Homeಮುಖಪುಟಪ.ಬಂಗಾಳ: ಅತ್ಯಾಚಾರ ಅಪರಾಧಿಗಳಿಗೆ ಮರಣದಂಡನೆ ವಿಧಿಸುವ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲ

ಪ.ಬಂಗಾಳ: ಅತ್ಯಾಚಾರ ಅಪರಾಧಿಗಳಿಗೆ ಮರಣದಂಡನೆ ವಿಧಿಸುವ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲ

- Advertisement -
- Advertisement -

ಭಾರತೀಯ ನ್ಯಾಯ ಸಂಹಿತೆಗೆ (ಬಿಎನ್‌ಎಸ್) ಪ್ರಸ್ತಾವಿತ ಬದಲಾವಣೆಗಳ ಕುರಿತು ಕೇಂದ್ರವು ಎತ್ತಿರುವ ಗಂಭೀರ ಆಕ್ಷೇಪಣೆಗಳನ್ನು ಉಲ್ಲೇಖಿಸಿ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ ಆನಂದ ಬೋಸ್ ಅವರು ‘ಅಪರಾಜಿತ ಮಸೂದೆ’ಯನ್ನು ಮರುಪರಿಶೀಲನೆಗಾಗಿ ವಿಧಾನಸಭೆಗೆ ಹಿಂದಿರುಗಿಸಿದ್ದಾರೆ ಎಂದು ರಾಜಭವನದ ಉನ್ನತ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸೆಪ್ಟೆಂಬರ್ 2024ರಲ್ಲಿ ವಿಧಾನಸಭೆ ಅಂಗೀಕರಿಸಿರುವ ‘ಅಪರಾಜಿತ ಮಹಿಳೆಯರು ಮತ್ತು ಮಕ್ಕಳ (ಪಶ್ಚಿಮ ಬಂಗಾಳ ಕ್ರಿಮಿನಲ್ ಕಾನೂನುಗಳ ತಿದ್ದುಪಡಿ) ಮಸೂದೆಯು’ ಬಿಎನ್‌ಎಸ್‌ನ ಹಲವು ವಿಭಾಗಗಳ ಅಡಿಯಲ್ಲಿ ಅತ್ಯಾಚಾರಕ್ಕೆ ಶಿಕ್ಷೆ ವಿಧಿಸುವ ನಿಬಂಧನೆಗಳಲ್ಲಿ ಬದಲಾವಣೆ ಮಾಡಲಿವೆ ಎಂದು ಕೇಂದ್ರವು ಕಂಡುಕೊಂಡಿದೆ. ‘ಅತಿ ಕಠಿಣ ಮತ್ತು ಅಸಮಾನ’ ಶಿಕ್ಷೆಗಳನ್ನು ಪ್ರಸ್ತಾಪಿಸಿವೆ ಎಂದು ಕೇಂದ್ರ ಹೇಳಿದೆ.

ಬಿಎನ್‌ಎಸ್ ಸೆಕ್ಷನ್ 64ಕ್ಕೆ ತಿದ್ದುಪಡಿ ತರುವುದು ಮಸೂದೆಯ ಒಂದು ಪ್ರಮುಖ ವಿವಾದದ ಅಂಶವಾಗಿದೆ. ಮಸೂದೆಯು ಅತ್ಯಾಚಾರಕ್ಕೆ ಪ್ರಸ್ತುತ ಇರುವ ಕನಿಷ್ಠ 10 ವರ್ಷಗಳ ಶಿಕ್ಷೆಯನ್ನು ಅಪರಾಧಿಯ ಸಹಜ ಜೀವಿತಾವಧಿಯ ಉಳಿದ ಅವಧಿಗೆ ಜೈಲು ಶಿಕ್ಷೆ ಅಥವಾ ಮರಣದಂಡನೆಗೆ ಹೆಚ್ಚಿಸಲಿದೆ. ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್‌ಎ) ಇದು ಅನಗತ್ಯ ಕಠಿಣ ಮತ್ತು ನೈತಿಕ ತತ್ವಗಳಿಗೆ ಹೊಂದಿಕೆಯಾಗುವುದಿಲ್ಲ ಎಂದು ಪರಿಗಣಿಸಿರುವುದಾಗಿ ವರದಿಯಾಗಿದೆ.

ಅಪ್ರಾಪ್ತ ವಯಸ್ಕರ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಕಠಿಣ ಶಿಕ್ಷೆಯನ್ನು ಸೂಚಿಸುವ ಬಿಎನ್‌ಎಸ್ ಸೆಕ್ಷನ್ 65 ಅನ್ನು ತೆಗೆದುಹಾಕುವುದನ್ನು ಗೃಹ ಸಚಿವಾಲಯ ಆಕ್ಷೇಪಿಸಿದ್ದು ಮತ್ತೊಂದು ಕಾರಣವಾಗಿದೆ. ಮೂಲಗಳ ಪ್ರಕಾರ, ಈ ಸೆಕ್ಷನ್ ರದ್ದುಗೊಳಿಸುವುದರಿಂದ ದುರ್ಬಲ ಗುಂಪುಗಳಿಗೆ ರಕ್ಷಣೆ ದುರ್ಬಲಗೊಳ್ಳುತ್ತದೆ ಮತ್ತು ಅತ್ಯಾಚಾರ ಕಾನೂನುಗಳಲ್ಲಿ ವಯಸ್ಸಿನ ಆಧಾರಿತ ವರ್ಗೀಕರಣದ ಹಿಂದಿನ ಉದ್ದೇಶವನ್ನು ದುರ್ಬಲಗೊಳಿಸುವ ಅಪಾಯವಿದೆ ಎಂದು ಕೇಂದ್ರ ಸರ್ಕಾರ ಅಭಿಪ್ರಾಯಪಟ್ಟಿದೆ.

