Homeಅಂತರಾಷ್ಟ್ರೀಯಭಾರತ-ಪಾಕ್ ಯುದ್ದ ತಾನೇ ನಿಲ್ಲಿಸಿದ್ದು, ಈ ಸಂದರ್ಭ 5 ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ: ಪುನರುಚ್ಚರಿಸಿದ ಟ್ರಂಪ್

ಭಾರತ-ಪಾಕ್ ಯುದ್ದ ತಾನೇ ನಿಲ್ಲಿಸಿದ್ದು, ಈ ಸಂದರ್ಭ 5 ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ: ಪುನರುಚ್ಚರಿಸಿದ ಟ್ರಂಪ್

- Advertisement -
- Advertisement -

ನ್ಯೂಯಾರ್ಕ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ ಮತ್ತು ಪಾಕಿಸ್ತಾನದ ನಡುವಿನ ಇತ್ತೀಚಿನ ಯುದ್ಧವನ್ನು ತಾನು ನಿಲ್ಲಿಸಿದ್ದೇನೆ ಮತ್ತು ಈ ಸಂದರ್ಭದಲ್ಲಿ ಐದು ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂಬ ತಮ್ಮ ಹೇಳಿಕೆಯನ್ನು ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಬಹುಶಃ ಪರಮಾಣು ಯುದ್ಧದಲ್ಲಿ ಕೊನೆಗೊಳ್ಳಬಹುದಾಗಿದ್ದ ಈ ಸಂಘರ್ಷವನ್ನು ತಡೆಯಲು ತಾನು ಮಧ್ಯಪ್ರವೇಶಿಸಿದೆ ಎಂದು ಟ್ರಂಪ್ ಮಂಗಳವಾರ ಹೇಳಿಕೊಂಡಿದ್ದಾರೆ.

ವೈಟ್‌ಹೌಸ್‌ನಲ್ಲಿ ನಡೆದ ಕಾಂಗ್ರೆಸ್ ಸದಸ್ಯರ ಸ್ವಾಗತ ಸಮಾರಂಭದಲ್ಲಿ ಮಾತನಾಡಿದ ಟ್ರಂಪ್, ಭಾರತ ಮತ್ತು ಪಾಕಿಸ್ತಾನ ಯುದ್ದವನ್ನು ಮಾತ್ರವಲ್ಲದೇ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ ಮತ್ತು ರುವಾಂಡಾ ನಡುವಿನ ಯುದ್ಧವನ್ನು ತಾನು ನಿಲ್ಲಿಸಿರುವುದಾಗಿ ಹೇಳಿದ್ದಾರೆ. ಅವರು ಪರಿಸ್ಥಿತಿಯನ್ನು ವಿವರಿಸುತ್ತಾ, “ಭಾರತ-ಪಾಕಿಸ್ತಾನದವರು ಐದು ವಿಮಾನಗಳನ್ನು ಹೊಡೆದುರುಳಿಸಿದರು, ಅದು ಹಿಂದಕ್ಕೆ-ಮುಂದಕ್ಕೆ ನಡೆಯುತ್ತಿತ್ತು. ನಾನು ಅವರಿಗೆ ಕರೆ ಮಾಡಿ, ‘ಕೇಳಿ, ಇನ್ನು ಮುಂದೆ ನಿಮ್ಮೊಂದಿಗೆ ನಾವು ವ್ಯಾಪಾರ ನಡೆಸುವುದಿಲ್ಲ. ನೀವು ಯುದ್ಧವನ್ನು ಮುಂದುವರಿಸಿದರೆ ಅದು ಒಳ್ಳೆಯದಾಗಿರುವುದಿಲ್ಲ… ಅವೆರಡೂ ಪ್ರಬಲ ಪರಮಾಣು ರಾಷ್ಟ್ರಗಳು ಮತ್ತು ಈ ಪರಮಾಣು ಯುದ್ಧ ಸಂಭವಿಸುತ್ತಿತ್ತು ಮತ್ತು ಅದು ಎಲ್ಲಿಗೆ ತಲುಪುತ್ತಿತ್ತು ಎಂದು ಯಾರಿಗೂ ಗೊತ್ತಿರಲಿಲ್ಲ ಮತ್ತು ನಾನು ಅದನ್ನು ನಿಲ್ಲಿಸಿದೆ’ ಎಂದು ಹೇಳಿದರು.

