Homeಕರ್ನಾಟಕಕೊಪ್ಪಳ: 4000 ಜಾನುವಾರುಗಳೊಂದಿಗೆ ಜಿಲ್ಲಾಡಳಿತ ಕಚೇರಿಗೆ ಮುತ್ತಿಗೆ

ಕೊಪ್ಪಳ: 4000 ಜಾನುವಾರುಗಳೊಂದಿಗೆ ಜಿಲ್ಲಾಡಳಿತ ಕಚೇರಿಗೆ ಮುತ್ತಿಗೆ

- Advertisement -
- Advertisement -
ಬಸಾಪುರ ಕೆರೆಯನ್ನು ಬಲ್ಡೋಟಾದಿಂದ  ಮುಕ್ತಗೊಳಿಸಲು ಒತ್ತಾಯಿಸಿ ವಿಶಿಷ್ಟ ಪ್ರತಿಭಟನೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಬಸಾಪುರ ಗ್ರಾಮದಲ್ಲಿ ಜ್ವಲಂತ ಸಮಸ್ಯೆಯಾಗಿರುವ ಬಸಾಪುರ ಕೆರೆ ಅತಿಕ್ರಮಣವನ್ನು ಖಂಡಿಸಿ, ಬಲ್ಡೋಟಾ ಎಂಎಸ್‌ಪಿಎಲ್‌ ಕಂಪನಿ ವಿರುದ್ಧ ಬೃಹತ್‌ “ಜನ-ಜಾನುವಾರು ಪ್ರತಿಭಟನೆ” ಇಂದು (ಜು.24) ಜಿಲ್ಲಾ ಕೇಂದ್ರದಲ್ಲಿ ನಡೆಯಿತು. ಬಸಾಪುರ ಕೆರೆ ಬಚಾವೋ ಮತ್ತು ಪರಿಸರ ಹಿತರಕ್ಷಣಾ ಸಮಿತಿಗಳು ಜಂಟಿಯಾಗಿ ಕರೆ ನೀಡಿದ ಈ ಪ್ರತಿಭಟನೆಯಲ್ಲಿ ಸುಮಾರು 4,000 ಕುರಿ ಮತ್ತು ದನಗಳೊಂದಿಗೆ ಸಹಸ್ರಾರು ರೈತರು ಕೊಪ್ಪಳ ಜಿಲ್ಲಾಡಳಿತದ ಕಚೇರಿ ಮುಂದೆ ಜಮಾಯಿಸಿ, ಉಚ್ಚ ನ್ಯಾಯಾಲಯದ ಆದೇಶದಂತೆ ಬಸಾಪುರ ಕೆರೆಯನ್ನು ತಕ್ಷಣವೇ ಸಾರ್ವಜನಿಕರಿಗೆ ಮುಕ್ತಗೊಳಿಸುವಂತೆ ಆಗ್ರಹಿಸಿದರು.

ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಉದ್ದೇಶಿಸಿ, “ಸಿದ್ದರಾಮಯ್ಯನವರೇ ಇಲ್ಲಿ ನೋಡಿ, ಕುರಿಗಳಿಗೆ ಕುಡಿಯಲು ನೀರಿಲ್ಲ, ದನಗಳಿಗೆ ಕುಡಿಯಲು ನೀರಿಲ್ಲ!” ಎಂದು ಆಕ್ರೋಶದಿಂದ ಕೂಗಿದರು. ಕೊಪ್ಪಳ ಜಿಲ್ಲೆಯ ಬೃಹತ್ ಕಾರ್ಪೊರೇಟ್ ಸಂಸ್ಥೆಯಾದ ಬಲ್ಡೋಟಾ ಕಂಪನಿಗೆ ಬಸಾಪುರ ಕೆರೆಯನ್ನು ಬರೆದುಕೊಡಲಾಗಿದೆ ಎಂದು ಆರೋಪಿಸಿದ ರೈತರು, ಇದನ್ನು ವಿರೋಧಿಸಿ ಇಂದು ಕಂಪನಿ ಮುಂದೆ ಈ ಜನ-ಜಾನುವಾರು ಪ್ರತಿಭಟನೆ ನಡೆಸಲಾಯಿತು ಎಂದು ತಿಳಿಸಿದರು. ಸುಮಾರು 4,000ದಷ್ಟು ಕುರಿ ಮತ್ತು ದನಗಳೊಂದಿಗೆ ಪ್ರತಿಭಟಿಸಿದ ನೂರಾರು ಪ್ರತಿಭಟನಾಕಾರರು, “ಬಸಾಪುರ ಕೆರೆಯನ್ನು ನಾವು ಬಿಡುವುದಿಲ್ಲ, ಬಿಡುವುದಿಲ್ಲ!” ಎಂದು ಜೋರು ಘೋಷಣೆಗಳನ್ನು ಕೂಗಿದರು. ಇಂತಹ ಕಂಪನಿಗಳಿಗೆ ಕಾರ್ಖಾನೆ ಮಾಡಲು ಕೇಳಿದಷ್ಟು ಜಾಗ ಕೊಟ್ಟಿರುವುದರ ಪರಿಣಾಮವೇ ಈ ನೀರಿನ ಅಭಾವ ಮತ್ತು ಜಾನುವಾರುಗಳ ಸಂಕಷ್ಟ ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಕೆರೆ ಅತಿಕ್ರಮಣ ಮತ್ತು ನೀರಿನ ಭೀಕರ ಅಭಾವ

