Homeಮುಖಪುಟಪ.ಬಂಗಾಳ: ಅತ್ಯಾಚಾರ ಅಪರಾಧಿಗಳಿಗೆ ಮರಣದಂಡನೆ ವಿಧಿಸುವ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲ

ಪ.ಬಂಗಾಳ: ಅತ್ಯಾಚಾರ ಅಪರಾಧಿಗಳಿಗೆ ಮರಣದಂಡನೆ ವಿಧಿಸುವ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲ

- Advertisement -
- Advertisement -

ಭಾರತೀಯ ನ್ಯಾಯ ಸಂಹಿತೆಗೆ (ಬಿಎನ್‌ಎಸ್) ಪ್ರಸ್ತಾವಿತ ಬದಲಾವಣೆಗಳ ಕುರಿತು ಕೇಂದ್ರವು ಎತ್ತಿರುವ ಗಂಭೀರ ಆಕ್ಷೇಪಣೆಗಳನ್ನು ಉಲ್ಲೇಖಿಸಿ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ ಆನಂದ ಬೋಸ್ ಅವರು ‘ಅಪರಾಜಿತ ಮಸೂದೆ’ಯನ್ನು ಮರುಪರಿಶೀಲನೆಗಾಗಿ ವಿಧಾನಸಭೆಗೆ ಹಿಂದಿರುಗಿಸಿದ್ದಾರೆ ಎಂದು ರಾಜಭವನದ ಉನ್ನತ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸೆಪ್ಟೆಂಬರ್ 2024ರಲ್ಲಿ ವಿಧಾನಸಭೆ ಅಂಗೀಕರಿಸಿರುವ ‘ಅಪರಾಜಿತ ಮಹಿಳೆಯರು ಮತ್ತು ಮಕ್ಕಳ (ಪಶ್ಚಿಮ ಬಂಗಾಳ ಕ್ರಿಮಿನಲ್ ಕಾನೂನುಗಳ ತಿದ್ದುಪಡಿ) ಮಸೂದೆಯು’ ಬಿಎನ್‌ಎಸ್‌ನ ಹಲವು ವಿಭಾಗಗಳ ಅಡಿಯಲ್ಲಿ ಅತ್ಯಾಚಾರಕ್ಕೆ ಶಿಕ್ಷೆ ವಿಧಿಸುವ ನಿಬಂಧನೆಗಳಲ್ಲಿ ಬದಲಾವಣೆ ಮಾಡಲಿವೆ ಎಂದು ಕೇಂದ್ರವು ಕಂಡುಕೊಂಡಿದೆ. ‘ಅತಿ ಕಠಿಣ ಮತ್ತು ಅಸಮಾನ’ ಶಿಕ್ಷೆಗಳನ್ನು ಪ್ರಸ್ತಾಪಿಸಿವೆ ಎಂದು ಕೇಂದ್ರ ಹೇಳಿದೆ.

ಬಿಎನ್‌ಎಸ್ ಸೆಕ್ಷನ್ 64ಕ್ಕೆ ತಿದ್ದುಪಡಿ ತರುವುದು ಮಸೂದೆಯ ಒಂದು ಪ್ರಮುಖ ವಿವಾದದ ಅಂಶವಾಗಿದೆ. ಮಸೂದೆಯು ಅತ್ಯಾಚಾರಕ್ಕೆ ಪ್ರಸ್ತುತ ಇರುವ ಕನಿಷ್ಠ 10 ವರ್ಷಗಳ ಶಿಕ್ಷೆಯನ್ನು ಅಪರಾಧಿಯ ಸಹಜ ಜೀವಿತಾವಧಿಯ ಉಳಿದ ಅವಧಿಗೆ ಜೈಲು ಶಿಕ್ಷೆ ಅಥವಾ ಮರಣದಂಡನೆಗೆ ಹೆಚ್ಚಿಸಲಿದೆ. ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್‌ಎ) ಇದು ಅನಗತ್ಯ ಕಠಿಣ ಮತ್ತು ನೈತಿಕ ತತ್ವಗಳಿಗೆ ಹೊಂದಿಕೆಯಾಗುವುದಿಲ್ಲ ಎಂದು ಪರಿಗಣಿಸಿರುವುದಾಗಿ ವರದಿಯಾಗಿದೆ.

ಅಪ್ರಾಪ್ತ ವಯಸ್ಕರ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಕಠಿಣ ಶಿಕ್ಷೆಯನ್ನು ಸೂಚಿಸುವ ಬಿಎನ್‌ಎಸ್ ಸೆಕ್ಷನ್ 65 ಅನ್ನು ತೆಗೆದುಹಾಕುವುದನ್ನು ಗೃಹ ಸಚಿವಾಲಯ ಆಕ್ಷೇಪಿಸಿದ್ದು ಮತ್ತೊಂದು ಕಾರಣವಾಗಿದೆ. ಮೂಲಗಳ ಪ್ರಕಾರ, ಈ ಸೆಕ್ಷನ್ ರದ್ದುಗೊಳಿಸುವುದರಿಂದ ದುರ್ಬಲ ಗುಂಪುಗಳಿಗೆ ರಕ್ಷಣೆ ದುರ್ಬಲಗೊಳ್ಳುತ್ತದೆ ಮತ್ತು ಅತ್ಯಾಚಾರ ಕಾನೂನುಗಳಲ್ಲಿ ವಯಸ್ಸಿನ ಆಧಾರಿತ ವರ್ಗೀಕರಣದ ಹಿಂದಿನ ಉದ್ದೇಶವನ್ನು ದುರ್ಬಲಗೊಳಿಸುವ ಅಪಾಯವಿದೆ ಎಂದು ಕೇಂದ್ರ ಸರ್ಕಾರ ಅಭಿಪ್ರಾಯಪಟ್ಟಿದೆ.

