Homeಕರ್ನಾಟಕ'ಈದಿನ.ಕಾಮ್' ಯೂಟ್ಯೂಬ್‌ ಚಾನೆಲ್‌ 'ಬ್ಲಾಕ್' ಮಧ್ಯಂತರ ಆದೇಶ ತೆರವು

‘ಈದಿನ.ಕಾಮ್’ ಯೂಟ್ಯೂಬ್‌ ಚಾನೆಲ್‌ ‘ಬ್ಲಾಕ್’ ಮಧ್ಯಂತರ ಆದೇಶ ತೆರವು

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸುತ್ತಮುತ್ತ ನಡೆದಿದ್ದ ಕೊಲೆ ಪ್ರಕರಣಗಳು ಮತ್ತು ಸೌಜನ್ಯ ಸಾಮೂಹಿಕ ಅತ್ಯಾಚಾರ-ಕೊಲೆ ಪ್ರಕರಣ ಕುರಿತು ನಿರಂತರ ಸುದ್ದಿ ಮಾಡಿದ್ದಕ್ಕೆ ಕೋರ್ಟ್‌ ಮೂಲಕ ಆದೇಶ ಕೊಡಿಸಿ ‘ಈದಿನ.ಕಾಮ್’ ಯೂಟ್ಯೂಬ್‌ ಚಾನೆಲ್‌ ಅನ್ನು ಬ್ಲಾಕ್ ಮಾಡಿಸಲಾಗಿತ್ತು. ಪ್ರಕರಣದ ಕುರಿತು ಇಂದು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ನ ಸುನೀಲ್ ದತ್ ಯಾದವ್ ಅವರ ಪೀಠವು ಚಾನೆಲ್ ‘ಬ್ಲಾಕ್’ ಆದೇಶಕ್ಕೆ ನೀಡಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿದೆ.

‘ಈದಿನ’ ಯೂಟ್ಯೂಬ್‌ ಚಾನೆಲ್‌ ನಲ್ಲಿ ಸೌಜನ್ಯ ಹತ್ಯೆಗೆ ಸಂಬಂಧಿಸಿದಂತೆ ನಿರಂತರವಾಗಿ ಚರ್ಚೆ ಮಾಡುವ ಮೂಲಕ ಸಂತ್ರಸ್ತೆಗೆ ನ್ಯಾಯ ಒದಗಿಸುವ ಕೆಲಸ ಮಾಡಲಾಗಿತ್ತು. ಆದರೆ, ಈ ಬೆದರಿಕೆಗೆ ತಲೆಬಾಗದ ಸಂಸ್ಥೆಯು ನ್ಯಾಯಾಂಗ ಹೋರಾಟಕ್ಕೆ ಮುಂದಾಗಿತ್ತು.

2012ರ ಅಕ್ಟೋಬರ್ 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದ ಕುಮಾರಿ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ ಆರೋಪಿಗಳು ಯಾರು ಎಂಬುದು ಹತ್ತು ವರ್ಷದ ಬಳಿಕವೂ ಇನ್ನೂ ಪತ್ತೆಯಾಗಿಲ್ಲ. ಇದೊಂದೆ ಪ್ರಕರಣದಲ್ಲಿ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಹಾಗೂ ನ್ಯಾಯಾಂಗದ ಮೇಲೆ ಜನ ವಿಶ್ವಾಸ ಕಳೆದುಕೊಳ್ಳುವಂತೆ ಮಾಡಿದೆ.

