Homeಮುಖಪುಟಬಿಹಾರ ಕರಡು ಮತದಾರರ ಪಟ್ಟಿ ಪ್ರಕಟಣೆ ತಡೆಯಲು ಸುಪ್ರೀಂ ನಕಾರ: ಆಧಾರ್, ವೋಟರ್ ಐಡಿ ಪರಿಗಣಿಸುವಂತೆ...

ಬಿಹಾರ ಕರಡು ಮತದಾರರ ಪಟ್ಟಿ ಪ್ರಕಟಣೆ ತಡೆಯಲು ಸುಪ್ರೀಂ ನಕಾರ: ಆಧಾರ್, ವೋಟರ್ ಐಡಿ ಪರಿಗಣಿಸುವಂತೆ ಒತ್ತಾಯ

- Advertisement -
- Advertisement -

ವಿಶೇಷ ತೀವ್ರ ಪರಿಷ್ಕರಣೆಯ ವೇಳಾಪಟ್ಟಿಯಂತೆ ಆಗಸ್ಟ್ 1ರಂದು ಬಿಹಾರದಲ್ಲಿ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡುವುದಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಸೋಮವಾರ (ಜುಲೈ 28) ನಿರಾಕರಿಸಿತು.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ನ್ಯಾಯಪೀಠವು ಇಂದು ವಿವರವಾದ ವಿಚಾರಣೆ ನಡೆಸಿಲ್ಲ. ಏಕೆಂದರೆ, ಪೀಠದ ಭಾಗವಾದ ನ್ಯಾಯಮೂರ್ತಿ ಕಾಂತ್ ಅವರು ಮಧ್ಯಾಹ್ನ ಸಿಜೆಐ ಅವರೊಂದಿಗಿನ ಆಡಳಿತಾತ್ಮಕ ಸಭೆಯಲ್ಲಿ ಭಾಗವಹಿಸಬೇಕಾಗಿತ್ತು. ಹಾಗಾಗಿ, ಅರ್ಜಿದಾರರಿಗೆ ಈ ಪ್ರಕರಣಗಳನ್ನು ಆದಷ್ಟು ಬೇಗ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಭರವಸೆ ನೀಡಿದ ನ್ಯಾಯಮೂರ್ತಿ ಕಾಂತ್, ನಾಳೆ ವಾದಕ್ಕೆ ಅಗತ್ಯವಿರುವ ತಾತ್ಕಾಲಿಕ ಸಮಯವನ್ನು ತಿಳಿಸುವಂತೆ ವಕೀಲರಿಗೆ ಹೇಳಿದರು.

ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಪರ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಅವರು, ಕರಡು ಪಟ್ಟಿಯ ಅಧಿಸೂಚನೆಯನ್ನು ತಡೆಯುವಂತೆ ಪೀಠವನ್ನು ಕೋರಿದರು. ಇದು ಸುಮಾರು 4.5 ಕೋಟಿ ಮತದಾರರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು ಹೇಳಿದರು. ಕರಡು ಪಟ್ಟಿ ಪ್ರಕಟವಾದ ನಂತರ, ಹೊರಗಿಡಲಾದ ವ್ಯಕ್ತಿಗಳು ಆಕ್ಷೇಪಣೆಗಳನ್ನು ಸಲ್ಲಿಸಲು ಮತ್ತು ಸೇರ್ಪಡೆಗೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಅಲ್ಲದೆ, ಕರಡು ಪಟ್ಟಿ ಪ್ರಕಟಿಸುವ ಮೊದಲು ವಿಚಾರಣೆ ನಡೆಸಲು ನ್ಯಾಯಾಲಯ ಒಪ್ಪಿಕೊಂಡ ಕಾರಣ ಜೂನ್ 10ರಂದು ತಡೆ ಕೋರಿರಲಿಲ್ಲ ಎಂದು ನೆನಪಿಸಿದರು.

ಚುನಾವಣಾ ಆಯೋಗದ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ರಾಕೇಶ್ ದ್ವಿವೇದಿ, ಇದು ಕೇವಲ ಕರಡು ಪಟ್ಟಿ ಎಂದು ವಾದಿಸಿದರು.

ಈ ವೇಳೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಕಾಂತ್, “ಇದು ಕರಡು ಪಟ್ಟಿ, ಯಾವುದೇ ಅಕ್ರಮ ಕಂಡುಬಂದರೆ ನ್ಯಾಯಾಲಯವು ಅಂತಿಮವಾಗಿ ಇಡೀ ಪ್ರಕ್ರಿಯೆಯನ್ನು ರದ್ದುಗೊಳಿಸಬಹುದು ಎಂದು ಹೇಳಿದರು.

ಈ ವೇಳೆ ಎಡಿಆರ್ ಪರ ವಕೀಲ ಶಂಕರನಾರಾಯಣನ್ ಅವರು, ಈ ಪ್ರಕ್ರಿಯೆಯು ‘ಅರ್ಜಿಗಳ ಫಲಿತಾಂಶಕ್ಕೆ ಒಳಪಟ್ಟಿರುತ್ತದೆ’ ಎಂದು ಅಭಿಪ್ರಾಯ ವ್ಯಕ್ತಪಡಿಸುವಂತೆ ನ್ಯಾಯಮೂರ್ತಿ ಕಾಂತ್ ಅವರನ್ನು ಕೇಳಿಕೊಂಡರು. ನಾವು ಅರ್ಥಮಾಡಿಕೊಂಡಂತೆ ಅಂತಹ ಅಭಿಪ್ರಾಯ ಅಗತ್ಯವಿಲ್ಲ ಎಂದು ನ್ಯಾಯಮೂರ್ತಿ ಕಾಂತ್ ಹೇಳಿದರು.

