Homeಮುಖಪುಟಬಿಜೆಪಿ ಸಂಸದನ ಮಗ, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಸಹಾಯಕ ಅಡ್ವೊಕೇಟ್ ಜನರಲ್ ಆಗಿ ನೇಮಿಸಿದ...

ಬಿಜೆಪಿ ಸಂಸದನ ಮಗ, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಸಹಾಯಕ ಅಡ್ವೊಕೇಟ್ ಜನರಲ್ ಆಗಿ ನೇಮಿಸಿದ ಹರಿಯಾಣ ಸರ್ಕಾರ!

- Advertisement -
- Advertisement -

ಐಎಎಸ್ ಅಧಿಕಾರಿಯೊಬ್ಬರ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ರಾಜ್ಯಸಭಾ ಸಂಸದ ಸುಭಾಷ್ ಬರಾಲ ಅವರ ಮಗ ವಿಕಾಸ್ ಬರಾಲ ಅವರನ್ನು ಹರಿಯಾಣ ಸರ್ಕಾರ ಸಹಾಯಕ ಅಡ್ವೊಕೇಟ್ ಜನರಲ್ (ಎಎಜಿ) ಆಗಿ ನೇಮಿಸಿದೆ.

2017ರ ಪ್ರಕರಣದಲ್ಲಿ ಆರೋಪಿಯಾಗಿರುವ ವಿಕಾಸ್ ಅವರ ಹೆಸರು, ಸಹಾಯಕ ಅಡ್ವೊಕೇಟ್ ಜನರಲ್‌ಗಳು, ಡೆಪ್ಯುಟಿ ಅಡ್ವೊಕೇಟ್ ಜನರಲ್‌ಗಳು, ಹಿರಿಯ ಡೆಪ್ಯುಟಿ ಅಡ್ವೊಕೇಟ್ ಜನರಲ್‌ಗಳು ಮತ್ತು ಹೆಚ್ಚುವರಿ ಅಡ್ವೊಕೇಟ್ ಜನರಲ್‌ಗಳ ಹುದ್ದೆಗಳಿಗೆ ಹೊಸದಾಗಿ ನೇಮಿಸಲಾದ 97 ಮಂದಿಯ ಪಟ್ಟಿಯಲ್ಲಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಲೈಂಗಿಕ ಕಿರುಕುಳ ಪ್ರಕರಣದ ವಿಚಾರಣೆ ಇನ್ನೂ ಚಂಡೀಗಢ ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ವಿಕಾಸ್ ಪ್ರಸ್ತುತ ಜಾಮೀನಿನ ಮೇಲೆ ಇದ್ದಾರೆ ಎಂದು ವರದಿ ತಿಳಿಸಿದೆ.

ವಿಕಾಸ್ ಮತ್ತು ಆತನ ಸ್ನೇಹಿತ ಆಶಿಶ್ ಕುಮಾರ್ ವಿರುದ್ಧ ಆಗಸ್ಟ್ 5, 2017 ರಂದು ಐಪಿಸಿ ಸೆಕ್ಷನ್ 354 ಡಿ, 341, 365 ಮತ್ತು 511ರ ಅಡಿಯಲ್ಲಿ ಹಾಗೂ ಕುಡಿದು ವಾಹನ ಚಲಾಯಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

ಹರಿಯಾಣ ಕೇಡರ್ ಐಎಎಸ್ ಅಧಿಕಾರಿ ವಿ.ಎಸ್ ಕುಂಡು ಅವರ ಪುತ್ರಿ ವರ್ಣಿಕಾ ಕುಂಡು ಅವರು ದೂರು ದಾಖಲಿಸಿದ್ದರು. ಚಂಡೀಗಢದಲ್ಲಿ ತಡರಾತ್ರಿ ತಮ್ಮ ವಾಹನವನ್ನು ಬೆನ್ನಟ್ಟಿ ಬಲವಂತವಾಗಿ ವಾಹನದೊಳಗೆ ಪ್ರವೇಶಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ್ದರು.

