Homeಮುಖಪುಟಪಶ್ಚಿಮ ಬಂಗಾಳದ ಹೊಸ ಒಬಿಸಿ ಪಟ್ಟಿ ಕುರಿತ ಕಲ್ಕತ್ತಾ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ಪಶ್ಚಿಮ ಬಂಗಾಳದ ಹೊಸ ಒಬಿಸಿ ಪಟ್ಟಿ ಕುರಿತ ಕಲ್ಕತ್ತಾ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಹೊಸ ಪಟ್ಟಿಗೆ ಸಂಬಂಧಿಸಿದ ಅಧಿಸೂಚನೆಗಳಿಗೆ ತಡೆ ನೀಡಿದ್ದ ಕಲ್ಕತ್ತಾ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜು.28) ತಡೆ ನೀಡಿದೆ.

ಪಶ್ಚಿಮ ಬಂಗಾಳ ರಾಜ್ಯ ಸರ್ಕಾರ ಸಲ್ಲಿಸಿದ್ದ ವಿಶೇಷ ರಜಾ ಅವಧಿಯ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ, ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠವು ಮಧ್ಯಂತರ ಆದೇಶ ಹೊರಡಿಸಿ, ನೋಟಿಸ್ ಜಾರಿ ಮಾಡಿದೆ.

ಒಬಿಸಿ ಪಟ್ಟಿಯನ್ನು ಅನುಮೋದಿಸುವ ಅಧಿಕಾರ ಶಾಸಕಾಂಗಕ್ಕೆ ಮಾತ್ರ ಇದೆ ಎಂದು ಹೈಕೋರ್ಟ್ ಅಳವಡಿಸಿಕೊಂಡ ತರ್ಕದ ಬಗ್ಗೆ ಪೀಠವು ಆಶ್ಚರ್ಯ ವ್ಯಕ್ತಪಡಿಸಿದೆ.

“ಈ ಪ್ರಕರಣ ಸಂಬಂಧ ನಾವು ನೋಟಿಸ್ ಜಾರಿ ಮಾಡುತ್ತೇವೆ, ಇದು ಆಶ್ಚರ್ಯಕರ. ಹೈಕೋರ್ಟ್ ಈ ರೀತಿ ಹೇಳಲು ಹೇಗೆ ಸಾಧ್ಯ? ಮೀಸಲಾತಿ ಕಾರ್ಯಾಂಗದ ಕಾರ್ಯಗಳ ಭಾಗವಾಗಿದೆ. ಇದು ಇಂದಿರಾ ಸಾಹ್ನಿಯವರಿಂದಲೇ ಇತ್ಯರ್ಥವಾದ ಕಾನೂನು. ಕಾರ್ಯಾಂಗ ಮೀಸಲಾತಿ ಸಂಬಂಧ ನಿರ್ಧಾರ ತೆಗೆದುಕೊಳ್ಳಬಹುದು ಎಂಬುದು ನಿಲುವು. ಮೀಸಲಾತಿ ನೀಡಲು ಕಾರ್ಯಕಾರಿ ಸೂಚನೆಗಳು ಸಾಕು, ಕಾನೂನು ಅಗತ್ಯವಿಲ್ಲ. ಹಾಗಾಗಿ, ಹೈಕೋರ್ಟ್ ಅಳವಡಿಸಿಕೊಂಡ ತರ್ಕದ ಬಗ್ಗೆ ನಮಗೆ ಆಶ್ಚರ್ಯವಾಗಿದೆ” ಎಂದು ಸಿಜೆಐ ಗವಾಯಿ ಅರ್ಜಿಯನ್ನು ಕೈಗೆತ್ತಿಕೊಂಡ ತಕ್ಷಣ ಹೇಳಿದ್ದಾರೆ.

