Homeದಲಿತ್ ಫೈಲ್ಸ್ತಮಿಳುನಾಡಿನ ಚರ್ಚ್‌ನಲ್ಲಿ ಜಾತಿ ತಾರತಮ್ಯ; ದಲಿತ ಕ್ರೈಸ್ತರಿಂದ ಉಪವಾಸ ಸತ್ಯಾಗ್ರಹ

ತಮಿಳುನಾಡಿನ ಚರ್ಚ್‌ನಲ್ಲಿ ಜಾತಿ ತಾರತಮ್ಯ; ದಲಿತ ಕ್ರೈಸ್ತರಿಂದ ಉಪವಾಸ ಸತ್ಯಾಗ್ರಹ

- Advertisement -
- Advertisement -

ತಮಿಳುನಾಡಿನ ತಿರುಚಿಯ ತುರೈಯೂರ್ ಬಳಿಯ ಕೊಟ್ಟಪಾಳಯಂ ಗ್ರಾಮದ ದಲಿತ ಕ್ರೈಸ್ತರ ಗುಂಪೊಂದು ಜಿಲ್ಲಾಧೀಕಾರಿಗಳ ಕಷೇರಿ ಎದುರು ಸೋಮವಾರ ಉಪವಾಸ ಸತ್ಯಾಗ್ರಹ ನಡೆಸಿದರು. “ಚರ್ಚ್‌ನಲ್ಲಿ ತಾವು ತಾರತಮ್ಯವನ್ನು ಎದುರಿಸುತ್ತಿದ್ದೇವೆ, ಶತಮಾನಗಳಷ್ಟು ಹಳೆಯದಾದ ಸೇಂಟ್ ಮೇರಿ ಮ್ಯಾಗ್ಡಲೀನ್ ಚರ್ಚ್‌ನ ಉತ್ಸವ ಮತ್ತು ಇತರ ಚಟುವಟಿಕೆಗಳಲ್ಲಿ ಭಾಗವಹಿಸಲು ನಮಗೆ ಅವಕಾಶ ನೀಡುತ್ತಿಲ್ಲ” ಎಂದು ಆರೋಪಿಸಿದರು.

ಜುಲೈ 14 ರಂದು ಉತ್ಸವ ಪ್ರಾರಂಭವಾಯಿತು. ಕುಂಭಕೋಣಂನ ರೋಮನ್ ಕ್ಯಾಥೋಲಿಕ್ ಡಯಾಸಿಸ್ ಅಡಿಯಲ್ಲಿ ಚರ್ಚ್ ಕಾರ್ಯನಿರ್ವಹಿಸುತ್ತದೆ. “ಪ್ಯಾರಿಷ್‌ನಲ್ಲಿ ನಡೆಯುತ್ತಿರುವ ಜಾತಿ ತಾರತಮ್ಯ”ದ ವಿರುದ್ಧ ತಮ್ಮ ಪ್ರತಿಭಟನೆಯನ್ನು ದಾಖಲಿಸಲು ಮಂಗಳವಾರ ನಿಗದಿಯಾಗಿರುವ ರಥ ಮೆರವಣಿಗೆಯಲ್ಲಿ ಭಾಗವಹಿಸುವುದಿಲ್ಲ ಎಂದು ಬಿಷಪ್ ಜೀವನಂದಂ ಅಮಲನಾಥನ್ ಹೇಳಿದರು.

ದಶಕಗಳಿಂದ, ತಮಗೆ ಚರ್ಚ್‌ಗೆ ಚಂದಾದಾರಿಕೆ ಪಾವತಿಸಲು ಅವಕಾಶವಿಲ್ಲ, ಯೋಜನಾ ಸಮಿತಿಗಳಿಂದ ಹೊರಗಿಡಲಾಗಿದೆ ಎಂದು ದಲಿತ ಕ್ರೈಸ್ತರು ಹೇಳಿದರು. ಇದಲ್ಲದೆ, ಚರ್ಚ್ ರಥವನ್ನು ನಾವು ವಾಸಿಸುವ ಪ್ರದೇಶಕ್ಕೆ ತರುವುದಕ್ಕೆ ಬಿಡುವುದಿಲ್ಲ ಎಂದು ಅವರು ಆರೋಪಿಸಿದರು. “ಇದು ನಮ್ಮ ಹಬ್ಬವಲ್ಲ ಎಂದು ಪಾದ್ರಿ ಮತ್ತು ಹಲವಾರು ಪ್ರಬಲ ಜಾತಿಯ ಕ್ರಿಶ್ಚಿಯನ್ನರು ನಮಗೆ ಹೇಳಿದರು” ಎಂದು ನೋವು ತೋಡಿಕೊಂಡಿದ್ದಾರೆ.

ಇತರರಿಂದ ಸ್ವೀಕರಿಸುವಂತೆ ಚರ್ಚ್ ಆಡಳಿತ  ನಮ್ಮಿಂದ ಚಂದಾ ಸಂಗ್ರಹಿಸಲು ನಿರಾಕರಿಸುತ್ತದೆ. ಬದಲಾಗಿ, ದೇಣಿಗೆ ನೀಡುವಂತೆ ನಮ್ಮನ್ನು ಕೇಳಲಾಗುತ್ತದೆ ಎಂದು ದೀರ್ಘಕಾಲದ ಪ್ಯಾರಿಷನರ್ ಜೆ. ದಾಸ್ ಪ್ರಕಾಶ್ ಹೇಳಿದರು. ಜುಲೈ 6 ರಂದು ನಡೆದ ಉತ್ಸವ ಯೋಜನಾ ಸಭೆಯ ಸಂದರ್ಭದಲ್ಲಿ ದಲಿತರಿಗೆ ಬೆದರಿಕೆ ಹಾಕಿದ್ದಾರೆ ಎಂದು ಹೇಳಲಾದ ಪ್ಯಾರಿಷ್ ಪಾದ್ರಿ ಮತ್ತು ಇತರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ವಾರದ ಕುಂದುಕೊರತೆಗಳ ಸಭೆಯಲ್ಲಿ ಪ್ರತಿಭಟನಾಕಾರರು ಡಿಆರ್‌ಒಗೆ ಅರ್ಜಿ ಸಲ್ಲಿಸಿದರು.

