Homeಮುಖಪುಟ'ಬಾಂಬೆ ಹೈಕೋರ್ಟ್‌ನಿಂದ ಸಂವಿಧಾನ ವಿರೋಧಿ ಟಿಪ್ಪಣಿ': ಸಿಪಿಐ(ಎಂ) ಪಾಲಿಟ್ ಬ್ಯೂರೋ ಖಂಡನೆ

‘ಬಾಂಬೆ ಹೈಕೋರ್ಟ್‌ನಿಂದ ಸಂವಿಧಾನ ವಿರೋಧಿ ಟಿಪ್ಪಣಿ’: ಸಿಪಿಐ(ಎಂ) ಪಾಲಿಟ್ ಬ್ಯೂರೋ ಖಂಡನೆ

- Advertisement -
- Advertisement -

ಗಾಝಾ ಪರ ಪ್ರತಿಭಟನೆಗೆ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸುವ ವೇಳೆ ಬಾಂಬೆ ಹೈಕೋರ್ಟ್ ಮಾಡಿರುವ ಟಿಪ್ಪಣಿಯನ್ನು ಸಂವಿಧಾನ ವಿರೋಧಿ ಎಂದಿರುವ ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ ಸಿಪಿಐ(ಎಂ) ಪಾಲಿಟ್ ಬ್ಯೂರೋ, ಖಂಡನೆ ವ್ಯಕ್ತಪಡಿಸಿದೆ.

ಈ ಸಂಬಂಧ ಶುಕ್ರವಾರ (ಜುಲೈ 25) ಪತ್ರಿಕಾ ಪ್ರಕಟಣೆ ಹೊರಡಿಸಿರುವ ಪಾಲಿಟ್ ಬ್ಯೂರೋ, “ನ್ಯಾಯ ಪೀಠದ ಟಿಪ್ಪಣಿಯು ಕೇಂದ್ರ ಸರ್ಕಾರಕ್ಕೆ ಅನುಗುಣವಾಗಿ ಸ್ಪಷ್ಟವಾದ ರಾಜಕೀಯ ಪಕ್ಷಪಾತವನ್ನು ತೋರಿಸುತ್ತದೆ” ಎಂದಿದೆ.

“ನ್ಯಾಯಾಲಯವು ನಮ್ಮ ಪಕ್ಷದ ದೇಶಭಕ್ತಿಯನ್ನು ಪ್ರಶ್ನಿಸುವ ಹಂತಕ್ಕೆ ಹೋಗಿದೆ. ವಿಪರ್ಯಾಸವೆಂದರೆ ರಾಜಕೀಯ ಪಕ್ಷದ ಹಕ್ಕುಗಳನ್ನು ಪ್ರತಿಪಾದಿಸುವ ಸಂವಿಧಾನದ ನಿಬಂಧನೆಗಳ ಬಗ್ಗೆಯಾಗಲಿ, ನಮ್ಮ ದೇಶದ ಇತಿಹಾಸ ಮತ್ತು ಪ್ಯಾಲೆಸ್ತೀನಿಯರೊಂದಿಗಿನ ನಮ್ಮ ಜನರ ಒಗ್ಗಟ್ಟು ಹಾಗೂ ತಾಯ್ನಾಡಿನ ಅವರ ಕಾನೂನು ಬದ್ದ ಹಕ್ಕಿನ ಬಗ್ಗೆಯಾಗಲಿ ನ್ಯಾಯಪೀಠಕ್ಕೆ ತಿಳಿದಿಲ್ಲದಂತಿದೆ” ಎಂದು ಹೇಳಿದೆ.

“ಪ್ಯಾಲೆಸ್ತೀನ್ ಅಥವಾ ಇಸ್ರೇಲ್ ಪರ ವಹಿಸುವುದು ಯಾವ ರೀತಿ ದೂಳೆಬ್ಬಿಸಬಹುದು (ಪರಿಣಾಮ ಬೀರಬಹುದು) ಎಂದು ನಿಮಗೆ ಗೊತ್ತಿಲ್ಲ. ನೀವು ಏಕೆ ಈ ರೀತಿ ಮಾಡುತ್ತೀರಿ? ನೀವು ಪ್ರತಿನಿಧಿಸುವ ಪಕ್ಷವನ್ನು ನೋಡಿದರೆ, ಇದು ನಮ್ಮ ದೇಶದ ವಿದೇಶಾಂಗ ವ್ಯವಹಾರಗಳ ಮೇಲೆ ಯಾವ ಪರಿಣಾಮ ಬೀರುತ್ತದೆ ಎಂದು ನಿಮಗೆ ಅರ್ಥವಾಗುತ್ತಿಲ್ಲ ಎಂಬುದು ಸ್ಪಷ್ಟವಾಗುತ್ತದೆ” ಎಂದು ಪೀಠ ಹೇಳಿದೆ.

ಮುಂದುವರೆದು “ನೀವು ಭಾರತದಲ್ಲಿ ನೋಂದಣಿಯಾದ ಒಂದು ಸಂಘಟನೆ. ನೀವು ತ್ಯಾಜ್ಯ ನಿರ್ವಹಣೆ, ಪರಿಸರ ಮಾಲಿನ್ಯ, ಚರಂಡಿ ವ್ಯವಸ್ಥೆ, ನೆರೆ ಮುಂತಾದ ವಿಷಯಗಳನ್ನು ಎತ್ತಿಕೊಳ್ಳಬಹುದಿತ್ತು. ನಾವು ಉದಾಹರಣೆಗಳನ್ನು ಕೊಡುತ್ತಿದ್ದೇವಷ್ಟೇ. ನೀವು ಅವುಗಳ ಬಗ್ಗೆ ಪ್ರತಿಭಟಿಸುತ್ತಿಲ್ಲ, ಬದಲಿಗೆ ನಮ್ಮ ದೇಶದಿಂದ ಸಾವಿರಾರು ಮೈಲಿಗಳಾಚೆ ಏನೋ ನಡೆಯುತ್ತಿದ್ದರೆ ಅದನ್ನು ಪ್ರತಿಭಟಿಸುತ್ತಿದ್ದೀರಿ” ಎಂಬುವುದಾಗಿ ನ್ಯಾಯಾಲಯ ಟಿಪ್ಪಣಿ ಮಾಡಿದೆ ಎಂದಿದೆ.