ಟ್ರಂಪ್ ತಮ್ಮ ಆಡಳಿತದ ಇತರ ವಿದೇಶಾಂಗ ನೀತಿ ಯಶಸ್ಸುಗಳನ್ನು ಸಹ ಉಲ್ಲೇಖಿಸಿದರು. ಅಮೆರಿಕವು ಇರಾನ್‌ನ ಸಂಪೂರ್ಣ ಪರಮಾಣು ಸಾಮರ್ಥ್ಯವನ್ನು ತೆಗೆದುಹಾಕಿದೆ ಮತ್ತು ಕೊಸೊವೊ ಮತ್ತು ಸೆರ್ಬಿಯಾ ನಡುವಿನ ಸಂಘರ್ಷವನ್ನು ನಿಲ್ಲಿಸಿದೆ ಎಂದೂ ಅವರು ಹೇಳಿಕೊಂಡಿದ್ದಾರೆ. ಮಾಜಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅದನ್ನು ಮಾಡುತ್ತಿದ್ದರು ಎಂದು ನೀವು ಭಾವಿಸುತ್ತೀರಾ? ನಾನು ಹಾಗೆ ಅಂದುಕೊಳ್ಳುವುದಿಲ್ಲ. ಅವರು ಆ ದೇಶಗಳ ಬಗ್ಗೆ ಎಂದಾದರೂ ಕೇಳಿದ್ದಾರೆಯೆಂದು ನೀವು ಭಾವಿಸುತ್ತೀರಾ? ನಾನು ಹಾಗೆ ಅಂದುಕೊಳ್ಳುವುದಿಲ್ಲ” ಎಂದು ಟ್ರಂಪ್ ಹೇಳಿದರು.

ಟ್ರಂಪ್ ಈ ಹಿಂದೆ ಕೂಡ ಭಾರತ-ಪಾಕ್ ಸಂಘರ್ಷವನ್ನು ನಿಲ್ಲಿಸಿದ್ದಾಗಿ ಪದೇ ಪದೇ ಹೇಳಿದ್ದರು. ಕಳೆದ ಶುಕ್ರವಾರದಂದು ಯುದ್ಧದ ಸಮಯದಲ್ಲಿ “ಐದು ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ” ಎಂದು ಅವರು ಮೊದಲ ಬಾರಿಗೆ ಉಲ್ಲೇಖಿಸಿದರು. ಭಾರತ, ಪಾಕಿಸ್ತಾನ ಯುದ್ದದಲ್ಲಿ ನಾಲ್ಕು ಅಥವಾ ಐದು ವಿಮಾನಗಳನ್ನು ಹೊಡೆದುರುಳಿಸಲಾಗಿತ್ತು. ಈ ಎರಡು ಪರಮಾಣು ದೇಶಗಳಾಗಿವೆ ಎಂದು ಅವರು ರಿಪಬ್ಲಿಕನ್ ಸೆನೆಟರ್‌ಗಳಿಗಾಗಿ ಆಯೋಜಿಸಿದ್ದ ಔತಣಕೂಟದಲ್ಲಿ ವೈಟ್‌ಹೌಸ್‌ನಲ್ಲಿ ಮಾಡಿದ ಭಾಷಣದಲ್ಲಿ ಹೇಳಿದರು.

ಮಂಗಳವಾರದಂದು ನಡೆದ ‘ಬಹುಪಕ್ಷೀಯತೆ ಮತ್ತು ವಿವಾದಗಳ ಶಾಂತಿಯುತ ಇತ್ಯರ್ಥ’ ಕುರಿತ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಮುಕ್ತ ಚರ್ಚೆಯಲ್ಲಿ ಅಮೆರಿಕದ ಕಾರ್ಯಕಾರಿ ರಾಯಭಾರಿ ಡೊರೊಥಿ ಶಿಯಾ ಅವರು, ದೇಶ ದೇಶಗಳ ನಡುವಿನ ವಿವಾದಗಳಿಗೆ ಶಾಂತಿಯುತ ಪರಿಹಾರಗಳನ್ನು ಕಂಡುಕೊಳ್ಳಲು ಅಮೆರಿಕವು ವಿಶ್ವಾದ್ಯಂತ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದು ಹೇಳಿದರು. ಕಳೆದ ಮೂರು ತಿಂಗಳಲ್ಲಿ “ಇಸ್ರೇಲ್ ಮತ್ತು ಇರಾನ್ ನಡುವೆ, ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ ಮತ್ತು ರುವಾಂಡಾ ನಡುವೆ, ಮತ್ತು ಭಾರತ ಮತ್ತು ಪಾಕಿಸ್ತಾನ ನಡುವೆ ಅಮೆರಿಕದ ನಾಯಕತ್ವವು ಉದ್ವಿಗ್ನತೆಯನ್ನು ಕಡಿಮೆ ಮಾಡಿದೆ” ಎಂದು ಶಿಯಾ ಉಲ್ಲೇಖಿಸಿದರು.

