Homeಮುಖಪುಟ12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾದ ಟಿಸಿಎಸ್: ವರದಿ

12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲು ಮುಂದಾದ ಟಿಸಿಎಸ್: ವರದಿ

- Advertisement -
- Advertisement -

ಭಾರತದ ಅತಿದೊಡ್ಡ ಐಟಿ ಸೇವಾ ಪೂರೈಕೆದಾರ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಪ್ರಸಕ್ತ ಹಣಕಾಸು ವರ್ಷದಲ್ಲಿ ಸುಮಾರು 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದೆ. ಇದು ಕಂಪನಿಯ ಒಟ್ಟು ಉದ್ಯೋಗಿಗಳ ಪೈಕಿ ಶೇಕಡ 2ರಷ್ಟು. ಈ ಸಾಮೂಹಿಕ ವಜಾ ಪ್ರಾಥಮಿಕವಾಗಿ ಕಂಪನಿಯ ಮಧ್ಯಮ ಮತ್ತು ಹಿರಿಯ ಶ್ರೇಣಿಯಲ್ಲಿ ಕೆಲಸ ಮಾಡುತ್ತಿರುವವರ ಮೇಲೆ ಪರಿಣಾಮ ಬೀರಲಿದೆ ಎಂದು ವರದಿಗಳು ಹೇಳಿವೆ.

ಮನಿ ಕಂಟ್ರೋಲ್ ಸುದ್ದಿ ಸಂಸ್ಥೆಯ ಜೊತೆಗಿನ ಸಂದರ್ಶನದಲ್ಲಿ ಟಿಸಿಎಸ್ ಸಿಇಒ ಕೃತಿವಾಸನ್ ಅವರು ಉದ್ಯೋಗ ಕಡಿತದ ಬಗ್ಗೆ ಘೋಷಣೆ ಮಾಡಿದ್ದಾರೆ. ಪ್ರಸ್ತಕ ಹಣಕಾಸು ವರ್ಷದಲ್ಲಿ (ಏಪ್ರಿಲ್ 2025 ರಿಂದ ಮಾರ್ಚ್ 2026) ಹಂತ ಹಂತವಾಗಿ ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಲಾಗಿದೆ ಎಂದು ವರದಿಯಾಗಿದೆ.

ಕಂಪನಿಯು ಹೊಸ ಮಾರುಕಟ್ಟೆಗಳನ್ನು ಪ್ರವೇಶಿಸುತ್ತಿದೆ. ಹೊಸ ತಂತ್ರಜ್ಞಾನದಲ್ಲಿ ಹೂಡಿಕೆ ಮಾಡುತ್ತಿದೆ ಮತ್ತು ಕೃತಕ ಬುದ್ದಿಮತ್ತೆ (ಎಐ) ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತಿದೆ. ಆದ್ದರಿಂದ ಸಿಬ್ಬಂದಿಗೆ ಮರು ತರಬೇತಿ ಮತ್ತು ಮರು ನಿಯೋಜನೆ ಮಾಡುತ್ತಿದೆ. ಈ ಪ್ರಕ್ರಿಯೆಯ ಭಾಗವಾಗಿ ಸುಮಾರು 12,200 ಉದ್ಯೋಗಗಳನ್ನು ಕಡಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಕೃತಿವಾಸನ್ ಹೇಳಿದ್ದಾರೆ.

“ಗ್ರಾಹಕ ಸೇವಾ ವಿತರಣೆಯ ಮೇಲೆ ಯಾವುದೇ ಪರಿಣಾಮ ಬೀರದಂತೆ ಈ ಪರಿವರ್ತನೆಯನ್ನು ಸರಿಯಾದ ಕಾಳಜಿಯೊಂದಿಗೆ ಯೋಜಿಸಲಾಗುತ್ತಿದೆ” ಎಂದಿದ್ದಾರೆ.

ತಂತ್ರಜ್ಞಾನ ಮತ್ತು ವ್ಯವಹಾರ ಕಾರ್ಯಾಚರಣೆಗಳಲ್ಲಿನ ಬದಲಾವಣೆಗಳು ಆಂತರಿಕ ಬದಲಾವಣೆಗಳಿಗೆ ಕಾರಣವಾಗುತ್ತಿವೆ ಎಂದು ಕೃತಿವಾಸನ್ ಒಪ್ಪಿಕೊಂಡಿದ್ದಾರೆ.

“ನಾವು ಹೊಸ ತಂತ್ರಜ್ಞಾನಗಳನ್ನು, ವಿಶೇಷವಾಗಿ ಎಐ ಕಾರ್ಯಾಚರಣಾ ಮಾದರಿಯನ್ನು ಅಳವಡಿಸಿಕೊಳ್ಳುತ್ತಿದ್ದೇವೆ. ಇದರಿಂದ ಕೆಲಸ ಮಾಡುವ ವಿಧಾನಗಳು ಬದಲಾಗುತ್ತಿವೆ. ನಾವು ಭವಿಷ್ಯಕ್ಕೆ ಸಿದ್ಧರಾಗಿರಬೇಕಿದೆ ಮತ್ತು ಚುರುಕಾಗಬೇಕಿದೆ. ಆದ್ದರಿಂದ ಎಐ ಅಳವಡಿಸಿಕೊಳ್ಳುತ್ತಿದ್ದೇವೆ. ಭವಿಷ್ಯದಲ್ಲಿ ನಮಗೆ ಅಗತ್ಯವಿರುವ ಕೌಶಲ್ಯಗಳನ್ನು ಮೌಲ್ಯಮಾಪನ ಮಾಡುತ್ತಿದ್ದೇವೆ” ಎಂದಿದ್ದಾರೆ.

