Homeಅಂತರಾಷ್ಟ್ರೀಯಬಂಗಾಳಿ ವಲಸೆ ಕಾರ್ಮಿಕನನ್ನು ಬಂದೂಕು ತೋರಿಸಿ ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಬಿಎಸ್‌ಎಫ್‌: ಕುಟುಂಬದಿಂದ ಗಂಭೀರ ಆರೋಪ

ಬಂಗಾಳಿ ವಲಸೆ ಕಾರ್ಮಿಕನನ್ನು ಬಂದೂಕು ತೋರಿಸಿ ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಬಿಎಸ್‌ಎಫ್‌: ಕುಟುಂಬದಿಂದ ಗಂಭೀರ ಆರೋಪ

- Advertisement -
- Advertisement -

ಪಶ್ಚಿಮ ಬಂಗಾಳದ 19 ವರ್ಷದ ವಲಸೆ ಕಾರ್ಮಿಕನನ್ನು ಬಂಧಿಸಿ ಎರಡು ತಿಂಗಳ ಕಾಲ ರಾಜಸ್ಥಾನದ ಬಂಧನ ಕೇಂದ್ರದಲ್ಲಿ ಇರಿಸಿದ್ದ ಗಡಿ ಭದ್ರತಾ ಪಡೆ (ಬಿಎಸ್‌ಎಫ್‌), ನಂತರ ಬಂದೂಕು ತೋರಿಸಿ ಬಲವಂತವಾಗಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದೆ ಎಂದು ಕುಟುಂಬ ಆರೋಪಿಸಿದೆ.

ಅಮೀರ್ ಶೇಖ್ ಗಡಿಪಾರು ಮಾಡಲಾಗಿರುವ ವಲಸೆ ಕಾರ್ಮಿಕ. ಅವರು ಬಾಂಗ್ಲಾದೇಶದಿಂದ ಅಲ್ಲಿನ ಜನರೊಂದಿಗೆ ಇದ್ದು ಮಾತನಾಡಿರುವ ವಿಡಿಯೋ ವೈರಲ್ ಆದ ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಅಮೀರ್ ಅವರ ಚಿಕ್ಕಪ್ಪ ಮೊಹಮ್ಮದ್ ಅಜ್ಮಲ್ ಶೇಖ್ ಹೇಳಿದ್ದಾಗಿ scroll.in ವರದಿ ಮಾಡಿದೆ.

ವಿಡಿಯೋದಲ್ಲಿ, ಅಮೀರ್ ಶೇಖ್ ಅವರು ಪಶ್ಚಿಮ ಬಂಗಾಳದ ಮಾಲ್ಡಾ ನಿವಾಸಿ ಎಂದು ಹೇಳುವುದನ್ನು ನೋಡಬಹುದು. ಅವರು ರಾಜಸ್ಥಾನದಲ್ಲಿ ಕೆಲಸ ಮಾಡುತ್ತಿದ್ದರು. ಪೊಲೀಸರು ಅವರನ್ನು ಬಾಂಗ್ಲಾದೇಶಿ ಎಂಬ ಅನುಮಾನದ ಮೇಲೆ ಬಂಧಿಸಿದ್ದರು ಎಂದು scroll.in ಹೇಳಿದೆ.

ತನ್ನ ಆಧಾರ್ ಕಾರ್ಡ್ ಮತ್ತು ಪೋಷಕರ ಹೆಚ್ಚುವರಿ ದಾಖಲೆಗಳನ್ನು ಪೊಲೀಸರಿಗೆ ತೋರಿಸಿದ್ದೇನೆ ಎಂದು ಅಮೀರ್ ಶೇಖ್ ಹೇಳಿದ್ದಾರೆ. ಆದರೆ, ಪೊಲೀಸರು ಐಡಿ ಪ್ರೂಫ್ ತರುವಂತೆ ಒತ್ತಾಯಿಸಿದ್ದರು. ಅದು ಅವರ ಬಳಿ ಇರಲಿಲ್ಲ ಎಂದು scroll.in ವಿವರಿಸಿದೆ.