“ನಮ್ಮನ್ನು ಜಾತಿವಾದಿ ಪದಗಳಿಂದ ನಿಂದಿಸಲಾಯಿತು, ಮಧ್ಯಪ್ರವೇಶಿಸದಂತೆ ಎಚ್ಚರಿಸಲಾಯಿತು” ಎಂದು ಮತ್ತೊಬ್ಬ ಸದಸ್ಯರು ಹೇಳಿದರು. ಪ್ಯಾರಿಷನರ್ ಆರ್. ರಾಜ್ ನೊಬಿಲಿ, “ನಾವು ಒಮ್ಮೆ ಚಂದಾದಾರಿಕೆಯನ್ನು ಪಾವತಿಸಿದರೆ, ನಮಗೆ ಪ್ರಶ್ನಿಸುವ ಹಕ್ಕಿದೆ. ಅದಕ್ಕಾಗಿಯೇ ಅವರು ನಮ್ಮಿಂದ ಅದನ್ನು ಸಂಗ್ರಹಿಸುತ್ತಿಲ್ಲ. ಹಬ್ಬದ ಸಮಯದಲ್ಲಿ ಏಳು ರಥಗಳನ್ನು ಓಡಿಸುತ್ತಿದ್ದರೂ, ಚಿಕ್ಕದು ಕೂಡ ನಮ್ಮ ಬೀದಿಗಳಿಗೆ ಪ್ರವೇಶಿಸುವುದಿಲ್ಲ” ಎಂದರು.

“ಜಿಲ್ಲಾ ಆಡಳಿತವು ಕನಿಷ್ಠ ರಥವು ನಮ್ಮ ಪ್ರದೇಶಕ್ಕೆ ಬರುವಂತೆ ನೋಡಿಕೊಳ್ಳಬೇಕು” ಎಂದು ಅವರು ಹೇಳಿದರು. “ಇದು ಸಂವಿಧಾನವು ಖಾತರಿಪಡಿಸಿದ ಸಮಾನತೆಯ ಉಲ್ಲಂಘನೆಯಾಗಿದೆ. ಇದನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ, ಯಾರೂ ಮಧ್ಯಪ್ರವೇಶಿಸಿಲ್ಲ” ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಾನವ ಹಕ್ಕುಗಳ ವಕೀಲ ಜೋ ಕೆನಡಿ ಹೇಳಿದರು.

“ಚರ್ಚ್ ಈ ಜಾತಿ ಗೋಡೆಯನ್ನು ಒಳಗಿನಿಂದ ಕೆಡವಬೇಕು” ಎಂದು ಅವರು ಹೇಳಿದರು. ಅವರ ಇತರ ಬೇಡಿಕೆಗಳಲ್ಲಿ ಆಂತರಿಕ ಪ್ಯಾರಿಷ್ ಕೌನ್ಸಿಲ್ ರಚನೆ, ಧಾರ್ಮಿಕ ಮತ್ತು ಉತ್ಸವ ಕಾರ್ಯಕ್ರಮಗಳಲ್ಲಿ ಸಮಾನ ಹಕ್ಕುಗಳು ಮತ್ತು ಜಾತಿ ಆಧಾರಿತ ತಾರತಮ್ಯಕ್ಕಾಗಿ ಕಾನೂನು ಕ್ರಮ ಸೇರಿವೆ. ಪ್ಯಾರಿಷ್‌ನಲ್ಲಿ ನಡೆಯುತ್ತಿರುವ ಜಾತಿ ತಾರತಮ್ಯದಿಂದಾಗಿ ಮಂಗಳವಾರ ರಥೋತ್ಸವವನ್ನು ಬಹಿಷ್ಕರಿಸುವುದಾಗಿ ಬಿಷಪ್ ಜೀವನಂದಂ ಅಮಲನಾಥನ್ ತಿಳಿಸಿದರು ಎಂದು ‘ಟಿಎನ್‌ಐಇ’ ವರದಿ ಮಾಡಿದೆ.

ದಲಿತ ಕ್ರೈಸ್ತರಿಗೆ ಸಮಾನ ಹಕ್ಕುಗಳನ್ನು ನೀಡದಿರಲು ಪ್ರಬಲ ಜಾತಿಯ ಕ್ರೈಸ್ತರು ತಮ್ಮ ನಿಲುವಿನಲ್ಲಿ ಹಠಮಾರಿ ಎಂದು ಅವರು ಹೇಳಿದರು. ಆದರೂ, ಚರ್ಚ್ ಯಾರ ವಿರುದ್ಧವೂ ತಾರತಮ್ಯ ಮಾಡಿಲ್ಲ ಎಂದು ಅವರು ಸಮರ್ಥಿಸಿಕೊಂಡರು.

ಆಂಧ್ರಪ್ರದೇಶ: ದಲಿತ ಯುವಕನ ಮೇಲೆ ಅಮಾನವೀಯ ಹಲ್ಲೆ; ಮೂವರ ವಿರುದ್ಧ ದೂರು ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...