Homeಮುಖಪುಟಮಹಾರಾಷ್ಟ| 'ಲಡ್ಕಿ ಬಹಿನ್ ಯೋಜನೆ' ಲಾಭ ಪಡೆದ 14 ಸಾವಿರ ಪುರುಷರು; ವಾಪಸ್ ವಸೂಲಿ ಮಾಡುತ್ತೇವೆ...

ಮಹಾರಾಷ್ಟ| ‘ಲಡ್ಕಿ ಬಹಿನ್ ಯೋಜನೆ’ ಲಾಭ ಪಡೆದ 14 ಸಾವಿರ ಪುರುಷರು; ವಾಪಸ್ ವಸೂಲಿ ಮಾಡುತ್ತೇವೆ ಎಂದ ಡಿಸಿಎಂ

- Advertisement -
- Advertisement -

ಮಹಿಳೆಯರಿಗಾಗಿ ಮಹಾರಾಷ್ಟ್ರ ಸರ್ಕಾರ ರೂಪಿಸಿರುವ ‘ಮಾಝಿ ಲಡ್ಕಿ ಬಹಿನ್ ಯೋಜನೆ’ಯ ಲಾಭವನ್ನು 14, 298 ಪುರುಷರು ಪಡೆದಿದ್ದು, ಇದರಿಂದ ಸರ್ಕಾರದ ಬೊಕ್ಕಸಕ್ಕೆ 21.44 ಕೋಟಿ ರೂಪಾಯಿ ನಷ್ಟ ಉಂಟಾಗಿದೆ ಎಂದು ವರದಿಯಾಗಿದೆ.

ಪ್ರತಿ ತಿಂಗಳು ಮಹಿಳೆಯರ ಖಾತೆಗೆ 1,500 ರೂಪಾಯಿ ನೇರ ಜಮಾ ಮಾಡುವ ಈ ಯೋಜನೆಯ ಹಣವನ್ನು ಸುಮಾರು 10 ತಿಂಗಳ ಕಾಲ ಈ 14 ಸಾವಿರ ಪುರುಷರು ಪಡೆದಿದ್ದಾರೆ.

ಲಡ್ಕಿ ಬಹಿನ್ ಯೋಜನೆಯು ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟ ಅಧಿಕಾರ ಹಿಡಿಯಲು ಪ್ರಮುಖ ಕಾರಣವಾಗಿತ್ತು. ಕಳೆದ ವರ್ಷ ವಿಧಾನಸಭಾ ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ ಈ ಯೋಜನೆ ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ ಮತ ತಂದು ಕೊಟ್ಟಿತ್ತು. ಆರ್ಥಿಕವಾಗಿ ಹಿಂದುಳಿದ ಅಥವಾ ಸಂಕಷ್ಟ ಅನುಭವಿಸುತ್ತಿರುವ 21 ರಿಂದ 65 ವರ್ಷ ವಯಸ್ಸಿನ ಮಹಿಳೆಯರು ಈ ಯೋಜನೆಗೆ ಆರ್ಹರು.

ಕಳೆದ ವರ್ಷ ಜೂನ್‌ನಲ್ಲಿ ಈ ಯೋಜನೆ ಆರಂಭಗೊಂಡಾಗ ರಾಜ್ಯದ ಆರ್ಥಿಕತೆಯ ಮೇಲೆ ಹೊರೆ ಬೀಳುತ್ತದೆ ಎಂದು ಪ್ರತಿಪಕ್ಷಗಳು ಆರೋಪಿಸಿತ್ತು. ನಂತರ ಯೋಜನೆಯ ಲಾಭವನ್ನು ಅನರ್ಹರು ಪಡೆಯುತ್ತಿದ್ದಾರೆ ಎಂಬುವುದು ಪತ್ತೆಯಾಗಿತ್ತು. ಇತ್ತೀಚಿನ ಪರಿಶೀಲನೆಯಲ್ಲಿ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 14,298 ಪುರುಷರು ಸುಳ್ಳು ದಾಖಲೆಗಳನ್ನು ನೀಡಿ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಕಳೆದ 10 ತಿಂಗಳಿನಿಂದ ಅವರ ಖಾತೆಗೆ ಹಣ ಜಮೆ ಆಗಿದೆ ಎಂಬುವುದು ಬಯಲಾಗಿದೆ.

ಲಡ್ಕಿ ಬಹಿನ್ ಯೋಜನೆಯಡಿ 24.1 ಮಿಲಿಯನ್ ಫಲಾನುಭವಿಗಳಿಗೆ ತಿಂಗಳಿಗೆ 1,500 ರೂ. ಪಾವತಿಸಲು ರಾಜ್ಯ ಸರ್ಕಾರ ಪ್ರಸ್ತುತ 3,700 ಕೋಟಿ ರೂ. ಖರ್ಚು ಮಾಡುತ್ತಿದೆ ಎಂದು ವರದಿಗಳು ಹೇಳಿವೆ.