ಪ್ರತಿಭಟನಾನಿರತ ರೈತರು ನೀಡಿದ ಮಾಹಿತಿಯ ಪ್ರಕಾರ, ಬಲ್ಡೋಟಾ ಕಂಪನಿಯು ತನಗೆ ಮಂಜೂರಾಗಿದ್ದ ಭೂಮಿಯ ಜೊತೆಗೆ, ಬಸಾಪುರ ಗ್ರಾಮದ 44 ಎಕರೆ 35 ಗುಂಟೆ ಸಾರ್ವಜನಿಕರ ಕೆರೆಯನ್ನು ಅಕ್ರಮವಾಗಿ ತನ್ನೊಡಲೊಳಗೆ ಸೇರಿಸಿಕೊಂಡು, ಸುತ್ತಲೂ ಕಂಪೌಂಡ್ ಅನ್ನು ನಿರ್ಮಿಸಿದೆ. ಇಷ್ಟೇ ಅಲ್ಲದೆ, ಕೆರೆಯ ಮಧ್ಯಭಾಗದಲ್ಲಿ ರಸ್ತೆಯನ್ನೂ ಸಹ ನಿರ್ಮಿಸಿದ್ದು, ಇದು ಸಂಪೂರ್ಣವಾಗಿ ಜಾನುವಾರುಗಳಿಗೆ ಕುಡಿಯುವ ನೀರಿನ ಮೂಲವನ್ನು ಕಡಿತಗೊಳಿಸಿದೆ. ಈ ಕಂಪನಿಯ ಸುತ್ತಮುತ್ತ ಇರುವ ಸಾರ್ವಜನಿಕರಿಗೆ ಉಪಯೋಗವಾಗುವಂತಹ ಭೂಮಿ ಮತ್ತು ಕೆರೆಗಳನ್ನು ತನ್ನೊಡಲೊಳಗೆ ಸೇರಿಸಿಕೊಂಡಿದೆ. ಈ ಕಂಪನಿಗೆ ಹೇಳುವವರು, ಕೇಳುವವರು ಯಾರೂ ಇಲ್ಲವಾಗಿದ್ದಾರೆ. “ಕೆಲವರು ಈ ಕಂಪನಿ ಜೊತೆಗೆ ನಿಂತಿದ್ದಾರೆ. ಇದರಿಂದಾಗಿ ಸುತ್ತಮುತ್ತಲಿನ ಜನ, ಜಾನುವಾರುಗಳ ಸ್ಥಿತಿ ಅರಣ್ಯರೋದನವಾಗಿದೆ. ಇಂತಹ ಒಂದು ಪರಿಸ್ಥಿತಿ ಕೊಪ್ಪಳ ಜಿಲ್ಲೆಯ ಬಸಾಪುರ ಗ್ರಾಮದಲ್ಲಿ ಉದ್ಭವಿಸಿದೆ,” ಎಂದು ರೈತರು ತಮ್ಮ ಅಳಲನ್ನು ತೋಡಿಕೊಂಡರು.

ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉದ್ಭವಿಸಿರುವುದು ಮಾತ್ರವಲ್ಲದೆ, ಈ ಅತಿಕ್ರಮಣವನ್ನು ಪ್ರಶ್ನಿಸಲು ಹೋದರೆ ಕಾರ್ಖಾನೆಯವರು ಜನರ ಮೇಲೆ ದಬ್ಬಾಳಿಕೆಯನ್ನು ನಡೆಸುತ್ತಿದ್ದಾರೆ ಎಂದು ರೈತರು ಆರೋಪಿಸಿದರು. ಇದರಿಂದ ತೀವ್ರ ಆಕ್ರೋಶಗೊಂಡ ಗ್ರಾಮದ ರೈತರು, ಇಂದು ಸುಮಾರು 4,000 ಕುರಿ-ದನಗಳೊಂದಿಗೆ ಕೊಪ್ಪಳ ಜಿಲ್ಲಾಡಳಿತದ ಮುಂದೆ ತಮ್ಮ ಪ್ರತಿಭಟನೆಯನ್ನು ದಾಖಲಿಸಿದರು.

ರೈತರ ಸಂಕಷ್ಟ ಮತ್ತು ಕಠಿಣ ಎಚ್ಚರಿಕೆ

ಒಬ್ಬ ರೈತ ಮಾತನಾಡಿ, “ನಮ್ಮ ಕೊಪ್ಪಳ ಜಿಲ್ಲೆಯ ಅಸ್ತಿಯನ್ನೆಲ್ಲಾ ಖರೀದಿ ಮಾಡಿಕೊಂಡು, ಕೆರೆಯ ನೀರನ್ನು ಕುಡಿಯಲು ಹೋಗಲು ದಾರಿಯಿಲ್ಲದ ಹಾಗೆ ಮಾಡಿಬಿಟ್ಟಿದ್ದಾರೆ. ಅದರ ಸಲುವಾಗಿ ಇಂದು ನಾವು ಜಾನುವಾರುಗಳೊಂದಿಗೆ ಪ್ರತಿಭಟನೆ ಮಾಡಲಿಕ್ಕೆ ಬಂದಿದ್ದೇವೆ,” ಎಂದು ಹೇಳಿದರು. ಈ ಸಮಸ್ಯೆಯನ್ನು ಬಗೆಹರಿಸಿದರೆ ಒಳ್ಳೆಯದಾಗುತ್ತದೆ. ಇದನ್ನು ಬಗೆಹರಿಸದೇ ಹೋದರೆ ಮುಂದಿನ ದಿನಗಳಲ್ಲಿ “ಇಂದು 4,000 ಜಾನುವಾರುಗಳೊಂದಿಗೆ ಬಂದಿದ್ದೇವೆ. ಮುಂದಿನ ದಿನಗಳಲ್ಲಿ 45,000 ದನ ಮತ್ತು 1 ಲಕ್ಷ ಕುರಿಗಳೊಂದಿಗೆ ಬರುತ್ತೇವೆ,” ಎಂದು ಅವರು ಜಿಲ್ಲಾಡಳಿತಕ್ಕೆ ತೀವ್ರ ಎಚ್ಚರಿಕೆ ನೀಡಿದರು.

“ಆಗ ನಾವು ಈ ಕುರಿ ಮತ್ತು ಜಾನುವಾರುಗಳೊಂದಿಗೆ ಪ್ರತಿಭಟಿಸುತ್ತೇವೆ. ನಮಗೆ ನ್ಯಾಯ ದೊರೆಯುವವರೆಗೂ ಇಲ್ಲಿಂದ ಕದಲುವುದಿಲ್ಲ” ಎಂದು ರೈತರು ದೃಢಸಂಕಲ್ಪ ವ್ಯಕ್ತಪಡಿಸಿದರು. “ಈ ಕಂಪನಿಯವರು 2007ರಿಂದಲೂ ನೀರನ್ನು ಬಳಕೆ ಮಾಡಲು ಬಿಟ್ಟಿಲ್ಲ. ಕೆರೆಯ ಸುತ್ತಲೂ ಕಂಪೌಂಡ್ ಹಾಕಿಬಿಟ್ಟಿದ್ದಾರೆ ಮತ್ತು ಗೇಟ್ ಮಾಡಕೊಂಡಿದ್ದಾರೆ. ಇಷ್ಟು ಮಾತ್ರವಲ್ಲ, ಈ ಗೇಟಿಗೆ ಹತ್ತಾರು ಕಾವಲುಗಾರರನ್ನು ಇಟ್ಟಿದ್ದಾರೆ. ಹೀಗಿದ್ದಾಗ ನಾವು ನಮ್ಮ ಜಾನುವಾರುಗಳಿಗೆ ನೀರು ಕುಡಿಸುವುದು ಹೇಗೆ?” ಎಂದು ಅವರು ಪ್ರಶ್ನಿಸಿದರು. ಬಸಾಪುರ ಕೆರೆಯ ಹತ್ತಿರ ಜನ ಅಥವಾ ಜಾನುವಾರು ಹೋದರೆ ಬಡಿದು ಕಳುಹಿಸುತ್ತಾರೆ. ಈ ರೀತಿಯ ದೌರ್ಜನ್ಯ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಮುಂದುವರಿಯುತ್ತಿದೆ ಎಂದೂ ಪ್ರತಿಭಟಿಸಿದ ರೈತರು ಆರೋಪಿಸಿದರು.

