Homeಕರ್ನಾಟಕಬೆಂಗಳೂರು: ಮುಖ ಚಹರೆ ಗುರುತಿಸುವಿಕೆ ರದ್ದುಪಡಿಸಲು ಆಗ್ರಹ

ಬೆಂಗಳೂರು: ಮುಖ ಚಹರೆ ಗುರುತಿಸುವಿಕೆ ರದ್ದುಪಡಿಸಲು ಆಗ್ರಹ

- Advertisement -
- Advertisement -

ಶಿಕ್ಷಕರ ಹಾಜರಾತಿ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಮುಂತಾದವುಗಳಿಗೆ ಮುಖ ಚಹರೆ ಗುರುತಿಸುವಿಕೆ (ಎಫ್‌ಆರ್‌ಎಸ್‌) ಕಡ್ಡಾಯಗೊಳಿಸಿರುವುದನ್ನು ಕೈಬಿಡಲು ವಿವಿಧ ಕ್ಷೇತ್ರದ ತಜ್ಞರು ಒತ್ತಾಯಿಸಿದರು.

ಮಂಗಳವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ರಾಜ್ಯ ಅಂಗನವಾಡಿ ನೌಕರರ ಸಂಘ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ಜಂಟಿಯಾಗಿ ಮುಖ ಚಹರೆ ಗುರುತಿಸುವಿಕೆ ವ್ಯವಸ್ಥೆಯ ಅನುಷ್ಠಾನದಿಂದ ಆಹಾರ ಮತ್ತು ಶಿಕ್ಷಣದ ಹಕ್ಕಿನ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದರ ಕುರಿತು ಆಯೋಜಿಸಿದ್ದ ಸಮಾಲೋಚನಾ ಸಭೆಯಲ್ಲಿ ಎಫ್‌ಆರ್‌ಎಸ್ ಜಾರಿಗೆ ವಿರೋಧ ವ್ಯಕ್ತವಾಯಿತು.

ಒಂದೆಡೆ, ಕೇಂದ್ರ ಸರ್ಕಾರ ಪಿಎಂ-ಪೋಷಣ್‌ ಯೋಜನೆಯಡಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಪೌಷ್ಟಿಕ ಆಹಾರ ನೀಡಲು ಮುಖ ಚಹರೆ ಗುರುತಿಸುವಿಕೆ ವ್ಯವಸ್ಥೆ ಜಾರಿಗೊಳಿಸಿದೆ. ಮತ್ತೊಂದೆಡೆ, ರಾಜ್ಯ ಸರ್ಕಾರವು ಎಫ್‌ಆರ್‌ಎಸ್ ಜಾರಿಗೆ ತರುವ ಮುನ್ನ ಸಾರ್ವಜನಿಕ ಚರ್ಚೆಗಳನ್ನಾಗಲೀ, ಪಾಲುದಾರರ ಅಭಿಪ್ರಾಯವನ್ನಾಗಲಿ ಆಲಿಸಿಲ್ಲ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಅಂಗನವಾಡಿ ಕಾರ್ಯಕರ್ತೆಯರು. ಚಿಂತಕರು, ಸಾಮಾಜಿಕ ಹೋರಾಟಗಾರರು, ವಕೀಲರು, ಸ್ವತಂತ್ರ ತಂತ್ರಾಂಶ ಹೋರಾಟಗಾರರು ಮತ್ತು ನಾಗರಿಕ ಸಮಾಜದ ಪ್ರತಿನಿಧಿಗಳು ಅಸಮಾಧಾನ ವ್ಯಕ್ತಪಡಿಸಿದರು.

