Homeಮುಖಪುಟಧನಕರ್ ರಾಜೀನಾಮೆ ಬೆನ್ನಲ್ಲೇ ನ್ಯಾ. ವರ್ಮಾ ಪದಚ್ಯುತಿ ಪ್ರಕ್ರಿಯೆ ಪ್ರಾರಂಭಿಸಿದ ಕೇಂದ್ರ

ಧನಕರ್ ರಾಜೀನಾಮೆ ಬೆನ್ನಲ್ಲೇ ನ್ಯಾ. ವರ್ಮಾ ಪದಚ್ಯುತಿ ಪ್ರಕ್ರಿಯೆ ಪ್ರಾರಂಭಿಸಿದ ಕೇಂದ್ರ

- Advertisement -
- Advertisement -

ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರ ಹಠಾತ್ ರಾಜೀನಾಮೆ ಬೆನ್ನಲ್ಲೇ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ಯಶವಂತ್ ವರ್ಮಾ ಅವರ ಪದಚ್ಯುತಿ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ.

ಕೇಂದ್ರ ಸಚಿವ ಅಮಿತ್ ಶಾ ಅವರು ಬುಧವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ರಾಜ್ಯಸಭೆಯ ಉಪಾಧ್ಯಕ್ಷ ಹರಿವಂಶ್ ನಾರಾಯಣ್ ಸಿಂಗ್ ಅವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.

ಸಂಸತ್ತಿನಲ್ಲಿ ಬಿರ್ಲಾ ಮತ್ತು ಹರಿವಂಶ್ ಅವರು ಸಭೆ ನಡೆಸಿದರು. ನಂತರ ಅಮಿತ್ ಶಾ ಅವರನ್ನು ಭೇಟಿಯಾದರು ಎಂದು ವರದಿಗಳು ಹೇಳಿವೆ.

ಈ ಬೆಳವಣಿಗೆ ಬಗ್ಗೆ ತಿಳಿದಿರುವ ಜನರ ಪ್ರಕಾರ, ನ್ಯಾ.ಯಶವಂತ್ ವರ್ಮಾ ವಿರುದ್ಧದ ಭ್ರಷ್ಟಾಚಾರ ಆರೋಪಗಳನ್ನು ಪರಿಶೀಲಿಸಲು ಲೋಕಸಭಾ ಸ್ಪೀಕರ್ ಶಾಸನಬದ್ಧ ಸಮಿತಿ ರಚಿಸಲಿದ್ದಾರೆ. ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಾಧೀಶರು, ಹೈಕೋರ್ಟ್‌ನ ಹಾಲಿ ಮುಖ್ಯ ನ್ಯಾಯಾಧೀಶರು ಮತ್ತು ಖ್ಯಾತ ನ್ಯಾಯಶಾಸ್ತ್ರಜ್ಞರನ್ನು ಒಳಗೊಂಡ ಸಮಿತಿಯು ತನಿಖೆ ನಡೆಸಿ ಮೂರು ತಿಂಗಳಲ್ಲಿ ವರದಿ ನೀಡಲಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸಮಿತಿಯು ನ್ಯಾ.ಯಶವಂತ್ ವರ್ಮಾ ತಪ್ಪಿತಸ್ಥರೆಂದು ಕಂಡುಕೊಂಡರೆ, ತನಿಖಾ ವರದಿಯನ್ನು ಸಂಸತ್ತಿನಲ್ಲಿ ಮಂಡಿಸಲಾಗುತ್ತದೆ. ನಂತರ ಉಭಯ ಸದನಗಳಲ್ಲಿ ಚರ್ಚೆ ನಡೆಯುತ್ತದೆ. ಬಳಿಕ ನ್ಯಾಯಾಧೀಶರ ಪದಚ್ಯುತಿಗೆ ಸಂಬಂಧಿಸಿದಂತೆ ನಿರ್ಣಯದ ಮೇಲೆ ಮತದಾನ ನಡೆಯಲಿದೆ.

ನ್ಯಾ. ಯಶವಂತ್ ವರ್ಮಾ ಅವರ ಪದಚ್ಯುತಿ ವಿಷಯವೇ ಜಗದೀಪ್ ಧನಕರ್ ಅವರ ಹಠಾತ್ ರಾಜೀನಾಮೆಗೆ ಕಾರಣವಾಯಿತು ಎಂದು ವರದಿಯಾಗಿರುವುದರಿಂದ ಉಭಯ ಸದನಗಳ ಮುಖ್ಯಸ್ಥರ ಜೊತೆ ಅಮಿತ್ ಶಾ ನಡೆಸಿದ ಸಭೆ ಮಹತ್ವ ಪಡೆದುಕೊಂಡಿದೆ.