“2012ರ ಕಾಯ್ದೆಯ ಪ್ರಕಾರ ವರದಿಗಳು ಮತ್ತು ಮಸೂದೆಗಳನ್ನು ಶಾಸಕಾಂಗದ ಮುಂದೆ ಇಡಬೇಕಾಗಿತ್ತು” ಎಂಬ ಹೈಕೋರ್ಟ್‌ನ ಅಭಿಪ್ರಾಯಕ್ಕೆ ಸಿಜೆಐ ಗವಾಯಿ ಭಿನ್ನಾಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹೈಕೋರ್ಟ್ ಆದೇಶಕ್ಕೆ ತಡೆ ನೀಡಬೇಕೆಂದು ಪೀಠಕ್ಕೆ ಮನವಿ ಮಾಡಿದ ಪಶ್ಚಿಮ ಬಂಗಾಳ ಸರ್ಕಾರದ ಪರ ವಕೀಲ ಕಪಿಲ್ ಸಿಬಲ್, ಹೈಕೋರ್ಟ್ ಆದೇಶದಿಂದ ಹಲವಾರು ನೇಮಕಾತಿಗಳು ಮತ್ತು ಬಡ್ತಿಗಳು ಸ್ಥಗಿತಗೊಂಡಿವೆ ಎಂದು ಪೀಠದ ಗಮನಕ್ಕೆ ತಂದಿದ್ದರು. ಅಲ್ಲದೆ, ಈಗ ಹೈಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿಗಳು ಕೂಡ ದಾಖಲಾಗಿವೆ. ಅದಕ್ಕೂ ತಡೆ ನೀಡುವಂತೆ ಕೋರಿದ್ದರು.

ಪೀಠವು ಮಧ್ಯಂತರ ಆದೇಶ ನೀಡುವ ಇಚ್ಛೆ ವ್ಯಕ್ತಪಡಿಸಿದಾಗ, ಪ್ರತಿವಾದಿಗಳ ಪರ ಹಿರಿಯ ವಕೀಲ ರಂಜಿತ್ ಕುಮಾರ್ ಅವರು ಆಕ್ಷೇಪ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಜಾರಿಗೆ ತಂದ ಕಾನೂನಿನ ಪ್ರಕಾರ, ಮೀಸಲಾತಿ ಪಟ್ಟಿಯನ್ನು ಶಾಸಕಾಂಗವು ಅನುಮೋದಿಸಬೇಕು ಎಂದು ಹೇಳಿದರು. ಈ ನಡುವೆ ಇತರ ಪ್ರತಿವಾದಿಗಳ ಪರ ಹಿರಿಯ ವಕೀಲ ಗುರು ಕೃಷ್ಣಕುಮಾರ್ ಕೂಡ ಮಧ್ಯಂತರ ಆದೇಶವನ್ನು ವಿರೋಧಿಸಿದರು. ಯಾವುದೇ ದತ್ತಾಂಶವಿಲ್ಲದೆ ಸಿದ್ಧತೆಯನ್ನು ಮಾಡಲಾಗಿದೆ ಎಂದು ವಾದಿಸಿದರು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಹೊಸ ಸಮೀಕ್ಷೆ ಮತ್ತು ವರದಿಯ ಆಧಾರದ ಮೇಲೆ ಹೊಸ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ ಎಂದು ಕಪಿಲ್ ಸಿಬಲ್ ಪೀಠಕ್ಕೆ ಮಾಹಿತಿ ನೀಡಿದರು. ಆಯೋಗವು ಈ ಕಾರ್ಯವನ್ನು ಮಾಡಿಲ್ಲ ಎಂಬ ಪ್ರಕರಣ ಹೈಕೋರ್ಟ್‌ನಲ್ಲಿಯೂ ಇಲ್ಲ ಎಂದು ಸಿಬಲ್ ತಿಳಿಸಿದರು.

ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಸಿಜೆಐ ಗವಾಯಿ, “ನೀವು ಸಿದ್ಧರಿದ್ದರೆ, ನಿಗದಿತ ಸಮಯದೊಳಗೆ ಈ ವಿಷಯವನ್ನು ಆಲಿಸುವಂತೆ ನಾವು ಹೈಕೋರ್ಟ್‌ಗೆ ನಿರ್ದೇಶಿಸುತ್ತೇವೆ. ಅಲ್ಲಿಯವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಲಾಗುತ್ತದೆ. ವಿಚಾರಣೆ ನಡೆಸಲು ಮತ್ತೊಂದು ಪೀಠವನ್ನು ರಚಿಸುವಂತೆ ನಾವು ಮುಖ್ಯ ನ್ಯಾಯಮೂರ್ತಿಗಳನ್ನು ಕೇಳುತ್ತೇವೆ” ಎಂದು ಪ್ರತಿವಾದಿಗಳಿಗೆ ಹೇಳಿದರು. ಆದರೆ, ಪ್ರತಿವಾದಿಗಳು ಸುಪ್ರೀಂ ಕೋರ್ಟ್ ಮುಂದೆ ವಾದ ಮಂಡಿಸುವುದಾಗಿ ತಿಳಿಸಿದರು.

