Homeಮುಖಪುಟಬಿಹಾರ ಮತದಾರರ ಪಟ್ಟಿಯಿಂದ 52 ಲಕ್ಷಕ್ಕೂ ಹೆಚ್ಚು ಹೆಸರುಗಳನ್ನು ಕೈಬಿಟ್ಟ ಚುನಾವಣಾ ಆಯೋಗ!

ಬಿಹಾರ ಮತದಾರರ ಪಟ್ಟಿಯಿಂದ 52 ಲಕ್ಷಕ್ಕೂ ಹೆಚ್ಚು ಹೆಸರುಗಳನ್ನು ಕೈಬಿಟ್ಟ ಚುನಾವಣಾ ಆಯೋಗ!

- Advertisement -
- Advertisement -

ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ 52, 30, 126 ಹೆಸರುಗಳನ್ನು ಕೈ ಬಿಡಲಾಗಿದೆ. ಈ ಮತದಾರರ ಪೈಕಿ ಹಲವರು ಸಾವನ್ನಪ್ಪಿದ್ದಾರೆ, ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ ಮತ್ತು ಇನ್ನೂ ಹಲವರ ಹೆಸರುಗಳು ಬಹು ಸ್ಥಳಗಳಲ್ಲಿ ದಾಖಲಾಗಿತ್ತು ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ತಿಳಿಸಿದೆ.

ಮಂಗಳವಾರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಆಯೋಗ, “ಪ್ರಾಥಮಿಕ ಪರಿಷ್ಕರಣೆ ಪ್ರಕ್ರಿಯೆ ವೇಳೆ 18.66 ಲಕ್ಷ ಮತದಾರರು ಮೃತಪಟ್ಟಿರುವುದು, 26.01 ಲಕ್ಷ ಮತದಾರರು ಶಾಶ್ವತವಾಗಿ ಕ್ಷೇತ್ರಗಳನ್ನು ಬದಲಾಯಿಸಿರುವುದು ಮತ್ತು 7.5 ಲಕ್ಷ ಮತದಾರ ಹೆಸರುಗಳು ಬಹು ಸ್ಥಳಗಳಲ್ಲಿ ದಾಖಲಾಗಿರುವುದು ಕಂಡು ಬಂದಿದೆ ಎಂದು ತಿಳಿಸಿದೆ.

ಇದಲ್ಲದೆ, 11,484 ಮತದಾರರನ್ನು ಪತ್ತೆ ಹಚ್ಚಲಾಗದವರು ಎಂದು ಗುರುತಿಸಲಾಗಿದೆ. ಇದು ಬಿಹಾರದ ಒಟ್ಟು ಮತದಾರ ಪೈಕಿ ಶೇಕಡ 6.62ರಷ್ಟು ಎಂದು ಚುನಾವಣಾ ಆಯೋಗ ಹೇಳಿದೆ.

ಜೂನ್ 24ರ ಹೊತ್ತಿಗೆ ಬಿಹಾರದಲ್ಲಿ ಒಟ್ಟು 7.89 ಕೋಟಿ ನೋಂದಾಯಿತ ಮತದಾರರಿದ್ದರು. ಪ್ರಸ್ತುತ 7.16 ಕೋಟಿ (ಶೇ. 90.67) ಮತದಾರರು ಗಣತಿ ನಮೂನೆಗಳನ್ನು (ಇಎಫ್) ಸಲ್ಲಿಸಿದ್ದಾರೆ. ಈ ಪೈಕಿ 7.13 ಕೋಟಿ (ಶೇ. 90.37) ಮತದಾರರ ನಮೂನೆಗಳು ಡಿಜಿಟಲೀಕರಣಗೊಂಡಿವೆ ಎಂದು ಆಯೋಗ ಮಾಹಿತಿ ನೀಡಿದೆ.

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗಾಗಿ ಸುಮಾರು 1 ಲಕ್ಷ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು), 4 ಲಕ್ಷ ಸ್ವಯಂಸೇವಕರು ಮತ್ತು 12 ಪ್ರಮುಖ ರಾಜಕೀಯ ಪಕ್ಷಗಳಿಂದ ನಾಮನಿರ್ದೇಶನಗೊಂಡ 1.5 ಲಕ್ಷ ಬೂತ್ ಮಟ್ಟದ ಏಜೆಂಟ್‌ಗಳನ್ನು (ಬಿಎಲ್‌ಎಗಳು) ಬಳಸಿಕೊಳ್ಳಲಾಗಿದೆ. ಈ ತಂಡಗಳಿಗೆ ಗಣತಿ ನಮೂನೆಗಳು ಅಥವಾ ಇಎಫ್‌ಗಳನ್ನು ಸಲ್ಲಿಸದ ಅಥವಾ ಕ್ಷೇತ್ರ ಪರಿಶೀಲನೆಯ ಸಮಯದಲ್ಲಿ ಕಾಣೆಯಾದ ಮತದಾರರನ್ನು ತಲುಪುವ ಕಾರ್ಯವನ್ನು ವಹಿಸಲಾಗಿತ್ತು ಎಂದಿದೆ.

ಇಲ್ಲಿಯವರೆಗೆ, 7.68 ಕೋಟಿ (ಶೇ. 97.30) ಮತದಾರರು ಗಣತಿ ನಮೂನೆ ಸಲ್ಲಿಕೆ ಅಥವಾ ಆನ್-ಗ್ರೌಂಡ್ ಪರಿಶೀಲನೆಯ ಮೂಲಕ ಮತ ಚಲಾಯಿಸಿದ್ದಾರೆ. ಉಳಿದ ಸುಮಾರು 21.35 ಲಕ್ಷ (ಶೇ. 2.70) ಮತದಾರರನ್ನು ಇನ್ನೂ ಲೆಕ್ಕಕ್ಕೆ ತೆಗೆದುಕೊಳ್ಳಲಾಗಿಲ್ಲ, ಅವರ ಇಎಫ್‌ಗಳು ಇನ್ನೂ ಬಾಕಿ ಉಳಿದಿವೆ ಎಂದು ಆಯೋಗ ತಿಳಿಸಿದೆ.

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಪಟ್ಟಿಯಿಂದ ಕೈ ಬಿಡಲಾದ 52.30 ಲಕ್ಷ ಮತದಾರರ ವಿವರಗಳನ್ನು ರಾಜ್ಯದ ಎಲ್ಲಾ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಆಗಸ್ಟ್ 1ರಂದು ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ಯಾವುದೇ ಸೇರ್ಪಡೆ, ಅಳಿಸುವಿಕೆ ಅಥವಾ ತಿದ್ದುಪಡಿಗಳ ಕುರಿತು ಸಾರ್ವಜನಿಕರು ಆಕ್ಷೇಪಣೆಗಳನ್ನು ಸಲ್ಲಿಸಲು ಆಗಸ್ಟ್ 1 ರಿಂದ ಸೆಪ್ಟೆಂಬರ್ 1 ರವರೆಗೆ ಒಂದು ತಿಂಗಳ ಕಾಲಾವಕಾಶ ನೀಡಲಾಗುವುದು ಎಂದಿದೆ.

ಬಿಹಾರ: ಗುರುತಿಗಾಗಿ ಆಧಾರ್, ವೋಟರ್ ಐಡಿ, ಪಡಿತರ ಚೀಟಿ ಮಾತ್ರ ಪರಿಗಣನೆ- ಚುನಾವಣಾ ಆಯೋಗ ಸಮರ್ಥನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...