Homeಅಂತರಾಷ್ಟ್ರೀಯಭಾರತ-ಪಾಕ್ ಯುದ್ದ ತಾನೇ ನಿಲ್ಲಿಸಿದ್ದು, ಈ ಸಂದರ್ಭ 5 ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ: ಪುನರುಚ್ಚರಿಸಿದ ಟ್ರಂಪ್

ಭಾರತ-ಪಾಕ್ ಯುದ್ದ ತಾನೇ ನಿಲ್ಲಿಸಿದ್ದು, ಈ ಸಂದರ್ಭ 5 ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ: ಪುನರುಚ್ಚರಿಸಿದ ಟ್ರಂಪ್

- Advertisement -
- Advertisement -

ನ್ಯೂಯಾರ್ಕ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ ಮತ್ತು ಪಾಕಿಸ್ತಾನದ ನಡುವಿನ ಇತ್ತೀಚಿನ ಯುದ್ಧವನ್ನು ತಾನು ನಿಲ್ಲಿಸಿದ್ದೇನೆ ಮತ್ತು ಈ ಸಂದರ್ಭದಲ್ಲಿ ಐದು ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂಬ ತಮ್ಮ ಹೇಳಿಕೆಯನ್ನು ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಬಹುಶಃ ಪರಮಾಣು ಯುದ್ಧದಲ್ಲಿ ಕೊನೆಗೊಳ್ಳಬಹುದಾಗಿದ್ದ ಈ ಸಂಘರ್ಷವನ್ನು ತಡೆಯಲು ತಾನು ಮಧ್ಯಪ್ರವೇಶಿಸಿದೆ ಎಂದು ಟ್ರಂಪ್ ಮಂಗಳವಾರ ಹೇಳಿಕೊಂಡಿದ್ದಾರೆ.

ವೈಟ್‌ಹೌಸ್‌ನಲ್ಲಿ ನಡೆದ ಕಾಂಗ್ರೆಸ್ ಸದಸ್ಯರ ಸ್ವಾಗತ ಸಮಾರಂಭದಲ್ಲಿ ಮಾತನಾಡಿದ ಟ್ರಂಪ್, ಭಾರತ ಮತ್ತು ಪಾಕಿಸ್ತಾನ ಯುದ್ದವನ್ನು ಮಾತ್ರವಲ್ಲದೇ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ ಮತ್ತು ರುವಾಂಡಾ ನಡುವಿನ ಯುದ್ಧವನ್ನು ತಾನು ನಿಲ್ಲಿಸಿರುವುದಾಗಿ ಹೇಳಿದ್ದಾರೆ. ಅವರು ಪರಿಸ್ಥಿತಿಯನ್ನು ವಿವರಿಸುತ್ತಾ, “ಭಾರತ-ಪಾಕಿಸ್ತಾನದವರು ಐದು ವಿಮಾನಗಳನ್ನು ಹೊಡೆದುರುಳಿಸಿದರು, ಅದು ಹಿಂದಕ್ಕೆ-ಮುಂದಕ್ಕೆ ನಡೆಯುತ್ತಿತ್ತು. ನಾನು ಅವರಿಗೆ ಕರೆ ಮಾಡಿ, ‘ಕೇಳಿ, ಇನ್ನು ಮುಂದೆ ನಿಮ್ಮೊಂದಿಗೆ ನಾವು ವ್ಯಾಪಾರ ನಡೆಸುವುದಿಲ್ಲ. ನೀವು ಯುದ್ಧವನ್ನು ಮುಂದುವರಿಸಿದರೆ ಅದು ಒಳ್ಳೆಯದಾಗಿರುವುದಿಲ್ಲ… ಅವೆರಡೂ ಪ್ರಬಲ ಪರಮಾಣು ರಾಷ್ಟ್ರಗಳು ಮತ್ತು ಈ ಪರಮಾಣು ಯುದ್ಧ ಸಂಭವಿಸುತ್ತಿತ್ತು ಮತ್ತು ಅದು ಎಲ್ಲಿಗೆ ತಲುಪುತ್ತಿತ್ತು ಎಂದು ಯಾರಿಗೂ ಗೊತ್ತಿರಲಿಲ್ಲ ಮತ್ತು ನಾನು ಅದನ್ನು ನಿಲ್ಲಿಸಿದೆ’ ಎಂದು ಹೇಳಿದರು.