ಹೋರಾಟದ ಪ್ರಮುಖ ಬೇಡಿಕೆಗಳು ಮತ್ತು ಸರ್ಕಾರದ ಅಸಡ್ಡೆ

ಇಂದು ಜನ ಮತ್ತು ಜಾನುವಾರುಗಳೊಂದಿಗೆ ಜಿಲ್ಲಾಡಳಿತ ಮತ್ತು ಸರ್ಕಾರದ ವಿರುದ್ಧ ದೊಡ್ಡ ಹೋರಾಟ ನಡೆಸಲಾಗುತ್ತಿದೆ ಎಂದು ಹೋರಾಟಗಾರರು ತಿಳಿಸಿದರು. ಇಂದಿನ ಹೋರಾಟದ ಪ್ರಮುಖ ಉದ್ದೇಶಗಳು ಎರಡು. “ಒಂದು, ಬಲ್ಡೋಟಾ ಕಂಪನಿಯ ವಿಸ್ತರಣೆಯನ್ನು ನಿಲ್ಲಿಸಬೇಕು. ಎರಡನೆಯದು, ಕಂಪನಿಗೆ ಬಸಾಪುರ ಕೆರೆಯನ್ನು ಜಿಲ್ಲಾಡಳಿತ ಮಾರಾಟ ಮಾಡಿದೆ. ಇದನ್ನು ನಾವು ಸರ್ವತ ಒಪ್ಪುವುದಿಲ್ಲ. ಹಾಗಾಗಿ ಬಸಾಪುರ ಕೆರೆಯನ್ನು ಜನ ಮತ್ತು ಜಾನುವಾರುಗಳಿಗೆ ಮುಕ್ತಗೊಳಿಸಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ,” ಎಂದು ಹೋರಾಟಗಾರರು ಸ್ಪಷ್ಟಪಡಿಸಿದರು.

ಕಾನೂನುಬದ್ಧತೆ ಏನೇ ಇರಲಿ, ಸರ್ಕಾರ ಕಂಪನಿಗೆ ಈ ಕೆರೆಯನ್ನು ಮಾರಾಟ ಮಾಡಿರುವುದೇ ತಪ್ಪು ಎಂದು ಪ್ರತಿಭಟನಾಕಾರರು ಪ್ರತಿಪಾದಿಸಿದರು. “ಅದನ್ನು ಜನ ಜಾನುವಾರುಗಳಿಗೆ ಮುಕ್ತಗೊಳಿಸಬೇಕೆಂಬುದು ನಮ್ಮ ಬೇಡಿಕೆಯಾಗಿದೆ. ಹಾಗಾಗಿ ಈ ಕಂಪನಿಯಿಂದ ದೌರ್ಜನ್ಯಕ್ಕೊಳಗಾದ ಗ್ರಾಮಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭೇಟಿ ನೀಡಬೇಕು, ಇಲ್ಲಿಯ ಪರಿಸ್ಥಿತಿ ಅವಲೋಕಿಸಿ ಇಲ್ಲಿರುವ ಕಂಪನಿಯನ್ನು ಒಕ್ಕಲೆಬ್ಬಿಸಬೇಕು. ಇದೆಲ್ಲಕ್ಕಿಂತ ಮುಖ್ಯವಾಗಿ ಬಸಾಪುರ ಕೆರೆಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸುವ ಕೆಲಸವನ್ನು ಮುಖ್ಯಮಂತ್ರಿಗಳು ಮಾಡಬೇಕು,” ಎಂದು ಅವರು ಆಗ್ರಹಿಸಿದರು.

