Homeಮುಖಪುಟ'ಬಾಂಬೆ ಹೈಕೋರ್ಟ್‌ನಿಂದ ಸಂವಿಧಾನ ವಿರೋಧಿ ಟಿಪ್ಪಣಿ': ಸಿಪಿಐ(ಎಂ) ಪಾಲಿಟ್ ಬ್ಯೂರೋ ಖಂಡನೆ

‘ಬಾಂಬೆ ಹೈಕೋರ್ಟ್‌ನಿಂದ ಸಂವಿಧಾನ ವಿರೋಧಿ ಟಿಪ್ಪಣಿ’: ಸಿಪಿಐ(ಎಂ) ಪಾಲಿಟ್ ಬ್ಯೂರೋ ಖಂಡನೆ

- Advertisement -
- Advertisement -

ಗಾಝಾ ಪರ ಪ್ರತಿಭಟನೆಗೆ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸುವ ವೇಳೆ ಬಾಂಬೆ ಹೈಕೋರ್ಟ್ ಮಾಡಿರುವ ಟಿಪ್ಪಣಿಯನ್ನು ಸಂವಿಧಾನ ವಿರೋಧಿ ಎಂದಿರುವ ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ ಸಿಪಿಐ(ಎಂ) ಪಾಲಿಟ್ ಬ್ಯೂರೋ, ಖಂಡನೆ ವ್ಯಕ್ತಪಡಿಸಿದೆ.

ಈ ಸಂಬಂಧ ಶುಕ್ರವಾರ (ಜುಲೈ 25) ಪತ್ರಿಕಾ ಪ್ರಕಟಣೆ ಹೊರಡಿಸಿರುವ ಪಾಲಿಟ್ ಬ್ಯೂರೋ, “ನ್ಯಾಯ ಪೀಠದ ಟಿಪ್ಪಣಿಯು ಕೇಂದ್ರ ಸರ್ಕಾರಕ್ಕೆ ಅನುಗುಣವಾಗಿ ಸ್ಪಷ್ಟವಾದ ರಾಜಕೀಯ ಪಕ್ಷಪಾತವನ್ನು ತೋರಿಸುತ್ತದೆ” ಎಂದಿದೆ.

“ನ್ಯಾಯಾಲಯವು ನಮ್ಮ ಪಕ್ಷದ ದೇಶಭಕ್ತಿಯನ್ನು ಪ್ರಶ್ನಿಸುವ ಹಂತಕ್ಕೆ ಹೋಗಿದೆ. ವಿಪರ್ಯಾಸವೆಂದರೆ ರಾಜಕೀಯ ಪಕ್ಷದ ಹಕ್ಕುಗಳನ್ನು ಪ್ರತಿಪಾದಿಸುವ ಸಂವಿಧಾನದ ನಿಬಂಧನೆಗಳ ಬಗ್ಗೆಯಾಗಲಿ, ನಮ್ಮ ದೇಶದ ಇತಿಹಾಸ ಮತ್ತು ಪ್ಯಾಲೆಸ್ತೀನಿಯರೊಂದಿಗಿನ ನಮ್ಮ ಜನರ ಒಗ್ಗಟ್ಟು ಹಾಗೂ ತಾಯ್ನಾಡಿನ ಅವರ ಕಾನೂನು ಬದ್ದ ಹಕ್ಕಿನ ಬಗ್ಗೆಯಾಗಲಿ ನ್ಯಾಯಪೀಠಕ್ಕೆ ತಿಳಿದಿಲ್ಲದಂತಿದೆ” ಎಂದು ಹೇಳಿದೆ.