ವಿಶ್ವಸಂಸ್ಥೆಗೆ ಭಾರತದ ಖಾಯಂ ಪ್ರತಿನಿಧಿ ರಾಯಭಾರಿ ಪರ್ವತನೇನಿ ಹರೀಶ್ ಅವರು ಈ ಭದ್ರತಾ ಮಂಡಳಿಯ ಸಭೆಯಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಮಾತನಾಡಿದರು. ಈ ದಾಳಿಯ ಹೊಣೆಯನ್ನು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಮುಖವಾಡವಾದ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಹೊತ್ತುಕೊಂಡಿತ್ತು. ಇಂತಹ ಭಯೋತ್ಪಾದನೆ ಚಟುವಟಿಕೆಯನ್ನು ಹತ್ತಿಕ್ಕಲು ಸೂಕ್ತ ಕ್ರಮಗಳನ್ನು ತಗೆದುಕೊಳ್ಳಲೇಬೇಕು ಎಂದು ಹರೀಶ್ ಒತ್ತಿ ಹೇಳಿದರು.

ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಘೋರ ಭಯೋತ್ಪಾದಕ ದಾಳಿಯ ಪರಿಣಾಮವಾಗಿ 26 ಅಮಾಯಕ ಪ್ರವಾಸಿಗರನ್ನು ಕೊಂದಿದ್ದರಿಂದ ಮತ್ತು ಏಪ್ರಿಲ್ 25ರ  ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಹೇಳಿಕೆಯ ಆಧಾರದ ಮೇಲೆ ಭಾರತವು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿತು ಎಂದು ಅವರು ಹೇಳಿದರು.

ಭದ್ರತಾ ಮಂಡಳಿಯ ಸದಸ್ಯರು ಈ ಭಯೋತ್ಪಾದಕ ಕೃತ್ಯದ ಅಪರಾಧಿಗಳು, ಸಂಘಟಕರು, ಹಣಕಾಸುದಾರರು ಮತ್ತು ಪ್ರಾಯೋಜಕರನ್ನು ಹೊಣೆಗಾರರನ್ನಾಗಿ ಮಾಡಲು ಮತ್ತು ಅವರನ್ನು ನ್ಯಾಯದ ಕಟಕಟೆಗೆ ತರಲು ಒತ್ತು ನೀಡಿದರು ಎಂದು ಹರೀಶ್ ಒತ್ತಿ ಹೇಳಿದರು. ಭಾರತವು ತನ್ನ ಪ್ರಾಥಮಿಕ ಉದ್ದೇಶಗಳನ್ನು ಸಾಧಿಸಿದ ನಂತರ, ಪಾಕಿಸ್ತಾನದ ಕೋರಿಕೆಯ ಮೇರೆಗೆ ಯುದ್ಧವನ್ನು ನೇರವಾಗಿ ನಿಲ್ಲಿಸಲಾಯಿತು ಎಂದು ಅವರು ಹೇಳಿದರು.