ಇನ್ನು, ಕೇಂದ್ರವು ಅತ್ಯಂತ ಸಮಸ್ಯಾತ್ಮಕವೆಂದು ಕಂಡುಕೊಂಡಿರುವ ನಿಬಂಧನೆ ಸೆಕ್ಷನ್ 66ರ ಅಡಿಯಲ್ಲಿದ್ದು, ಅತ್ಯಾಚಾರ ಪ್ರಕರಣಗಳಲ್ಲಿ ಬಲಿಪಶು ಸಾವನ್ನಪ್ಪಿದರೆ ಅಥವಾ ಅಸ್ವಸ್ಥ ಸ್ಥಿತಿಯಲ್ಲಿ ಉಳಿದರೆ ಇದು ಅಪರಾಧಿಗೆ ಮರಣದಂಡನೆಯನ್ನು ಕಡ್ಡಾಯಗೊಳಿಸುತ್ತದೆ.

ಮಸೂದೆಯ ಕುರಿತು ಗೃಹ ಸಚಿವಾಲಯವು ಸಾಂವಿಧಾನಿಕ ಕಳವಳಗಳನ್ನು ವ್ಯಕ್ತಪಡಿಸಿದ್ದು, ಶಿಕ್ಷೆ ವಿಧಿಸುವಲ್ಲಿ ನ್ಯಾಯಾಂಗದ ವಿವೇಚನೆಯನ್ನು ತೆಗೆದುಹಾಕುವುದು ಸ್ಥಾಪಿತ ಕಾನೂನು ಮಾನದಂಡಗಳು ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದೆ ಎಂದು ಮೂಲಗಳು ತಿಳಿಸಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮಸೂದೆಯ ಕುರಿತ ಅವಲೋಕನಗಳ ಬಗ್ಗೆ ಕೇಂದ್ರ ಅಥವಾ ರಾಜ್ಯಪಾಲರ ಕಚೇರಿಯಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ.

ಈ ಹಿಂದೆ, ಅಪರಾಜಿತ ಮಾದರಿಯಲ್ಲೇ ಎಲ್ಲಾ ಅತ್ಯಾಚಾರ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣಗಳಿಗೆ ಕಡ್ಡಾಯ ಮರಣದಂಡನೆ ವಿಧಿಸಲು ಪ್ರಸ್ತಾಪಿಸಿದ್ದ ಆಂಧ್ರ ಪ್ರದೇಶ ‘ದಿಶಾ ಮಸೂದೆ, 2019’ ಮತ್ತು ಮಹಾರಾಷ್ಟ್ರದ ‘ಶಕ್ತಿ ಮಸೂದೆ, 2020’ ಅನ್ನು ಆಯಾ ರಾಜ್ಯ ಶಾಸಕಾಂಗಗಳು ಸರ್ವಾನುಮತದಿಂದ ಅಂಗೀಕರಿಸಿದ್ದವು, ಆದರೆ, ರಾಷ್ಟ್ರಪತಿ ಅಂಕಿ ಹಾಕಿರಲಿಲ್ಲ.

ತೃಣಮೂಲ ಕಾಂಗ್ರೆಸ್ ಪಕ್ಷವು ಇದನ್ನು ರಾಜಕೀಯ ವಿಷಯವನ್ನಾಗಿ ಮಾಡಲಿದೆ ಎಂದು ಅದರ ವಕ್ತಾರ ಕುನಾಲ್ ಘೋಷ್ ಹೇಳಿದ್ದಾರೆ. “ಅಪರಾಜಿತ ಮಸೂದೆಯನ್ನು ಹಿಂತಿರುಗಿಸಿರುವುದು ದುರದೃಷ್ಟಕರ, ಶೋಚನೀಯ ಮತ್ತು ಖಂಡನೀಯ. ಬಿಜೆಪಿ ಸದಸ್ಯರು ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರಗಳಲ್ಲಿ ಭಾಗಿಯಾಗಿರುವುದರಿಂದ ಈ ಪ್ರಕರಣಗಳಲ್ಲಿ ಗರಿಷ್ಠ ಶಿಕ್ಷೆಯನ್ನು ವಿಧಿಸಲು ಅವರು ಸಿದ್ಧರಿಲ್ಲ ಎಂಬುವುದನ್ನು ಇದು ಸಾಬೀತುಪಡಿಸಿದೆ” ಎಂದಿದ್ದಾರೆ.

ಉಪರಾಷ್ಟ್ರಪತಿ ಆಯ್ಕೆ: ಬಿಜೆಪಿಯ ಬಂಡಾರು ದತ್ತಾತ್ರೇಯ ಪರ ಬ್ಯಾಟ್ ಬೀಸಿದ ಕಾಂಗ್ರೆಸ್ ಸಿಎಂ ರೇವಂತ್ ರೆಡ್ಡಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...