Homeಮುಖಪುಟಬಂಗಾಳಿ ಭಾಷಿಕ ಮುಸ್ಲಿಮರನ್ನು ಬಾಂಗ್ಲಾದೇಶಿಗಳು ಎನ್ನುವುದೇಕೆ?: ಮಾಣಿಕ್ ಸರ್ಕಾರ್ ಕಿಡಿ

ಬಂಗಾಳಿ ಭಾಷಿಕ ಮುಸ್ಲಿಮರನ್ನು ಬಾಂಗ್ಲಾದೇಶಿಗಳು ಎನ್ನುವುದೇಕೆ?: ಮಾಣಿಕ್ ಸರ್ಕಾರ್ ಕಿಡಿ

- Advertisement -
- Advertisement -

ಅಗರ್ತಲಾ: ಮಾಜಿ ಮುಖ್ಯಮಂತ್ರಿ ಮಾಣಿಕ್ ಸರ್ಕಾರ್ ಅವರು ತ್ರಿಪುರಾದಲ್ಲಿ ಆಡಳಿತಾರೂಢ ಬಿಜೆಪಿ-ಆರ್‌ಎಸ್‌ಎಸ್ ಮೈತ್ರಿಕೂಟದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮತದಾರರ ಪಟ್ಟಿಗಳ ಪರಿಷ್ಕರಣೆ ಪ್ರಯತ್ನಗಳು “ಮುಸ್ಲಿಂ ವಿರೋಧಿ, ಮಹಿಳಾ ವಿರೋಧಿ ಮತ್ತು ದಲಿತ ವಿರೋಧಿ” ಕಾರ್ಯಸೂಚಿಯ ಒಂದು ಭಾಗ ಎಂದು ಅವರು ಖಂಡಿಸಿದ್ದಾರೆ. ಇದನ್ನು “ವಿಶೇಷ ತೀವ್ರ ಪರಿಷ್ಕರಣೆ (SIR)” ಎಂದು ಕರೆಯಲಾಗಿದ್ದರೂ, ಇದು ಸಂವಿಧಾನದ ಮೇಲಿನ ನೇರ ದಾಳಿಯಾಗಿದೆ ಎಂದು ಸರ್ಕಾರ್ ಆರೋಪಿಸಿದ್ದಾರೆ.

ಬಂಗಾಳಿ ಭಾಷಿಕ ಮುಸ್ಲಿಮರನ್ನು “ಬಾಂಗ್ಲಾದೇಶಿಗಳು” ಎಂದು ತಾರತಮ್ಯದಿಂದ ಕರೆಯುವ ಪ್ರವೃತ್ತಿಯನ್ನು ಅವರು ತೀವ್ರವಾಗಿ ಖಂಡಿಸಿದರು, ಇದು ಆರ್‌ಎಸ್‌ಎಸ್-ಬಿಜೆಪಿ ಕಡೆಯಿಂದ ಮಾತ್ರ ಬರುತ್ತದೆ ಎಂದು ಬಲವಾಗಿ ಪ್ರತಿಪಾದಿಸಿದರು. ಇದು ಕೇವಲ ಒಂದು ಹೇಳಿಕೆಯಲ್ಲ, ಬದಲಿಗೆ ಸಮುದಾಯವೊಂದರ ಅಸ್ಮಿತೆಯ ಮೇಲಿನ ದಾಳಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಕೇವಲ ಬಂಗಾಳಿ ಮಾತನಾಡಿದ್ದಕ್ಕೆ ಯಾರನ್ನಾದರೂ ಬಾಂಗ್ಲಾದೇಶಿ ಎಂದು ಕರೆಯುವುದು ಎಷ್ಟು ಸರಿ? ಅದರಲ್ಲೂ ಮಾತೃಭಾಷೆ ಬಂಗಾಳಿ ಆಗಿರುವ ಮುಸ್ಲಿಂ ಸಮುದಾಯದವರನ್ನು ಹೀಗೆ ಕರೆಯುವುದು ಹಾಸ್ಯಾಸ್ಪದ ಮತ್ತು ಅನ್ಯಾಯ ಎಂದು ಮಾಜಿ ಮುಖ್ಯಮಂತ್ರಿ ಸರ್ಕಾರ್ ತೀವ್ರವಾಗಿ ಪ್ರಶ್ನಿಸಿದ್ದಾರೆ. ಭಾಷೆಯ ಆಧಾರದ ಮೇಲೆ ಒಬ್ಬ ವ್ಯಕ್ತಿಯ ರಾಷ್ಟ್ರೀಯತೆಯನ್ನು ನಿರ್ಧರಿಸುವ ಈ ಅಸಂಬದ್ಧತೆಯನ್ನು ಅವರು ಬಲವಾಗಿ ಖಂಡಿಸಿದರು. ಬಿಜೆಪಿಯವರ ಈ ಹೇಳಿಕೆಗಳು ನಾಗರಿಕ ಹಕ್ಕುಗಳು ಮತ್ತು ತಮ್ಮನ್ನು ತಾವು ಗುರುತಿಸಿಕೊಳ್ಳುವ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಧಕ್ಕೆ ತರುವಂತಹ ಆತಂಕಕಾರಿ ಪ್ರವೃತ್ತಿಗಳನ್ನು ಎತ್ತಿ ತೋರಿಸಿವೆ ಎಂದು ಅವರು ಹೇಳಿದ್ದಾರೆ.