ಇನ್ನು, ಕೇಂದ್ರವು ಅತ್ಯಂತ ಸಮಸ್ಯಾತ್ಮಕವೆಂದು ಕಂಡುಕೊಂಡಿರುವ ನಿಬಂಧನೆ ಸೆಕ್ಷನ್ 66ರ ಅಡಿಯಲ್ಲಿದ್ದು, ಅತ್ಯಾಚಾರ ಪ್ರಕರಣಗಳಲ್ಲಿ ಬಲಿಪಶು ಸಾವನ್ನಪ್ಪಿದರೆ ಅಥವಾ ಅಸ್ವಸ್ಥ ಸ್ಥಿತಿಯಲ್ಲಿ ಉಳಿದರೆ ಇದು ಅಪರಾಧಿಗೆ ಮರಣದಂಡನೆಯನ್ನು ಕಡ್ಡಾಯಗೊಳಿಸುತ್ತದೆ.

ಮಸೂದೆಯ ಕುರಿತು ಗೃಹ ಸಚಿವಾಲಯವು ಸಾಂವಿಧಾನಿಕ ಕಳವಳಗಳನ್ನು ವ್ಯಕ್ತಪಡಿಸಿದ್ದು, ಶಿಕ್ಷೆ ವಿಧಿಸುವಲ್ಲಿ ನ್ಯಾಯಾಂಗದ ವಿವೇಚನೆಯನ್ನು ತೆಗೆದುಹಾಕುವುದು ಸ್ಥಾಪಿತ ಕಾನೂನು ಮಾನದಂಡಗಳು ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದೆ ಎಂದು ಮೂಲಗಳು ತಿಳಿಸಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮಸೂದೆಯ ಕುರಿತ ಅವಲೋಕನಗಳ ಬಗ್ಗೆ ಕೇಂದ್ರ ಅಥವಾ ರಾಜ್ಯಪಾಲರ ಕಚೇರಿಯಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ.

ಈ ಹಿಂದೆ, ಅಪರಾಜಿತ ಮಾದರಿಯಲ್ಲೇ ಎಲ್ಲಾ ಅತ್ಯಾಚಾರ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣಗಳಿಗೆ ಕಡ್ಡಾಯ ಮರಣದಂಡನೆ ವಿಧಿಸಲು ಪ್ರಸ್ತಾಪಿಸಿದ್ದ ಆಂಧ್ರ ಪ್ರದೇಶ ‘ದಿಶಾ ಮಸೂದೆ, 2019’ ಮತ್ತು ಮಹಾರಾಷ್ಟ್ರದ ‘ಶಕ್ತಿ ಮಸೂದೆ, 2020’ ಅನ್ನು ಆಯಾ ರಾಜ್ಯ ಶಾಸಕಾಂಗಗಳು ಸರ್ವಾನುಮತದಿಂದ ಅಂಗೀಕರಿಸಿದ್ದವು, ಆದರೆ, ರಾಷ್ಟ್ರಪತಿ ಅಂಕಿ ಹಾಕಿರಲಿಲ್ಲ.

ತೃಣಮೂಲ ಕಾಂಗ್ರೆಸ್ ಪಕ್ಷವು ಇದನ್ನು ರಾಜಕೀಯ ವಿಷಯವನ್ನಾಗಿ ಮಾಡಲಿದೆ ಎಂದು ಅದರ ವಕ್ತಾರ ಕುನಾಲ್ ಘೋಷ್ ಹೇಳಿದ್ದಾರೆ. “ಅಪರಾಜಿತ ಮಸೂದೆಯನ್ನು ಹಿಂತಿರುಗಿಸಿರುವುದು ದುರದೃಷ್ಟಕರ, ಶೋಚನೀಯ ಮತ್ತು ಖಂಡನೀಯ. ಬಿಜೆಪಿ ಸದಸ್ಯರು ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರಗಳಲ್ಲಿ ಭಾಗಿಯಾಗಿರುವುದರಿಂದ ಈ ಪ್ರಕರಣಗಳಲ್ಲಿ ಗರಿಷ್ಠ ಶಿಕ್ಷೆಯನ್ನು ವಿಧಿಸಲು ಅವರು ಸಿದ್ಧರಿಲ್ಲ ಎಂಬುವುದನ್ನು ಇದು ಸಾಬೀತುಪಡಿಸಿದೆ” ಎಂದಿದ್ದಾರೆ.

ಉಪರಾಷ್ಟ್ರಪತಿ ಆಯ್ಕೆ: ಬಿಜೆಪಿಯ ಬಂಡಾರು ದತ್ತಾತ್ರೇಯ ಪರ ಬ್ಯಾಟ್ ಬೀಸಿದ ಕಾಂಗ್ರೆಸ್ ಸಿಎಂ ರೇವಂತ್ ರೆಡ್ಡಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...