Homeಮುಖಪುಟ'ಬಾಂಬೆ ಹೈಕೋರ್ಟ್‌ನಿಂದ ಸಂವಿಧಾನ ವಿರೋಧಿ ಟಿಪ್ಪಣಿ': ಸಿಪಿಐ(ಎಂ) ಪಾಲಿಟ್ ಬ್ಯೂರೋ ಖಂಡನೆ

‘ಬಾಂಬೆ ಹೈಕೋರ್ಟ್‌ನಿಂದ ಸಂವಿಧಾನ ವಿರೋಧಿ ಟಿಪ್ಪಣಿ’: ಸಿಪಿಐ(ಎಂ) ಪಾಲಿಟ್ ಬ್ಯೂರೋ ಖಂಡನೆ

- Advertisement -
- Advertisement -

ಗಾಝಾ ಪರ ಪ್ರತಿಭಟನೆಗೆ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸುವ ವೇಳೆ ಬಾಂಬೆ ಹೈಕೋರ್ಟ್ ಮಾಡಿರುವ ಟಿಪ್ಪಣಿಯನ್ನು ಸಂವಿಧಾನ ವಿರೋಧಿ ಎಂದಿರುವ ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ ಸಿಪಿಐ(ಎಂ) ಪಾಲಿಟ್ ಬ್ಯೂರೋ, ಖಂಡನೆ ವ್ಯಕ್ತಪಡಿಸಿದೆ.

ಈ ಸಂಬಂಧ ಶುಕ್ರವಾರ (ಜುಲೈ 25) ಪತ್ರಿಕಾ ಪ್ರಕಟಣೆ ಹೊರಡಿಸಿರುವ ಪಾಲಿಟ್ ಬ್ಯೂರೋ, “ನ್ಯಾಯ ಪೀಠದ ಟಿಪ್ಪಣಿಯು ಕೇಂದ್ರ ಸರ್ಕಾರಕ್ಕೆ ಅನುಗುಣವಾಗಿ ಸ್ಪಷ್ಟವಾದ ರಾಜಕೀಯ ಪಕ್ಷಪಾತವನ್ನು ತೋರಿಸುತ್ತದೆ” ಎಂದಿದೆ.

“ನ್ಯಾಯಾಲಯವು ನಮ್ಮ ಪಕ್ಷದ ದೇಶಭಕ್ತಿಯನ್ನು ಪ್ರಶ್ನಿಸುವ ಹಂತಕ್ಕೆ ಹೋಗಿದೆ. ವಿಪರ್ಯಾಸವೆಂದರೆ ರಾಜಕೀಯ ಪಕ್ಷದ ಹಕ್ಕುಗಳನ್ನು ಪ್ರತಿಪಾದಿಸುವ ಸಂವಿಧಾನದ ನಿಬಂಧನೆಗಳ ಬಗ್ಗೆಯಾಗಲಿ, ನಮ್ಮ ದೇಶದ ಇತಿಹಾಸ ಮತ್ತು ಪ್ಯಾಲೆಸ್ತೀನಿಯರೊಂದಿಗಿನ ನಮ್ಮ ಜನರ ಒಗ್ಗಟ್ಟು ಹಾಗೂ ತಾಯ್ನಾಡಿನ ಅವರ ಕಾನೂನು ಬದ್ದ ಹಕ್ಕಿನ ಬಗ್ಗೆಯಾಗಲಿ ನ್ಯಾಯಪೀಠಕ್ಕೆ ತಿಳಿದಿಲ್ಲದಂತಿದೆ” ಎಂದು ಹೇಳಿದೆ.

“ಪ್ಯಾಲೆಸ್ತೀನ್ ಅಥವಾ ಇಸ್ರೇಲ್ ಪರ ವಹಿಸುವುದು ಯಾವ ರೀತಿ ದೂಳೆಬ್ಬಿಸಬಹುದು (ಪರಿಣಾಮ ಬೀರಬಹುದು) ಎಂದು ನಿಮಗೆ ಗೊತ್ತಿಲ್ಲ. ನೀವು ಏಕೆ ಈ ರೀತಿ ಮಾಡುತ್ತೀರಿ? ನೀವು ಪ್ರತಿನಿಧಿಸುವ ಪಕ್ಷವನ್ನು ನೋಡಿದರೆ, ಇದು ನಮ್ಮ ದೇಶದ ವಿದೇಶಾಂಗ ವ್ಯವಹಾರಗಳ ಮೇಲೆ ಯಾವ ಪರಿಣಾಮ ಬೀರುತ್ತದೆ ಎಂದು ನಿಮಗೆ ಅರ್ಥವಾಗುತ್ತಿಲ್ಲ ಎಂಬುದು ಸ್ಪಷ್ಟವಾಗುತ್ತದೆ” ಎಂದು ಪೀಠ ಹೇಳಿದೆ.

ಮುಂದುವರೆದು “ನೀವು ಭಾರತದಲ್ಲಿ ನೋಂದಣಿಯಾದ ಒಂದು ಸಂಘಟನೆ. ನೀವು ತ್ಯಾಜ್ಯ ನಿರ್ವಹಣೆ, ಪರಿಸರ ಮಾಲಿನ್ಯ, ಚರಂಡಿ ವ್ಯವಸ್ಥೆ, ನೆರೆ ಮುಂತಾದ ವಿಷಯಗಳನ್ನು ಎತ್ತಿಕೊಳ್ಳಬಹುದಿತ್ತು. ನಾವು ಉದಾಹರಣೆಗಳನ್ನು ಕೊಡುತ್ತಿದ್ದೇವಷ್ಟೇ. ನೀವು ಅವುಗಳ ಬಗ್ಗೆ ಪ್ರತಿಭಟಿಸುತ್ತಿಲ್ಲ, ಬದಲಿಗೆ ನಮ್ಮ ದೇಶದಿಂದ ಸಾವಿರಾರು ಮೈಲಿಗಳಾಚೆ ಏನೋ ನಡೆಯುತ್ತಿದ್ದರೆ ಅದನ್ನು ಪ್ರತಿಭಟಿಸುತ್ತಿದ್ದೀರಿ” ಎಂಬುವುದಾಗಿ ನ್ಯಾಯಾಲಯ ಟಿಪ್ಪಣಿ ಮಾಡಿದೆ ಎಂದಿದೆ.