ತ್ರಿಪುರಾ ಮೋಥಾ ಪಾರ್ಟಿ (TMP)ಯ ‘ವಿಶೇಷ ತೀವ್ರ ಪರಿಷ್ಕರಣೆ (SIR)’ ಬೇಡಿಕೆಯನ್ನು ಪ್ರದ್ಯೋತ್ ಬಿಕ್ರಮ್ ಮಾಣಿಕ್ಯ ದೇಬ್‌ಬರ್ಮಾ ನೇತೃತ್ವದಲ್ಲಿ “ಚುನಾವಣಾ ಸಮಗ್ರತೆ ಮತ್ತು ರಾಷ್ಟ್ರೀಯ ಭದ್ರತೆ” ಯ ಹೆಸರಿನಲ್ಲಿ ಮಂಡಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸರ್ಕಾರ್ ವಿವರಿಸಿದರು. ಬಾಂಗ್ಲಾದೇಶದೊಂದಿಗಿನ ತ್ರಿಪುರಾದ ತೆರೆದ ಗಡಿ ಮತ್ತು ದಾಖಲೆರಹಿತ ವಲಸೆಯನ್ನು ಇದಕ್ಕಾಗಿ ಕಾರಣವಾಗಿ ನೀಡಲಾಗಿದೆ. TMP ನಿಯೋಗವು ಈಗಾಗಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಭಾರತದ ಚುನಾವಣಾ ಆಯೋಗವನ್ನು (ECI) ಭೇಟಿ ಮಾಡಿ ತಮ್ಮ ಬೇಡಿಕೆಯನ್ನು ಮುಂದಿಟ್ಟಿದೆ. ಆದರೆ, ಸರ್ಕಾರ್ ಇದನ್ನು ಮತದಾರರ ಜನಸಂಖ್ಯಾ ಸಂಯೋಜನೆಯನ್ನು ಬದಲಾಯಿಸುವ ಪ್ರಯತ್ನ ಎಂದು ಬಲವಾಗಿ ಖಂಡಿಸಿದ್ದಾರೆ. ಇದು ಜನಾಂಗೀಯತೆ ಅಥವಾ ಧರ್ಮದ ಆಧಾರದ ಮೇಲೆ ಕಾನೂನುಬದ್ಧ ನಾಗರಿಕರನ್ನು ಹೊರಹಾಕುವ ಸಾಧ್ಯತೆಯನ್ನು ಹೊಂದಿದೆ ಎಂದು ಅವರು ಆರೋಪಿಸಿದರು. ಭಾರತದ ಪೌರತ್ವ ಚರ್ಚೆಗಳ ಹಿನ್ನೆಲೆಯಲ್ಲಿ ಇಂತಹ ಪರಿಷ್ಕರಣೆಗಳು ವ್ಯಕ್ತಿಗಳನ್ನು ರಾಷ್ಟ್ರರಹಿತರನ್ನಾಗಿ ಅಥವಾ ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸಬಹುದು ಎಂಬ ಭಯವನ್ನು ಸರ್ಕಾರ್ ವ್ಯಕ್ತಪಡಿಸಿದ್ದಾರೆ.