ಅಂತಿಮವಾಗಿ, ಪೀಠವು ಹೈಕೋರ್ಟ್‌ನ ಆದೇಶಕ್ಕೆ ತಡೆ ನೀಡಿತು. ಮೇಲ್ನೋಟಕ್ಕೆ ಹೈಕೋರ್ಟ್‌ನಿಂದ ತಪ್ಪಾಗಿದೆ ಎಂದು ಸಿಜೆಐ ಮೌಖಿಕವಾಗಿ ಹೇಳಿದರು. ಆಯೋಗವು ಕೆಲವು ವಿಧಾನಗಳನ್ನು ಅನುಸರಿಸಿದೆ. ಅದು ಸರಿಯಾಗಿರಬಹುದು ಅಥವಾ ಸರಿಯಾಗಿಲ್ಲದಿರಬಹುದು, ಅದನ್ನು ಅಂತಿಮವಾಗಿ ಹೈಕೋರ್ಟ್ ನಿರ್ಧರಿಸುತ್ತದೆ” ಎಂದರು.

ಜೂನ್ 17ರಂದು ಹೈಕೋರ್ಟ್ ಹೊಸ ಒಬಿಸಿ ಪಟ್ಟಿಗೆ ತಡೆ ನೀಡಿ ಹೊರಡಿಸಿದ ಆದೇಶವನ್ನು ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಕಲ್ಕತ್ತಾ ಹೈಕೋರ್ಟ್ ಮೇ 2024ರಲ್ಲಿ 77 ಸಮುದಾಯಗಳನ್ನು ಒಬಿಸಿ ಪಟ್ಟಿಯಲ್ಲಿ ಸೇರಿಸುವುದನ್ನು ರದ್ದುಗೊಳಿಸಿದ ನಂತರ ಪಶ್ಚಿಮ ಬಂಗಾಳ ಸರ್ಕಾರ ಹೊಸ ಪಟ್ಟಿಯನ್ನು ಸಿದ್ಧಪಡಿಸಿತ್ತು. ಈ ನಡುವೆ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರೂ, ರಾಜ್ಯ ಸರ್ಕಾರವೇ ಹಿಂದುಳಿದ ವರ್ಗಗಳ ಆಯೋಗ ಒಬಿಸಿಗಳನ್ನು ಗುರುತಿಸುವ ಹೊಸ ಪ್ರಕ್ರಿಯೆಯನ್ನು ನಡೆಸಲಿದೆ ಎಂದು ನ್ಯಾಯಾಲಯಕ್ಕೆ ಹೇಳಿತ್ತು.

ಹೊಸ ಪಟ್ಟಿಗೆ ತಡೆ ನೀಡಿದ್ದರೂ, ಸರ್ಕಾರ ಈ ಹಿಂದೆ ರದ್ದುಗೊಂಡ ಅದೇ ಒಬಿಸಿ ಪಟ್ಟಿಯನ್ನು ಮತ್ತೆ ಪರಿಚಯಿಸಲು ಪ್ರಯತ್ನಿಸುತ್ತಿದೆ ಎಂದು ಹೈಕೋರ್ಟ್ ಪ್ರಾಥಮಿಕವಾಗಿ ಹೇಳಿತ್ತು.

ಮಹಾರಾಷ್ಟ| ‘ಲಡ್ಕಿ ಬಹಿನ್ ಯೋಜನೆ’ ಲಾಭ ಪಡೆದ 14 ಸಾವಿರ ಪುರುಷರು; ವಾಪಸ್ ವಸೂಲಿ ಮಾಡುತ್ತೇವೆ ಎಂದ ಡಿಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...