ಸಭೆಯಲ್ಲಿ ಮಾತನಾಡಿದ ಆಹಾರ ಹಕ್ಕು ಕಾರ್ಯಕರ್ತೆ ಮತ್ತು ಶಿಕ್ಷಣ ತಜ್ಞೆ ಡಾ. ದೀಪಾ ಸಿನ್ಹಾ, ಸಮಗ್ರ ಶಿಶು ಅಭಿವೃದ್ಧಿ ಸೇವೆಗಳಲ್ಲಿ (ಐಸಿಡಿಎಸ್) ಮುಖ ಚಹರೆ ಗುರುತಿಸುವಿಕೆ ಪರಿಚಯಿಸುತ್ತಿರುವುದು ಸಾಮಾಜಿಕ ಭದ್ರತಾ ಯೋಜನೆಗಳ ಮೇಲೆ ನಡೆಸಲಾಗುತ್ತಿರುವ ಸರಣಿ ದಾಳಿಗಳಲ್ಲಿನ ಒಂದು. ಎಸ್‌ಎನ್‌ಪಿ ಮತ್ತು ಟೇಕ್ ಹೋಮ್ ರೇಷನ್‌ಗಳ ಗುಣಮಟ್ಟ ಕುಸಿಯುತ್ತಿದೆ. ಈ ಸಮಸ್ಯೆಯನ್ನು ಬಗೆಹರಿಸಲು ಮೀಸಲಿಟ್ಟಿರುವ ಬಜೆಟ್ ಹೆಚ್ಚಿಸುವ ಬದಲು, ಎಫ್‌ಆರ್‌ಎಸ್‌ ಹೆಸರಿನಲ್ಲಿ ಫಲಾನುಭವಿಗಳನ್ನು ಹೊರದೂಡುವ ಮಾರ್ಗಗಳನ್ನು ಸರ್ಕಾರ ಕಂಡುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಅಭಿಪ್ರಾಯಪಟ್ಟರು.

ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಅಧ್ಯಾಪಕ ಡಾ. ರಾಜೇಂದ್ರನ್ ನಾರಾಯಣನ್ ಮಾತನಾಡಿ, ಎಫ್‌ಆರ್‌ಎಸ್‌ ಒಂದು ಕಣ್ಣಾವಲು ವ್ಯವಸ್ಥೆಯಾಗಿದೆ. ಇದನ್ನು ಮೊಟ್ಟ ಮೊದಲು ರೂಪಿಸಿ, ಜಾರಿಗೊಳಿಸಿದ ಸ್ಕ್ಯಾನ್ ಫ್ರಾನ್ಸಿಸ್ಕೋದಲ್ಲಿಯೇ ಈ ತಂತ್ರಜ್ಞಾನವನ್ನು ಬಳಸದಿರಲು ನಿರ್ಣಯ ಕೈಗೊಳ್ಳಲಾಗಿದೆ. ಹೀಗಿರುವಾಗ ಇದನ್ನು ನಮ್ಮ ಹಳ್ಳಿಗಳಲ್ಲೇಕೆ ಜಾರಿಗೊಳಿಸಬೇಕು ಎಂದು ಪ್ರಶ್ನಿಸಿದರು. ಎಫ್‌ಆರ್‌ಎಸ್‌ ಯೋಜನೆಯು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಮತ್ತು ಘನತೆಯ ಸಾಂವಿಧಾನಿಕ ಮೌಲ್ಯಗಳ ಮೇಲಿನ ದಾಳಿಯೂ ಆಗಿದೆ ಎಂದು ಹೇಳಿದರು.

ಅಖಿಲ ಕರ್ನಾಟಕ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್. ವರಲಕ್ಷ್ಮಿ ಮಾತನಾಡಿ, ಸಾರ್ವತ್ರಿಕವಾಗಿರಬೇಕಾದ ಐಸಿಡಿಎಸ್‌ ಯೋಜನೆಯನ್ನು ಕೆಲವೇ ಕೆಲವು ಫಲಾನುಭವಿಗಳಿಗೆ ಸೀಮಿತಗೊಳಿಸುವ ಹುನ್ನಾರ ಇದಾಗಿದೆ. ಎಫ್‌ಆರ್‌ಎಸ್‌ ವ್ಯವಸ್ಥೆಯನ್ನು ಜಾರಿಗೆ ತರುವಲ್ಲಿ ಬಹಳ ಸಮಸ್ಯೆಗಳು ತಲೆದೋರಿದ್ದು, ಅದನ್ನು ಜಾರಿಗೆ ತರಲು ಸಾಧ್ಯವಾಗದ ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಇಲಾಖೆಯು ಕ್ರಮಗಳನ್ನು ಜರುಗಿಸಲು ಮುಂದಾಗಿದೆ. ಅಲ್ಲದೇ, ಎಫ್‌ಆರ್‌ಎಸ್‌ ಯೋಜನೆಯು ಅಂಗನವಾಡಿ ನೌಕರರ ಕೆಲಸದ ಒತ್ತಡವನ್ನು ಅತೀವವಾಗಿ ಹೆಚ್ಚಿಸಿದೆ ಎಂದರು.