ಊರಿನ ಪ್ರಭಾವಿ ಕುಟುಂಬದ ಸದಸ್ಯರು ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪಗಳು ಪ್ರಬಲವಾಗಿ ಕೇಳಿಬರುತ್ತಿರುವ ಹೊತ್ತಿನಲ್ಲಿ, ಅದರ ಕುರಿತು ವಸ್ತುನಿಷ್ಠ ವರದಿ ಮಾಡಿದ ಹಲವು ಸ್ವತಂತ್ರ ಮಾಧ್ಯಮಗಳು ಮತ್ತು ಯೂಟ್ಯೂಬರ್‌ಗಳ ಮೇಲೆ ಕೋರ್ಟ್‌ ಮೂಲಕ ನಿರ್ಬಂಧ ಹೇರಲಾಗುತ್ತಿದೆ. ಅದೇ ಪ್ರಭಾವಿ ಕುಟುಂಬದ ಕಾನೂನು ತಂಡವು, ಈದಿನ.ಕಾಮ್, ಕುಡ್ಲ ರಾಂಪ್‌ ಪೇಜ್‌, ಹೋರಾಟಗಾರರಾದ ಮಹೇಶ್‌ ಶೆಟ್ಟಿ ತಿಮರೋಡಿ ಮತ್ತು ಗಿರೀಶ್‌ ಮಟ್ಟಣನವರ್ ಸೇರಿದಂತೆ ಹಲವರ ವಿರುದ್ಧ ಕೋರ್ಟ್‌ನಿಂದ ‘ಬ್ಲಾಕೆಂಟ್’ ಆದೇಶದ ಮೂಲಕ ವಿಡಿಯೊ ಪ್ರಕಟಿಸದಂತೆ ತಡೆ ತಂದಿದ್ದರು.

ಈದಿನ.ಕಾಮ್ ಸೇರಿದಂತೆ ಹಲವು ಚಾನೆಲ್‌ಗಳ ತಡೆಗೆ ಕೋರ್ಟ್‌ ಯೂಟ್ಯೂಬ್‌ ಸಂಸ್ಥೆಗೆ ಆದೇಶ ನೀಡಿದ್ದು, ಈ ಬೆಳವಣಿಗೆಯನ್ನು ಹಲವರು ಖಂಡಿಸಿದ್ದಾರೆ. ಆರೋಪಿತ ‘ಪ್ರಭಾವಿ ಕುಟುಂಬ’ವು ಕಾನೂನುನಿನ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಕಿಡಿಕಾರಿದ್ದಾರೆ. ಭಾರತೀಯ ಸಂವಿಧಾನದ 19(1)(ಎ) ವಿಧಿಯ ಅಡಿಯಲ್ಲಿ ಬರುವ ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಈದಿನ ತಂಡದ ಪರವಾಗಿ ವಾದಿಸಿದ ಹೈಕೋರ್ಟ್‌ ವಕೀಲರಾದ ಕ್ಲಿಫ್ಟನ್ ಡಿ ರೊಝಾರಿಯೋ, “ಭಾರತದ ಐಟಿ ಕಾಯ್ದೆ ಅಡಿಯಲ್ಲಿ ಸರ್ಕಾರವು ರಾಷ್ಟ್ರೀಯ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆ, ಅಥವಾ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ ವಿಷಯವನ್ನು ಪ್ರಕಟಿಸಿದಲ್ಲಿ ಮಾತ್ರ ನಿರ್ಬಂಧಿಸಲು ಅಥವಾ ಬ್ಲಾಕ್ ಮಾಡುವ ಅಧಿಕಾರವನ್ನು ಹೊಂದಿದೆ. ಆದರೆ, ಅದ್ಯಾವುದನ್ನು ಮಾಡದೇ ಇದ್ದರೂ ಕೂಡ ಈ ಹಿಂದಿನ ಮಧ್ಯಂತರ ಆದೇಶದ ಮೇರೆಗೆ ಈದಿನ ಯೂಟ್ಯೂಬ್‌ ಅನ್ನು ಬ್ಲಾಕ್ ಮಾಡಲಾಗಿದೆ. ಈದಿನ ಸಂಸ್ಥೆಯು ಈಗಾಗಲೇ 3.8 ಲಕ್ಷ ಚಂದಾದಾರರನ್ನು ಹೊಂದಿದ್ದು, ಈದಿನ ಡಾಟ್ ಕಾಮ್ ಮಾಧ್ಯಮವು ಕಳೆದ ಮೂರು ವರ್ಷಗಳಿಂದ ಸಮಾಜದ, ಸಮುದಾಯದ ಉನ್ನತಿಗಾಗಿ ಕೆಲಸ ಮಾಡುತ್ತಿರುವ ಜವಾಬ್ದಾರಿಯುವ ಮಾಧ್ಯಮ ಸಂಸ್ಥೆಯಾಗಿದೆ. ಹಾಗಾಗಿ, ಈ ಬ್ಲಾಕ್ ಮಾಡುವಂತೆ ಮಾಡಿರುವ ಮಧ್ಯಂತರ ಆದೇಶವನ್ನು ತೆರವುಗೊಳಿಸಲು ಯೂಟ್ಯೂಬ್‌ಗೆ ನಿರ್ದೇಶನ ನೀಡಬೇಕು” ಎಂದು ವಿನಂತಿಸಿದರು.

