Homeಕರ್ನಾಟಕ'ಈದಿನ.ಕಾಮ್' ಯೂಟ್ಯೂಬ್‌ ಚಾನೆಲ್‌ 'ಬ್ಲಾಕ್' ಮಧ್ಯಂತರ ಆದೇಶ ತೆರವು

‘ಈದಿನ.ಕಾಮ್’ ಯೂಟ್ಯೂಬ್‌ ಚಾನೆಲ್‌ ‘ಬ್ಲಾಕ್’ ಮಧ್ಯಂತರ ಆದೇಶ ತೆರವು

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಸುತ್ತಮುತ್ತ ನಡೆದಿದ್ದ ಕೊಲೆ ಪ್ರಕರಣಗಳು ಮತ್ತು ಸೌಜನ್ಯ ಸಾಮೂಹಿಕ ಅತ್ಯಾಚಾರ-ಕೊಲೆ ಪ್ರಕರಣ ಕುರಿತು ನಿರಂತರ ಸುದ್ದಿ ಮಾಡಿದ್ದಕ್ಕೆ ಕೋರ್ಟ್‌ ಮೂಲಕ ಆದೇಶ ಕೊಡಿಸಿ ‘ಈದಿನ.ಕಾಮ್’ ಯೂಟ್ಯೂಬ್‌ ಚಾನೆಲ್‌ ಅನ್ನು ಬ್ಲಾಕ್ ಮಾಡಿಸಲಾಗಿತ್ತು. ಪ್ರಕರಣದ ಕುರಿತು ಇಂದು ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ನ ಸುನೀಲ್ ದತ್ ಯಾದವ್ ಅವರ ಪೀಠವು ಚಾನೆಲ್ ‘ಬ್ಲಾಕ್’ ಆದೇಶಕ್ಕೆ ನೀಡಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿದೆ.

‘ಈದಿನ’ ಯೂಟ್ಯೂಬ್‌ ಚಾನೆಲ್‌ ನಲ್ಲಿ ಸೌಜನ್ಯ ಹತ್ಯೆಗೆ ಸಂಬಂಧಿಸಿದಂತೆ ನಿರಂತರವಾಗಿ ಚರ್ಚೆ ಮಾಡುವ ಮೂಲಕ ಸಂತ್ರಸ್ತೆಗೆ ನ್ಯಾಯ ಒದಗಿಸುವ ಕೆಲಸ ಮಾಡಲಾಗಿತ್ತು. ಆದರೆ, ಈ ಬೆದರಿಕೆಗೆ ತಲೆಬಾಗದ ಸಂಸ್ಥೆಯು ನ್ಯಾಯಾಂಗ ಹೋರಾಟಕ್ಕೆ ಮುಂದಾಗಿತ್ತು.

2012ರ ಅಕ್ಟೋಬರ್ 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದ ಕುಮಾರಿ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ ಆರೋಪಿಗಳು ಯಾರು ಎಂಬುದು ಹತ್ತು ವರ್ಷದ ಬಳಿಕವೂ ಇನ್ನೂ ಪತ್ತೆಯಾಗಿಲ್ಲ. ಇದೊಂದೆ ಪ್ರಕರಣದಲ್ಲಿ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಹಾಗೂ ನ್ಯಾಯಾಂಗದ ಮೇಲೆ ಜನ ವಿಶ್ವಾಸ ಕಳೆದುಕೊಳ್ಳುವಂತೆ ಮಾಡಿದೆ.