ಧನಕರ್ ಅವರ ಹಠಾತ್ ರಾಜೀನಾಮೆಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆದರೂ, ನ್ಯಾ. ವರ್ಮಾ ಅವರ ಪದಚ್ಯುತಿ ಸಂಬಂಧ ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳು ನೀಡಿದ ನೋಟಿಸ್ ಅಂಗೀಕರಿಸಿದ್ದಕ್ಕೆ ಈ ಬೆಳವಣಿಗೆ ನಡೆದಿದೆ. ಏಕೆಂದರೆ, ವರ್ಮಾ ಅವರ ಪದಚ್ಯುತಿ ವಿಷಯದಲ್ಲಿ ಕೇಂದ್ರ ಸರ್ಕಾರದ ಯೋಜನೆ ಬೇರೆಯೇ ಇತ್ತು ಎಂದು ಹೇಳಲಾಗುತ್ತಿದೆ.

ಸೋಮವಾರ 145 ಲೋಕಸಭೆ ಮತ್ತು 63 ರಾಜ್ಯಸಭಾ ಸಂಸದರು ನ್ಯಾ. ವರ್ಮಾ ಅವರನ್ನು ಪದಚ್ಯುತಗೊಳಿಸುವಂತೆ ಸಭಾಧ್ಯಕ್ಷರಿಗೆ ನೋಟಿಸ್ ನೀಡಿದ್ದರು. ಧನಕರ್ ಅವರು ವಿರೋಧ ಪಕ್ಷದ ನೋಟಿಸ್ ಪರಿಗಣಿಸಿ ರಾಜ್ಯಸಭೆಯಲ್ಲಿ ಹೇಳಿಕೆ ನೀಡಿದ್ದರು.

ಸೋಮವಾರ ರಾಜ್ಯಸಭೆಯಲ್ಲಿ ಮಾತನಾಡಿದ್ದ ಧನಕರ್ ಅವರು “ಲೋಕಸಭೆಯಲ್ಲಿ ಇದೇ ರೀತಿಯ ಪ್ರಸ್ತಾವನೆ ಮಂಡಿಸಲಾಗಿದೆಯೇ ಎಂದು ತಿಳಿದುಕೊಳ್ಳಲು ನಾನು ಪ್ರಧಾನ ಕಾರ್ಯದರ್ಶಿಗೆ ನಿರ್ದೇಶಿಸುತ್ತೇನೆ. ಉಭಯ ಸದನಗಳಲ್ಲಿ ಬೇರೆ ಬೇರೆ ದಿನಾಂಕಗಳಲ್ಲಿ ಪ್ರಸ್ತಾವನೆಯನ್ನು ಮಂಡಿಸಿದರೆ, ಮೊದಲು ಸದನದಲ್ಲಿ ಮಂಡಿಸಲಾದ ಪ್ರಸ್ತಾವನೆಯನ್ನು ಮಾತ್ರ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ ಮತ್ತು ಎರಡನೇ ಪ್ರಸ್ತಾವನೆಯು ನ್ಯಾಯವ್ಯಾಪ್ತಿಯಿಂದ ಹೊರಗಿರುತ್ತದೆ” ಎಂದು ಅವರು 1968ರ ನ್ಯಾಯಾಧೀಶರ (ವಿಚಾರಣಾ) ಕಾಯ್ದೆಯನ್ನು ಉಲ್ಲೇಖಿಸಿ ಹೇಳಿದ್ದರು.

ರಾಜ್ಯಸಭೆಯ ನೋಟಿಸ್ ಪ್ರಸ್ತುತ ಸಕ್ರಿಯವಾಗಿದೆ

“ನ್ಯಾ. ವರ್ಮಾ ಅವರ ವಿರುದ್ಧ ರಾಜ್ಯಸಭೆಯಲ್ಲಿ ನೋಟಿಸ್ ನೀಡಲಾಗಿತ್ತು. ಅದನ್ನು ಸಭಾಧ್ಯಕ್ಷರು ಬಹುತೇಕ ಒಪ್ಪಿಕೊಂಡಿದ್ದಾರೆ. ಸಭಾಧ್ಯಕ್ಷರು ನಿಗದಿತ ಅವಶ್ಯಕತೆಯನ್ನು ಪೂರೈಸಿದ್ದಾರೆ” ಎಂಬುವುದಾಗಿ ರಾಜ್ಯಸಭೆಯ ಸದಸ್ಯರೊಬ್ಬರು ಹೇಳಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

‘ಆಯೋಗಕ್ಕೆ ಬಿಹಾರದ ಇತಿಹಾಸ-ಭೌಗೋಳಿಕತೆಯ ಅರಿವಿಲ್ಲ..’; ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಜೆಡಿಯು ಸಂಸದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...