ವರದಿಗಳ ಪ್ರಕಾರ, ಜೂನ್‌ ತ್ರೈಮಾಸಿಕದಲ್ಲಿ ಕಂಪನಿಯು 5 ಸಾವಿರ ಉದ್ಯೋಗಿಗಳನ್ನು ನೇಮಿಸಿಕೊಂಡಿತ್ತು.

ಅಕ್ರಮ ಸಾಮೂಹಿಕ ವಜಾ ನಿಲ್ಲಿಸಿ: ಕೆಐಟಿಯು

ಟಿಸಿಎಸ್‌ ಉದ್ಯೋಗ ಕಡಿತವನ್ನು ಕರ್ನಾಟಕ ರಾಜ್ಯ ಐಟಿ/ಐಟಿಇಎಸ್ ನೌಕರರ ಸಂಘ (ಕೆಐಟಿಯು) ಖಂಡಿಸಿದೆ. ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಕೆಐಟಿಯು “ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌ (ಟಿಸಿಎಸ್‌)ನಲ್ಲಿ ಬೃಹತ್ ಪ್ರಮಾಣದ ಉದ್ಯೋಗ ಕಡಿತವಾಗಿದೆ. ಸಾವಿರಾರು ಉದ್ಯೋಗಿಗಳು ಕಂಪನಿ ಬಲವಂತವಾಗಿ ರಾಜೀನಾಮೆ ಕೊಡಿಸುತ್ತಿದೆ. ಟಿಸಿಎಸ್ ಆಡಳಿತ ಮಂಡಳಿಯ ಈ ಕಾನೂನುಬಾಹಿರ ಕ್ರಮವನ್ನು ಕರ್ನಾಟಕ ರಾಜ್ಯ ಐಟಿ/ಐಟಿಇಎಸ್ ನೌಕರರ ಸಂಘ (ಕೆಐಟಿಯು) ಬಲವಾಗಿ ಖಂಡಿಸುತ್ತದೆ ಎಂದಿದೆ.

ಕೈಗಾರಿಕಾ ತಕರಾರು ಕಾಯ್ದೆಯ ಪ್ರಕಾರ, ಉದ್ಯೋಗದಾತ ಉದ್ಯೋಗಿಯನ್ನು ರಾಜೀನಾಮೆ ನೀಡುವಂತೆ ಒತ್ತಾಯಿಸುವುದು ಅಪರಾಧವಾಗಿದೆ. ರಾಜೀನಾಮೆಗೆ ಸಹಿ ಹಾಕಲು ನಿರಾಕರಿಸುವ ಎಲ್ಲಾ ಕಾನೂನುಬದ್ಧ ಹಕ್ಕನ್ನು ಉದ್ಯೋಗಿ ಹೊಂದಿರುತ್ತಾನೆ ಎಂದು ಹೇಳಿದೆ.

ಟಿಸಿಎಸ್‌ ಉದ್ಯೋಗ ಕಡಿತದಿಂದ ಬಾಧಿತ ಉದ್ಯೋಗಿಗಳಿಗೆ ಕೆಐಟಿಯು ಎಲ್ಲಾ ಬೆಂಬಲವನ್ನು ನೀಡುತ್ತದೆ. ಟಿಸಿಎಸ್ ಆಡಳಿತ ಮಂಡಳಿಯು ನೆಲದ ಕಾನೂನನ್ನು ಗೌರವಿಸಬೇಕು ಮತ್ತು ವಜಾಗೊಳಿಸಲಾದ ಎಲ್ಲಾ ಉದ್ಯೋಗಿಗಳನ್ನು ತಕ್ಷಣ ಜಾರಿಗೆ ಬರುವಂತೆ ಮರು ನೇಮಿಸಬೇಕು. ಬಲವಂತದ ರಾಜೀನಾಮೆ ನೀಡುವ ಅಮಾನವೀಯ ಪದ್ಧತಿಯ ವಿರುದ್ಧ ಮತ್ತು ಟಿಸಿಎಸ್‌ನ ಉದ್ಯೋಗಿಗಳೊಂದಿಗೆ ಒಗ್ಗಟ್ಟು ಪ್ರದರ್ಶಿಸುವಂತೆ ಕೆಐಟಿಯು ಎಲ್ಲಾ ಐಟಿ/ಐಟಿಇಎಸ್ ಉದ್ಯೋಗಿಗಳಿಗೆ ಕರೆ ನೀಡುತ್ತದೆ ಎಂದು ಕೆಐಟಿಯು ಹೇಳಿದೆ. ಸಹಾಯವಾಣಿ ಸಂಖ್ಯೆಯನ್ನೂ ನೀಡಿದೆ.

ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು 15 ಅಂಶಗಳ ಮಾರ್ಗಸೂಚಿ ರೂಪಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...