ಊರಿನ ಪ್ರಭಾವಿ ಕುಟುಂಬದ ಸದಸ್ಯರು ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪಗಳು ಪ್ರಬಲವಾಗಿ ಕೇಳಿಬರುತ್ತಿರುವ ಹೊತ್ತಿನಲ್ಲಿ, ಅದರ ಕುರಿತು ವಸ್ತುನಿಷ್ಠ ವರದಿ ಮಾಡಿದ ಹಲವು ಸ್ವತಂತ್ರ ಮಾಧ್ಯಮಗಳು ಮತ್ತು ಯೂಟ್ಯೂಬರ್‌ಗಳ ಮೇಲೆ ಕೋರ್ಟ್‌ ಮೂಲಕ ನಿರ್ಬಂಧ ಹೇರಲಾಗುತ್ತಿದೆ. ಅದೇ ಪ್ರಭಾವಿ ಕುಟುಂಬದ ಕಾನೂನು ತಂಡವು, ಈದಿನ.ಕಾಮ್, ಕುಡ್ಲ ರಾಂಪ್‌ ಪೇಜ್‌, ಹೋರಾಟಗಾರರಾದ ಮಹೇಶ್‌ ಶೆಟ್ಟಿ ತಿಮರೋಡಿ ಮತ್ತು ಗಿರೀಶ್‌ ಮಟ್ಟಣನವರ್ ಸೇರಿದಂತೆ ಹಲವರ ವಿರುದ್ಧ ಕೋರ್ಟ್‌ನಿಂದ ‘ಬ್ಲಾಕೆಂಟ್’ ಆದೇಶದ ಮೂಲಕ ವಿಡಿಯೊ ಪ್ರಕಟಿಸದಂತೆ ತಡೆ ತಂದಿದ್ದರು.

ಈದಿನ.ಕಾಮ್ ಸೇರಿದಂತೆ ಹಲವು ಚಾನೆಲ್‌ಗಳ ತಡೆಗೆ ಕೋರ್ಟ್‌ ಯೂಟ್ಯೂಬ್‌ ಸಂಸ್ಥೆಗೆ ಆದೇಶ ನೀಡಿದ್ದು, ಈ ಬೆಳವಣಿಗೆಯನ್ನು ಹಲವರು ಖಂಡಿಸಿದ್ದಾರೆ. ಆರೋಪಿತ ‘ಪ್ರಭಾವಿ ಕುಟುಂಬ’ವು ಕಾನೂನುನಿನ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಕಿಡಿಕಾರಿದ್ದಾರೆ. ಭಾರತೀಯ ಸಂವಿಧಾನದ 19(1)(ಎ) ವಿಧಿಯ ಅಡಿಯಲ್ಲಿ ಬರುವ ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಈದಿನ ತಂಡದ ಪರವಾಗಿ ವಾದಿಸಿದ ಹೈಕೋರ್ಟ್‌ ವಕೀಲರಾದ ಕ್ಲಿಫ್ಟನ್ ಡಿ ರೊಝಾರಿಯೋ, “ಭಾರತದ ಐಟಿ ಕಾಯ್ದೆ ಅಡಿಯಲ್ಲಿ ಸರ್ಕಾರವು ರಾಷ್ಟ್ರೀಯ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆ, ಅಥವಾ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ ವಿಷಯವನ್ನು ಪ್ರಕಟಿಸಿದಲ್ಲಿ ಮಾತ್ರ ನಿರ್ಬಂಧಿಸಲು ಅಥವಾ ಬ್ಲಾಕ್ ಮಾಡುವ ಅಧಿಕಾರವನ್ನು ಹೊಂದಿದೆ. ಆದರೆ, ಅದ್ಯಾವುದನ್ನು ಮಾಡದೇ ಇದ್ದರೂ ಕೂಡ ಈ ಹಿಂದಿನ ಮಧ್ಯಂತರ ಆದೇಶದ ಮೇರೆಗೆ ಈದಿನ ಯೂಟ್ಯೂಬ್‌ ಅನ್ನು ಬ್ಲಾಕ್ ಮಾಡಲಾಗಿದೆ. ಈದಿನ ಸಂಸ್ಥೆಯು ಈಗಾಗಲೇ 3.8 ಲಕ್ಷ ಚಂದಾದಾರರನ್ನು ಹೊಂದಿದ್ದು, ಈದಿನ ಡಾಟ್ ಕಾಮ್ ಮಾಧ್ಯಮವು ಕಳೆದ ಮೂರು ವರ್ಷಗಳಿಂದ ಸಮಾಜದ, ಸಮುದಾಯದ ಉನ್ನತಿಗಾಗಿ ಕೆಲಸ ಮಾಡುತ್ತಿರುವ ಜವಾಬ್ದಾರಿಯುವ ಮಾಧ್ಯಮ ಸಂಸ್ಥೆಯಾಗಿದೆ. ಹಾಗಾಗಿ, ಈ ಬ್ಲಾಕ್ ಮಾಡುವಂತೆ ಮಾಡಿರುವ ಮಧ್ಯಂತರ ಆದೇಶವನ್ನು ತೆರವುಗೊಳಿಸಲು ಯೂಟ್ಯೂಬ್‌ಗೆ ನಿರ್ದೇಶನ ನೀಡಬೇಕು” ಎಂದು ವಿನಂತಿಸಿದರು.