“ಪ್ಯಾಲೆಸ್ತೀನ್ ಅಥವಾ ಇಸ್ರೇಲ್ ಪರ ವಹಿಸುವುದು ಯಾವ ರೀತಿ ದೂಳೆಬ್ಬಿಸಬಹುದು (ಪರಿಣಾಮ ಬೀರಬಹುದು) ಎಂದು ನಿಮಗೆ ಗೊತ್ತಿಲ್ಲ. ನೀವು ಏಕೆ ಈ ರೀತಿ ಮಾಡುತ್ತೀರಿ? ನೀವು ಪ್ರತಿನಿಧಿಸುವ ಪಕ್ಷವನ್ನು ನೋಡಿದರೆ, ಇದು ನಮ್ಮ ದೇಶದ ವಿದೇಶಾಂಗ ವ್ಯವಹಾರಗಳ ಮೇಲೆ ಯಾವ ಪರಿಣಾಮ ಬೀರುತ್ತದೆ ಎಂದು ನಿಮಗೆ ಅರ್ಥವಾಗುತ್ತಿಲ್ಲ ಎಂಬುದು ಸ್ಪಷ್ಟವಾಗುತ್ತದೆ” ಎಂದು ಪೀಠ ಹೇಳಿದೆ.

ಮುಂದುವರೆದು “ನೀವು ಭಾರತದಲ್ಲಿ ನೋಂದಣಿಯಾದ ಒಂದು ಸಂಘಟನೆ. ನೀವು ತ್ಯಾಜ್ಯ ನಿರ್ವಹಣೆ, ಪರಿಸರ ಮಾಲಿನ್ಯ, ಚರಂಡಿ ವ್ಯವಸ್ಥೆ, ನೆರೆ ಮುಂತಾದ ವಿಷಯಗಳನ್ನು ಎತ್ತಿಕೊಳ್ಳಬಹುದಿತ್ತು. ನಾವು ಉದಾಹರಣೆಗಳನ್ನು ಕೊಡುತ್ತಿದ್ದೇವಷ್ಟೇ. ನೀವು ಅವುಗಳ ಬಗ್ಗೆ ಪ್ರತಿಭಟಿಸುತ್ತಿಲ್ಲ, ಬದಲಿಗೆ ನಮ್ಮ ದೇಶದಿಂದ ಸಾವಿರಾರು ಮೈಲಿಗಳಾಚೆ ಏನೋ ನಡೆಯುತ್ತಿದ್ದರೆ ಅದನ್ನು ಪ್ರತಿಭಟಿಸುತ್ತಿದ್ದೀರಿ” ಎಂಬುವುದಾಗಿ ನ್ಯಾಯಾಲಯ ಟಿಪ್ಪಣಿ ಮಾಡಿದೆ ಎಂದಿದೆ.

ನ್ಯಾಯಾಲಯದ ಈ ಟಿಪ್ಪಣಿ, ಕಳೆದ ಶತಮಾನದ 40ರ ದಶಕದಲ್ಲಿ ಮಹಾತ್ಮ ಗಾಂಧಿ, ರಾಷ್ಟ್ರೀಯ ಆಂದೋಲನ ಮತ್ತು ನಂತರ ಸ್ವತಂತ್ರ ಭಾರತದ ವಿದೇಶಾಂಗ ನೀತಿ ಪ್ಯಾಲೆಸ್ತೀನ್‍ ಜನತೆಯ ಸ್ವಾತಂತ್ರ್ಯ ಮತ್ತು ತಾಯ್ನಾಡಿನ ಹಕ್ಕನ್ನು ಬೆಂಬಲಿಸುವಲ್ಲಿ ಎಂದೂ ಹಿಂಜರಿದಿಲ್ಲ ಎಂಬ ಸಂಗತಿಯನ್ನು ನಿರ್ಲಕ್ಷಿಸುತ್ತವೆ ಎಂದು ಸಿಪಿಐ(ಎಂ) ಪಾಲಿಟ್ ಬ್ಯೂರೋ ಖಂಡಿಸಿದೆ.