ವಿಚಾರಣೆಯ ಸಂದರ್ಭದಲ್ಲಿ ಅರ್ಜಿದಾರ ಎಡಿಆರ್ ಪರ ವಕೀಲರು, ಸುಪ್ರೀಂ ಕೋರ್ಟ್ ಜುಲೈ 10ರಂದು ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಮತ್ತು ಪಡಿತರ ಚೀಟಿಯನ್ನು ಪರಿಗಣಿಸುವಂತೆ ನೀಡಿದ ಸಲಹೆಯನ್ನು ಚುನಾವಣಾ ಆಯೋಗ ಉಲ್ಲಂಘಿಸುತ್ತಿದೆ ಎಂದು ಪೀಠಕ್ಕೆ ತಿಳಿಸಿದರು. ಆಗ, ಚುನಾವಣಾ ಆಯೋಗ ತನ್ನ ಪ್ರತಿ ಅಫಿಡವಿಟ್‌ನಲ್ಲಿ ಈ ದಾಖಲೆಗಳ ಬಗ್ಗೆ ತನ್ನ ಆಕ್ಷೇಪಣೆಯನ್ನು ವ್ಯಕ್ತಪಡಿಸಿದೆ ಎಂದು ದ್ವಿವೇದಿ ಹೇಳಿದರು. ಪಡಿತರ ಚೀಟಿಗಳಿಗೆ ಸಂಬಂಧಿಸಿದಂತೆ, ಹಲವಾರು ನಕಲಿ ಕಾರ್ಡ್‌ಗಳನ್ನು ನೀಡಲಾಗಿದೆ ಎಂದರು.

ಈ ವೇಳೆ, ಆಧಾರ್ ಕಾರ್ಡ್ ಮತ್ತು ಮತದಾರರ ಚುನಾವಣಾ ಗುರುತಿನ ಚೀಟಿಯನ್ನು ಕನಿಷ್ಠ ಶಾಸನಬದ್ಧ ದಾಖಲೆಗಳನ್ನಾಗಿ ಪರಿಗಣಿಸುವಂತೆ ಪೀಠವು ಮೌಖಿಕವಾಗಿ ಚುನಾವಣಾ ಆಯೋಗಕ್ಕೆ ಹೇಳಿತು.

ಈ ದಾಖಲೆಗಳು (ಆಧಾರ್ ಕಾರ್ಡ್ ಮತ್ತು ಮತದಾರರ ಗುರುತಿನ ಚೀಟಿ) ಸರಿಯಾಗಿವೆ ಎಂಬ ಊಹೆ ಇದೆ. ನೀವು ಅವುಗಳನ್ನು ಪರಿಗಣಿಸಿ. ಒಂದು ವೇಳೆ ನಕಲಿ ಎಂದು ಕಂಡು ಬಂದರೆ, ಅದೇ ಪ್ರಕರಣಕ್ಕೆ ಆಧಾರವಾಗಿರುತ್ತದೆ. ಭೂಮಿಯ ಮೇಲಿನ ಯಾವುದೇ ದಾಖಲೆಯನ್ನು ನಕಲಿ ಮಾಡಬಹುದು” ಎಂದು ನ್ಯಾಯಮೂರ್ತಿ ಕಾಂತ್ ಚುನಾವಣಾ ಆಯೋಗದ ಪರ ವಕೀಲರಿಗೆ ಮೌಖಿಕವಾಗಿ ಹೇಳಿದರು.

“ಸಾಮೂಹಿಕ ಹೊರಗಿಡುವಿಕೆ” ಬದಲಿಗೆ, “ಸಾಮೂಹಿಕ ಸೇರ್ಪಡೆ” ಇರಬೇಕು ಎಂದು ನ್ಯಾಯಮೂರ್ತಿ ಕಾಂತ್ ಚುನಾವಣಾ ಆಯೋಗಕ್ಕೆ ತಿಳಿಸಿದರು.

ಈ ಹಿಂದಿನ ವಿಚಾರಣೆ ವೇಳೆ, ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಬಾಗ್ಚಿ ಅವರ ರಜಾ ಅವಧಿಯ ಪೀಠವು, ಪೌರತ್ವವನ್ನು ನಿರ್ಧರಿಸುವುದು ಚುನಾವಣಾ ಆಯೋಗದ ಕೆಲಸವಲ್ಲ. ಅದು ಕೇಂದ್ರ ಸರ್ಕಾರದ ವಿಶೇಷ ಹಕ್ಕು ಎಂದು ಮೌಖಿಕವಾಗಿ ಅಭಿಪ್ರಾಯಪಟ್ಟಿತ್ತು. ಬಿಹಾರದ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಮತ್ತು ಪಡಿತರ ಚೀಟಿಗಳನ್ನು ಪರಿಗಣಿಸುವಂತೆಯೂ ಚುನಾವಣಾ ಆಯೋಗಕ್ಕೆ ಸಲಹೆ ನೀಡಿತ್ತು.

Courtesy : livelaw.in

ಪಶ್ಚಿಮ ಬಂಗಾಳದ ಹೊಸ ಒಬಿಸಿ ಪಟ್ಟಿ ಕುರಿತ ಕಲ್ಕತ್ತಾ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...