ಈ ಮನವಿಯನ್ನು ಪುರಸ್ಕರಿಸಿದ ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠವು, ಈದಿನ ಡಾಟ್ ಕಾಮ್ ಯೂಟ್ಯೂಬ್ ಬ್ಲಾಕ್ ಮಾಡಲು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಲು ಯೂಟ್ಯೂಬ್‌ಗೆ ನಿರ್ದೇಶನ ನೀಡಿದ್ದಾರೆ. ಅಲ್ಲದೇ, ಈ ಹಿಂದಿನ ಸಿವಿಲ್ ಕೋರ್ಟ್‌ ಆದೇಶವನ್ನು ಉಲ್ಲಂಘಿಸಿಲ್ಲ ಎಂದು ಅಫಿಡವಿಟ್ ಸಲ್ಲಿಸಲು ಸೂಚನೆ ನೀಡಿ, ವಿಚಾರಣೆಯನ್ನು ಮುಂದೂಡಿದರು. ಈ ಬಗ್ಗೆ ಇನ್ನಷ್ಟೇ ಅಧಿಕೃತ ಆದೇಶವನ್ನು ಹೈಕೋರ್ಟ್‌ ಪ್ರಕಟಿಸಲಿದೆ.

ಈ ದಿನ ಡಾಟ್‌ ಕಾಮ್ ತಂಡದ ಪರವಾಗಿ ಹೈಕೋರ್ಟ್‌ನಲ್ಲಿ ವಕೀಲರಾದ ಕ್ಲಿಫ್ಟನ್ ಡಿ ರೊಝಾರಿಯೋ , ಮೈತ್ರೇಯಿ ಕೃಷ್ಣನ್ ವಾದಿಸಿದರು. ಧರ್ಮಸ್ಥಳ ದೇವಸ್ಥಾನ ಟ್ರಸ್ಟ್‌ನ ಪರವಾಗಿ ‌ಹಿರಿಯ ವಕೀಲ, ಮಾಜಿ ಅಡ್ವೊಕೇಟ್ ಜನರಲ್ ಉದಯ್ ಹೊಳ್ಳ ಹಾಜರಿದ್ದರು.

ಈ ಹಿಂದಿನ ಹೈಕೋರ್ಟ್‌ನ ಮಧ್ಯಂತರ ಆದೇಶದಿಂದಾಗಿ ಈದಿನ ಯೂಟ್ಯೂಬ್ ಚಾನೆಲ್‌ನನ್ನು ತಾತ್ಕಾಲಿಕವಾಗಿ ಬ್ಲಾಕ್ ಮಾಡಿದ್ದರಿಂದ ಈದಿನ ಟಿವಿ ಯೂಟ್ಯೂಬ್ ಚಾನೆಲ್‌ ಕಾರ್ಯ ನಿರ್ವಹಿಸುತ್ತಿತ್ತು.

ಸೌಜನ್ಯ ಪರ ಧ್ವನಿ ಎತ್ತಿದ ಚಾನೆಲ್‌ಗಳು ಬ್ಲಾಕ್‌; ‘ವಾಕ್‌ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ’ದ ಹರಣ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...