ಇಂತಹ ಪ್ರಯತ್ನಗಳ ಪರಿಣಾಮ ಕೇವಲ ಚುನಾವಣೆಗಳಿಗೆ ಸೀಮಿತವಲ್ಲ ಎಂದು ಮಾಜಿ ಮುಖ್ಯಮಂತ್ರಿ ಸರ್ಕಾರ್ ತಿಳಿಸಿದರು. ಮಾತೃಭಾಷೆಯ ಆಧಾರದ ಮೇಲೆ ಪೌರತ್ವವನ್ನು ಪ್ರಶ್ನಿಸುವುದು ವೈಯಕ್ತಿಕ ಗುರುತು ಮತ್ತು ಸೇರ್ಪಡೆಯ ಹಕ್ಕಿಗೆ ಧಕ್ಕೆ ನೀಡುತ್ತದೆ. ತ್ರಿಪುರಾದ ಬಂಗಾಳಿ ಮಾತನಾಡುವ ಮುಸ್ಲಿಮರು ತಮ್ಮ ಭಾಷೆ ಮತ್ತು ಧರ್ಮದ ಕಾರಣದಿಂದಾಗಿ ನಿರಂತರ ಸಂಶಯದ ವಾತಾವರಣದಲ್ಲಿ ಬದುಕಬೇಕಾಗುತ್ತದೆ ಎಂದು ಸರ್ಕಾರ್ ಖಂಡಿಸಿದರು.

“ಇಂತಹ ‘ಇತರರನ್ನಾಗಿ ಮಾಡುವ’ ಧೋರಣೆಯು ಕೇವಲ ರಾಜಕೀಯ ನಡೆಯಲ್ಲ, ಇದು ಸಮುದಾಯದಲ್ಲಿ ಆಳವಾದ ಮಾನಸಿಕ ಮತ್ತು ಸಾಮಾಜಿಕ ಪರಿಣಾಮಗಳನ್ನು ಉಂಟುಮಾಡಿ, ಭಯ ಮತ್ತು ಅಸುರಕ್ಷತೆಯನ್ನು ಸೃಷ್ಟಿಸುತ್ತದೆ,” ಎಂದು ಸರ್ಕಾರ್ ಎಚ್ಚರಿಸಿದರು. ಇದು ಭಾರತದ ಜಾತ್ಯತೀತ ತತ್ವಗಳ ಮೇಲಿನ ನೇರ ದಾಳಿಯಾಗಿದೆ. ಭಾಷಾ ಮತ್ತು ಧಾರ್ಮಿಕ ವೈವಿಧ್ಯತೆಯನ್ನು ಆಚರಿಸಬೇಕಾದ ದೇಶದಲ್ಲಿ, ಅದನ್ನು ವಿಭಜನೆಗೆ ಬಳಸಲಾಗುತ್ತಿದೆ ಎಂದು ಅವರು ಕಿಡಿಗಾರಿದರು.