ಮೇ 10ರಂದು ವಾಷಿಂಗ್ಟನ್ ಮಧ್ಯಸ್ಥಿಕೆಯಲ್ಲಿ ಸುದೀರ್ಘ ಮಾತುಕತೆಗಳ ನಂತರ ಭಾರತ ಮತ್ತು ಪಾಕಿಸ್ತಾನಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದರು. ಯುದ್ಧ ಪ್ರಾರಂಭವಾದಗಿನಿಂದ ಪರಿಸ್ಥಿತಿಯನ್ನು ನಿವಾರಿಸಲು ಸಹಾಯ ಮಾಡಿದ್ದೇನೆ ಮತ್ತು ಸಂಘರ್ಷವನ್ನು ನಿಲ್ಲಿಸಿದರೆ ಅಮೆರಿಕವು ಭಾರತ ಪಾಕಿಸ್ತಾನದೊಂದಿಗೆ “ಹೆಚ್ಚು ಹೆಚ್ಚು ವ್ಯಾಪಾರ” ಮಾಡಲಿದೆ ಎಂದು ಹೇಳಿದ್ದೇನೆ ಎಂದು ಅನೇಕ ಸಂದರ್ಭಗಳಲ್ಲಿ ತಮ್ಮ ಹೇಳಿಕೆಯನ್ನು ಪುನರಾವರ್ತಿಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಟ್ರಂಪ್ ಜೂನ್‌ನಲ್ಲಿ ಕೆನಡಾದ ಕಾನಾನ್‌ಸ್ಕಿಸ್‌ನಲ್ಲಿ ನಡೆದ ಜಿ7 ನಾಯಕರ ಶೃಂಗಸಭೆಯಲ್ಲಿ ಭೇಟಿಯಾಗಲು ನಿಗದಿಯಾಗಿತ್ತು. ಆದರೆ ಅಮೆರಿಕ ಅಧ್ಯಕ್ಷರು ಬೇಗನೆ ವಾಷಿಂಗ್ಟನ್‌ಗೆ ಮರಳಿದರು. ಕಾನಾನ್‌ಸ್ಕಿಸ್‌ನಿಂದ ನಿರ್ಗಮಿಸುವ ಮೊದಲು ಮೋದಿ ಟ್ರಂಪ್‌ರೊಂದಿಗೆ 35 ನಿಮಿಷಗಳ ದೂರವಾಣಿ ಸಂಭಾಷಣೆ ನಡೆಸಿದರು.

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಕಾನಾನ್‌ಸ್ಕಿಸ್‌ನಿಂದ ನೀಡಿದ ವಿಡಿಯೋ ಸಂದೇಶದಲ್ಲಿ, ಆಪರೇಷನ್ ಸಿಂಧೂರ್ ಸಂದರ್ಭದಲ್ಲಿ ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಬಗ್ಗೆಯಾಗಲಿ ಅಥವಾ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ದದ ಕುರಿತು ಅಮೆರಿಕದ ಮಧ್ಯಸ್ಥಿಕೆಯ ಯಾವುದೇ ಪ್ರಸ್ತಾಪದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಮೋದಿ ಟ್ರಂಪ್‌ಗೆ ಸ್ಪಷ್ಟವಾಗಿ ತಿಳಿಸಿದರು ಎಂದು ಹೇಳಿದರು. ಭಾರತವು ಯಾವುದೇ ದೇಶದ ಮಧ್ಯಸ್ಥಿಕೆಯನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದು ಪ್ರಧಾನಿ ಮೋದಿಯವರು ಟ್ರಂಪ್ ಅವರಿಗೆ  ದೃಢವಾಗಿ ಹೇಳಿದ್ದಾರೆ ಎಂದು ಮಿಸ್ರಿ ಹೇಳಿದರು.  ಯುದ್ದವನ್ನು ನಿಲ್ಲಿಸುವ ಚರ್ಚೆಯು ಭಾರತ ಮತ್ತು ಪಾಕಿಸ್ತಾನದ ನಡುವೆಯೇ ನೇರವಾಗಿ ನಡೆಯಿತು ಮತ್ತು ಇದು ಪಾಕಿಸ್ತಾನದ ಕೋರಿಕೆಯ ಮೇರೆಗೆ ಯುದ್ಧ ನಿಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಯಿತು ಎಂದು ಸ್ಪಷ್ಟಪಡಿಸಿದರು.

ಮೋದಿ ಮೌನ: ಜೈರಾಮ್ ರಮೇಶ್ ತರಾಟೆ

ಕಳೆದ 73 ದಿನಗಳಲ್ಲಿ ಟ್ರಂಪ್ ಅವರು 25 ಬಾರಿ ತಾನೇ ಭಾರತ ಪಾಕಿಸ್ತಾನಗಳ ನಡುವಿನ ಯುದ್ಧವನ್ನು ನಿಲ್ಲಿಸಿರುವುದಾಗಿ ಹೇಳಿದ್ದಾರೆ. ಆದರೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಈ ಕುರಿತು ಸಂಪೂರ್ಣವಾಗಿ ಮೌನವಾಗಿದ್ದಾರೆ. ಮೋದಿಯವರು ವಿದೇಶ ಪ್ರವಾಸ ಮಾಡಲು ಮತ್ತು ಸ್ವದೇಶದಲ್ಲಿ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಅಸ್ಥಿರಗೊಳಿಸಲು ಮಾತ್ರ ಸಮಯವನ್ನು ವ್ಯರ್ಥಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ “X” ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ: ಮೂರನೇ ದಿನವೂ ಸಂಸತ್ ಕಲಾಪ ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...