ನ್ಯಾಯಾಲಯದ ಈ ಟಿಪ್ಪಣಿ, ಕಳೆದ ಶತಮಾನದ 40ರ ದಶಕದಲ್ಲಿ ಮಹಾತ್ಮ ಗಾಂಧಿ, ರಾಷ್ಟ್ರೀಯ ಆಂದೋಲನ ಮತ್ತು ನಂತರ ಸ್ವತಂತ್ರ ಭಾರತದ ವಿದೇಶಾಂಗ ನೀತಿ ಪ್ಯಾಲೆಸ್ತೀನ್‍ ಜನತೆಯ ಸ್ವಾತಂತ್ರ್ಯ ಮತ್ತು ತಾಯ್ನಾಡಿನ ಹಕ್ಕನ್ನು ಬೆಂಬಲಿಸುವಲ್ಲಿ ಎಂದೂ ಹಿಂಜರಿದಿಲ್ಲ ಎಂಬ ಸಂಗತಿಯನ್ನು ನಿರ್ಲಕ್ಷಿಸುತ್ತವೆ ಎಂದು ಸಿಪಿಐ(ಎಂ) ಪಾಲಿಟ್ ಬ್ಯೂರೋ ಖಂಡಿಸಿದೆ.

ಅಲ್ಲದೆ ನ್ಯಾಯಪೀಠ, “ಇಸ್ರೇಲಿ ಆಕ್ರಮಣಕ್ಕೆ ಜಾಗತಿಕವಾಗಿ ವ್ಯಕ್ತವಾಗಿರುವ ನಿಸ್ಸಂದಿಗ್ಧ ಖಂಡನೆಯನ್ನು ಮತ್ತು ವಿಶ್ವಸಂಸ್ಥೆಯ ಸಂಘಟನೆಗಳ ಮತ್ತು ಅಂತಾರಾಷ್ಟ್ರೀಯ ನ್ಯಾಯಾಲಯದ ನಿಲುವುಗಳನ್ನು ಅರಿತಿಲ್ಲ ಎಂಬ ಸಂಗತಿಯನ್ನು ಕೂಡ ಬಯಲು ಮಾಡಿದೆ” ಎಂದಿದೆ.

ಇಂತಹ ಖಂಡನೀಯ ಮನೋಭಾವವನ್ನು ಸ್ಪಷ್ಟವಾಗಿ ತಿರಸ್ಕರಿಸುವಲ್ಲಿ ನಮ್ಮೊಂದಿಗೆ ಕೈ ಜೋಡಿಸಲು ದೇಶದ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವವನ್ನು ಪ್ರೀತಿಸುವ ಜನರಲ್ಲಿ ನಾವು ಮನವಿ ಮಾಡುತ್ತೇವೆ ಎಂದು ಪಾಲಿಟ್ ಬ್ಯೂರೋ ಹೇಳಿದೆ.

ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ‘ಜನಾಂಗೀಯ ಹತ್ಯೆ’ಯನ್ನು ಪ್ರತಿಭಟಿಸಲು ಮುಂಬೈ ಪೊಲೀಸರು ಅವಕಾಶ ನಿರಾಕರಿಸಿದ್ದನ್ನು ಪ್ರಶ್ನಿಸಿ ಸಿಪಿಐ(ಎಂ) ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. “ಮೊದಲು ನಮ್ಮ ದೇಶದ ವಿಷಯಗಳನ್ನು ಕೈಗೆತ್ತಿಕೊಳ್ಳಿ, ನಮ್ಮ ದೇಶದ ನಾಗರಿಕರಿಗೆ ದೇಶಭಕ್ತಿಯನ್ನು ತೋರಿಸಿ” ಎಂದಿದೆ.

“ಭಾರತದಲ್ಲಿ ಈಗಾಗಲೇ ಹಲವಾರು ಸಮಸ್ಯೆಗಳಿವೆ, ಅವುಗಳನ್ನು ಪರಿಹರಿಸಬೇಕಿದೆ. ಹೀಗಿರುವಾಗ ಅರ್ಜಿದಾರರು ಭಾರತದ ನಾಗರಿಕರ ಮೇಲೆ ಪರಿಣಾಮ ಬೀರದ ಸಮಸ್ಯೆಗಳನ್ನು ಕೈಗೆತ್ತಿಕೊಳ್ಳುವುದನ್ನು ತಪ್ಪಿಸಬೇಕು” ಎಂದು ನ್ಯಾಯಮೂರ್ತಿಗಳಾದ ರವೀಂದ್ರ ಘುಗೆ ಮತ್ತು ಗೌತಮ್ ಅಂಕಡ್ ಅವರ ವಿಭಾಗೀಯ ಪೀಠ ಹೇಳಿದೆ.

ಜೈಲಿನಿಂದ ತಪ್ಪಿಸಿಕೊಂಡಿದ್ದ ಅಪರಾಧಿ ಬಾವಿಯಲ್ಲಿ ಪತ್ತೆ: ನಾಲ್ವರು ಅಧಿಕಾರಿಗಳು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...