ಮಾಜಿ ಮುಖ್ಯಮಂತ್ರಿ ಸರ್ಕಾರ್ ಅವರು ಸ್ಮಾರ್ಟ್ ವಿದ್ಯುತ್ ಮೀಟರ್‌ಗಳ ಬಗ್ಗೆ ಬಿಜೆಪಿಯ “ದ್ವಿಮುಖ ನೀತಿ”ಯನ್ನು ತೀವ್ರವಾಗಿ ಟೀಕಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಸ್ಮಾರ್ಟ್ ಮೀಟರ್‌ಗಳನ್ನು ಆಳವಡಿಸುವುದನ್ನು ವಿರೋಧಿಸುವ ಬಿಜೆಪಿ, ತ್ರಿಪುರಾದಲ್ಲಿ ಅವುಗಳನ್ನು ಬಲವಂತವಾಗಿ ಆಳವಡಿಸುತ್ತಿದೆ ಎಂದು ಅವರು ಕಿಡಿಗಾರಿದರು. “ಹಿಂದೆ ಯಾವುದೇ ಸಮಸ್ಯೆ ಇರಲಿಲ್ಲ. ಹಾಗಾದರೆ ಯಾಕೆ ಇದ್ದಕ್ಕಿದ್ದಂತೆ ಎಲ್ಲವನ್ನೂ ಬದಲಾಯಿಸಬೇಕು? ಈ ಸ್ಮಾರ್ಟ್ ಮೀಟರ್ ಯಂತ್ರಗಳನ್ನು ತಯಾರಿಸುವ ಕೆಲವು ಬಂಡವಾಳಶಾಹಿಗಳ ಲಾಭಕ್ಕಾಗಿ ಈ ಒತ್ತಡವಿದೆ” ಎಂದು ಅವರು ನೇರವಾಗಿ ಭ್ರಷ್ಟಾಚಾರದ ಆರೋಪ ಮಾಡಿದರು.

ಸ್ಮಾರ್ಟ್ ಮೀಟರ್‌ಗಳಿಂದಾಗಿ “ವಿದ್ಯುತ್ ಬಿಲ್‌ಗಳು ಏರಿಕೆ” ಕಂಡಿದ್ದರಿಂದ ಸಾರ್ವಜನಿಕರಲ್ಲಿ ಉಂಟಾದ ಆಕ್ರೋಶವು ಮಾಜಿ ಮುಖ್ಯಮಂತ್ರಿ ಸರ್ಕಾರ್ ಅವರ ಶೋಷಣೆಯ ಆರೋಪಗಳಿಗೆ ಮತ್ತಷ್ಟು ಪುಷ್ಠಿ ನೀಡಿದೆ. ಈ ಪ್ರತಿಭಟನೆಗಳನ್ನು “ಸಮರ್ಥನೀಯ ಮಾತ್ರವಲ್ಲ, ಅವಶ್ಯಕ” ಎಂದು ಸರ್ಕಾರ್ ಸ್ಪಷ್ಟವಾಗಿ ಹೇಳುವ ಮೂಲಕ, ಸಾರ್ವಜನಿಕರ ಈ ಪ್ರತಿಕ್ರಿಯೆಯನ್ನು ಅನ್ಯಾಯದ ವಿರುದ್ಧದ ಅನಿವಾರ್ಯ ಹೋರಾಟ ಎಂದು ಸಮರ್ಥಿಸಿಕೊಂಡರು. ಕೋಮುವಾದಿ ಮತ್ತು ನಿರಂಕುಶ ಶಕ್ತಿಗಳ ವಿರುದ್ಧ ಸಾಮೂಹಿಕ ಚಳುವಳಿ ನಡೆಸಬೇಕೆಂಬ ಸರ್ಕಾರ್ ಅವರ ಕರೆಯು, ಅಧಿಕಾರದ ಕೇಂದ್ರೀಕರಣ ಮತ್ತು ಭಿನ್ನಾಭಿಪ್ರಾಯದ ದಮನದ ಬಗ್ಗೆ ಇರುವ ಆಳವಾದ ಕಳವಳವನ್ನು ಪ್ರತಿಬಿಂಬಿಸುತ್ತದೆ. ಇವುಗಳು ನಿರಂಕುಶ ಆಡಳಿತಗಳ ಪ್ರಮುಖ ಲಕ್ಷಣಗಳಾಗಿವೆ ಎಂದು ಸರ್ಕಾರ್ ವಿವರಿಸಿದರು.

ವಿ.ಎಸ್.ಅಚ್ಯುತನಂದನ್ ಕುರಿತ ಟೀಕೆ: ಮುಸ್ಲಿಂ ಕಾರ್ಯಕರ್ತನ ವಿರುದ್ಧ ಎಫ್‌ಐಆರ್, ಡಿವೈಎಫ್‌ಐನಿಂದ ‘ಭಯೋತ್ಪಾದಕ’ ಪೋಸ್ಟರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...