Homeಕರ್ನಾಟಕಬೆಂಗಳೂರು: ಮುಖ ಚಹರೆ ಗುರುತಿಸುವಿಕೆ ರದ್ದುಪಡಿಸಲು ಆಗ್ರಹ

ಬೆಂಗಳೂರು: ಮುಖ ಚಹರೆ ಗುರುತಿಸುವಿಕೆ ರದ್ದುಪಡಿಸಲು ಆಗ್ರಹ

- Advertisement -
- Advertisement -

ಶಿಕ್ಷಕರ ಹಾಜರಾತಿ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ ಮುಂತಾದವುಗಳಿಗೆ ಮುಖ ಚಹರೆ ಗುರುತಿಸುವಿಕೆ (ಎಫ್‌ಆರ್‌ಎಸ್‌) ಕಡ್ಡಾಯಗೊಳಿಸಿರುವುದನ್ನು ಕೈಬಿಡಲು ವಿವಿಧ ಕ್ಷೇತ್ರದ ತಜ್ಞರು ಒತ್ತಾಯಿಸಿದರು.

ಮಂಗಳವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ರಾಜ್ಯ ಅಂಗನವಾಡಿ ನೌಕರರ ಸಂಘ ಹಾಗೂ ಭಾರತ ಜ್ಞಾನ ವಿಜ್ಞಾನ ಸಮಿತಿ ಜಂಟಿಯಾಗಿ ಮುಖ ಚಹರೆ ಗುರುತಿಸುವಿಕೆ ವ್ಯವಸ್ಥೆಯ ಅನುಷ್ಠಾನದಿಂದ ಆಹಾರ ಮತ್ತು ಶಿಕ್ಷಣದ ಹಕ್ಕಿನ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂಬುದರ ಕುರಿತು ಆಯೋಜಿಸಿದ್ದ ಸಮಾಲೋಚನಾ ಸಭೆಯಲ್ಲಿ ಎಫ್‌ಆರ್‌ಎಸ್ ಜಾರಿಗೆ ವಿರೋಧ ವ್ಯಕ್ತವಾಯಿತು.

ಒಂದೆಡೆ, ಕೇಂದ್ರ ಸರ್ಕಾರ ಪಿಎಂ-ಪೋಷಣ್‌ ಯೋಜನೆಯಡಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಪೌಷ್ಟಿಕ ಆಹಾರ ನೀಡಲು ಮುಖ ಚಹರೆ ಗುರುತಿಸುವಿಕೆ ವ್ಯವಸ್ಥೆ ಜಾರಿಗೊಳಿಸಿದೆ. ಮತ್ತೊಂದೆಡೆ, ರಾಜ್ಯ ಸರ್ಕಾರವು ಎಫ್‌ಆರ್‌ಎಸ್ ಜಾರಿಗೆ ತರುವ ಮುನ್ನ ಸಾರ್ವಜನಿಕ ಚರ್ಚೆಗಳನ್ನಾಗಲೀ, ಪಾಲುದಾರರ ಅಭಿಪ್ರಾಯವನ್ನಾಗಲಿ ಆಲಿಸಿಲ್ಲ ಎಂದು ಸಭೆಯಲ್ಲಿ ಪಾಲ್ಗೊಂಡಿದ್ದ ಅಂಗನವಾಡಿ ಕಾರ್ಯಕರ್ತೆಯರು. ಚಿಂತಕರು, ಸಾಮಾಜಿಕ ಹೋರಾಟಗಾರರು, ವಕೀಲರು, ಸ್ವತಂತ್ರ ತಂತ್ರಾಂಶ ಹೋರಾಟಗಾರರು ಮತ್ತು ನಾಗರಿಕ ಸಮಾಜದ ಪ್ರತಿನಿಧಿಗಳು ಅಸಮಾಧಾನ ವ್ಯಕ್ತಪಡಿಸಿದರು.