ಟ್ರಂಪ್ ತಮ್ಮ ಆಡಳಿತದ ಇತರ ವಿದೇಶಾಂಗ ನೀತಿ ಯಶಸ್ಸುಗಳನ್ನು ಸಹ ಉಲ್ಲೇಖಿಸಿದರು. ಅಮೆರಿಕವು ಇರಾನ್‌ನ ಸಂಪೂರ್ಣ ಪರಮಾಣು ಸಾಮರ್ಥ್ಯವನ್ನು ತೆಗೆದುಹಾಕಿದೆ ಮತ್ತು ಕೊಸೊವೊ ಮತ್ತು ಸೆರ್ಬಿಯಾ ನಡುವಿನ ಸಂಘರ್ಷವನ್ನು ನಿಲ್ಲಿಸಿದೆ ಎಂದೂ ಅವರು ಹೇಳಿಕೊಂಡಿದ್ದಾರೆ. ಮಾಜಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅದನ್ನು ಮಾಡುತ್ತಿದ್ದರು ಎಂದು ನೀವು ಭಾವಿಸುತ್ತೀರಾ? ನಾನು ಹಾಗೆ ಅಂದುಕೊಳ್ಳುವುದಿಲ್ಲ. ಅವರು ಆ ದೇಶಗಳ ಬಗ್ಗೆ ಎಂದಾದರೂ ಕೇಳಿದ್ದಾರೆಯೆಂದು ನೀವು ಭಾವಿಸುತ್ತೀರಾ? ನಾನು ಹಾಗೆ ಅಂದುಕೊಳ್ಳುವುದಿಲ್ಲ” ಎಂದು ಟ್ರಂಪ್ ಹೇಳಿದರು.

ಟ್ರಂಪ್ ಈ ಹಿಂದೆ ಕೂಡ ಭಾರತ-ಪಾಕ್ ಸಂಘರ್ಷವನ್ನು ನಿಲ್ಲಿಸಿದ್ದಾಗಿ ಪದೇ ಪದೇ ಹೇಳಿದ್ದರು. ಕಳೆದ ಶುಕ್ರವಾರದಂದು ಯುದ್ಧದ ಸಮಯದಲ್ಲಿ “ಐದು ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ” ಎಂದು ಅವರು ಮೊದಲ ಬಾರಿಗೆ ಉಲ್ಲೇಖಿಸಿದರು. ಭಾರತ, ಪಾಕಿಸ್ತಾನ ಯುದ್ದದಲ್ಲಿ ನಾಲ್ಕು ಅಥವಾ ಐದು ವಿಮಾನಗಳನ್ನು ಹೊಡೆದುರುಳಿಸಲಾಗಿತ್ತು. ಈ ಎರಡು ಪರಮಾಣು ದೇಶಗಳಾಗಿವೆ ಎಂದು ಅವರು ರಿಪಬ್ಲಿಕನ್ ಸೆನೆಟರ್‌ಗಳಿಗಾಗಿ ಆಯೋಜಿಸಿದ್ದ ಔತಣಕೂಟದಲ್ಲಿ ವೈಟ್‌ಹೌಸ್‌ನಲ್ಲಿ ಮಾಡಿದ ಭಾಷಣದಲ್ಲಿ ಹೇಳಿದರು.

ಮಂಗಳವಾರದಂದು ನಡೆದ ‘ಬಹುಪಕ್ಷೀಯತೆ ಮತ್ತು ವಿವಾದಗಳ ಶಾಂತಿಯುತ ಇತ್ಯರ್ಥ’ ಕುರಿತ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಮುಕ್ತ ಚರ್ಚೆಯಲ್ಲಿ ಅಮೆರಿಕದ ಕಾರ್ಯಕಾರಿ ರಾಯಭಾರಿ ಡೊರೊಥಿ ಶಿಯಾ ಅವರು, ದೇಶ ದೇಶಗಳ ನಡುವಿನ ವಿವಾದಗಳಿಗೆ ಶಾಂತಿಯುತ ಪರಿಹಾರಗಳನ್ನು ಕಂಡುಕೊಳ್ಳಲು ಅಮೆರಿಕವು ವಿಶ್ವಾದ್ಯಂತ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದು ಹೇಳಿದರು. ಕಳೆದ ಮೂರು ತಿಂಗಳಲ್ಲಿ “ಇಸ್ರೇಲ್ ಮತ್ತು ಇರಾನ್ ನಡುವೆ, ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ ಮತ್ತು ರುವಾಂಡಾ ನಡುವೆ, ಮತ್ತು ಭಾರತ ಮತ್ತು ಪಾಕಿಸ್ತಾನ ನಡುವೆ ಅಮೆರಿಕದ ನಾಯಕತ್ವವು ಉದ್ವಿಗ್ನತೆಯನ್ನು ಕಡಿಮೆ ಮಾಡಿದೆ” ಎಂದು ಶಿಯಾ ಉಲ್ಲೇಖಿಸಿದರು.

