊಳ್ಳಲು ಬಿಜೆಪಿಯೊಂದಿಗೆ ಕೈ ಜೋಡಿಸಿದರು ಎಂದಿದೆ.

ಕಾಂಗ್ರೆಸ್ ನಾಯಕ ವಿಜಯ್ ವಡೆಟ್ಟಿವಾರ್ ಅವರು ಸಂಸದರು ಮತ್ತು ಶಾಸಕರನ್ನು ಬ್ಲ್ಯಾಕ್‌ಮೇಲ್ ಮಾಡಲಾಗಿದೆ ಎಂದು ಆರೋಪಿಸಿದ್ದು, ಮಾಜಿ ವಿರೋಧ ಪಕ್ಷದ ನಾಯಕರಾದ ಅವರ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಾಮ್ನಾ ಒತ್ತಾಯಿಸಿದೆ.

“ಇಸ್ರೇಲ್‌ ಮೂಲದ ಗುಪ್ತ ಕ್ಯಾಮರಾಗಳು ಮತ್ತು ಪೆಗಾಸಸ್ ತರಹದ ವ್ಯವಸ್ಥೆಯನ್ನು (ಕಣ್ಗಾವಲುಗಾಗಿ) ಪೂರ್ಣ ಪ್ರಮಾಣದಲ್ಲಿ ಬಳಸಲಾಯಿತು. ಈ (ಹನಿ) ಟ್ರ್ಯಾಪಿಂಗ್‌ನಿಂದಾಗಿ ಎಂವಿಎ ಸರ್ಕಾರ ಪತನಗೊಂಡಿತು ಎಂಬುದು ಈಗ ಸ್ಪಷ್ಟವಾಗಿದೆ” ಎಂದು ತಿಳಿಸಿದೆ.

ಬಿಜೆಪಿಯಲ್ಲಿ ಹನಿಟ್ರ್ಯಾಪ್ ಮಾಡುವ ವ್ಯವಸ್ಥೆ ಇತ್ತು ಮತ್ತು ಪೊಲೀಸರು ಕೂಡ ವಿರೋಧ ಪಕ್ಷದವರ ಮೇಲೆ ಕಣ್ಗಾವಲು ಇಟ್ಟಿದ್ದರು ಎಂದು ಸಾಮ್ನಾ ಆರೋಪಿಸಿದೆ.

ಶಿವಸೇನಾ ಸಂಸದರು ಮತ್ತು ಶಾಸಕರನ್ನು ಒಳಗೊಂಡ ಹನಿಟ್ರ್ಯಾಪಿಂಗ್‌ನ ಪುರಾವೆಗಳನ್ನು ಹೊಂದಿರುವ ಪೆನ್ ಡ್ರೈವ್ ಅನ್ನು ಏಕನಾಥ್ ಶಿಂಧೆ ಅವರಿಗೆ ಹಸ್ತಾಂತರಿಸಿದಾಗ, ಅವರು ಸೂರತ್, ಗುವಾಹಟಿ ಮತ್ತು ನಂತರ ಗೋವಾಕ್ಕೆ ಪ್ರಯಾಣ ಬೆಳೆಸಿದರು. ‘ಇದೊಂದು ರೀತಿಯ ಸಸ್ಪೆನ್ಸ್ ಥ್ರಿಲ್ಲರ್’ ಎಂದಿದೆ.

ಶಿಂಧೆ ಅವರಿಗೆ ಆರಂಭದಲ್ಲಿ ಸಂಖ್ಯಾ ಬಲದ ಕೊರತೆಯಿತ್ತು. ಆ ಸಮಯದಲ್ಲಿ ಅವರಿಗೆ ಕೇವಲ ಒಂಬತ್ತು ಅಥವಾ ಹತ್ತು ಶಾಸಕರ ಬೆಂಬಲವಿತ್ತು. ಆದಾಗ್ಯೂ, ಗೃಹ ಇಲಾಖೆಯ ಜನರು ಮತ್ತು ಅಂದಿನ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್, ಸಂಸದರು ಮತ್ತು ಶಾಸಕರನ್ನು ಬ್ಲಾಕ್‌ಮೇಲ್ ಮಾಡಿದರು ಎಂದು ಸಾಮ್ನಾ ಆರೋಪಿಸಿದೆ.

ಶಿವಸೇನೆಯ ಸಚಿವರಾದ ಸಂಜಯ್ ಶಿರ್ಸಾತ್, ಯೋಗೇಶ್ ಕದಮ್ ಮತ್ತು ದಾದಾ ಭೂಸೆ ಮತ್ತು ಅವರ ಎನ್‌ಸಿಪಿ ಸಹೋದ್ಯೋಗಿ ಮಾಣಿಕ್ ಕೊಕಟೆ ಅವರನ್ನು ರಾಜ್ಯ ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಸಂಪಾದಕೀಯದಲ್ಲಿ ಆಗ್ರಹಿಸಲಾಗಿದೆ.

ಕೆಲವು ಸಚಿವರು ಹನಿಟ್ರ್ಯಾಪ್ ಹನಿಟ್ರ್ಯಾಪ್‌ಗೆ ಸಿಲುಕಿದ್ದು,ಅವರು ಕೂಡ ಸಂಪುಟದಿಂದ ಹೋಗಬೇಕಾಗುತ್ತದೆ ಎಂದಿದೆ.

ಕೆಲವು ಸಚಿವರ ನಡವಳಿಕೆಯು ಮಹಾರಾಷ್ಟ್ರದಲ್ಲಿ ಸಚಿವ ಸಂಪುಟ ಪುನರ್‌ರಚನೆ ನಡೆಯುವುದನ್ನು ಸೂಚಿಸುತ್ತದೆ ಎಂದು ಸಾಮ್ನಾ ಹೇಳಿದೆ.

ಎಸ್‌ಪಿ ಸಂಸದೆ ಇಕ್ರಾ ಹಸನ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕರ್ಣಿ ಸೇನಾ ನಾಯಕ ಯೋಗೇಂದ್ರ ರಾಣಾ ವಿರುದ್ಧ ಎಫ್‌ಐಆರ್ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...