ಇದನ್ನು ಬಿಟ್ಟು ಸರ್ಕಾರ ಮತ್ತು ಜಿಲ್ಲಾಡಳಿತ ಬೇರೆ ಏನೋ ನೆಪವೊಡ್ಡಿ ಬಲ್ಡೋಟಾ ವಿಸ್ತರಣೆಯನ್ನು ನಿಲ್ಲಿಸದಿದ್ದರೆ ಮತ್ತು ಕೆರೆಯನ್ನು ಮುಕ್ತಗೊಳಿಸದಿದ್ದರೆ, “ಮುಂದಿನ ದಿನಗಳಲ್ಲಿ 40,000 ಜಾನುವಾರುಗಳೊಂದಿಗೆ ಬಲ್ಡೋಟಾ ಕಂಪನಿಯ ಒಳಗೆ ನುಗ್ಗುವಂತಹ ಹೋರಾಟವನ್ನು ಮಾಡುತ್ತೇವೆ,” ಎಂದು ಹೋರಾಟಗಾರರು ಸರ್ಕಾರಕ್ಕೆ ತೀವ್ರ ಎಚ್ಚರಿಕೆ ನೀಡಿದರು.

ಹೈಕೋರ್ಟ್ ಆದೇಶದ ಉಲ್ಲಂಘನೆ 

ಹೋರಾಟಗಾರ ಮಂಜುನಾಥ್ ಗೊಂಡ್ವಾಳ್ ಮಾತನಾಡಿ, “ರೈತಪರ ಇರುವ ರಾಜ್ಯ ಸರ್ಕಾರ ಒಳ್ಳೆಯ ತೀರ್ಮಾನವನ್ನು ತೆಗೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಬಲ್ಡೋಟಾ ಕಂಪನಿಯನ್ನು ರದ್ದುಗೊಳಿಸುವುದಕ್ಕೆ ಅಧಿಕೃತ ಆದೇಶವನ್ನು ಸರ್ಕಾರ ಹೊರಡಿಸಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ.” ಇಂದಿನ ಪ್ರತಿಭಟನೆ ಕೇವಲ ಸಾಂಕೇತಿಕ ಧರಣಿಯಾಗಿದೆ. ತಮ್ಮ ಬೇಡಿಕೆ ಕುರಿತು ಮನವಿಯನ್ನು ನೀಡಿದ್ದೇವೆ ಎಂದರು.

ಅವರು ಮುಂದುವರೆದು, “44 ಎಕರೆ ಕೆರೆ ಮತ್ತು ಸಾರ್ವಜನಿಕ 12 ಎಕರೆ ಭೂಮಿ ಅಂದರೆ ಸುಮಾರು 57 ಎಕರೆ ಮುಖ್ಯರಸ್ತೆ ಹೊಂದಿಕೊಂಡಿರುವ ಭೂಮಿಯನ್ನು ಕಬಳಿಸಿ ಅತ್ಯಂತ ಕಡಿಮೆ ಬೆಲೆಗೆ ಲೀಸ್ ಕಮ್ ಖರೀದಿ ಮಾಡಿಕೊಂಡಿದ್ದಾರೆ.” ಈ ಕೆರೆಗೆ ಸಂಬಂಧಿಸಿದಂತೆ 2022ರ ಹೈಕೋರ್ಟ್ ಆದೇಶದಲ್ಲಿ ಈ ಕೆರೆಯನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಬೇಕು ಎಂದು ಸ್ಪಷ್ಟವಾಗಿ ಇದೆ. ಆದರೆ ಕಂಪನಿಯು ಈ ಆದೇಶವನ್ನು ಉಲ್ಲಂಘಿಸುತ್ತಿದೆ ಎಂದು ಗೊಂಡ್ವಾಳ್ ಆರೋಪಿಸಿದರು.