ಈ ಮನವಿಯನ್ನು ಪುರಸ್ಕರಿಸಿದ ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠವು, ಈದಿನ ಡಾಟ್ ಕಾಮ್ ಯೂಟ್ಯೂಬ್ ಬ್ಲಾಕ್ ಮಾಡಲು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಲು ಯೂಟ್ಯೂಬ್‌ಗೆ ನಿರ್ದೇಶನ ನೀಡಿದ್ದಾರೆ. ಅಲ್ಲದೇ, ಈ ಹಿಂದಿನ ಸಿವಿಲ್ ಕೋರ್ಟ್‌ ಆದೇಶವನ್ನು ಉಲ್ಲಂಘಿಸಿಲ್ಲ ಎಂದು ಅಫಿಡವಿಟ್ ಸಲ್ಲಿಸಲು ಸೂಚನೆ ನೀಡಿ, ವಿಚಾರಣೆಯನ್ನು ಮುಂದೂಡಿದರು. ಈ ಬಗ್ಗೆ ಇನ್ನಷ್ಟೇ ಅಧಿಕೃತ ಆದೇಶವನ್ನು ಹೈಕೋರ್ಟ್‌ ಪ್ರಕಟಿಸಲಿದೆ.

ಈ ದಿನ ಡಾಟ್‌ ಕಾಮ್ ತಂಡದ ಪರವಾಗಿ ಹೈಕೋರ್ಟ್‌ನಲ್ಲಿ ವಕೀಲರಾದ ಕ್ಲಿಫ್ಟನ್ ಡಿ ರೊಝಾರಿಯೋ , ಮೈತ್ರೇಯಿ ಕೃಷ್ಣನ್ ವಾದಿಸಿದರು. ಧರ್ಮಸ್ಥಳ ದೇವಸ್ಥಾನ ಟ್ರಸ್ಟ್‌ನ ಪರವಾಗಿ ‌ಹಿರಿಯ ವಕೀಲ, ಮಾಜಿ ಅಡ್ವೊಕೇಟ್ ಜನರಲ್ ಉದಯ್ ಹೊಳ್ಳ ಹಾಜರಿದ್ದರು.

ಈ ಹಿಂದಿನ ಹೈಕೋರ್ಟ್‌ನ ಮಧ್ಯಂತರ ಆದೇಶದಿಂದಾಗಿ ಈದಿನ ಯೂಟ್ಯೂಬ್ ಚಾನೆಲ್‌ನನ್ನು ತಾತ್ಕಾಲಿಕವಾಗಿ ಬ್ಲಾಕ್ ಮಾಡಿದ್ದರಿಂದ ಈದಿನ ಟಿವಿ ಯೂಟ್ಯೂಬ್ ಚಾನೆಲ್‌ ಕಾರ್ಯ ನಿರ್ವಹಿಸುತ್ತಿತ್ತು.

ಸೌಜನ್ಯ ಪರ ಧ್ವನಿ ಎತ್ತಿದ ಚಾನೆಲ್‌ಗಳು ಬ್ಲಾಕ್‌; ‘ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ’ದ ಹರಣ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...