ಅಲ್ಲದೆ ನ್ಯಾಯಪೀಠ, “ಇಸ್ರೇಲಿ ಆಕ್ರಮಣಕ್ಕೆ ಜಾಗತಿಕವಾಗಿ ವ್ಯಕ್ತವಾಗಿರುವ ನಿಸ್ಸಂದಿಗ್ಧ ಖಂಡನೆಯನ್ನು ಮತ್ತು ವಿಶ್ವಸಂಸ್ಥೆಯ ಸಂಘಟನೆಗಳ ಮತ್ತು ಅಂತಾರಾಷ್ಟ್ರೀಯ ನ್ಯಾಯಾಲಯದ ನಿಲುವುಗಳನ್ನು ಅರಿತಿಲ್ಲ ಎಂಬ ಸಂಗತಿಯನ್ನು ಕೂಡ ಬಯಲು ಮಾಡಿದೆ” ಎಂದಿದೆ.

ಇಂತಹ ಖಂಡನೀಯ ಮನೋಭಾವವನ್ನು ಸ್ಪಷ್ಟವಾಗಿ ತಿರಸ್ಕರಿಸುವಲ್ಲಿ ನಮ್ಮೊಂದಿಗೆ ಕೈ ಜೋಡಿಸಲು ದೇಶದ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವವನ್ನು ಪ್ರೀತಿಸುವ ಜನರಲ್ಲಿ ನಾವು ಮನವಿ ಮಾಡುತ್ತೇವೆ ಎಂದು ಪಾಲಿಟ್ ಬ್ಯೂರೋ ಹೇಳಿದೆ.

ಗಾಝಾದಲ್ಲಿ ಇಸ್ರೇಲ್ ನಡೆಸುತ್ತಿರುವ ‘ಜನಾಂಗೀಯ ಹತ್ಯೆ’ಯನ್ನು ಪ್ರತಿಭಟಿಸಲು ಮುಂಬೈ ಪೊಲೀಸರು ಅವಕಾಶ ನಿರಾಕರಿಸಿದ್ದನ್ನು ಪ್ರಶ್ನಿಸಿ ಸಿಪಿಐ(ಎಂ) ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ತಿರಸ್ಕರಿಸಿದೆ. “ಮೊದಲು ನಮ್ಮ ದೇಶದ ವಿಷಯಗಳನ್ನು ಕೈಗೆತ್ತಿಕೊಳ್ಳಿ, ನಮ್ಮ ದೇಶದ ನಾಗರಿಕರಿಗೆ ದೇಶಭಕ್ತಿಯನ್ನು ತೋರಿಸಿ” ಎಂದಿದೆ.

“ಭಾರತದಲ್ಲಿ ಈಗಾಗಲೇ ಹಲವಾರು ಸಮಸ್ಯೆಗಳಿವೆ, ಅವುಗಳನ್ನು ಪರಿಹರಿಸಬೇಕಿದೆ. ಹೀಗಿರುವಾಗ ಅರ್ಜಿದಾರರು ಭಾರತದ ನಾಗರಿಕರ ಮೇಲೆ ಪರಿಣಾಮ ಬೀರದ ಸಮಸ್ಯೆಗಳನ್ನು ಕೈಗೆತ್ತಿಕೊಳ್ಳುವುದನ್ನು ತಪ್ಪಿಸಬೇಕು” ಎಂದು ನ್ಯಾಯಮೂರ್ತಿಗಳಾದ ರವೀಂದ್ರ ಘುಗೆ ಮತ್ತು ಗೌತಮ್ ಅಂಕಡ್ ಅವರ ವಿಭಾಗೀಯ ಪೀಠ ಹೇಳಿದೆ.

ಜೈಲಿನಿಂದ ತಪ್ಪಿಸಿಕೊಂಡಿದ್ದ ಅಪರಾಧಿ ಬಾವಿಯಲ್ಲಿ ಪತ್ತೆ: ನಾಲ್ವರು ಅಧಿಕಾರಿಗಳು ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...