ವರ್ಣಿಕಾ ಅವರ ದೂರು ಆಧರಿಸಿ ಸೆಕ್ಟರ್ 26 ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು ಮತ್ತು ಆಗಸ್ಟ್ 9, 2017ರಂದು ವಿಕಾಸ್ ಮತ್ತು ಆಶಿಶ್ ಇಬ್ಬರನ್ನೂ ಪೊಲೀಸರು ಬಂಧಿಸಿದ್ದರು. ಅದೇ ವರ್ಷ ಅಕ್ಟೋಬರ್‌ನಲ್ಲಿ ಆರೋಪಿಗಳ ವಿರುದ್ಧ ಆರೋಪಗಳನ್ನು ಹೊರಿಸಲಾಗಿತ್ತು.

ವಿಕಾಸ್ ಅವರನ್ನು 2018ರ ಜನವರಿಯಲ್ಲಿ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಜಾಮೀನು ನೀಡುವವರೆಗೂ ಚಂಡೀಗಢದ ಬುರೈಲ್‌ನಲ್ಲಿರುವ ಮಾದರಿ ಜೈಲಿನಲ್ಲಿ ಇರಿಸಲಾಗಿತ್ತು. ಪ್ರಕರಣದ ಮುಂದಿನ ವಿಚಾರಣೆಯ ದಿನಾಂಕವನ್ನು ಆಗಸ್ಟ್ 2, 2025 ರಂದು ರಕ್ಷಣಾ ಸಾಕ್ಷ್ಯಗಳ ದಾಖಲಾತಿಗಾಗಿ ನಿಗದಿಪಡಿಸಲಾಗಿದೆ.

ಘಟನೆ ನಡೆದ ಸಮಯದಲ್ಲಿ ವಿಕಾಸ್ ಕಾನೂನು ವಿದ್ಯಾರ್ಥಿಯಾಗಿದ್ದರು. ಡಿಸೆಂಬರ್ 2017 ರಲ್ಲಿ, ಕುರುಕ್ಷೇತ್ರ ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗೆ ಹಾಜರಾಗಲು ಅವರಿಗೆ ಹೈಕೋರ್ಟ್ ಅನುಮತಿ ನೀಡಿತ್ತು.

ಸುಭಾಷ್ ಬರಾಲ ಡಿಸೆಂಬರ್ 2014ರಿಂದ ಜುಲೈ 2020 ರವರೆಗೆ ಹರಿಯಾಣ ಬಿಜೆಪಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಕ್ಟೋಬರ್ 2019ರ ವಿಧಾನಸಭಾ ಚುನಾವಣೆಯಲ್ಲಿ ಫತೇಹಾಬಾದ್ ಜಿಲ್ಲೆಯ ತೋಹಾನಾದಿಂದ ಸ್ಪರ್ಧಿಸಿದ್ದ ಅವರು ಸೋಲನುಭವಿಸಿದ್ದರು.

ನಂತರ ಅವರು, ಹರಿಯಾಣ ಬ್ಯೂರೋ ಆಫ್ ಪಬ್ಲಿಕ್ ಎಂಟರ್‌ಪ್ರೈಸಸ್‌ನ ಅಧ್ಯಕ್ಷರಾಗಿ ನೇಮಕಗೊಂಡರು. ಫೆಬ್ರವರಿ, 2024 ರಲ್ಲಿ ಹರಿಯಾಣದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದರು.

ಐಎಎಸ್ ಅಧಿಕಾರಿ ವಿ.ಎಸ್ ಕುಂಡು ಡಿಸೆಂಬರ್ 2022ರಲ್ಲಿ ನಿವೃತ್ತರಾಗಿದ್ದು, ಪ್ರಸ್ತುತ ಹರಿಯಾಣದ ಕಂದಾಯ ಆಯೋಗದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಕಳೆದ ಮಂಗಳವಾರ, ಅವರು ಹರಿಯಾಣ ಸಚಿವ ವಿಪುಲ್ ಗೋಯೆಲ್ ಅವರ ಅಧ್ಯಕ್ಷತೆಯಲ್ಲಿ ಭೂ ದಾಖಲೆಗಳ ಡಿಜಿಟಲೀಕರಣ ಮತ್ತು ಅಧಿಕಾರಿಗಳ ತರಬೇತಿ ಕುರಿತು ನಡೆದ ಸಭೆಯಲ್ಲಿ ಭಾಗವಹಿಸಿದ್ದರು.

ಧರ್ಮಸ್ಥಳ ಪ್ರಕರಣ: ಮಾಧ್ಯಮ ನಿರ್ಬಂಧ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...