ಇತ್ತೀಚಿನ ಪರಿಶೀಲನಾ ವರದಿಯ ಪ್ರಕಾರ, ಕಳೆದ 12 ತಿಂಗಳುಗಳಲ್ಲಿ ಲಕ್ಷಾಂತರ ಅನರ್ಹ ಫಲಾನುಭವಿಗಳಿಗೆ ಹಣ ಪಾವತಿಸುವ ಮೂಲಕ ಸರ್ಕಾರದ ಬೊಕ್ಕಸಕ್ಕೆ 1,640 ಕೋಟಿ ರೂ. ನಷ್ಟ ಉಂಟಾಗಿದೆ. ಕಳೆದ ಫೆಬ್ರವರಿಯಲ್ಲಿ, ಯೋಜನೆಯನ್ನು ಜಾರಿಗೊಳಿಸುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸುಮಾರು 500,000 ಫಲಾನುಭವಿಗಳನ್ನು ಕೈಬಿಡಲಾಗಿದೆ ಎಂದು ಹೇಳಿತ್ತು. ಇದರಲ್ಲಿ ನಾಲ್ಕು ಚಕ್ರಗಳ ವಾಹನಗಳನ್ನು ಹೊಂದಿರುವ ಕುಟುಂಬಗಳ ಸುಮಾರು 162,000 ಮಹಿಳೆಯರು ಮತ್ತು 65 ವರ್ಷಕ್ಕಿಂತ ಮೇಲ್ಪಟ್ಟ ಸುಮಾರು 287,000 ಫಲಾನುಭವಿಗಳು ಸೇರಿದ್ದಾರೆ (ಅವರು ಬೇರೆ ಯೋಜನೆಯಡಿಯಲ್ಲಿ ಪ್ರಯೋಜನಗಳಿಗೆ ಅರ್ಹರು).

ಇನ್ನು ಮಾಸಿಕವಾಗಿ ಹಣ ಪಡೆಯುತ್ತಿರುವವರಲ್ಲಿ ಕುಟುಂಬದ ಮೂರನೇ ಸದಸ್ಯರಾದ ಮಹಿಳೆಯರು ಕೂಡ ಸೇರಿದ್ದಾರೆ. ಒಂದು ಕುಟುಂಬದಿಂದ ಇಬ್ಬರು ಮಹಿಳೆಯರು ಮಾತ್ರ ಯೋಜನೆಗೆ ಅರ್ಹರು. ಆದರೆ, ಲಕ್ಷಾಂತರ ಮಹಿಳೆಯರು ವಂಚನೆಯಿಂದ ನೋಂದಣಿ ಮಾಡಿಕೊಂಡಿದ್ದಾರೆ. ಕಳೆದ ವರ್ಷ ಇಂತಹ ಸುಮಾರು 797,000 ಪ್ರಕರಣಗಳಿಂದ ಸರ್ಕಾರದ ಬೊಕ್ಕಸಕ್ಕೆ 1,196 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಇಲಾಖೆ ಪತ್ತೆಹಚ್ಚಿದೆ.

ಲಡ್ಕಿ ಬಹಿನ್ ಯೋಜನೆಯಡಿಯಲ್ಲಿ 14,000ಕ್ಕೂ ಹೆಚ್ಚು ಪುರುಷರು ಪ್ರಯೋಜನ ಪಡೆದಿದ್ದಾರೆ ಎಂಬ ವರದಿಗಳ ಕುರಿತು ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಅಜಿತ್ ಪವಾರ್, “ಲಡ್ಕಿ ಬಹಿನ್ ಯೋಜನೆ ಪುರುಷರಿಗಾಗಿ ಅಲ್ಲ, ಕಡಿಮೆ ಆದಾಯದ ಗುಂಪುಗಳ ನಿರ್ಗತಿಕ ಮಹಿಳೆಯರಿಗಾಗಿ ರೂಪಿಸಲಾಗಿದೆ. ಯೋಜನೆಯಡಿಯಲ್ಲಿ ಹಣವನ್ನು ಪಡೆದ ಪುರುಷರಿಂದ ರಾಜ್ಯ ಸರ್ಕಾರ ಹಣವನ್ನು ವಸೂಲಿ ಮಾಡಲಿದೆ. ಅವರು ಸಹಕರಿಸದಿದ್ದರೆ, ನಾವು ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಸಂಸತ್ತಿನಲ್ಲಿ ಇಂದಿನಿಂದ ‘ಆಪರೇಷನ್ ಸಿಂಧೂರ್’ ಚರ್ಚೆ: ಸಂಸದರಿಗೆ ವಿಪ್ ಜಾರಿಗೊಳಿಸಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...