ವಿಶ್ವಸಂಸ್ಥೆಗೆ ಭಾರತದ ಖಾಯಂ ಪ್ರತಿನಿಧಿ ರಾಯಭಾರಿ ಪರ್ವತನೇನಿ ಹರೀಶ್ ಅವರು ಈ ಭದ್ರತಾ ಮಂಡಳಿಯ ಸಭೆಯಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಮಾತನಾಡಿದರು. ಈ ದಾಳಿಯ ಹೊಣೆಯನ್ನು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಮುಖವಾಡವಾದ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಹೊತ್ತುಕೊಂಡಿತ್ತು. ಇಂತಹ ಭಯೋತ್ಪಾದನೆ ಚಟುವಟಿಕೆಯನ್ನು ಹತ್ತಿಕ್ಕಲು ಸೂಕ್ತ ಕ್ರಮಗಳನ್ನು ತಗೆದುಕೊಳ್ಳಲೇಬೇಕು ಎಂದು ಹರೀಶ್ ಒತ್ತಿ ಹೇಳಿದರು.

ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಘೋರ ಭಯೋತ್ಪಾದಕ ದಾಳಿಯ ಪರಿಣಾಮವಾಗಿ 26 ಅಮಾಯಕ ಪ್ರವಾಸಿಗರನ್ನು ಕೊಂದಿದ್ದರಿಂದ ಮತ್ತು ಏಪ್ರಿಲ್ 25ರ  ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಹೇಳಿಕೆಯ ಆಧಾರದ ಮೇಲೆ ಭಾರತವು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿತು ಎಂದು ಅವರು ಹೇಳಿದರು.

ಭದ್ರತಾ ಮಂಡಳಿಯ ಸದಸ್ಯರು ಈ ಭಯೋತ್ಪಾದಕ ಕೃತ್ಯದ ಅಪರಾಧಿಗಳು, ಸಂಘಟಕರು, ಹಣಕಾಸುದಾರರು ಮತ್ತು ಪ್ರಾಯೋಜಕರನ್ನು ಹೊಣೆಗಾರರನ್ನಾಗಿ ಮಾಡಲು ಮತ್ತು ಅವರನ್ನು ನ್ಯಾಯದ ಕಟಕಟೆಗೆ ತರಲು ಒತ್ತು ನೀಡಿದರು ಎಂದು ಹರೀಶ್ ಒತ್ತಿ ಹೇಳಿದರು. ಭಾರತವು ತನ್ನ ಪ್ರಾಥಮಿಕ ಉದ್ದೇಶಗಳನ್ನು ಸಾಧಿಸಿದ ನಂತರ, ಪಾಕಿಸ್ತಾನದ ಕೋರಿಕೆಯ ಮೇರೆಗೆ ಯುದ್ಧವನ್ನು ನೇರವಾಗಿ ನಿಲ್ಲಿಸಲಾಯಿತು ಎಂದು ಅವರು ಹೇಳಿದರು.