ಸಭೆಯಲ್ಲಿ ಮಾತನಾಡಿದ ಆಹಾರ ಹಕ್ಕು ಕಾರ್ಯಕರ್ತೆ ಮತ್ತು ಶಿಕ್ಷಣ ತಜ್ಞೆ ಡಾ. ದೀಪಾ ಸಿನ್ಹಾ, ಸಮಗ್ರ ಶಿಶು ಅಭಿವೃದ್ಧಿ ಸೇವೆಗಳಲ್ಲಿ (ಐಸಿಡಿಎಸ್) ಮುಖ ಚಹರೆ ಗುರುತಿಸುವಿಕೆ ಪರಿಚಯಿಸುತ್ತಿರುವುದು ಸಾಮಾಜಿಕ ಭದ್ರತಾ ಯೋಜನೆಗಳ ಮೇಲೆ ನಡೆಸಲಾಗುತ್ತಿರುವ ಸರಣಿ ದಾಳಿಗಳಲ್ಲಿನ ಒಂದು. ಎಸ್‌ಎನ್‌ಪಿ ಮತ್ತು ಟೇಕ್ ಹೋಮ್ ರೇಷನ್‌ಗಳ ಗುಣಮಟ್ಟ ಕುಸಿಯುತ್ತಿದೆ. ಈ ಸಮಸ್ಯೆಯನ್ನು ಬಗೆಹರಿಸಲು ಮೀಸಲಿಟ್ಟಿರುವ ಬಜೆಟ್ ಹೆಚ್ಚಿಸುವ ಬದಲು, ಎಫ್‌ಆರ್‌ಎಸ್‌ ಹೆಸರಿನಲ್ಲಿ ಫಲಾನುಭವಿಗಳನ್ನು ಹೊರದೂಡುವ ಮಾರ್ಗಗಳನ್ನು ಸರ್ಕಾರ ಕಂಡುಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಅಭಿಪ್ರಾಯಪಟ್ಟರು.

ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯದ ಅಧ್ಯಾಪಕ ಡಾ. ರಾಜೇಂದ್ರನ್ ನಾರಾಯಣನ್ ಮಾತನಾಡಿ, ಎಫ್‌ಆರ್‌ಎಸ್‌ ಒಂದು ಕಣ್ಣಾವಲು ವ್ಯವಸ್ಥೆಯಾಗಿದೆ. ಇದನ್ನು ಮೊಟ್ಟ ಮೊದಲು ರೂಪಿಸಿ, ಜಾರಿಗೊಳಿಸಿದ ಸ್ಕ್ಯಾನ್ ಫ್ರಾನ್ಸಿಸ್ಕೋದಲ್ಲಿಯೇ ಈ ತಂತ್ರಜ್ಞಾನವನ್ನು ಬಳಸದಿರಲು ನಿರ್ಣಯ ಕೈಗೊಳ್ಳಲಾಗಿದೆ. ಹೀಗಿರುವಾಗ ಇದನ್ನು ನಮ್ಮ ಹಳ್ಳಿಗಳಲ್ಲೇಕೆ ಜಾರಿಗೊಳಿಸಬೇಕು ಎಂದು ಪ್ರಶ್ನಿಸಿದರು. ಎಫ್‌ಆರ್‌ಎಸ್‌ ಯೋಜನೆಯು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಮತ್ತು ಘನತೆಯ ಸಾಂವಿಧಾನಿಕ ಮೌಲ್ಯಗಳ ಮೇಲಿನ ದಾಳಿಯೂ ಆಗಿದೆ ಎಂದು ಹೇಳಿದರು.

ಅಖಿಲ ಕರ್ನಾಟಕ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್. ವರಲಕ್ಷ್ಮಿ ಮಾತನಾಡಿ, ಸಾರ್ವತ್ರಿಕವಾಗಿರಬೇಕಾದ ಐಸಿಡಿಎಸ್‌ ಯೋಜನೆಯನ್ನು ಕೆಲವೇ ಕೆಲವು ಫಲಾನುಭವಿಗಳಿಗೆ ಸೀಮಿತಗೊಳಿಸುವ ಹುನ್ನಾರ ಇದಾಗಿದೆ. ಎಫ್‌ಆರ್‌ಎಸ್‌ ವ್ಯವಸ್ಥೆಯನ್ನು ಜಾರಿಗೆ ತರುವಲ್ಲಿ ಬಹಳ ಸಮಸ್ಯೆಗಳು ತಲೆದೋರಿದ್ದು, ಅದನ್ನು ಜಾರಿಗೆ ತರಲು ಸಾಧ್ಯವಾಗದ ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಇಲಾಖೆಯು ಕ್ರಮಗಳನ್ನು ಜರುಗಿಸಲು ಮುಂದಾಗಿದೆ. ಅಲ್ಲದೇ, ಎಫ್‌ಆರ್‌ಎಸ್‌ ಯೋಜನೆಯು ಅಂಗನವಾಡಿ ನೌಕರರ ಕೆಲಸದ ಒತ್ತಡವನ್ನು ಅತೀವವಾಗಿ ಹೆಚ್ಚಿಸಿದೆ ಎಂದರು.