ವಕೀಲ ವಿನಯ್ ಶ್ರೀನಿವಾಸ್ ಮಾತನಾಡಿ, ಈಗ ಜಾರಿಗೊಳಿಸಲಾಗುತ್ತಿರುವ ಎಫ್‌ಆರ್‌ಎಸ್‌ ತಂತ್ರಜ್ಞಾನವು ಕೆ.ಎಸ್. ಪುಟ್ಟಸ್ವಾಮಿ ವರ್ಸಸ್ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಗೌಪ್ಯತೆಯ ಹಕ್ಕಿನ ಕುರಿತಾದ ಸುಪ್ರೀಂ ಕೋರ್ಟ್ ತೀರ್ಪುನ್ನು ಮತ್ತು ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ತಿಳಿಸಿದರು.

ಸ್ಥಳೀಯ ಪೂರೈಕೆ ಸರಪಳಿ (Local Supply Chain)ಗಳನ್ನು ಮುರಿದು, ಫೋರ್ಟಿಫೈಡ್ ಆಹಾರದ ಕಡೆಗೆ ದಾಪುಗಾಲಿಡಲು ಡೇಟಾವನ್ನು ಎಫ್‌ಆರ್‌ಎಸ್‌ ಮೂಲಕ ಸಂಗ್ರಹಿಸಲಾಗುತ್ತಿದೆ ಎಂಬುದರ ಬಗ್ಗೆ ಮತ್ತು ಡೇಟಾ ಗೌಪ್ಯತೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಫ್ರೀ ಸಾಫ್ಟ್‌ವೇರ್ ಮೂವ್‌ಮೆಂಟ್ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ನವೀನ್ ಮಾತನಾಡಿದರು.

ಭಾರತ ಜ್ಞಾನ ವಿಜ್ಞಾನ ಸಮಿತಿ ಕರ್ನಾಟಕದ ಉಪಾಧ್ಯಕ್ಷ ಶುಭಂಕರ್ ಚಕ್ರವರ್ತಿ ಮಾತನಾಡಿ, ಶಿಕ್ಷಕರ ಹಾಜರಾತಿಯನ್ನು ಟ್ರ್ಯಾಕ್ ಮಾಡಲು ಶಿಕ್ಷಣ ಇಲಾಖೆಯು ಜುಲೈ 1ರಿಂದ ಎಫ್‌ಆರ್‌ಎಸ್‌ ಪರಿಚಯಿಸಿದೆ. ಅತ್ಯಂತ ಕಡಿಮೆ ಶಿಕ್ಷಕರ ಗೈರುಹಾಜರಿ ಪ್ರಮಾಣ ಹೊಂದಿರುವ ಕರ್ನಾಟಕದಲ್ಲಿ ಇಂತಹ ಯೋಜನೆಗಳ ಅವಶ್ಯಕತೆ ಏನಿದೆ ಎಂದು ಪ್ರಶ್ನಿಸಿದರು. ನಾಗರಿಕ ಸಮಾಜವು ಈ ಬಗ್ಗೆ ಒಗ್ಗೂಡಿ ಎಫ್‌ಆರ್‌ಎಸ್‌ ತಂತ್ರಜ್ಞಾನದ ಅನುಷ್ಠಾನದ ವಿರುದ್ಧ ಹೋರಾಡಬೇಕು ಎಂದು ಅವರು ಕರೆ ನೀಡಿದರು.

ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾದ ಮಗು ಮತ್ತು ಕಾನೂನು ಕೇಂದ್ರದ ಸುಧಾ, ಬೆಂಗಳೂರಿನ ಸಿವಿಕ್ ಸಂಸ್ಥೆಯ ಕಾತ್ಯಾಯಿನಿ ಚಾಮರಾಜ್ ಮತ್ತಿತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಧರ್ಮಸ್ಥಳ ಸುದ್ದಿ ಪ್ರಕಟಿಸದಂತೆ ತಡೆ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಯೂಟ್ಯೂಬ್ ಚಾನೆಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...