ಮೇ 10ರಂದು ವಾಷಿಂಗ್ಟನ್ ಮಧ್ಯಸ್ಥಿಕೆಯಲ್ಲಿ ಸುದೀರ್ಘ ಮಾತುಕತೆಗಳ ನಂತರ ಭಾರತ ಮತ್ತು ಪಾಕಿಸ್ತಾನಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದರು. ಯುದ್ಧ ಪ್ರಾರಂಭವಾದಗಿನಿಂದ ಪರಿಸ್ಥಿತಿಯನ್ನು ನಿವಾರಿಸಲು ಸಹಾಯ ಮಾಡಿದ್ದೇನೆ ಮತ್ತು ಸಂಘರ್ಷವನ್ನು ನಿಲ್ಲಿಸಿದರೆ ಅಮೆರಿಕವು ಭಾರತ ಪಾಕಿಸ್ತಾನದೊಂದಿಗೆ “ಹೆಚ್ಚು ಹೆಚ್ಚು ವ್ಯಾಪಾರ” ಮಾಡಲಿದೆ ಎಂದು ಹೇಳಿದ್ದೇನೆ ಎಂದು ಅನೇಕ ಸಂದರ್ಭಗಳಲ್ಲಿ ತಮ್ಮ ಹೇಳಿಕೆಯನ್ನು ಪುನರಾವರ್ತಿಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಟ್ರಂಪ್ ಜೂನ್‌ನಲ್ಲಿ ಕೆನಡಾದ ಕಾನಾನ್‌ಸ್ಕಿಸ್‌ನಲ್ಲಿ ನಡೆದ ಜಿ7 ನಾಯಕರ ಶೃಂಗಸಭೆಯಲ್ಲಿ ಭೇಟಿಯಾಗಲು ನಿಗದಿಯಾಗಿತ್ತು. ಆದರೆ ಅಮೆರಿಕ ಅಧ್ಯಕ್ಷರು ಬೇಗನೆ ವಾಷಿಂಗ್ಟನ್‌ಗೆ ಮರಳಿದರು. ಕಾನಾನ್‌ಸ್ಕಿಸ್‌ನಿಂದ ನಿರ್ಗಮಿಸುವ ಮೊದಲು ಮೋದಿ ಟ್ರಂಪ್‌ರೊಂದಿಗೆ 35 ನಿಮಿಷಗಳ ದೂರವಾಣಿ ಸಂಭಾಷಣೆ ನಡೆಸಿದರು.

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಕಾನಾನ್‌ಸ್ಕಿಸ್‌ನಿಂದ ನೀಡಿದ ವಿಡಿಯೋ ಸಂದೇಶದಲ್ಲಿ, ಆಪರೇಷನ್ ಸಿಂಧೂರ್ ಸಂದರ್ಭದಲ್ಲಿ ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಬಗ್ಗೆಯಾಗಲಿ ಅಥವಾ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ದದ ಕುರಿತು ಅಮೆರಿಕದ ಮಧ್ಯಸ್ಥಿಕೆಯ ಯಾವುದೇ ಪ್ರಸ್ತಾಪದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಮೋದಿ ಟ್ರಂಪ್‌ಗೆ ಸ್ಪಷ್ಟವಾಗಿ ತಿಳಿಸಿದರು ಎಂದು ಹೇಳಿದರು. ಭಾರತವು ಯಾವುದೇ ದೇಶದ ಮಧ್ಯಸ್ಥಿಕೆಯನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದು ಪ್ರಧಾನಿ ಮೋದಿಯವರು ಟ್ರಂಪ್ ಅವರಿಗೆ  ದೃಢವಾಗಿ ಹೇಳಿದ್ದಾರೆ ಎಂದು ಮಿಸ್ರಿ ಹೇಳಿದರು.  ಯುದ್ದವನ್ನು ನಿಲ್ಲಿಸುವ ಚರ್ಚೆಯು ಭಾರತ ಮತ್ತು ಪಾಕಿಸ್ತಾನದ ನಡುವೆಯೇ ನೇರವಾಗಿ ನಡೆಯಿತು ಮತ್ತು ಇದು ಪಾಕಿಸ್ತಾನದ ಕೋರಿಕೆಯ ಮೇರೆಗೆ ಯುದ್ಧ ನಿಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಯಿತು ಎಂದು ಸ್ಪಷ್ಟಪಡಿಸಿದರು.

ಮೋದಿ ಮೌನ: ಜೈರಾಮ್ ರಮೇಶ್ ತರಾಟೆ

ಕಳೆದ 73 ದಿನಗಳಲ್ಲಿ ಟ್ರಂಪ್ ಅವರು 25 ಬಾರಿ ತಾನೇ ಭಾರತ ಪಾಕಿಸ್ತಾನಗಳ ನಡುವಿನ ಯುದ್ಧವನ್ನು ನಿಲ್ಲಿಸಿರುವುದಾಗಿ ಹೇಳಿದ್ದಾರೆ. ಆದರೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಈ ಕುರಿತು ಸಂಪೂರ್ಣವಾಗಿ ಮೌನವಾಗಿದ್ದಾರೆ. ಮೋದಿಯವರು ವಿದೇಶ ಪ್ರವಾಸ ಮಾಡಲು ಮತ್ತು ಸ್ವದೇಶದಲ್ಲಿ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಅಸ್ಥಿರಗೊಳಿಸಲು ಮಾತ್ರ ಸಮಯವನ್ನು ವ್ಯರ್ಥಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ “X” ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ: ಮೂರನೇ ದಿನವೂ ಸಂಸತ್ ಕಲಾಪ ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...