Homeಕರ್ನಾಟಕಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಖಾತೆ ತೆರೆದ ಬಿಜೆಪಿ: ಪಕ್ಷ ಪ್ರಾಬಲ್ಯವಿರದ ಕಡೆ ಗೆಲುವು

ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಖಾತೆ ತೆರೆದ ಬಿಜೆಪಿ: ಪಕ್ಷ ಪ್ರಾಬಲ್ಯವಿರದ ಕಡೆ ಗೆಲುವು

- Advertisement -
- Advertisement -

ಇದನ್ನು ಬಿಜೆಪಿ ಬಹುದೊಡ್ಡ ಸಾಧನೆಯೆಂದೇ ಹೇಳಬೇಕು. ಉಪಚುನಾವಣೆಯ 15 ಕ್ಷೇತ್ರಗಳಲ್ಲಿ 13 ಕಡೆ ಅದು ತನ್ನ ಪಾರಮ್ಯ ಮೆರೆದಿದೆ. ಅದರಲ್ಲಿ ವಿಶೇಷವಾದ ಕ್ಷೇತ್ರಗಳೆಂದರೆ ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ಮತ್ತು ಚಿಕ್ಕಬಳ್ಳಾಪುರಗಳಾಗಿವೆ.

ಏಕೆಂದರೆ ಈ ಎರಡೂ ಜಿಲ್ಲೆಗಳಲ್ಲಿ ಇದುವರೆಗೂ ಬಿಜೆಪಿ ಒಂದು ವಿಧಾನಸಭಾವನ್ನು ಗೆಲ್ಲಲ್ಲು ಸಾಧ್ಯವಾಗಿರಲಿಲ್ಲ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಬಿಜೆಪಿ ಗೆದ್ದುಕೊಂಡರೂ, ವಿಧಾನ ಸಭಾ ಕ್ಷೇತ್ರಗಳಲ್ಲಿ ಗೆಲುವು ಮಾತ್ರವಲ್ಲ ಠೇವಣಿ ಸಹ ಪಡೆಯಲಾಗುತ್ತಿರಲಿಲ್ಲ. ಆದರೆ ಈ ಉಪಚುನಾವಣೆ ಆ ಸಾಧ್ಯತೆಯನ್ನು ಬಿಜೆಪಿ ತೆರೆದಿಟ್ಟಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿಯೇ ಇದಕ್ಕೆ ಅಡಿಪಾಯವನ್ನು ಬಿಜೆಪಿ ಹಾಕಿಕೊಂಡಿತ್ತು. ಮಂಡ್ಯದಲ್ಲಿ ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೇ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್‌ರಿಗೆ ಬೆಂಬಲಿ ನೀಡುವ ಮೂಲಕ ತನ್ನ ಬೇಸ್‌ ಗಟ್ಟಿಗೊಳಿಸಲು ಮುಂದಾಗಿತ್ತು.

ಅಷ್ಟು ಮಾತ್ರವಲ್ಲದೇ ಇದು ಮುಖ್ಯಮಂತ್ರಿ ಯಡಿಯೂರಪ್ಪನವರ ಸ್ವಗ್ರಾಮ ಇರುವ ಕ್ಷೇತ್ರವಾಗಿದೆ. ಹಾಗಾಗಿ ಅವರು ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಲ್ಲದೇ ತುಂಬಾ ಭಾವನಾತ್ಮಕವಾಗಿ ಮಾತನಾಡಿ ನನ್ನ ಕ್ಷೇತ್ರದಲ್ಲಿ ನಾನು ಒಂದನ್ನು ಗೆಲ್ಲಲ್ಲು ಸಾಧ್ಯವಾಗಿಲ್ಲ ಎಂದು ಮಾತನ್ನಾಡಿದ್ದರು.

ಕೇವಲ ಮಾತು ಅಷ್ಟು ಮಾತ್ರವಲ್ಲದೇ ಒಕ್ಕಲಿಗ ಮತ ಪ್ರಾಬಲ್ಯವಿರುವ ಇಲ್ಲಿ ಯಡಿಯೂರಪ್ಪ ತನ್ನ ಮಗ ಬಿ.ವೈ ವಿಜಯೇಂದ್ರನ ಜೊತೆಗೆ ಒಕ್ಕಲಿಗರಾದ ಆರ್‌ ಅಶೋಕ್, ಡಿಸಿಎಂ ಅಶ್ವಥ್‌ ನಾರಾಯಣ್‌ಗೌಡ ಮತ್ತು ಶಾಸಕ ಪ್ರೀತಂ ಗೌಡ ಕ್ಷೇತ್ರದಲ್ಲುಳಿದು ಪ್ರಚಾರ ನಡೆಸಿದ್ದರು.

ಸುಮಲತಾ ಅಂಬರೀಶ್‌ ಬೆಂಬಲಿಗರು ಕೂಡ ಬಿಜೆಪಿಗೆ ಬೆಂಬಲ ನೀಡಿದ್ದರು ಎನ್ನಲಾಗುತ್ತಿತ್ತು. ಜೊತೆಗೆ ಇಲ್ಲಿ ಬಿಜೆಪಿ, ಜೆಡಿಎಸ್‌ ಮತ್ತು ಕಾಂಗ್ರೆಸ್‌ ನಡುವೆ ತ್ರಿಕೋನ ಪೈಪೋಟಿ ಇತ್ತು. ಹಾಗಾಗಿ ಇಲ್ಲಿ ಮೂರು ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಜೆಪಿ ಗೆಲುವು ತನ್ನದಾಗಿಸಿಕೊಂಡಿದೆ.

ಇನ್ನು ಚಿಕ್ಕಬಳ್ಳಾಪುರದಲ್ಲಿ ಬಚ್ಚೇಗೌಡರನ್ನು ಎಂಪಿಯಾಗಿ ಗೆಲ್ಲಿಸಿದ್ದ ಬಿಜೆಪಿ ಈಗ ಮೊದಲ ಶಾಸಕರನ್ನು ಸಹ ಗೆಲ್ಲಿಸಿಕೊಂಡಿದೆ.

ಡಾ.ಕೆ ಸುಧಾಕರ್‌ ಕಾಂಗ್ರೆಸ್‌ನಿಂದ ಹಾರಿಬಂದು ಬಿಜೆಪಿ ಸೇರಿದ್ದರು. ಅದೇ ಸಂದರ್ಭದಲ್ಲಿ ಕನಕಪುರಕ್ಕೆ ನಿಯೋಜನೆಗೊಂಡಿದ್ದ ಮೆಡಿಕಲ್‌ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ತಿರುಗಿಸಿದ್ದು, ಜಿಲ್ಲೆಯಲ್ಲಿ ಹೊಸ ತಾಲ್ಲೂಕುಗಳ ಘೋಷಣೆಗಳ ಭರ್ಜರಿ ಭರವಸೆಯನ್ನು ನೀಡಲಾಗಿತ್ತು. ಅವುಗಳ ಹಿನ್ನೆಲೆಯಲ್ಲಿ ಬಿಜೆಪಿ ಸರಾಗವಾಗಿ ಗೆಲುವು ಸಾಧಿಸಿದೆ.

ಒಟ್ಟಿನಲ್ಲಿ ಬಿಜೆಪಿ ತನ್ನ ಪ್ರಾಬಲ್ಯವನ್ನು ಮತ್ತಷ್ಟು ಹೆಚ್ಚಿಸಿಕೊಂಡಿರುವುದನ್ನು ಈ ಉಪಚುನಾವಣೆ ತೋರಿಸಿಕೊಟ್ಟಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...