“ಹಾಗಾಗಿ ಜಾನುವಾರುಗಳಿಗೆ, ಕುರಿಗಳಿಗೆ, ಕರುಗಳಿಗೆ ನೀರು ಕುಡಿಯಲು ಮುಕ್ತಗೊಳಿಸಬೇಕು. ಇಲ್ಲಿ ಯಾವುದೇ ರೀತಿಯಾದ ಅಡತಡೆಯನ್ನು ಕಂಪನಿ ಮಾಡಬಾರದು ಎಂದು ಕೋರ್ಟ್ ಆದೇಶವಿದೆ. ಈ ಆದೇಶವನ್ನು ಸರ್ಕಾರ ಮತ್ತು ಜಿಲ್ಲಾಡಳಿತವು ಜಾರಿ ಮಾಡದೆ, ಕೆಲ ಜನರು ಕಂಪನಿ ಜೊತೆ ಸೇರಿಕೊಂಡಿದ್ದಾರೆ. ಹಾಗಾಗಿ ಕಂಪನಿ ನಿರ್ಮಿಸಿರುವ ಕಂಪೌಂಡ್ ಅನ್ನು ಈ ಕೂಡಲೇ ತೆರವುಗೊಳಿಸಬೇಕು. ಅಲ್ಲಿರುವ ಕಂಪನಿಯ ಭದ್ರತಾ ಸಿಬ್ಬಂದಿಯ ದೌರ್ಜನ್ಯದ ವಿರುದ್ಧ ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ಈ ಹೋರಾಟ ಮತ್ತಷ್ಟು ತೀವ್ರಗೊಳ್ಳುತ್ತದೆ. ಇಲ್ಲಿಯ ಜನ-ಜಾನುವಾರುಗಳೊಂದಿಗೆ ಅನಿರ್ದಿಷ್ಟಾವಧಿ ಧರಣಿಯನ್ನು ಮುಂದುವರೆಸುತ್ತೇವೆ,” ಎಂದು ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಈ ಸಂಬಂಧ ಮುಖ್ಯಮಂತ್ರಿಯವರಿಗೂ ಮತ್ತು ಜಿಲ್ಲಾಧಿಕಾರಿಗೂ ಸಹ ಮನವಿ ಸಲ್ಲಿಸಿದ್ದರೂ, ತಮ್ಮ ಸಮಸ್ಯೆ ಕುರಿತು ಯಾರೂ ಗಮನಹರಿಸುತ್ತಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದರು. “ನಮ್ಮ ಊರಿನ ಕೆರೆಗೆ ನಮ್ಮ ಹಕ್ಕು ಇದೆ. ಸರ್ಕಾರವೇ ನಮಗೆ ಮೋಸ ಮಾಡಿದರೆ ನಾವೆಲ್ಲ ಬೀದಿಪಾಲಾಗುತ್ತೇವೆ. ರೈತರಾದ ನಾವು ದುಡಿಯದೇ ಇದ್ದರೆ ಇವರೇನು ದುಡ್ಡನ್ನು ತಿಂದು ಬದುಕುತ್ತಾರೆಯೇ? ಸರ್ಕಾರಕ್ಕೆ ರೈತರ ಮೇಲೆ ಕರುಣೆ ಇಲ್ಲವೇ? ಸರ್ಕಾರ ನಡೆಸುವವರು ರೈತರ ಮಕ್ಕಳಲ್ಲವೇ? ಇವರಿಗೆ ಸರ್ಕಾರಿ ನೌಕರಿ ಬಂದ ಕೂಡಲೇ ದೊಡ್ಡ ಶ್ರೀಮಂತರಾಗಿಬಿಟ್ಟರೆಯೇ? ಇಂತಹ ಬಂಡರು ಹುಟ್ಟಿ ಹುಟ್ಟಿ ನಮ್ಮ ದೇಶ ಹಾಳಾಗಿ ಹೋಗಿದೆ,” ಎಂದು ರೈತರೊಬ್ಬರು ತಮ್ಮ ಆಕ್ರೋಶವನ್ನು ತೀವ್ರವಾಗಿ ವ್ಯಕ್ತಪಡಿಸಿದರು.

ಇಂದಿನದು ಕೇವಲ ಸಾಂಕೇತಿಕ ಪ್ರತಿಭಟನೆ ಆಗಿದೆ. ಇದು ಮುಂದುವರಿಯುತ್ತದೆ. ನ್ಯಾಯ ಸಿಗುವವರೆಗೂ ತಮ್ಮ ಹೋರಾಟವನ್ನು ನಿಲ್ಲಿಸುವುದಿಲ್ಲ ಎಂದು ರೈತರು ದೃಢಪಡಿಸಿದ್ದಾರೆ.

ಮುಂಬೈ ರೈಲು ಸ್ಪೋಟ| ಬಾಂಬೆ ಹೈಕೋರ್ಟ್ ಆದೇಶಕ್ಕೆ ‘ಸುಪ್ರೀಂ’ ತಡೆ; ‘ನಿರಪರಾಧಿಗಳು ಪ್ರಕರಣದಲ್ಲಿ ಸಿಲುಕಿದ್ದಾರೆ’ ಎಂದ ಅಜಿತ್ ಪವಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...