ವಕೀಲ ವಿನಯ್ ಶ್ರೀನಿವಾಸ್ ಮಾತನಾಡಿ, ಈಗ ಜಾರಿಗೊಳಿಸಲಾಗುತ್ತಿರುವ ಎಫ್‌ಆರ್‌ಎಸ್‌ ತಂತ್ರಜ್ಞಾನವು ಕೆ.ಎಸ್. ಪುಟ್ಟಸ್ವಾಮಿ ವರ್ಸಸ್ ಯೂನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಗೌಪ್ಯತೆಯ ಹಕ್ಕಿನ ಕುರಿತಾದ ಸುಪ್ರೀಂ ಕೋರ್ಟ್ ತೀರ್ಪುನ್ನು ಮತ್ತು ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ತಿಳಿಸಿದರು.

ಸ್ಥಳೀಯ ಪೂರೈಕೆ ಸರಪಳಿ (Local Supply Chain)ಗಳನ್ನು ಮುರಿದು, ಫೋರ್ಟಿಫೈಡ್ ಆಹಾರದ ಕಡೆಗೆ ದಾಪುಗಾಲಿಡಲು ಡೇಟಾವನ್ನು ಎಫ್‌ಆರ್‌ಎಸ್‌ ಮೂಲಕ ಸಂಗ್ರಹಿಸಲಾಗುತ್ತಿದೆ ಎಂಬುದರ ಬಗ್ಗೆ ಮತ್ತು ಡೇಟಾ ಗೌಪ್ಯತೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಫ್ರೀ ಸಾಫ್ಟ್‌ವೇರ್ ಮೂವ್‌ಮೆಂಟ್ ಆಫ್ ಇಂಡಿಯಾದ ಪ್ರಧಾನ ಕಾರ್ಯದರ್ಶಿ ನವೀನ್ ಮಾತನಾಡಿದರು.

ಭಾರತ ಜ್ಞಾನ ವಿಜ್ಞಾನ ಸಮಿತಿ ಕರ್ನಾಟಕದ ಉಪಾಧ್ಯಕ್ಷ ಶುಭಂಕರ್ ಚಕ್ರವರ್ತಿ ಮಾತನಾಡಿ, ಶಿಕ್ಷಕರ ಹಾಜರಾತಿಯನ್ನು ಟ್ರ್ಯಾಕ್ ಮಾಡಲು ಶಿಕ್ಷಣ ಇಲಾಖೆಯು ಜುಲೈ 1ರಿಂದ ಎಫ್‌ಆರ್‌ಎಸ್‌ ಪರಿಚಯಿಸಿದೆ. ಅತ್ಯಂತ ಕಡಿಮೆ ಶಿಕ್ಷಕರ ಗೈರುಹಾಜರಿ ಪ್ರಮಾಣ ಹೊಂದಿರುವ ಕರ್ನಾಟಕದಲ್ಲಿ ಇಂತಹ ಯೋಜನೆಗಳ ಅವಶ್ಯಕತೆ ಏನಿದೆ ಎಂದು ಪ್ರಶ್ನಿಸಿದರು. ನಾಗರಿಕ ಸಮಾಜವು ಈ ಬಗ್ಗೆ ಒಗ್ಗೂಡಿ ಎಫ್‌ಆರ್‌ಎಸ್‌ ತಂತ್ರಜ್ಞಾನದ ಅನುಷ್ಠಾನದ ವಿರುದ್ಧ ಹೋರಾಡಬೇಕು ಎಂದು ಅವರು ಕರೆ ನೀಡಿದರು.

ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾದ ಮಗು ಮತ್ತು ಕಾನೂನು ಕೇಂದ್ರದ ಸುಧಾ, ಬೆಂಗಳೂರಿನ ಸಿವಿಕ್ ಸಂಸ್ಥೆಯ ಕಾತ್ಯಾಯಿನಿ ಚಾಮರಾಜ್ ಮತ್ತಿತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಧರ್ಮಸ್ಥಳ ಸುದ್ದಿ ಪ್ರಕಟಿಸದಂತೆ ತಡೆ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಯೂಟ್ಯೂಬ್ ಚಾನೆಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...