“ನನಗೆ ಬಾಂಗ್ಲಾದೇಶದಲ್ಲಿ ಯಾರೂ ಪರಿಚಯವಿಲ್ಲ, ನನ್ನ ಬಳಿ ತಿನ್ನಲು ಏನೂ ಇಲ್ಲ” ಎಂದು ಅಮೀರ್ ಶೇಖ್ ಹೇಳುತ್ತಿರುವುದು ವಿಡಿಯೋದಲ್ಲಿ ಇದೆ.

ಅಮೀರ್ ಶೇಖ್ ಮೂರು ತಿಂಗಳ ಹಿಂದೆ ರಾಜಸ್ಥಾನಕ್ಕೆ ಹೋಗಿದ್ದರು ಎಂದು ಚಿಕ್ಕಪ್ಪ ಮೊಹಮ್ಮದ್ ಅಜ್ಮೌಲ್ ಶೇಖ್ scroll.inಗೆ ಹೇಳಿದ್ದಾರೆ.

“ಒಬ್ಬ ಗುತ್ತಿಗೆದಾರ ನಮಗೆ ಅಮೀರ್ ಬಂಧನದ ಬಗ್ಗೆ ಮಾಹಿತಿ ನೀಡಿದ್ದರು. ನಾವು ಅವರ ಸಹಾಯದಿಂದ ಎಲ್ಲಾ ದಾಖಲೆಗಳನ್ನು ಸಲ್ಲಿಸಿದ್ದೆವು. ಆಧಾರ್ ಮತ್ತು ಜನನ ಪ್ರಮಾಣಪತ್ರಗಳನ್ನೂ ಸಲ್ಲಿಸಿದ್ದೆವು. ಆದರೆ ಅವರು (ಪೊಲೀಸರು) ಅವುಗಳನ್ನು ಸ್ವೀಕರಿಸಿಲ್ಲ” ಎಂದು ಅಜ್ಮೌಲ್ ಶೇಖ್ ಆರೋಪಿಸಿದ್ದಾರೆ.

ಅಮೀರ್ ಶೇಖ್ ಅವರನ್ನು ಬಿಡುಗಡೆ ಮಾಡಲು ರಾಜಸ್ಥಾನ ಪೊಲೀಸರು 50,000 ರೂ.ಗಳನ್ನು ಕೇಳಿದ್ದರು. ಅಷ್ಟೊಂದು ಹಣ ಕೊಡಲು ನಮಗೆ ಸಾಧ್ಯವಾಗಲಿಲ್ಲ. ಹಾಗಾಗಿ, ಅಮೀರ್ ರಾಜಸ್ಥಾನದ ಬಂಧನ ಕೇಂದ್ರದಲ್ಲಿ ಎರಡು ತಿಂಗಳು ಕಳೆದರು” ಎಂದು ಅಜ್ಮೌಲ್ ಶೇಖ್ ತಿಳಿಸಿದ್ದಾರೆ.

ವಿಡಿಯೋದಲ್ಲಿ ಕಾಣಿಸಿಕೊಳ್ಳುವವರೆಗೆ ಅಮೀರ್ ಎಲ್ಲಿದ್ದರು ಎಂದು ನಮಗೆ ಗೊತ್ತಿರಲಿಲ್ಲ. ಬಾಂಗ್ಲಾದೇಶದ ವ್ಯಕ್ತಿಯೊಬ್ಬರು ನಮಗೆ ಕರೆ ಮಾಡಿದ ನಂತರ ನಾವು ಅವರೊಂದಿಗೆ ಒಮ್ಮೆ ಮಾತನಾಡಿದೆವು. ಗಡಿ ಭದ್ರತಾ ಪಡೆ ತನ್ನ ಮೇಲೆ ಹಲ್ಲೆ ನಡೆಸಿದೆ ಎಂದು ಅಮೀರ್ ಹೇಳಿಕೊಂಡಿದ್ದಾರೆ ಎಂದು ಅಜ್ಮೌಲ್ ಶೇಖ್ ಮಾಹಿತಿ ನೀಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಪೊಲೀಸ್ ದೂರು ದಾಖಲಿಸಿರುವ ಅಮೀರ್ ಕುಟುಂಬ, 1950ರ ದಶಕದಿಂದಲೂ ಭಾರತದಲ್ಲಿ ವಾಸಿಸುತ್ತಿರುವುದನ್ನು ಸಾಬೀತುಪಡಿಸುವ ದಾಖಲೆಗಳು ತಮ್ಮ ಬಳಿ ಇದೆ ಎಂದು ತಿಳಿಸಿದೆ.