ನ್ಯಾಯಾಲಯದ ಈ ಟಿಪ್ಪಣಿ, ಕಳೆದ ಶತಮಾನದ 40ರ ದಶಕದಲ್ಲಿ ಮಹಾತ್ಮ ಗಾಂಧಿ, ರಾಷ್ಟ್ರೀಯ ಆಂದೋಲನ ಮತ್ತು ನಂತರ ಸ್ವತಂತ್ರ ಭಾರತದ ವಿದೇಶಾಂಗ ನೀತಿ ಪ್ಯಾಲೆಸ್ತೀನ್‍ ಜನತೆಯ ಸ್ವಾತಂತ್ರ್ಯ ಮತ್ತು ತಾಯ್ನಾಡಿನ ಹಕ್ಕನ್ನು ಬೆಂಬಲಿಸುವಲ್ಲಿ ಎಂದೂ ಹಿಂಜರಿದಿಲ್ಲ ಎಂಬ ಸಂಗತಿಯನ್ನು ನಿರ್ಲಕ್ಷಿಸುತ್ತವೆ ಎಂದು ಸಿಪಿಐ(ಎಂ) ಪಾಲಿಟ್ ಬ್ಯೂರೋ ಖಂಡಿಸಿದೆ.

ಅಲ್ಲದೆ ನ್ಯಾಯಪೀಠ, “ಇಸ್ರೇಲಿ ಆಕ್ರಮಣಕ್ಕೆ ಜಾಗತಿಕವಾಗಿ ವ್ಯಕ್ತವಾಗಿರುವ ನಿಸ್ಸಂದಿಗ್ಧ ಖಂಡನೆಯನ್ನು ಮತ್ತು ವಿಶ್ವಸಂಸ್ಥೆಯ ಸಂಘಟನೆಗಳ ಮತ್ತು ಅಂತಾರಾಷ್ಟ್ರೀಯ ನ್ಯಾಯಾಲಯದ ನಿಲುವುಗಳನ್ನು ಅರಿತಿಲ್ಲ ಎಂಬ ಸಂಗತಿಯನ್ನು ಕೂಡ ಬಯಲು ಮಾಡಿದೆ” ಎಂದಿದೆ.

ಇಂತಹ ಖಂಡನೀಯ ಮನೋಭಾವವನ್ನು ಸ್ಪಷ್ಟವಾಗಿ ತಿರಸ್ಕರಿಸುವಲ್ಲಿ ನಮ್ಮೊಂದಿಗೆ ಕೈ ಜೋಡಿಸಲು ದೇಶದ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವವನ್ನು ಪ್ರೀತಿಸುವ ಜನರಲ್ಲಿ ನಾವು ಮನವಿ ಮಾಡುತ್ತೇವೆ ಎಂದು ಪಾಲಿಟ್ ಬ್ಯೂರೋ ಹೇಳಿದೆ.

ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ‘ಜನಾಂಗೀಯ ಹತ್ಯೆ’ಯನ್ನು ಪ್ರತಿಭಟಿಸಲು ಮುಂಬೈ ಪೊಲೀಸರು ಅವಕಾಶ ನಿರಾಕರಿಸಿದ್ದನ್ನು ಪ್ರಶ್ನಿಸಿ ಸಿಪಿಐ(ಎಂ) ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. “ಮೊದಲು ನಮ್ಮ ದೇಶದ ವಿಷಯಗಳನ್ನು ಕೈಗೆತ್ತಿಕೊಳ್ಳಿ, ನಮ್ಮ ದೇಶದ ನಾಗರಿಕರಿಗೆ ದೇಶಭಕ್ತಿಯನ್ನು ತೋರಿಸಿ” ಎಂದಿದೆ.

“ಭಾರತದಲ್ಲಿ ಈಗಾಗಲೇ ಹಲವಾರು ಸಮಸ್ಯೆಗಳಿವೆ, ಅವುಗಳನ್ನು ಪರಿಹರಿಸಬೇಕಿದೆ. ಹೀಗಿರುವಾಗ ಅರ್ಜಿದಾರರು ಭಾರತದ ನಾಗರಿಕರ ಮೇಲೆ ಪರಿಣಾಮ ಬೀರದ ಸಮಸ್ಯೆಗಳನ್ನು ಕೈಗೆತ್ತಿಕೊಳ್ಳುವುದನ್ನು ತಪ್ಪಿಸಬೇಕು” ಎಂದು ನ್ಯಾಯಮೂರ್ತಿಗಳಾದ ರವೀಂದ್ರ ಘುಗೆ ಮತ್ತು ಗೌತಮ್ ಅಂಕಡ್ ಅವರ ವಿಭಾಗೀಯ ಪೀಠ ಹೇಳಿದೆ.

ಜೈಲಿನಿಂದ ತಪ್ಪಿಸಿಕೊಂಡಿದ್ದ ಅಪರಾಧಿ ಬಾವಿಯಲ್ಲಿ ಪತ್ತೆ: ನಾಲ್ವರು ಅಧಿಕಾರಿಗಳು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...