ಬಾಂಗ್ಲಾದೇಶೀಯರು ಎಂಬ ಅನುಮಾನದ ಮೇಲೆ ದೇಶದ ಹಲವು ಭಾಗಗಳಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಬಂಧಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ಇತ್ತೀಚಿಗೆ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕೋಲ್ಕತ್ತಾದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಿತ್ತು.

ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಪೊಲೀಸರು ಬಂಗಾಳಿ ಮಾತನಾಡುವ ಜನರನ್ನು, ಹೆಚ್ಚಾಗಿ ಮುಸ್ಲಿಮರನ್ನು ಬಂಧಿಸಿ ಭಾರತೀಯ ನಾಗರಿಕರು ಎಂದು ಸಾಬೀತುಪಡಿಸಲು ಒತ್ತಾಯಿಸುತ್ತಿದ್ದಾರೆ ಎಂಬ ಆರೋಪವಿದೆ.

ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ವಿಫಲರಾದ ಹಲವಾರು ಜನರನ್ನು ಬಲವಂತವಾಗಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ ಅರೋಪವಿದೆ. ಕೆಲ ಜನರನ್ನು ತಪ್ಪಾಗಿ ಗಡಿಯಾಚೆಗೆ ತಳ್ಳಿ ಬಳಿಕ ವಾಪಸ್ ಕರೆದುಕೊಂಡು ಬಂದ ಬಗ್ಗೆ ವರದಿಯಾಗಿವೆ.

ಮೇ ತಿಂಗಳಲ್ಲಿ, ಕೇಂದ್ರ ಗೃಹ ಸಚಿವಾಲಯವು ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್‌ನಿಂದ ಬಂದ ದಾಖಲೆರಹಿತ ವಲಸಿಗರೆಂದು ಶಂಕಿಸಲಾಗಿರುವ ವ್ಯಕ್ತಿಗಳ ಬಗ್ಗೆ ಪರಿಶೀಲನೆ ನಡೆಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿತ್ತು.

ಜುಲೈ 19ರಂದು ಹರಿಯಾಣದ ಗುರುಗ್ರಾಮದಲ್ಲಿ ಪೊಲೀಸರು ಬಾಂಗ್ಲಾದೇಶದವರೆಂಬ ಅನುಮಾನದ ಮೇಲೆ ಕನಿಷ್ಠ 74 ವಲಸೆ ಕಾರ್ಮಿಕರನ್ನು ಬಂಧಿಸಿದ್ದರು. ಇವರಲ್ಲಿ 11 ಮಂದಿ ಪಶ್ಚಿಮ ಬಂಗಾಳದವರು ಮತ್ತು 63 ಮಂದಿ ಅಸ್ಸಾಂನವರು ಎಂದು ದಿ ವೈರ್ ವರದಿ ಮಾಡಿತ್ತು.

ಮಂಗಳವಾರ scroll.in ಮಾಡಿರುವ ವರದಿ ಪ್ರಕಾರ, ಅಸ್ಸಾಂ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರ ಮಗನನ್ನು ಕೂಡ ದಾಖಲೆರಹಿತ ಬಾಂಗ್ಲಾದೇಶಿ ವಲಸಿಗ ಎಂಬ ಅನುಮಾನದ ಮೇಲೆ ಬಂಧಿಸಲಾಗಿದೆ.

ಬುಧವಾರ, ಮಾನವ ಹಕ್ಕುಗಳ ಸಂಸ್ಥೆ ಭಾರತವು ಕಾನೂನುಬಾಹಿರವಾಗಿ ಜನರನ್ನು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದೆ.

ಛತ್ತೀಸ್‌ಗಢ:  ಕ್ರಿಶ್ಚಿಯನ್ ಕುಟುಂಬಕ್ಕೆ ‘ಘರ್ ವಾಪ್ಸಿ’ಗೆ  ನಿರಾಕರಿಸಿದ್ದಕ್ಕೆ ಬಹಿಷ್ಕಾರ; ಅರಣ್ಯದಲ್ಲಿ ಆಶ್ರಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...